• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು: ಬಿಇಒ ರಾಜೇಗೌಡ
ವಿದ್ಯಾರ್ಥಿಗಳು ಗುರಿ ಸಾಧಿಸುವ ಕನಸನ್ನು ಹೊಂದಿದ್ದರೆ ಮಾತ್ರ ಯಶಸ್ಸು ಲಭಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೆಲ್ಲರೂ ಗುರಿ ಸಾಧಿಸುವ ಛಲವನ್ನು ಹೊಂದಿರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ರಾಜೇಗೌಡ ಹೇಳಿದರು. ಬೇಲೂರಿನಲ್ಲಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಾಸನಾಂಬೆ ದರ್ಶನ ಪಡೆದ ಶ್ರವಣಬೆಳಗೊಳದ ಮಹಾಸ್ವಾಮೀಜಿ
ಹಾಸನಾಂಬೆ ದೇವಿ ದರ್ಶನ ಮಾಡಲು ಶನಿವಾರದಂದು ಬೆಳಿಗ್ಗೆ ಆಗಮಿಸಿದ್ದ ಶ್ರವಣಬೆಳಗೊಳ ಮಠದ ಮಠಾಧೀಶರಾದ ಶ್ರೀ ಚಾರು ಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಭಟ್ಟಾ ಚಾರ್ಯವರ್ಯ ಮಹಾ ಸ್ವಾಮೀಜಿ ಅವರು ದರ್ಶನ ಪಡೆದರು. ಮಹಾಸ್ವಾಮೀಜಿ ಹಾಸನಾಂಬೆ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಜಿಲ್ಲಾಡಳಿತದಿಂದ ಮಂಗಳ ವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಿ ಬರಮಾಡಿಕೊಂಡರು. ಮೊದಲು ಹಾಸನಾಂಬೆ ದೇವಿ ದರ್ಶನ ಪಡೆದು, ದರ್ಬಾರ್‌ ಗಣಪತಿ, ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಕಲ್ಕೆರೆ ಗ್ರಾಪಂ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ಕಲ್ಕೆರೆ ಗ್ರಾಮ ಪಂಚಾಯತಿಯ ನಿಕಟ ಪೂರ್ವ ಅಧ್ಯಕ್ಷರಾದ ಜ್ಞಾನೇಂದ್ರರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುನೀಲ್ ಕುಮಾರ್‌ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಸಾತೇನಹಳ್ಳಿ ಗ್ರಾಮದ ಎಸ್. ಪಿ. ಸುನಿಲ್ ಕುಮಾರ್‌ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆಂದು ಚುನಾವಣಾ ಅಧಿಕಾರಿಗಳಾದ ಜಿ. ಆರ್‌. ಹರೀಶ್ ಘೋಷಣೆ ಮಾಡಿದರು.
ಹಾಸನಾಂಬೆ ಜಾತ್ರೆ ಹಿನ್ನೆಲೆ ಫಲಪುಷ್ಪ ಪ್ರದರ್ಶನ ಉದ್ಘಾಟನೆ
ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26ರಿಂದ 29ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಂಸದ ಶ್ರೇಯಸ್ ಎಂ. ಪಟೇಲ್‌ ಉದ್ಘಾಟಿಸಿದರು. ಹಾಸನ ಜಿಲ್ಲೆಯು ಹಲವು ವಿಶ್ವವಿಖ್ಯಾತ ಪ್ರೇಕ್ಷಣೀಯ ತಾಣಗಳನ್ನೊಳಗೊಂಡಿದ್ದು, ಶಿಲ್ಪಕಲೆಗಳ ತವರೂರಾಗಿದೆ. ಈ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳನ್ನು ವಿವಿಧ ಫಲಪುಷ್ಪಗಳಿಂದ ಅಲಂಕರಿಸಿ ಪ್ರದರ್ಶಿಸುವ ಮೂಲಕ ಹಾಸನದ ಇತಿಹಾಸದ ವೈಭವವನ್ನು ಮರುಕಳಿಸುವುದು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿದೆ ಎಂದು ತಿಳಿಸಿದರು.
ಲಯನ್ಸ್ ಕ್ಲಬ್ ಎಂದರೆ ವಿಶ್ವವಿದ್ಯಾನಿಲಯ ಇದ್ದಂತೆ
ಸೇವೆ ಮಾಡುವುದು ದೇವರ ಆರಾಧಿಸುವ ಮಾರ್ಗವಾಗಿದೆ. ಬಡವರು ಎಂದರೇ ದೇವರ ಪ್ರತಿನಿಧಿಗಳು ಎಂಬುದಾಗಿ ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಹಿಂದಿನ ಮಾತುಗಳು ಪ್ರಸ್ತೂತದಲ್ಲಿ ನಮ್ಮ ಲಯನ್ಸ್ ಕ್ಲಬ್‌ಗೆ ಅನ್ವಯಿಸುತ್ತದೆ. ಸೇವೆ ಮಾಡುವುದಕ್ಕಾಗಿ ಈ ಲಯನ್ಸ್ ಸಂಸ್ಥೆ ಜನ್ಮತಾಳಿದೆ. ಲಯನ್ಸ್ ಸಂಸ್ಥೆಯಲ್ಲಿ ಇದುವರೆಗೂ ಅಧ್ಯಕ್ಷರಾದವರು ಎಲ್ಲಾ ಸೇವೆಯಂತಹದನ್ನು ಮೈಗೂಡಿಸಿಕೊಂಡು ಮುನ್ನಡೆಸಿಕೊಂಡು ಬಂದಿದ್ದಾರೆ ಎಂದರು.
ಪೊಲೀಸ್ ಠಾಣೆ ಎದುರೇ ಗಾಂಧೀಜಿ ವೇಷದಲ್ಲಿ ಮಕ್ಕಳ ಭಿಕ್ಷಾಟನೆ
ಪೊಲೀಸ್ ಠಾಣೆ ಎದುರೇ ಎನ್.ಆರ್‌. ವೃತ್ತದಲ್ಲಿ ಮೈಗೆ ಸಿಲ್ವರ್ ಬಣ್ಣ ಬಳಿದುಕೊಂಡು ಗಾಂಧೀಜಿ ವೇಶದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಐವರು ಮಕ್ಕಳನ್ನು ಶ್ರೀರಾಮ ಸೇನೆಯವರು ರಕ್ಷಣೆ ಮಾಡಿ ಅವರನ್ನು ಮೊದಲು ಪೊಲೀಸ್ ಠಾಣೆಗೆ ಕರೆತಂದು ನಂತರ ಪೊಲೀಸರ ಸಲಹೆ ಮೇರೆಗೆ ಮಕ್ಕಳನ್ನು ಕಲ್ಯಾಣ ಇಲಾಖೆಗೆ ಒಪ್ಪಿಸಿದ ಘಟನೆ ನಡೆದಿದೆ. ಇಂತಹ ಮಕ್ಕಳು ಇಲ್ಲಿ 200ಕ್ಕೂ ಹೆಚ್ಚು ಇದ್ದಾರೆ ಎನ್ನಲಾಗಿದೆ.
ನುಗ್ಗೇಹಳ್ಳಿಯ ಹುಲ್ಲೇನಹಳ್ಳಿ ದೊಡ್ಡಮ್ಮ ದೇಗುಲ ಅಭಿವೃದ್ಧಿಗೆ 2 ಲಕ್ಷ ರುಪಾಯಿ ಅನುದಾನ: ಕೇಶವ ದೇವಾಂಗ
ದೊಡ್ಡಮ್ಮ ದೇವಿ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆಯವರು 2 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಸಹಾಯಧನದ ಡಿಡಿಯನ್ನು ದೇವಾಲಯ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿ ಮಾತನಾಡಿದರು.
ರಾಷ್ಟ್ರ ಸಮಗ್ರತೆ ರಕ್ಷಣೆಯೇ ಆರ್‌ಎಸ್‌ಎಸ್‌ ಆದ್ಯತೆ: ನಾ.ಸೀತಾರಾಮ್
ದುಷ್ಟಶಕ್ತಿಯ ದಮನ, ಸಮರ್ಪಣಾ ಮನೋಭಾವ ಹಾಗೂ ರಾಷ್ಟ್ರೀಯ ಸಮಗ್ರತೆ ಕಾಪಾಡುವುದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲ ಆದ್ಯತೆಯಾಗಿದೆ ಎಂದು ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನಾ.ಸೀತಾರಾಮ್ ಹೇಳಿದರು. ಅರಸೀಕೆರೆಯಲ್ಲಿ ದಸರಾ ಹಬ್ಬ ಸಂಪನ್ನಗೊಂಡ ಸಭೆಯಲ್ಲಿ ಮಾತನಾಡಿದರು.
ಜಾನಪದ ಸಾಹಿತ್ಯ ಸಾಗಿದ ಹಾದಿಯೇ ವಿಶೇಷ: ಡಾ.ಹಂಪನಹಳ್ಳಿ ತಿಮ್ಮೇಗೌಡ
ಕನ್ನಡ ಜಾನಪದ ಸಾಹಿತ್ಯ ಯುನೆಸ್ಕೋ ಮಾನ್ಯತೆ ಪಡೆಯಲು ಸಾಗಿ ಬಂದಿರುವ ಹಾದಿಯೇ ವಿಶೇಷವಾದದು ಎಂದು ಹಾಸನ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಹಂಪನಹಳ್ಳಿ ತಿಮ್ಮೇಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ಜನಪದ ಗೀತೆಗಳ ಕಲಿಕಾ ತರಬೇತಿ ಶಿಬಿರದ ‘ಪ್ರಾತ್ಯಕ್ಷಿಕೆ’ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಹೊಳೆನರಸೀಪುರದಲ್ಲಿ ಆರೋಗ್ಯ ಇಲಾಖೆಯಿಂದ ಅವೈಜ್ಞಾನಿಕ ಲಾರ್ವಾ ಸಮೀಕ್ಷೆ
ಹೊಳೆನರಸೀಪುರ ಪಟ್ಟಣದ ತಾಲೂಕು ಅರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ಲಾರ್ವಾ ಸಮೀಕ್ಷೆ ಕಾರ್ಯ ಕೈಗೊಂಡು ಅಮಾಯಕರಂತೆ ಕಂಡ ಜನರಿಗೆ ಜೋರು ಮಾಡಿ, ನೀರು ಚೆಲ್ಲಿಸಿ ತೆರಳುತ್ತಾರೆ. ಆದರೆ ಇದೇ ಜನರ ಅನಾರೋಗ್ಯಕ್ಕೆ ದಾರಿ ಮಾಡಿಕೊಡುತ್ತಿದೆ.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved