ಬಗರ್ಹುಕುಂ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಪ್ರತಿಭಟನೆಗೆ ಕಾಫಿ ಬೆಳೆಗಾರರ ಸಂಘ ಹಾಗೂ ಹೊಯ್ಸಳ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಗರ್ಹುಕುಂ ರೈತರಿಗೆ ಹಕ್ಕು ದಾಖಲೆ ಮಾಡಿಕೊಡದೆ ಅನಗತ್ಯ ಕಿರುಕುಳ ಕೊಡುತ್ತಿರುವುದನ್ನ ವಿರೋಧಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಟ್ರ್ಯಾಕ್ಟರ್ ಜಾಥಾ ನಡೆಸಿ ನಂತರ ತಾಲೂಕು ಕಚೇರಿ ಮುಂದೆ ನಡೆದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು.