• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಚಾಂಬ ದೇವಿಯ ಚಿಕ್ಕ ಜಾತ್ರೆ
ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಹಾಸನಾಂಬೆ ದೇವಿಯ ಸಹೋದರಿ ರಕ್ತ ಬೀಜಾಸುರನನ್ನು ಸಂಹರಿಸಿದ ಶ್ರೀ ಕೆಂಚಾಂಬಿಕ ದೇವಿಯ ಚಿಕ್ಕ ಜಾತ್ರೆ ಸುಮಾರು 48 ಹಳ್ಳಿಗಳ ಭಕ್ತರೊಂದಿಗೆ ಕೆಂಚಾಂಬ ದೇವಸ್ಥಾನದ ಆವರಣದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು. ಮಂಗಳವಾರ ಸಂಜೆ ಹರಿಹಳ್ಳಿ ಗ್ರಾಮದಲ್ಲಿರುವ ಮೂಲ ದೇವಿಗೆ ಸಪ್ತಮಾತೃಕಾ ಅಲಂಕಾರದೊಂದಿಗೆ ಜಾತ್ರೆ ಪ್ರಾರಂಭವಾಯಿತು. ದೇವಾಲಯದ ಆವರಣದಲ್ಲಿ ಭಕ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಹಾಸನದಲ್ಲಿ ತನ್ನ ಮದುವೆ ಆಮಂತ್ರಣ ನೀಡಲು ಹೋದ ಪೇದೆ ಹತ್ಯೆ
ಹಸೆಮಣೆ ಏರಬೇಕಾಗಿದ್ದ ಪೊಲೀಸ್ ಪೇದೆ ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಹಂಚಿ ವಾಪಸ್ ಹಿಂದಿರುಗುವ ವೇಳೆ ದಾರಿ ಮಧ್ಯೆ ಮಾರಾಕಸ್ತ್ರಗಳಿಂದ ಭೀಕರವಾಗಿ ಹತ್ಯೆಯಾಗಿರುವ ಘಟನೆ ಹಾಸನ ತಾಲೂಕಿನ ದುದ್ದ ಬಳಿ ನಡೆದಿದೆ.
ಮುಸ್ಲಿಮರ ಓಲೈಕೆಗೆ ವಕ್ಫ್‌ ದುರ್ಬಳಕೆ: ಸಿಎಂ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್
ಒಂದು ಸಮುದಾಯವನ್ನು ತೃಪ್ತಿಪಡಿಸುವ ಸಲುವಾಗಿ ವಕ್ಫ್ ಸಚಿವ ಜಮೀರ್ ಅವರಿಂದ ರೈತರ ಜಮೀನುಗಳು, ಶಾಲಾ ಆವರಣಗಳು, ಮಠ, ಮಂದಿರಗಳನ್ನು ವಕ್ಫ್‌ಬೋರ್ಡ್ ಆಸ್ತಿಯೆಂದು ಕಬಳಿಸುವ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದಲ್ಲಿ ನವೆಂಬರ್‌ 7 ರಂದು ಸಪ್ನ ಬುಕ್ ಹೌಸ್ ಮಳಿಗೆ ಪ್ರಾರಂಭ: ಸಪ್ನ ಬುಕ್ ಹೌಸ್‌ನ ನಿತಿನ್‌ ಷಾ
ಶಿಲ್ಪಕಲೆಗಳ ತವರೂರು ಹಾಸನ ನಗರದ ಬಿ.ಎಂ. ರಸ್ತೆ ಬಳಿ ಇದೇ ಗುರುವಾರ ಸಪ್ನ ಬುಕ್ ಹೌಸ್ ನ 22 ನೆಯ ಹೊಸ ಪುಸ್ತಕ ಮಳಿಗೆ ಪ್ರಾರಂಭವಾಗಲಿದೆ ಎಂದು ಸಪ್ನ ಬುಕ್ ಹೌಸ್ ವ್ಯವಸ್ಥಾಪಕ ನಿರ್ದೇಶಕ ನಿತಿನ್‌ ಷಾ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ರೈತರ ಪಹಣಿಯಲ್ಲಿ ವಕ್ಫ್‌ ಹೆಸರು ಬರಕೂಡದು: ಕಿಸಾನ್‌ ಸಂಘದ ಅಧ್ಯಕ್ಷ ಹಾಡ್ಯ ರಮೇಶ್ ರಾಜು
ರೈತರ ಆಸ್ತಿಗಳ ಮೇಲೆ ವಕ್ಫ್ ಹೆಸರು ಬಾರದಂತೆ ನೋಡಿಕೊಳ್ಳಬೇಕು. ತಪ್ಪಿದಲ್ಲಿ ಭಾರತೀಯ ಕಿಸಾನ್ ಸಂಘದ ರೈತರು ಸಾರ್ವಜನಿಕರ ಜೊತೆಗೂಡಿ ಅನಿರ್ದಿಷ್ಟಾವಧಿ ಧರಣಿ ಮಾಡಬೇಕಾಗುತ್ತದೆ ಎಂದು ದಕ್ಷಿಣ ಪ್ರಾಂತ್ಯ ಕಿಸಾನ್ ಸಂಘದ ಅಧ್ಯಕ್ಷ ಹಾಡ್ಯ ರಮೇಶ್ ರಾಜು ಎಚ್ಚರಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಕ್ಫ್ ಬಗ್ಗೆ ಸಿಎಂ ನಡೆ ಚುನಾವಣಾ ತಂತ್ರ: ಬಿಜೆಪಿ ಮಂಡಲ ಸಂಚಾಲಕ ಲೋಕೇಶ್
ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರಿಯಲಿದೆ ಎಂದು ಬಿಜೆಪಿ ಮಂಡಲ ಸಂಚಾಲಕ ಲೋಕೇಶ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಕ್ಫ್ ಹೆಸರಲ್ಲಿ ಸರ್ಕಾರದ ಜನರ ಆಸ್ತಿ ವಶ: ಬಿಜೆಪಿಯ ಉಮಾ ರವಿಪ್ರಕಾಶ್
ರಾಜ್ಯ ಕಾಂಗ್ರೆಸ್ ಸರ್ಕಾರವು ವಕ್ಫ್ ಮಂಡಳಿ ಹೆಸರಿನಲ್ಲಿ ಆಸ್ತಿ ವಶಪಡಿಸಿಕೊಳ್ಳುತ್ತಿರುವುದು ಜನಸಾಮಾನ್ಯರಿಗೆ ಹಿಂಸೆಯಾಗಿದೆ. ತಾಲೂಕು ಬಿಜೆಪಿ ವತಿಯಿಂದ ಇದನ್ನು ಖಂಡಿಸುತ್ತದೆ ಎಂದು ಆಲೂರು- ಕಟ್ಟಾಯ ಮಂಡಲ ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್ ತಿಳಿಸಿದರು. ಆಲೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಕ್ಫ್‌ನಿಂದ ಕಾಂಗ್ರೆಸ್ ರಾಜ್ಯದಲ್ಲಿ ಶಾಂತಿ ಕದಡುತ್ತಿದೆ: ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್
ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಕ್ಫ್ ಮಂಡಳಿಯ ಮೂಲಕ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಆರೋಪಿಸಿದರು. ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಯ ಆಸ್ತಿಗಳಲ್ಲಿ ವಕ್ಫ್‌ ಹೆಸರು: ಶಾಸಕ ಎಚ್.ಕೆ.ಸುರೇಶ್
ಸರ್ಕಾರಿ ಶಾಲೆ ಆಸ್ತಿ ಸರ್ವೆ ನಂ ೪೩೫ರಲ್ಲಿ ವಕ್ಫ್ ಹೆಸರು ಸೇರ್ಪಡೆ ಕಂಡು ಬಂದಿರುವುದರಿಂದ ಬೇಲೂರು ತಾಲೂಕ ಮಟ್ಟದಲ್ಲಿ ವಕ್ಫ್‌ ಬೋರ್ಡ್ ವಿರುದ್ಧ ಆಕ್ರೋಶ, ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡದ ತೇರಾದ ಕೆಎಸ್‌ಆರ್‌ಟಿಸಿ ಬಸ್‌
ಬೇಲೂರು ಸಾರಿಗೆ ಘಟಕದ ವತಿಯಿಂದ ಬೇಲೂರು ‌ಬಾಣಾವಾರ ನಡುವೆ ಚಲಿಸುವ ಬಸ್ಸನ್ನು ಸಂಪೂರ್ಣವಾಗಿ ಕನ್ನಡ ಧ್ವಜ, ಬಾವುಟ, ಸಾಹಿತಿಗಳು, ನಟರು, ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳಿಂದ ಅಲಂಕರಿಸಲಾಗಿದೆ. ಒಂದೊಂದನ್ನೇ ಓದುತ್ತಾ ಹೋದರೆ ಕರ್ನಾಟಕದ ಇತಿಹಾಸ ನೆನಪಿಗೆ ಬರುತ್ತದೆ. ಕನ್ನಡ ರಥದಲ್ಲಿ ರಾಜ್ಯೋತ್ಸವ ಪುರಸ್ಕೃತ ಸಾಹಿತಿಗಳು, ಕನ್ನಡದ ಮೇರು ನಟರು, ರಾಜರು, ಹಾಸನ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಮಾಹಿತಿಯಿದೆ.ಇಡೀ ಬಸ್‌ನ ಒಂದೊಂದು ಸೀಟಿನಲ್ಲೂ ಕನ್ನಡದದ ಬಾವುಟ. ಕನ್ನಡದ ವಾತಾವರಣ ಸೃಷ್ಟಿಸುವ ಬಲೂನುಗಳ ಅಲಂಕಾರ ಗಮನ ಸೆಳೆಯುತ್ತದೆ.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved