• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ
ಸರ್ಕಾರಿ ಶಾಲೆ, ಸಮಗ್ರ ಪ್ರಶಸ್ತಿ, ಆಲೂರು ಸುದ್ದಿ, ಹಾಸನ ಸುದ್ದಿ, ಕ್ರೀಡಾಕೂಟ, ಪ್ರಾಥಮಿಕ ಪಾಠ ಶಾಲೆಗಳ ಕ್ರೀಡಾಕೂಟ,ವಿದ್ಯಾರ್ಥಿಗಳು,Govt School, Comprehensive Award, Aluru News, Hassan News, Sports Event, Primary School Sports Event, Studentsಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಪಾಠ ಶಾಲೆಗಳ ಕ್ರೀಡಾಕೂಟದಲ್ಲಿ ಪಟ್ಟಣದ ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಪಾಠಶಾಲಾ ವಿದ್ಯಾರ್ಥಿಗಳು " ಸಮಗ್ರ ಪ್ರಶಸ್ತಿ " ಪಡೆಯುವ ಮೂಲಕ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಖೋ ಖೋ ಪ್ರಥಮ, ಥ್ರೋ ಬಾಲ್ ಪ್ರಥಮ, 100×4 ರಿಲೇ ಪ್ರಥಮ, ವಾಲಿಬಾಲ್ ದ್ವಿತೀಯ ಸೇರಿದಂತೆ ರಿಷಿತ್ ಗೌಡ 400 ಮೀ ದ್ವಿತೀಯ, 100 ಮೀ ತೃತೀಯ, ವಿದ್ಯಾಸಾಗರ್ 600 ಮೀ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡ ಸಂಸದ ಶ್ರೇಯಸ್‌ ಪಟೇಲ್‌
ಸರ್ಕಾರಿ ಶಾಲೆಗೆ ಪ್ರತಿಯೊಬ್ಬರು ಮಕ್ಕಳನ್ನು ದಾಖಲಿಸುವ ನಿಟ್ಟಿನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರವೂ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಅವರ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ದಾಖಲಿಸುವಂತೆ ಕಟ್ಟಪ್ಪಣೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಆಡಳಿತ, ತಾ. ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಯೋಜನೆ ಮಾಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೬ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳದ್ದು ಮೊಬೈಲ್‌ ಬಳಸುವ ವಯಸ್ಸಲ್ಲ
ಮಕ್ಕಳು ಸ್ನೇಹಿತರ ಜೊತೆ ಆಟಗಳನ್ನು ಆಡುವುದರಿಂದ ದೈಹಿಕ ಚಟುವಟಿಕೆಯುಕ್ತ ಚುರುಕುತನ ಮೂಡುತ್ತದೆ. ಮೊಬೈಲ್‌ಗಳನ್ನು ಬಳಸುವ ವಯಸ್ಸು ನಿಮ್ಮದಲ್ಲ. ಮೊಬೈಲ್‌ಗಳಿಂದ ದೂರವಿರಬೇಕು ಎಂದು ಕೆಪಿಸಿ ಶಾಲೆಯ ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ನಿರ್ವಾಣೇಗೌಡ ತಿಳಿಸಿದರು. ರಾಮನಾಥಪುರ ಹೊಬಳಿ ಸಂಯೋಜಕ ಸದಾಶಿವಪ್ಪ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವಲ್ಲಿ ಇರುವ ವೇದಿಕೆಯೇ ಪ್ರತಿಭಾ ಕಾರಂಜಿಯಾಗಿದೆ. ಕ್ಲಸ್ಟರ್ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರುವಂತೆ ಸ್ಪರ್ಧಿಗಳಿಗೆ ತಿಳಿಸಿದರು.
ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಅದರಲ್ಲೂ ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ತೋರಿಸಲು ಒಂದು ಉತ್ತಮ ಅವಕಾಶವಾಗಿದೆ. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಇದು ಉತ್ತಮ ವೇದಿಕೆಯಾಗಿದೆ. ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿದ್ಯಾಭ್ಯಾಸದ ಬಗೆಗೂ ಹೆಚ್ಚಿನ ಗಮನವನ್ನು ನೀಡಬೇಕು. ಆರು ವರ್ಷದ ಒಳಗಿನ ಮಕ್ಕಳಿಗಾಗಿ ವಿನೂತನ ಯೋಜನೆಯದ ಮಕ್ಕಳಮನೆ ಇಲ್ಲಿನ ಕಲಿಕಾ ಯೋಜನೆಗಳ ಬಗ್ಗೆ ಶಾಸಕ ಮಂಜು ತಿಳಿಸಿದ್ದಾರೆ.
ರಸ್ತೆ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಶ್ಲಾಘನೆ
ಬೇಲೂರು ಪಟ್ಟಣದ ಹೃದಯ ಭಾಗದಲ್ಲಿರುವ ಬೇಲೂರು ಬಸ್ ನಿಲ್ದಾಣ ಮುಂಭಾಗ ಹಾಗೂ ಅಕ್ಕಪಕ್ಕದ ಮುಖ್ಯ ರಸ್ತೆಗಳಲ್ಲಿ ಹಬ್ಬದ ದಿನಗಳಂದು ಅತಿ ಹೆಚ್ಚು ವ್ಯಾಪಾರಿಗಳು ರಸ್ತೆಬದಿ ಹಬ್ಬಕ್ಕೆ ಅವಶ್ಯಕತೆ ಇರುವ ವಸ್ತುಗಳನ್ನು ಮಾರಾಟ ಮಾಡಿಕೊಂಡು ಬರುತ್ತಿದ್ದಾರೆ. ಗೌರಿ ಗಣೇಶ ಹಬ್ಬ ಆಚರಿಸಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸುತ್ತಿದ್ದು ಪಟ್ಟಣದ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಹಿನ್ನೆಲೆಯಲ್ಲಿ ರಸ್ತೆ ಬಳಿ ಮಾರಾಟ ಮಾಡುವ ವ್ಯಾಪಾರಸ್ಥರನ್ನು ಸ್ಥಳಾಂತರಿಸಿ ಸರ್ಕಾರಿ ಕಾಲೇಜು ಮೈದಾನದಲ್ಲಿ ಬದಲಿ ವ್ಯವಸ್ಥೆ ಕಲ್ಪಿಸಿರುವ ಪುರಸಭೆ ಅಧ್ಯಕ್ಷರು ಹಾಗೂ ಸಿಬ್ಬಂದಿಗೆ ಸಾರ್ವಜನಿಕರು, ವ್ಯಾಪಾರಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ದೇಶದ ಅಭಿವೃದ್ಧಿಯಲ್ಲಿ ಎಲ್‌ಐಸಿಯ ಕೊಡುಗೆ ಅಪಾರ
೬೮ನೇ ವಿಮಾ ಸಪ್ತಾಹದ ಅಂಗವಾಗಿ ಪಟ್ಟಣದ ಜೀವ ವಿಮಾ ಶಾಖಾ ಕಚೇರಿ ವತಿಯಿಂದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಬೈಕ್ ಜಾಥಾ ಹಮ್ಮಿಕೊಂಡಿದ್ದರು. ಬೈಕ್ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಶಾಖಾಧಿಕಾರಿ ಸಿ.ಜೆ. ರಾಘವೇಂದ್ರ, ದೇಶದ ಅಭಿವೃದ್ಧಿಯಲ್ಲಿ ಎಲ್‌ಐಸಿಯ ಕೊಡುಗೆ ಅಪಾರವಾಗಿದೆ. ವಿಶ್ವಾಸಾರ್ಹತೆ ಉಳ್ಳ ಏಕೈಕ ಸಂಸ್ಥೆ ಜೀವವಿಮಾ ಸಂಸ್ಥೆಯಾಗಿದ್ದು. ದೇಶದ ಎಲ್ಲಾ ಪಟ್ಟಣ ಹಾಗೂ ಹಳ್ಳಿಗಳಲ್ಲೂ ಕೂಡ ನಂಬಿಕೆಯನ್ನು ಉಳಿಸಿಕೊಂಡಿದೆ ಎಂದರು. ಪಟ್ಟಣದ ಶಾಖಾ ಕಚೇರಿಯಿಂದ ಹೊರಟ ಬೈಕ್ ಜಾಥಾ ಧಾನಲಕ್ಷ್ಮಿ ಚಿತ್ರಮಂದಿರ, ಮೈಸೂರು ರಸ್ತೆ, ಹಾಗೂ ಎಪಿಎಂಸಿ ತಲುಪಿ ನಂತರ ಕೆ.ಆರ್. ವೃತ್ತ ತಲುಪಿ ನವೋದಯ ವೃತ್ತದ ಮೂಲಕ ಶಾಖಾ ಕಚೇರಿ ಬಳಿ ಬಂದರು.
ಪೂರ್ಣವಾಗದ ಹಾರನಹಳ್ಳಿ ಪಶು ಆಸ್ಪತ್ರೆ ಕಟ್ಟಡ
ಸುಮಾರು 42 ಲಕ್ಷ ರು. ವೆಚ್ಚದಲ್ಲಿ ಪಶು ಇಲಾಖೆ ಕಟ್ಟಡ ಆರಂಭವಾಗಿ ಎರಡು ವರ್ಷವಾದರೂ ಕಾಮಗಾರಿ ಹಣದ ಕೊರತೆಯಿಂದ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಹೊಸ ಕಟ್ಟಡದ ನೆಲಹಾಸು ಹಾಗೂ ಕಟ್ಟಡ ಮೇಲೆ ಕಟ್ಟಿದ ರೂಮ್‌ಗಳಿಗೆ ಕಾಮಗಾರಿ ಕೆಲಸಗಳು ಬಾಕಿ ಇದೆ. ಕಟ್ಟಡದ ಶಿಥಿಲಾವಸ್ಥೆಯಲ್ಲಿದ್ದು ಇದನ್ನು ಮನಗಂಡ ಇಲಾಖೆ ಹೊಸ ಕಟ್ಟಡಕ್ಕೆ ಕಟ್ಟಿಸಲು ಆರಂಭ ಮಾಡಿದ್ದು, ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿ ಎರಡು ವರ್ಷವಾದರೂ ಕಾಮಗಾರಿ ಮುಗಿಯದೆ ಹಳೆ ಪಶು ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಸ್ಥಿತಿ ಉದ್ಭವವಾಗಿದೆ. ತಕ್ಷಣ ಪಶು ಇಲಾಖೆಯ ಕಾಮಗಾರಿಯನ್ನು ಮುಗಿಸುವಂತೆ ರೈತ ಸಂಘದ ಮುಖಂಡ ಕನ್ನಕಂಚೇನಹಳ್ಳಿ ಪ್ರಸನ್ನ ಕುಮಾರ್ ಅವರು ಆಗ್ರಹಿಸಿದ್ದಾರೆ.
ಎತ್ತಿನಹೊಳೆ ಯೋಜನೆಗೆ ಜೆಡಿಎಸ್‌ ಬಿಜೆಪಿ ಕೊಡುಗೆಯೂ ಇದೆ : ಮಾಜಿ ಶಾಸಕ ಕೆ.ಎಸ್. ಲಿಂಗೇಶ್

: ಎತ್ತಿನಹೊಳೆ ಯೋಜನೆಯು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎನ್ನುವಂತೆ ಹಾಲಿ ಕಾಂಗ್ರೆಸ್‌ ಸರ್ಕಾರ ತೋರಿಸಿಕೊಳ್ಳುತ್ತಿದೆ. ಆದರೆ, ಈ ಯೋಜನೆಗೆ ಜೆಡಿಎಸ್‌ ಹಾಗೂ ಬಿಜೆಪಿ ಸರ್ಕಾರಗಳ ಕೊಡುಗೆಯೂ ಇದೆ

ಕಾರ್‌ ಹಾರ್ನ್‌ನಿಂದ ರೊಚ್ಚಿಗೆದ್ದು ಬೆನ್ನಟ್ಟಿದ ಕಾಡಾನೆ
ಕಾರಿನಲ್ಲಿದ್ದ ವಾಹನ ಸವಾರರು ದಾರಿ ಮಧ್ಯೆ ನಿಂತಿದ್ದ ಕಾಡನೆಯನ್ನು ಓಡಿಸಲು ಸತತವಾಗಿ ಹಾರ್ನ್ ಹೊಡೆದಿದ್ದಾರೆ. ಸುಮ್ಮನೆ ಇದ್ದ ಕಾಡಾನೆ ಹಾರ್ನ್ ಶಬ್ದಕ್ಕೆ ರೊಚ್ಚಿಗೆದ್ದು ವಾಹನವನ್ನು ಬೆನ್ನಟ್ಟಿ ನಂತರ ರಸ್ತೆಯ ಬದಿಯಲ್ಲಿ ನಿಂತಿದೆ. ಇದನ್ನು ಗಮನಿಸಿದ ವಾಹನ ಸವಾರರು ತುಸು ಧೈರ್ಯದಿಂದ ತಮ್ಮ ವಾಹನವನ್ನು ಮುಂದೆ ಚಲಾಯಿಸಿದ್ದಾರೆ. ಆಗ ರೊಚ್ಚಿಗೆದ್ದ ಸಲಗ ಮತ್ತೆ ಬೆನ್ನಟ್ಟಿದೆ. ಈ ರೋಚಕ ಘಟನೆಯನ್ನು ವಾಹನದೊಳಗಿದ್ದ ಸಹ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು, ಈಗ ಅದು ವೈರಲ್ ಆಗಿದೆ.
ಹೊಳೆನರಸೀಪುರದ 23 ವಾರ್ವಿನಲ್ಲೂ ಬೀದಿ ನಾಯಿ ಹಾವಳಿ
ಹೊಳೆನರಸೀಪುರ ಪಟ್ಟಣದ ೨೩ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು, ವಯೋವೃದ್ಧರು, ವಾಯು ವಿಹಾರಕ್ಕೆ ತೆರಳುವ ನಾಗರಿಕರು, ಸಾರ್ವಜನಿಕರು ತಿರುಗಾಡಲು ಹಾಗೂ ದ್ವಿಚಕ್ರ ವಾಹನಗಳ ಸವಾರರು ಭಯದಲ್ಲಿ ಓಡಾಡುತ್ತಿದ್ದಾರೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved