• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂಗಾರು ಮಳೆಗೆ ಕಾಫಿ ಹಣ್ಣುಗಳು ಮಣ್ಣುಪಾಲು
ಕಳೆದ ಒಂದು ವರ್ಷದಿಂದ ಮಲೆನಾಡಿನ ಭಾಗದಲ್ಲಿರುವ ಜನತೆ ಸೂರ್ಯ ರಶ್ಮಿಯನ್ನು ಸರಿಯಾಗಿ ನೋಡೇ ಇಲ್ಲ ಎಂದರೆ ತಪ್ಪಾಗಲಾರದು. ಸತತ ಮಳೆಯಿಂದಾಗಿ ಈ ಭಾಗದ ಜನರ ಜೀವನ ಅಸ್ತವ್ಯಸ್ತವಾಗಿದೆ. ಗ್ರಾಮಕ್ಕೆ ತೆರಳುವ ರಸ್ತೆಗಳು ಸಂಪೂರ್ಣ ಕೊಚ್ಚಿಹೋಗಿವೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕನಿಷ್ಟ ಒಂದು ತಿಂಗಳಾದರೂ ಬಿಡುವು ಕೊಡುವಂತೆ ಬೆಳೆಗಾರ ವರುಣನಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ. ಮಳೆಯಿಂದಾಗಿ ತೋಟದೊಳಗಡೆ ಕಾಲಿಟ್ಟರೆ ಜಾರುವಂತಾಗಿದ್ದು ಕೆಸರುಗದ್ದೆಯಾಗಿ ಮಾರ್ಪಟ್ಟಿದೆ.
ರಾಜ್ಯ ಮಟ್ಟದ ಪುರುಷರ ಮುಕ್ತ ಖೋ ಖೋ ಪಂದ್ಯಾವಳಿ
2ನೇ ವರ್ಷದ ಹೊಯ್ಸಳ ಕಪ್- ೨೦೨೫ ರಾಜ್ಯಮಟ್ಟದ ಪುರುಷರ ಮುಕ್ತ ಖೋ-ಖೋ ಪಂದ್ಯಾವಳಿಯನ್ನು ಇದೇ ಅ.26ರಂದು ಇಲ್ಲಿನ ಕೆ.ಪಿ.ಎಸ್ ಶಾಲಾ ಆವರಣದಲ್ಲಿರುವ ದಿ. ಅನಂತರಾಮು ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ ಎಂದು ಕ್ಲಬ್‌ನ ಅಧ್ಯಕ್ಷರಾದ ಈಶ್ವರ್ ತಿಳಿಸಿದ್ದಾರೆ. ಪತ್ರಕರ್ತ ಎಚ್.ಜಿ. ಅನಂತರಾಮು ನೂತನ ಕ್ರೀಡಾಂಗಣದಲ್ಲಿ ಖೋ-ಖೋ ಪಂದ್ಯಾವಳಿಯನ್ನು ರಾಜ್ಯಮಟ್ಟದಲ್ಲಿ ೨ನೇ ಬಾರಿ ಆಯೋಜನೆ ಮಾಡಲಾಗಿದೆ. ಈ ಬಾರಿ ಸುಮಾರು ೨೦ರಿಂದ ೨೫ ತಂಡಗಳು ಭಾಗವಹಿಸಲಿವೆ.
ಅರೇಹಳ್ಳಿಯಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್‌
ಇತ್ತೀಚೆಗೆ ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ, ಅಂಗಡಿ, ಹಾಗೂ ಕಾಫಿ ತೋಟಗಳಲ್ಲಿ ಕಳವು ಪ್ರಕರಣ ಹೆಚ್ಚಾಗುತ್ತಿವೆ. ಕೆಲ ದಿನಗಳ ಹಿಂದೆ ಲಿಂಗಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕನ್ನ ಹಾಕಿ ಸಾವಿರಾರು ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಇದೀಗ ರಾತ್ರಿ ಸಮಯದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವವರ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಬಡ ಮಹಿಳೆಯೊಬ್ಬರ ಪೆಟ್ಟಿಗೆ ಅಂಗಡಿಗೆ ಕನ್ನ ಹಾಕಿ ಸಾವಿರಾರು ಮೌಲ್ಯದ ವಸ್ತುಗಳನ್ನು ದೋಚಿದ್ದರು.
ಶೌರ್ಯದಲ್ಲಿ ಕಿತ್ತೂರುರಾಣಿ ಚೆನ್ನಮ್ಮ ಮೊದಲು
ಈ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಹೆಣ್ಣುಮಕ್ಕಳು ಬಹಳ ವಿರಳವಾಗಿ ಕಾಣುತ್ತಿದ್ದರು. ಇದಕ್ಕೆ ಕಾರಣ ಶಿಕ್ಷಣ ಮತ್ತು ಹೆಣ್ಣಿಗೆ ಎಲ್ಲಿಯೂ ಮುಕ್ತವಾದ ಅವಕಾಶಗಳನ್ನು ನೀಡುತ್ತಿರಲಿಲ್ಲ ಎಂಬುದಾಗಿದೆ. ಆದರೆ ಇಂದು ಆದಾಯದ ದೃಷ್ಟಿಯ ಉದ್ದೇಶದಿಂದ ಅಂಜಿಕೆಯಲ್ಲಿ ಮಕ್ಕಳನ್ನು ಬೆಳೆಸುತ್ತಿದ್ದೇವೆ. ಸೈನಿಕರಾಗಿ ದೇಶಕ್ಕಾಗಿ ಸೇವೆ ಸಲ್ಲಿಸಲು ಕಳುಹಿಸುತ್ತಿರುವುದು ಬಹಳ ಕಡಿಮೆ. ಹಾಗಾಗಿ ದೇಶ ಸೇವೆಗಾಗಿ ಧೈರ್ಯ, ಶೌರ್ಯದಿಂದ ಹೋರಾಟ ಮಾಡುವ ಸ್ವಭಾವವನ್ನು ನಮ್ಮ ಮಕ್ಕಳಲ್ಲಿ ಬೆಳೆಸಬೇಕು. ಆಗ ಮಾತ್ರ ನಾವು ಮತ್ತೆ ಉತ್ತಮವಾದ ಸಮಾಜವನ್ನು ನಿರ್ಮಾಣ ಮಾಡಬಹುದು ಹಾಗೂ ಕಿತ್ತೂರು ರಾಣಿಚೆನ್ನಮ್ಮ ನಂತಹ ಅನೇಕರನ್ನು ಹುಟ್ಟುಹಾಕಬಹುದು ಎಂದು ತಿಳಿಸಿದರು.
ದಾಖಲೆ ಪ್ರಮಾಣದಲ್ಲಿ ಹಾಸನಾಂಬೆ ದೇವಿ ದರ್ಶನ
ಈ ಬಾರಿ 26.13 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಟಿಕೆಟ್ ಮತ್ತು ಲಾಡು ಪ್ರಸಾದ ಮಾರಾಟದಿಂದ 9.68 ಕೋಟಿ ಆದಾಯ ಬಂದಿತ್ತು ಎಂದರು. ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ಯಶಸ್ವಿಯಾಗಿದ್ದು, ಇದಕ್ಕೆ ಸಹಕಾರ ನೀಡಿದ ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು, ಎನ್ ಸಿಸಿ ಹಾಗೂ ಸ್ಕೌಟ್ ಮತ್ತುಗೈಡ್ಸ್ ವಿದ್ಯಾರ್ಥಿಗಳಿಗೂ ಸಹ ಧನ್ಯವಾದ ತಿಳಿಸಿದರು.
ಭಾರಿ ಮಳೆಗೆ ಕಟ್ಟೇಪುರ ಎಡದಂಡೆ ನಾಲೆ ಕುಸಿತ
ಭಾರೀ ಮಳೆಗೆ ವಡವಾನಹೊಸಹಳ್ಳಿ ಬಳಿಯಿರುವ ಕಟ್ಟೇಪುರ ಎಡದಂಡೆ ನಾಲೆಯು ಕುಸಿದ ಪರಿಣಾಮ ನಾಲೆಯ ನೀರು ಕಾವೇರಿ ನದಿಗೆ ಸೇರುತ್ತಿದೆ. ನಾಲೆಯಲ್ಲಿ ಒಂದು ಹಸುವೂ ಸಹ ಸಿಲುಕಿಕೊಂಡು ಸಾವಿಗೀಡಾಗಿದೆ. ನಮ್ಮ ತಾಲೂಕಿನಲ್ಲಿ ಸುಮಾರು 30ರಿಂದ 35 ಕೆರೆಗಳು ಒಡೆದು ಹೋಗಿದ್ದು ಹಾಗೂ ಭಾರೀ ಮಳೆಯಿಂದಾಗಿ ತಾಲೂಕಿನಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದ್ದು ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನತೆ ಜಾಗೃತರಾಗಿರಬೇಕು ಎಂದರು.
ಐಕನಹಳ್ಳಿ ಗ್ರಾಮದೇವತೆ ಜಾತ್ರೆ
ಐಕನಹಳ್ಳಿ ಗ್ರಾಮದ ಅಧಿದೇವತೆ ಐಕನಹಳ್ಳಿ ಅಮ್ಮನವರ ದೇವಾಲಯದಲ್ಲಿ ಮೂಲ ವಿಶೇಷ ಪೂಜೆಯನ್ನು ನೆರವೇರಿಸಿದ ನಂತರ ಸುಂದರವಾಗಿ ಅಲಂಕೃತಗೊಂಡಿದ್ದ ಬಂಡಿರಥಕ್ಕೆ ಪೂಜೆ ಸಲ್ಲಿಸಿ, ಮೇಕೆ ಮರಿಯನ್ನು ಬಲಿ ಕೊಟ್ಟು ಬಂಡಿ ರಥವನ್ನು ಎಳೆದುಕೊಂಡು ಅಮ್ಮನವರ ಸನ್ನಿಧಾನಕ್ಕೆ ಹೋಗಲಾಯಿತು. ದೇವಸ್ಥಾನದ ಸುತ್ತ ಮೂರು ಸುತ್ತು ಪ್ರದಕ್ಷಣೆ ಮಾಡಿದ ನಂತರ ಸಿಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಗ್ರಾಮದಿಂದ ಬಂಡಿ ರಥವು ದೇವಾಲಯದ ಆವರಣಕ್ಕೆ ತಲುಪಿದ ನಂತರ ಭಕ್ತಾದಿಗಳ ಬಾಯಿ ಬೀಗ ತೆಗೆದ ನಂತರ ಸಿಡಿ ಜಾತ್ರೆ ಆರಂಭವಾಯಿತು. ಐಕನಹಳ್ಳಿ ಗ್ರಾಮದ ಭಕ್ತರು ಹಸಿರು ಬಂಡಿಯ ಮೂಲಕ ತಳಿಗೆಯನ್ನು ತಂದು ಅಮ್ಮನವರಿಗೆ ಅರ್ಪಿಸುತ್ತಾರೆ.
ಈ ವರ್ಷದ ಹಾಸನಾಂಬೆ ದರ್ಶನೋತ್ಸವಕ್ಕೆ ಗುರುವಾರ ತೆರೆ
ಗಣ್ಯರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಧ್ಯಾಹ್ನ 1.05ಕ್ಕೆ ೧೫ ದಿನದಿಂದ ನಡೆದ ಜಾತ್ರಾ ಮಹೋತ್ಸವಕ್ಕೆ ಗುರುವಾರದಂದು ಗರ್ಭಗುಡಿ ಬಾಗಿಲು ಮುಚ್ಚಿ ಬೀಗ ಹಾಕುವ ಮೂಲಕ ೨೦೨೫ರ ಹಾಸನಾಂಬ ಉತ್ಸವಕ್ಕೆ ತೆರೆ ಎಳೆಯಲಾಯಿತು. ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಹಾಕುವ ವೇಳೆ ಕೆಲ ಸಮಯದಲ್ಲಿ ನೆರೆದಿದ್ದ ಕರ್ತವ್ಯನಿರತ ಸಿಬ್ಬಂದಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬೆಳಗ್ಗೆ ಪೂಜೆ, ನೈವೇದ್ಯಕ್ಕಾಗಿ ಸಾರ್ವಜನಿಕ ದರ್ಶನ ಬಂದ್ ಆಗಿದ್ದರಿಂದ ಸಾವಿರಾರು ಭಕ್ತರು ದರ್ಶನ ಸಾಧ್ಯವಾಗದೇ ನಿರಾಸೆಗೊಂಡು ವಾಪಸ್ ಹೋಗಬೇಕಾಯಿತು.
ಹುತಾತ್ಮ ಪೊಲೀಸರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ಸಲ್ಲಿಸಿ ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೧೯೫೯ರಲ್ಲಿ ಸಿಯಾಚಿನ್ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ದಾಳಿಯಿಂದ ಮೃತಪಟ್ಟವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಅಕ್ಟೋಬರ್ ೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಸುವುದರ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ದೀಪಾವಳಿ ಹಿನ್ನೆಲೆ ಗುಣಿಕೇರಿಯಲ್ಲಿ ಲಕ್ಕೆ ಪೂಜೆ
ದೀಪಾವಳಿ ಹಬ್ಬದ ಪ್ರಯುಕ್ತ ನಾವು ಪ್ರತಿ ವರ್ಷವೂ ಲಕ್ಕೆ ಪೂಜೆ ಹಾಗೂ ಭೂಮಿಪೂಜೆ ನೆರವೇರಿಸುತ್ತೇವೆ. ಅದರೊಂದಿಗೆ ದನದ ಕೊಟ್ಟಿಗೆ ಹಾಗೂ ತಿಪ್ಪೆ ಗುಂಡಿಗಳಿಗೆ ಪೂಜೆ ಸಲ್ಲಿಸುವುದು ನಮ್ಮ ಸಂಪ್ರದಾಯವಾಗಿದೆ ಎಂದು ಹೇಳಿದರು. ಈ ರೀತಿಯ ಆಚರಣೆಗಳು ನಮ್ಮ ಪುರಾತನ ಸಂಸ್ಕೃತಿಯ ಪ್ರತೀಕಗಳು. ಇವು ಕೆಲವು ಗ್ರಾಮೀಣ ಭಾಗಗಳಲ್ಲಿ ಮಾತ್ರ ಇಂದಿಗೂ ಉಳಿದಿವೆ. ನಗರ ಪ್ರದೇಶಗಳಲ್ಲಿ ಇಂತಹ ಸಂಪ್ರದಾಯಗಳು ನಿಧಾನವಾಗಿ ಕಣ್ಮರೆಯಾಗುತ್ತಿವೆ. ಆದರೂ ನಾವು ಗುಣಿಕೇರಿ ಬೀದಿಯವರು ಈ ಸಂಪ್ರದಾಯವನ್ನು ಜೀವಂತವಾಗಿ ಉಳಿಸಿಕೊಂಡು ಪ್ರತಿ ವರ್ಷವೂ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved