• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಡಿ ಕಾಯುವ ಸೈನಿಕರ ಸುರಕ್ಷತೆಗಾಗಿ ಪ್ರಾರ್ಥನೆ
ನಮ್ಮ ದೇಶದ ಸುರಕ್ಷತೆಗಾಗಿ ಗಡಿಕಾಯುತ್ತಿರುವ ನಮ್ಮ ಸೈನಿಕರಿಗೆ ಧೈರ್ಯ ತುಂಬಿ, ಅವರಿಗೆ ಒಳ್ಳೆಯ ಆರೋಗ್ಯ ಹಾಗೂ ಪ್ರಾಣಹಾನಿ ಆಗದಿರಲಿ ಎಂದು ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ನೂರಾರು ಜನ ಮಾಜಿ ಸೈನಿಕರು ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಸೇರಿ ಶನಿವಾರ ಪೂಜೆ ಸಲ್ಲಿಸಿ ನಗರದಲ್ಲಿ ಬೈಕ್ ರ್‍ಯಾಲಿ ನಡೆಸಿದರು. ಪ್ರತಿ ಸೈನಿಕರಿಗೆ ನಾಗರಿಕರು ಗೌರವ ಕೊಡಬೇಕು. ಜೊತೆಗೆ ಸೈನಿಕರ ಶ್ರೇಯಸ್ಸಿಗಾಗಿ ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಬೇಕಾಗಿ ಕೇಳುತ್ತೇನೆ ಎಂದರು.
ಅರಸೀಕೆರೆಗೆ ಸಿಎಂ ಡಿಸಿಎಂ ಡಿಕೆ ಶಿವಕುಮಾರ್
ಮೇ 30ರ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಂತ್ರಿಗಳು ನಗರಕ್ಕೆ ಆಗಮಿಸಲಿದ್ದಾರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಎಂಜಿನಿಯರಿಂಗ್‌ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟನೆ ನೆರವೇರಿಸಲಿದ್ದಾರೆ. ಎಂಜಿನಿಯರಿಂಗ್‌ ಕಾಲೇಜು ಕೇಂದ್ರ ಸರ್ಕಾರ ಈಗಾಗಲೇ 240 ವಿದ್ಯಾರ್ಥಿಗಳಿಗೆ ನಾಲ್ಕು ಕೋರ್ಸ್‌ಗೆ ಅರ್ಜಿ ಕರೆಯಲು ಅನುಮತಿ ನೀಡಿದೆ ಎಂದು ವಿವರಿಸಿದರು.
ದೇಶದ ಅಭಿವೃದ್ಧಿಯಲ್ಲಿ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಶನಿವಾರ ಭೂಮಿಪೂಜೆ ನೆರವೇರಿಸಿದರು. ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಗುಣಮಟ್ಟದಿಂದ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಎಂದು ಲೋಕೋಪಯೋಗಿ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು. ನಗರಗಳಿರಲಿ, ಗ್ರಾಮೀಣ ಪ್ರದೇಶಗಳಿರಲಿ ಎಲ್ಲ ಭಾಗಗಳ ಅಭಿವೃದ್ಧಿ ಆಗಬೇಕು ಎಂದರೆ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ. ರಸ್ತೆಗಳು ಚೆನ್ನಾಗಿದ್ದರೆ, ಸಾಗಣೆ, ವ್ಯಾಪಾರ-ವಹಿವಾಟು ಒಂದು ಕಡೆಯಿಂದ ಮತ್ತೊಂದು ಕಡೆಗೆ ಚೆನ್ನಾಗಿ ನಡೆಯಲಿದೆ. ಇದರಿಂದ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಹೇಳಿದರು.
ಲಯಾರ್ಥಿಗಳಿಗೆ ಉತ್ತಮ ಓದುವ ವಾತಾವರಣ ನಿರ್ಮಿಸಿ
ನಿಲಯದ ಊಟೋಪಚಾರ ವ್ಯವಸ್ಥೆ, ಸ್ವಚ್ಛತೆ, ಶಿಸ್ತು ಈ ವಿಷಯಗಳ ಬಗ್ಗೆ ಯಾವುದೇ ರೀತಿಯ ಉದಾಸೀನತೆ ತೋರಿಸದೇ ಕರ್ತವ್ಯ ನಿರ್ವಹಿಸಬೇಕು. ನಿಲಯಗಳಲ್ಲಿ ಆಕಸ್ಮಿಕ ಅವಘಡಗಳು ಸಂಭವಿಸದ ಹಾಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಪ್ರತಿ ಹಂತಗಳಲ್ಲೂ ಈ ಬಗ್ಗೆ ಪರಿವೀಕ್ಷಣೆಯನ್ನು ಮುಂದಿನ ಹಂತದ ಅಧಿಕಾರಿಗಳು ಮಾಡಬೇಕು ಎಂದು ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯುವ ನಿಲಯಾರ್ಥಿಗಳಿಗೆ ಉತ್ತಮವಾಗಿ ಓದುವ ವಾತಾವರಣವನ್ನು ನಿರ್ಮಿಸಿಕೊಡುವಲ್ಲಿ ನಿಲಯದ ಸಿಬ್ಬಂದಿಯ ಪಾತ್ರ ಬಹುಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಬಿ.ಆರ್‌. ಹೇಳಿದ್ದಾರೆ.
ಹೆದ್ದಾರಿ ಮೇಲೆ ಹರಿಯುತ್ತಿರುವ ಯುಜಿಡಿ ನೀರು
ಯುಜಿಡಿ ಪೈಪ್ ಒಡೆದು ಮಲಮೂತ್ರ ತ್ಯಾಜ್ಯ ನೀರು ಹೆದ್ದಾರಿ ರಸ್ತೆಯಲ್ಲಿ ಹರಿಯುತ್ತಿದ್ದು, ಅದರ ಮೇಲೆ ವಾಹನಗಳು ಓಡಾಡುವಾಗ ಸಾರ್ವಜನಿಕರ ಮೈಮೇಲೆ ಸಿಂಪಡಣೆ ಆಗುತ್ತಿದ್ದು, ಈ ಬಗ್ಗೆ ಪುರಸಭೆಯ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಸುತ್ತಮುತ್ತಲಿನ ನಿವಾಸಿಗಳು ಪುರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಮಳೆ ಬಂದರಂತೂ ಮುಖ್ಯ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳ ಮಾಲೀಕರ ಹಾಗೂ ಜನರ ಕಷ್ಟ ಹೇಳ ತೀರವಾಗಿದೆ. ಯುಜಿಡಿ ಕೊಳಚೆ ನೈರ್ಮಲ್ಯ ಇತರೆ ವಸ್ತುಗಳು ಒಟ್ಟಾಗಿ ಸೇರಿ ಅಂಗಡಿ ಮನೆಯೊಳಗೆ ನುಗ್ಗಿದರೆ ಅಲ್ಲಿ ಒಂದು ನಿಮಿಷ ಕೂಡ ಇರಲು ಅಸಾಧ್ಯವಾಗಿದ್ದು, ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದ್ದು, ಜನರು ಪುರಸಭೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ನಾಗೇನಳ್ಳಿ ಸೊಸೈಟಿ ಅಧ್ಯಕ್ಷರಾಗಿ ಹಿರಿಗದ್ದೆ ಮಂಜುನಾಥ್ ಆಯ್ಕೆ
ನಾಗೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೫ರಿಂದ ೨೦೩೦ರ ಅವಧಿಗೆ ನಿರ್ದೇಶಕರ ಸ್ಥಾನಕ್ಕೆ ಮೇ ೧ ರಂದು ಚುನಾವಣೆ ನಡೆದಿತ್ತು. ಆದರೆ ಅಧ್ಯಕ್ಷ ಸ್ಥಾನಕ್ಕೆ ಮೇ ೯ರಂದು ಶುಕ್ರವಾರ ಚುನಾವಣೆ ನಿಗದಿಯಾಗಿದ್ದರಿಂದ, ಅಧ್ಯಕ್ಷ ಸ್ಥಾನಕ್ಕೆ ಹಿರಿಗದ್ದೆ ಮಂಜುನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಭಾಸ್ಕರ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ರಿಟರ್ನಿಂಗ್‌ ಅಧಿಕಾರಿ ಲೀಲಾ, ಅಧ್ಯಕ್ಷರಾಗಿ ಹಿರಿಗದ್ದೆ ಮಂಜುನಾಥ್, ಉಪಾಧ್ಯಕ್ಷರಾಗಿ ಭಾಸ್ಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು
ರಸ್ತೆಯಲ್ಲೇ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಮೃತಪಟ್ಟಿದೆ.ಶನಿವಾರ ಮುಂಜಾನೆ ಐದು ಗಂಟೆಯ ಸಮಯದಲ್ಲಿ ಗ್ರಾಮ ಸಂಪರ್ಕಿಸುವ ರಸ್ತೆಯಲ್ಲಿ ಆಹಾರ ಅರಸಿ ಮರದ ರಂಬೆಗಳನ್ನು ಎಳೆದ ವೇಳೆ ಮರದ ರಂಬೆ ವಿದ್ಯುತ್ ತಂತಿಗಳಿಗೆ ತಾಗಿ ಮರಕ್ಕೆ ಕಟ್ಟಲಾಗಿದ್ದ ವಿದ್ಯುತ್ ತಂತಿಯ ಮೂಲಕ ಮರಕ್ಕೆ ವಿದ್ಯುತ್ ಪ್ರವಹಿಸಿ ಆಹಾರ ತಿನ್ನುತಿದ್ದ ಸುಮಾರ ೨೦ ವರ್ಷದ ಗಂಡಾನೆ ರಸ್ತೆ ಮಧ್ಯವೇ ಮೃತಪಟ್ಟಿದೆ.
ರೈತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ
ತಾಲೂಕಿನ ರೈತರ ಜ್ವಲಂತ ಸಮಸ್ಯೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಶುಕ್ರವಾರ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.
12ರಂದು ಬುದ್ಧ ಪೂರ್ಣಿಮಾ: ಪ್ರತಿಮೆ, ರಥ ಮೆರವಣಿಗೆ
೨೫೬೯ನೇ ಪವಿತ್ರ ವೈಶಾಖ ಬುದ್ಧ ಪೂರ್ಣಿಮಾವನ್ನು ಮೇ ೧೨ ರಂದು ಪ್ರತಿಮೆ, ಭಾವಚಿತ್ರದೊಂದಿಗೆ ರಥದ ಮೆರವಣಿಗೆ ನಂತರ ಹಾಸನಾಂಬ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷ ಎಚ್.ಟಿ. ಬಸವರಾಜು ತಿಳಿಸಿದರು.
ದೇಗುಲದ ಪುನರ್ ಪ್ರತಿಷ್ಠಾಪನೆ ವೇಳೆ ಕಾಡಾನೆ ದಾಂದಲೆ‌
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಮುಂಜಾನೆಯಿಂದ ಆರಂಭವಾದ ಕೋಟೆದ ಬಬ್ಬುಸ್ವಾಮಿ, ಚಾಮುಂಡೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಜೃಂಭಣೆಯ ಚಾಲನೆ ದೊರೆತ್ತಿದ್ದು ಬೆಳಿಗ್ಗಿನಿಂದಲೇ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಮುಂದುವರಿಯುತ್ತಿದ್ದಂತೆ ಗುರುವಾರ ರಾತ್ರಿ ಸುಮಾರು 9.30 ರ ಸಮಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಕಣ್ಮರೆಯಾಗಿದ್ದ ಮೂರ್ನಾಲ್ಕು ಕಾಡಾನೆಗಳು ಏಕಾಏಕಿ ಪ್ರತ್ಯಕ್ಷವಾಗಿದ್ದು ಭಕ್ತ ಸಮೂಹ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಕಾಡಾನೆಗಳನ್ನು ನೋಡಲು ಮುಗಿಬಿದ್ದ ಸನ್ನಿವೇಶ ನಿರ್ಮಾಣವಾಗಿತ್ತು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 441
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved