• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂ ಶಿವರ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿ ಶಿವರಾಜು ಅವಿರೋಧ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಎಂ. ಶಿವರ ಗ್ರಾಮಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಸ್.ಎಸ್. ಶಿವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇದ್ದ ತಿಮ್ಮಪ್ಪಗೌಡರು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಶಿವರಾಜು ಆಯ್ಕೆಯಾಗಿದ್ದು, ಗ್ರಾಮಪಂಚಾಯಿತಿಯ ೧೪ ಸದಸ್ಯರಲ್ಲಿ ೧೩ ಜನ ಸದಸ್ಯರು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ಗಿರೀಶ್ ಎ. ಡಿ. ಕರ್ತವ್ಯ ನಿರ್ವಹಿಸಿದರು.
ನಾಳೆ ಹಾಸನಾಂಬೆಯ ಅಕ್ಕ ಕೆಂಚಾಂಬೆಯ ಜಾತ್ರೆ
ಕೆಂಚಾಂಬ ದೇವಿಯ ಜಾತ್ರೆಗೆ ಹಾಸನಾಂಬೆಯ ದರ್ಶನ ಮುಗಿದ ಮರುದಿನದಿಂದಲೇ ಧಾರ್ಮಿಕ ಕಾರ್ಯಗಳು ಆರಂಭವಾಗುವುದು ಎರಡೂ ಪುಣ್ಯಕ್ಷೇತ್ರಗಳ ನಡುವಿನ ಒಡನಾಟಕ್ಕೆ ಸಾಕ್ಷಿಯಾಗಿದ್ದು, ಹಾಸನಾಂಬೆ ಉತ್ಸವ ಮುಗಿದ ನಂತರ ಹಾಸನದಲ್ಲಿ ನೆಲೆಸಿರುವ ಸಹೋದರಿಯರು ಹಿರಿಯ ಸಹೋದರಿ ಕ್ಷೇತ್ರಕ್ಕೆ ವಿಹಾರ ಹೊರಡುತ್ತಾರೆಂಬ ಪ್ರತೀತಿ ಇದೆ. ಹಾಸನಾಂಬೆಯ ಹಿರಿಯ ಸಹೋದರಿ ಕೆಂಚಾಂಬದೇವಿಗೂ ಹಾಸನಾಂಬೆಯಷ್ಟೆ ಐತಿಹಾಸಿಕ ಹಿನ್ನೆಲೆ ಇದ್ದು ನವೆಂಬರ್ ೬ರಂದು ದೇವಿಯ ಜಾತ್ರೆ ನಡೆಯಲಿದೆ.
ಶ್ರೀ ಭೀಷ್ಟಮ್ಮನವರ ಜಾತ್ರಾ ಮಹೋತ್ಸವ
ವಿಷ್ಣುಸಮುದ್ರ ಕೆರೆಯ ಏರಿ ದಡದಲ್ಲಿರುವ ಶ್ರೀ ಭೀಷ್ಟಮ್ಮನವರ ಜಾತ್ರಾ ಮಹೋತ್ಸವನ್ನು ಬಿಟ್ರುವಳ್ಳಿ ಗ್ರಾಮಸ್ಥರ ವತಿಯಿಂದ ನಡೆಸಿ ಬಂದ ಸಾವಿರಾರು ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ಶ್ರೀ ಭೀಷ್ಟಮ್ಮನವರನ್ನು ವಿಷ್ಣುಸಮುದ್ರ ಕೆರೆ ಏರಿಯ ಮೇಲೆ ಪ್ರತಿಷ್ಠಾಪಿಸಿದ್ದು, ಪ್ರತಿ ವರ್ಷ ದೀಪಾವಳಿ ಹಬ್ಬದ ತರುವಾಯ ಜಾತ್ರಾ ಮಹೋತ್ಸವ ನಡೆಸಲಾಗುತ್ತದೆ. ಗಣಪತಿ ಪೂಜೆ, ಗಂಗಾಪೂಜೆ, ಮಹಾಮಂಗಳಾರತಿ ನಡೆಸಿದ ಬಳಿಕ ಉತ್ಸವಮೂರ್ತಿ ಸನ್ನಿಧಾನದಲ್ಲಿ ಜಾತ್ರೆಯನ್ನು ನಡೆಸುತ್ತಾ ಬಂದ ಭಕ್ತರಿಗೆ ಶ್ರೀ ಭೀಷ್ಟಮ್ಮನವರ ಚಾರಿಟಬಲ್ ಟ್ರಸ್ಟ್ ಬಿಟ್ರುವಳ್ಳಿ ಮತ್ತು ಭಕ್ತರ ಸಹಕಾರದಿಂದ ಅನ್ನ ದಾಸೋಹ ವ್ಯವಸ್ಥೆ ಮಾಡಲಾಯಿತು.
ಜಾನಪದ ಪರಿಷತ್ತಿನಿಂದ ಸಂಗೀತ ಸಾಧಕರಿಗೆ ಸನ್ಮಾನ
ಹಳೇಬೀಡಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ನಡೆದ ಬೇಲೂರು ತಾಲೂಕು ಜಾನಪದ ಪರಿಷತ್ತಿನಿಂದ ಸಂಗೀತಾ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಐಶ್ವರ್ಯ ಜಾನಪದ ಸೇರಿದಂತೆ ಸಂಗೀತದ ವಿವಿಧ ಪ್ರಕಾರದಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡಿದ್ದಾಳೆ. ಸರಿಗಮಪ ಕಾರ್ಯಕ್ರಮದ ಮೆಟ್ಟಿಲೇರಿ, ಸಂಗೀತ ದಿಗ್ಗಜ ಹಂಸಲೇಖ ಅವರ ಮೆಚ್ಚುಗೆ ಪಡೆದಿದ್ದಾರೆ. ಬೇಲೂರು ತಾಲೂಕು ಜಾನಪದ ಪರಿಷತ್ತಿನವರು ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಉಪ ಪ್ರಾಂಶುಪಾಲ ಮುಳ್ಳಯ್ಯ ಹೇಳಿದರು.
ಹಾಸನಾಂಬೆ ಜಾತ್ರೋತ್ಸವದ ಹುಂಡಿ ಎಣಿಕೆ ಕಾರ್ಯ
ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ೧೦೦೦ ರು. ಬೆಲೆಯ ಟಿಕೆಟ್ ಆನ್‌ಲೈನ್ ಮೂಲಕ ರು. ೨೫,೬೭,೭೯೦, ಸ್ಥಳದಲ್ಲೇ ಪಡೆದ ಟಿಕೆಟ್ ೭,೧೬,೦೧,೦೦೦ ರು, ಒಟ್ಟು ೭,೪೧,೬೮,೭೯೦ ಹಾಗೂ ೩೦೦ ರು. ಟಿಕೆಟ್ ಆನ್‌ಲೈನ್ ಮೂಲಕ ರು.೬,೮೪,೪೩೮, ಸ್ಥಳದಲ್ಲೇ ಪಡೆದ ಟಿಕೆಟ್ ರು. ೧,೭೪,೪೨,೬೦೦, ಒಟ್ಟು ೧,೮೧,೨೭,೦೩೮ ರುಪಾಯಿ ಆದಾಯ ಬಂದಿದೆ. ೫೧ ಗ್ರಾಂ ಚಿನ್ನ, ೯೧೩ ಗ್ರಾಂ. ಬೆಳ್ಳಿಯನ್ನು ಕಾಣಿಕೆ ಹುಂಡಿಗೆ ಹಾಕಿದ್ದಾರೆ.
ವಕ್ಫ್ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ
ವಕ್ಫ್ ಅದಾಲತ್ ಬೋರ್ಡ್‌ ಮೂಲಕ ಬಡ ರೈತರ ಭೂಮಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ವಿರೋಧಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿದಲ್ಲದೆ ಕೆಲ ಸಮಯ ಮಾನವ ಸರಪಳಿ ನಡೆಸಿ ರಸ್ತೆ ತಡೆ ಮಾಡಿ ನಂತರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್‌ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದರು.
ವಳಂಬಿಗೆಯಲ್ಲಿ ನೂತನ ದೇವಾಲಯ ಉದ್ಘಾಟನೆ
ವಳಂಬಿಗೆ ಗ್ರಾಮದಲ್ಲಿ ಶ್ರೀ ಈಶ್ವರಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಮಾತನಾಡಿದರು. ಪ್ರಚಲಿತ ನಾಗರಿಕ ಸಮಾಜದಲ್ಲಿ ಅನಾಗರಿಕ ವರ್ತನೆ ಹೆಚ್ಚುತ್ತಿದ್ದು, ಸಮಾಜದಲ್ಲಿ ಮೊದಲಿಗೆ ಮನುಷ್ಯತ್ವದೊಂದಿಗೆ ಬದುಕುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.
ನಬಾರ್ಡ್ ವತಿಯಿಂದ ಕಡಿಮೆ ಬಡ್ಡಿಯಲ್ಲಿ 25 ಲಕ್ಷ ರುಪಾಯಿ ಸಾಲ
ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಗೋದಾಮು ನಿರ್ಮಾಣಕ್ಕೆ ನಬಾರ್ಡ್ ವತಿಯಿಂದ ವಾರ್ಷಿಕ ಶೇಕಡ 1% ಬಡ್ಡಿ ದರದಲ್ಲಿ 25 ಲಕ್ಷ ರು. ಸಾಲ ಕೊಡಿಸುವುದಾಗಿ ಶಾಸಕ ಸಿಎನ್ ಬಾಲಕೃಷ್ಣ ಭರವಸೆ ನೀಡಿದರು. ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಹೊಸ ಸಾಲ ವಿತರಣೆ ಕಾರ್ಯಕ್ರಮದಲ್ಲಿ ರೈತರಿಗೆ ಹೊಸ ಸಾಲದ ಚೆಕ್ ವಿತರಿಸಿ ಮಾತನಾಡಿದರು.
ವಿಜೃಂಭಣೆಯಿಂದ ಜಂಬೂರು ಶನೇಶ್ವರ ಬ್ರಹ್ಮರಥೋತ್ಸವ
ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮದ ಪುರಾಣ ಪ್ರಸಿದ್ಧ ಶನೇಶ್ವರ ಸ್ವಾಮಿಯವರ 37ನೇ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ್ತಿಕ ಸೋಮವಾರದಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಶನೇಶ್ವರ ಸ್ವಾಮಿಗೆ ವಿಶೇಷ ಪೂಜೆ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ಗ್ರಾಮದ ರಾಜಭೀದಿಗಳಲ್ಲಿ ಶ್ರೀ ಶನೇಶ್ವರ ಸ್ವಾಮಿ ಹಾಗೂ ಕೋಟೆ ಮಾರಮ್ಮನವರ ಉತ್ಸವ ನಡೆಯಿತು.
ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ ಹಾಗೂ ಇತರೆ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶನಿವಾರ ವಿಶೇಷ ಪೂಜಾ ಮಹೋತ್ಸವ ಮತ್ತು ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಶ್ರೀ ಧನಲಕ್ಷ್ಮಿ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.ಶ್ರೀದೇವಿ ಹಾಗೂ ಗರ್ಭಗುಡಿಯನ್ನು ನೋಟುಗಳಿಂದ ಧನಲಕ್ಷ್ಮಿ ಪೂಜಾ ಮಹೋತ್ಸವವು ವೈಭವದಿಂದ ಕಂಗೊಳಿಸುವಂತೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved