• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಪಾವಳಿ ಹಬ್ಬಕ್ಕೆ ಖರೀದಿ ಬಲು ಜೋರು
ದೀಪಾವಳಿಯ ಆಚರಣೆಗೆ ನಗರದ ಮಾರುಕಟ್ಟೆಯಲ್ಲಿ ಹೂವು, ಹಣ್ಣುಗಳು ಬಾಳೇಕಂದು, ಮಾವಿನಸೊಪ್ಪು, ತರಕಾರಿ ಇತ್ಯಾದಿ ಅಗತ್ಯ ವಸ್ತುಗಳನ್ನು ನಾಗರಿಕರು ಸಡಗರದಿಂದ ಖರೀದಿಸಿದರು. ತಾಲೂಕಿನ ಜನತೆದೀಪಾವಳಿ ಹಬ್ಬದ ನರಕ ಚತುದರ್ಶಿ ಹಾಗೂ ಬಲಿಪಾಡ್ಯಮಿ ಹಬ್ಬಗಳನ್ನು ಸಂಭ್ರಮದಲ್ಲಿ ಆಚರಿಸಲು ಅಗತ್ಯ ವಸ್ತುಗಳ ಕೊಳ್ಳಲು ನಾಗರಿಕರು ಇಂದು ಮಾರುಕಟ್ಟೆಗೆ ಲಗ್ಗೆ ಹಾಕಿದ್ದರು.
ಬಾನು ಮುಷ್ತಾಕ್‌ ಮತ್ತು ಮದನ್‌ ಗೌಡರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ
ಕರ್ನಾಟಕ ಸಂಭ್ರಮ-೫೦ರ ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಸುದೀರ್ಘ ಸೇವೆ-ಸಾಧನೆ ಮಾಡಿರುವ ೫೦ ಮಹಿಳಾ ಮತ್ತು ೫೦ ಪುರುಷ ಸಾಧಕರುಗಳಿಗೆ ರಾಜ್ಯ ಸರ್ಕಾರ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿದೆ. ಹಾಸನ ಜಿಲ್ಲೆಯಿಂದ ಜನಮಿತ್ರ ಪ್ರಾದೇಶಿಕ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಮದನಗೌಡರು ಹಾಗೂ ಸಾಹಿತ್ಯ, ಸಿನಿಮಾ, ಮಹಿಳಾಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಹಿರಿಯ ಲೇಖಕಿ ಹಾಗೂ ವಕೀಲರಾದ ಡಾ.ಬಾನು ಮುಷ್ತಾಕ್ ಅವರನ್ನು ಸಾಹಿತ್ಯ ಕ್ಷೇತ್ರದಿಂದ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ಎಪಿಎಂಸಿಯಲ್ಲಿ ಪಟಾಕಿ ಅಂಗಡಿ
ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯ ಅಗ್ನಿಶಾಮಕ ಠಾಣೆ ಸಮೀಪವಿರುವ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲಾಗಿದ್ದು, ಪಟ್ಟಣದಿಂದ ಒಂದು ಕಿ.ಮೀ.ಗೂ ಹೆಚ್ಚು ದೂರವಿರುವ ಪಟಾಕಿ ಅಂಗಡಿಗಳಲ್ಲಿ ಗ್ರಾಹಕರಿಲ್ಲದೇ ವ್ಯಾಪಾರ ಕುಸಿದಿದೆ. ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಮಾರುಕಟ್ಟೆ ಸ್ಥಳಾಂತರಿಸುವ ಸಲುವಾಗಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಪರೀಕ್ಷಾರ್ಥವಾಗಿ ಪಟಾಕಿ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ತರಕಾರಿ ಮಾರುಕಟ್ಟೆಯ ವರ್ತಕರ ಆತಂಕಕ್ಕೆ ಕಾರಣವಾಗಿದೆ.
ಹಾಸನಾಂಬೆ ದೇವಸ್ಥಾನ ಡಿಸಿ ಆಸ್ತಿನಾ, ಹೇಳೋರು ಕೇಳೋರು ಯಾರೂ ಇಲ್ವಾ : ಮಾಜಿ ಸಚಿವ ಎಚ್.ಡಿ. ರೇವಣ್ಣ

ಹೇಳೋರೋ, ಕೇಳೋರು ಯಾರೂ ಇಲ್ಲ ಈ ಜಿಲ್ಲೆಯಲ್ಲಿ. ಎರಡೂವರೆ ಲಕ್ಷ ಪಾಸ್ ಯಾಕೆ ಕೊಟ್ಟಿದ್ದೀರಾ! ದೇವಸ್ಥಾನವೇನು ಡಿಸಿ ಮನೆ ಆಸ್ತಿನಾ..ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ಸಿಟ್ಟನ್ನು ಹೊರ ಹಾಕಿದಲ್ಲದೇ ಬೇಸರ ವ್ಯಕ್ತಪಡಿಸಿದರು.

ಮುಂದಿನ ವರ್ಷ ವ್ಯವಸ್ಥಿತವಾಗಿ ಹಾಸನಾಂಬೆ ಜಾತ್ರೆ
ಮುಂದಿನ ವರ್ಷದಲ್ಲಿ ಹಾಸನಾಂಬ ಜಾತ್ರೆಯನ್ನು ಇನ್ನೂ ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ಮಾಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಹೇಳಿದರು. ಜನರು ಆತ್ಮವಿಶ್ವಾಸ, ನಂಬಿಕೆಯಿಂದ ಹಿಂದೂ ಸಂಪ್ರದಾಯದಂತೆ ಭಕ್ತಿ ಇಟ್ಟುಕೊಂಡಿದ್ದಾರೆ. ರಾಜ್ಯ ಅಲ್ಲದೆ ಪಕ್ಕದ ರಾಜ್ಯದಿಂದಲೂ ಸಹಸ್ರಾರು ಭಕ್ತರು ಆಗಮಿಸಿ ಹಾಸನಾಂಬ ದರ್ಶನ ಪಡೆಯುತ್ತಿದ್ದಾರೆ ಎಂದರು. ವಿಶೇಷವಾಗಿ ಮಹಿಳೆಯರು ಮಕ್ಕಳೊಂದಿಗೆ ಸಾಲಿನಲ್ಲಿ ನಿಂತು ದರ್ಶನ ಪಡೆಯುವುದು ನೋಡಿಕೊಂಡು ಬಂದೆ. ಈ ಬಾರಿ ಮೂರು ಪಟ್ಟು ಜನ ಬಂದಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದರು.
ಕಲೋತ್ಸವ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಅರೇಹಳ್ಳಿಯ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ ೨೦೨೪-೨೫ನೇ ಸಾಲಿನ ಕಲೋತ್ಸವ ಸ್ಪರ್ಧೆಯಲ್ಲಿ ಅರೇಹಳ್ಳಿಯ ಅಂಬೇಡ್ಕರ್ ನಗರದಲ್ಲಿರುವ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ನಾನಾ ಸ್ಥಾನಗಳನ್ನು ಪಡೆಯುವುದರ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಜಾನಪದ ನೃತ್ಯ ೬ , ಕ್ವಿಜ್ ೨, ಕವ್ವಾಲಿ ೬ ವಿದ್ಯಾರ್ಥಿಗಳು ಸೇರಿದಂತೆ ವೈಯಕ್ತಿಕ ಹಾಗೂ ಗುಂಪು ವಿಭಾಗಗಳಲ್ಲಿ ಭಾಗವಹಿಸಿ ಒಟ್ಟು ೨೭ ಪದಕಗಳನ್ನು ವಿದ್ಯಾರ್ಥಿಗಳು ಪಡೆಯುವುದರೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ.
ಅಳಿವಿನತ್ತ ಸಕಲೇಶಪುರದ ವಾರದ ಸಂತೆ
ಬಡ, ಮಧ್ಯಮವರ್ಗದವರನ್ನು ಗುರಿಯಾಗಿಸಿಕೊಂಡು ಒಂದೇ ಸೂರಿನಡಿ ಸಕಲ ವಸ್ತುಗಳು ಅಗ್ಗದ ದರಕ್ಕೆ ದೊರಕಿಸುವ ಉದ್ದೇಶದಿಂದ ಆರಂಭವಾದ ವಾರದ ಸಂತೆ ಎಂಬ ಪೂರ್ವಿಕರ ಪರಿಕಲ್ಪನೆ, ವ್ಯಾಪಾರಿಗಳ ಅತಿಯಾಸೆ ಜನರ ಸೋಮಾರಿತನದ ಫಲವಾಗಿ ಅವನತಿಯತ್ತ ಸಾಗುತಿದೆ. ಬೀದಿಬದಿಯ ವ್ಯಾಪಾರಕ್ಕೆ ಸಂತೆ ವ್ಯಾಪಾರಿಗಳು ಮುಂದಾಗಿರುವುದರಿಂದ ಪಟ್ಟಣದ ವಾರದ ಸಂತೆ ಅಳಿವಿನತ್ತ ಸಾಗುತ್ತಿದೆ. ಸಂತೆ ನಡೆಯುವ ಪ್ರದೇಶದಲ್ಲಿ ಸಕಲ ಮೂಲಭೂತ ಸೌಕರ್ಯ ಒದಗಿಸಲಾಗಿದ್ದು ಎಪಿಎಂಸಿ ಅಧಿಕಾರಿಗಳು ಹಿಂದಿನ ಪುರಸಭೆಗೆ ಹೋಲಿಸಿದರೆ ಅತ್ಯಂತ ಕಡಿಮೆ ತೆರಿಗೆ ಸಂಗ್ರಹಿಸುತ್ತಿದ್ದಾರೆ. ಆದರೂ, ಪಟ್ಟಣದ ವಾರದ ಸಂತೆ ಕ್ಷೀಣಿಸುತ್ತಾ ಸಾಗಿದೆ.
ಭ್ರಷ್ಟಾಚಾರ ಕಂಡು ಬಂದ್ರೆ ಲೋಕಾಯುಕ್ತಕ್ಕೆ ತಿಳಿಸಿ
ಭ್ರಷ್ಟಾಚಾರ ಕಾಯ್ದೆ ಪ್ರಕಾರ ಆದಾಯಕ್ಕಿಂತ ಹೆಚ್ಚಿನ ರೀತಿ ಆಸ್ತಿ ಗಳಿಸುವುದು ಅಪರಾಧ. ಎಲ್ಲೆ ಭ್ರಷ್ಟಾಚಾರ ನಡೆಯುತ್ತಿದ್ದರೂ ಲೋಕಾಯುಕ್ತಕ್ಕೆ ಯಾವ ಭಯವಿಲ್ಲದೇ ತಿಳಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ವರಿಷ್ಠಾಧಿಕಾರಿ ನಂದಿನಿ ತಿಳಿಸಿದರು. ಸಮಾಜದಲ್ಲಿ ನೋಡಿದರೇ ಭ್ರಷ್ಟಾಚಾರವು ಹೆಚ್ಚಿನ ರೀತಿಯಲ್ಲಿ ದುರಂತಕ್ಕೆ ಒಳಗಾಗುತ್ತಿದೆ. ಎಷ್ಟೇ ಒಳ್ಳೆ ಆಡಳಿತ ಕೊಟ್ಟರೂ ಭ್ರಷ್ಠಾಚಾರ ಎಂಬುದು ನಮ್ಮ ದೇಶವು ಕೊನೆ ಸ್ಥಾನಕ್ಕೆ ಕೊಂಡೊಯ್ಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶರಣ ಸಾಹಿತ್ಯ ಮನೆಮನೆಗೆ ತಲುಪಬೇಕು
ಶರಣರ ಸಾಹಿತ್ಯ ಸಂಸ್ಕೃತಿ, ಮನ ಮನೆಗಳಿಗೆ- ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಲುಪಿಸುವಂತಾಗಲಿ ಎಂದು ರಾಮನಾಥಪುರ ಜೆ.ಎಸ್.ಪಿ. ಶಾಲೆಯ ಮುಖ್ಯ ಶಿಕ್ಷಕ ವಿ.ಬಿ. ರವಿ ತಿಳಿಸಿದರು. ರಾಮನಾಥಪುರ ಐ.ಬಿ. ಸರ್ಕಲ್‌ನಲ್ಲಿರುವ ಜೆ.ಎಸ್.ಪಿ. ಶಾಲೆಯಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಹಾಗೂ ಜೆ.ಎಸ್.ಪಿ. ಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ಉತ್ತಮವಾಗಿ ವಚನ ಹೇಳಿದ ವಿದ್ಯಾರ್ಥಿಗಳಿಗೆ ಉಚಿತ ವಚನ ಬುಕ್ಸ್‌ಗಳನ್ನು ನೀಡಿದ ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಟಾಕಿಯಿಂದಾಗಿ ಪರಿಸರಕ್ಕೂ ಹಾನಿ
ಪರಿಸರ ಸ್ನೇಹಿಯಾಗಿ ದೀಪಾವಳಿಯ ಹಬ್ಬದ ಆಚರಣೆ ಕುರಿತು ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಬೀದಿನಾಟಕವನ್ನು ಪ್ರದರ್ಶಿವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಶಾಲೆಯಲ್ಲಿ ಸಂಪ್ರದಾಯ ಬದ್ದವಾಗಿ ಹಬ್ಬವನ್ನು ಆಚರಿಸಿದ ನಂತರ, ವಿದ್ಯಾರ್ಥಿಗಳು ಬೀದಿ ನಾಟಕವನ್ನು ನಗರದ ಬಸವೇಶ್ವರ ವೃತ್ತ ಮತ್ತು ಹಾಸನ ವೃತ್ತದಲ್ಲಿ ಪ್ರದರ್ಶಿಸಿ ಸಾರ್ವಜನಿಕರಲ್ಲಿ ಪರಿಸರ ಸ್ನೇಹಿ ಮತ್ತು ಪಟಾಕಿ ರಹಿತವಾಗಿ ಹಬ್ಬದ ಆಚರಣೆ ಮಾಡುವಂತೆ ಜಾಗೃತಿ ಮೂಡಿಸಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved