• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿತ್ತನೆ ಬೀಜ ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರಬೇಡಿ
ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಬಳಸುವ ಆಲೂಗೆಡ್ಡೆ ಮಾರಾಟ ಪ್ರಕ್ರಿಯೆಗೆ ಶುಕ್ರವಾರದಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವ್ಯಾಪಾರಕ್ಕೆ ಅಧಿಕೃತ ಚಾಲನೆ ನೀಡಿದರು.
ತುರ್ತು ಪರಿಸ್ಥಿತಿ ವೇಳೆ ನಾವು ಯುದ್ಧಕ್ಕೆ ಸಿದ್ಧ
ಭಾರತೀಯ ಸೈನಿಕರಿಗೆ ನೈತಿಕ ಬೆಂಬಲ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್‍ಯಾಲಿ ನಡೆಸಲಾಗುತ್ತಿದೆ. ಇನ್ನು ತುರ್ತು ಪರಿಸ್ಥಿತಿ ಬಂದು ಮತ್ತೆ ಯುದ್ಧಕ್ಕೆ ಕಾರ್ಯಪ್ರವೃತ್ತರಾಗಲು ಕರೆ ಕೊಟ್ಟರೇ ದೇಶದ ರಕ್ಷಣೆಗಾಗಿ ನಾವೆಲ್ಲಾ ಸಿದ್ಧರಿದ್ದೇವೆ
ಭಾರತೀಯ ಯೋಧರಿಂದ ಪಾಕಿಸ್ತಾನಕ್ಕೆ ತಕ್ಕ ಉತ್ತರ
ನಗರದ ಕಾವೇರಿ ಕ್ಲಿನಿಕ್‌ನಲ್ಲಿ ವಿವಿಧ ದೇಶಭಕ್ತ ಸಂಘಟನೆಗಳಿಂದ ಸಿಂದೂರ ಎಂಬ ವಿನೂತನ ಕಾರ್ಯಕ್ರಮ ನಡೆಯಿತು .
ತಹಸೀಲ್ದಾರ್‌ ವಿರುದ್ಧದ ಪ್ರತಿಭಟನೆಗೆ ಕಾಂಗ್ರೆಸ್‌ ಬೆಂಬಲ
ತಾಲೂಕು ದಂಡಾಧಿಕಾರಿ ವಿರುದ್ಧ ಮಾಡುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಬೆಂಬಲವೂ ಇದೆ ಎಂದು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಲ್. ಪಿ. ಪ್ರಕಾಶ್‌ ಗೌಡ ತಿಳಿಸಿದರು. ಯಾರೇ ತಪ್ಪು ಮಾಡಿದರು ಕೂಡ ತಪ್ಪೇ ಹೊರತು ಸರಿ ಎಂದು ನಾವು ಹೇಳುವುದಿಲ್ಲ. ಆದರೆ ಶಾಸಕರು ನೀಡಿರುವ ಹೇಳಿಕೆ ಲಘುವಾಗಿದೆ. ಇಂತಹ ಹೇಳಿಕೆಗಳನ್ನು ನೀಡುವ ಮೊದಲು ಆಲೋಚನೆ ಮಾಡಿ ಹೇಳಿಕೆ ನೀಡುವುದು ಸೂಕ್ತವಾಗಿದೆ. ಜನ ಮರಳೋ ಜಾತ್ರೆ ಮರಳೋ ಎಂದಂತೆ ಶಾಸಕರು ಎಲ್ಲಾ ವಿಚಾರದಲ್ಲೂ ಕೂಡ ಮೂಗು ತೂರಿಸುವರು ಸಾಮಾನ್ಯ. ಆದರೆ ಇಂತಹ ವಿಷಯದಲ್ಲಿ ಹಿಂದೇಟು ಹಾಕುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುವುದು ಆಲೋಚನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಆಪರೇಷನ್‌ ಸಿಂದೂರ ಸಕ್ಸಸ್‌ ಹಿನ್ನೆಲೆ ಬೇಲೂರು ದೇಗುಲದಲ್ಲಿ ವಿಶೇಷ ಪೂಜೆ
ಐತಿಹಾಸಿಕ ಶ್ರೀ ಚನ್ನಕೇಶವ ದೇಗುಲದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದಲ್ಲಿ ನಮ್ಮ ಭಾರತ ದೇಶದ ಸೈನಿಕರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ದೇಗುಲದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ಭಟ್ ಹಾಗೂ ನರಸಿಂಹ ಪ್ರಿಯ ಭಟ್ ಮಾತನಾಡಿ, ಸೈನಿಕರ ಹಾಗೂ ಆಪರೇಷನ್ ಸಿಂದೂರದಲ್ಲಿ ಭಾಗವಹಿಸಿದ್ದ ಸೈನಿಕರಿಗೆ ಶ್ರೇಯೋಭಿವೃದ್ಧಿಗಾಗಿ ಸಂಕಲ್ಪ, ಅಷ್ಟೋತ್ತರ ಸ್ತುತಿ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಿದ್ದು ನಂತರ ಮಹಾಮಂಗಳಾರತಿ ವಿಶೇಷ ಪ್ರಸಾದ ವಿನಿಯೋಗ ಮಾಡಿದ್ದು ಬಂದಂತ ಭಕ್ತರಿಗೆ ವಿತರಿಸಲಾಯಿತು ಎಂದರು.
ಜನಪದ ಸಂಸ್ಕೃತಿ ಮರೆತರೆ ಮನುಷ್ಯ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಂತೆ
ಜನಪದ ಸಂಸ್ಕೃತಿ ಎಂದರೇ ಮನುಕುಲದ ಮೂಲ ಸಂಸ್ಕೃತಿ. ಇದನ್ನು ಮನುಷ್ಯ ಮರೆತರೆ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಂತೆ ಎಂದು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಡಾ. ಹಂಪನಹಳ್ಳಿ ತಿಮ್ಮೇಗೌಡರು ತಿಳಿಸಿದರು. ಜಾನಪದ ಷರಿಷತ್ತಿನ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮ ಸಂಸ್ಥೆಯು ಸಂಪೂರ್ಣ ಸಹಕಾರವನ್ನು ನೀಡುತ್ತದೆ ಎಂದು ಹೇಳಿದರು. ಜಾನಪದ ವಿದ್ವಾಂಸರಾದ ಮೇಟಿಕೆರೆ ಹಿರಿಯಣ್ಣ ಮಾತನಾಡಿ, ಎಚ್.ಎಸ್.ನಾಗೇಗೌಡರ ಮಾರ್ಗದರ್ಶನದಲ್ಲಿ ಬೆಳೆದ ನಾವು ಜಾನಪದ ಸಾಹಿತ್ಯ ಸಂರಕ್ಷಣೆಯಲ್ಲಿ ತೊಡಗಲು ಪ್ರೇರಣೆಯಾಯಿತು ಎಂದರು. ಜಿಲ್ಲಾ ಜಾನಪದ ಸಂಭ್ರಮಕ್ಕೆ ಮೆರವಣಿಗೆಗೆ ಚಾಲನೆ ನೀಡಿದರು.
ಅಭಿವೃದ್ಧಿಯ ನಡುವೆಯೂ ಎಂಸಿಇಗೆ ಮಸಿ ಬಳಿಯಲು ಕೆಲವರ ಯತ್ನ
ದಶಕಗಳ ಇತಿಹಾಸವಿರುವ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಗೆ ಹೊಸ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲರನ್ನು ಸಮಾನತೆಯಿಂದ ಕಂಡು ಕಾಲೇಜು ಅಭಿವೃದ್ಧಿಯತ್ತ ಹಾಗೂ ಪಾರದರ್ಶಕವಾಗಿ ಮುಂದೆ ಸಾಗುತ್ತಿದ್ದರೂ ಕೆಲವರು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಂಸ್ಥೆಗೆ ಕೆಟ್ಟ ಹೆಸರನ್ನು ತರಲು ಮುಂದಾಗಿದ್ದಾರೆ ಎಂದು ಎಂಸಿಇ ಸಂಸ್ಥೆಯ ಅಧ್ಯಕ್ಷ ಆರ್‌.ಟಿ. ದ್ಯಾವೇಗೌಡ ಬೇಸರ ವ್ಯಕ್ತಪಡಿಸಿದರು. ಕಾಲೇಜಿನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡಲಾಗುತ್ತಿದ್ದು ಸಿಟಿ ಬಸ್ ನಿಲ್ದಾಣದ ಎದುರಿನ ವಿದ್ಯಾಭವನ ಕಟ್ಟಡದ ಬಾಡಿಗೆಯನ್ನು ಪರಿಷ್ಕರಣೆ ಮಾಡುವ ಮೂಲಕ ೧.೪೦ ಕೋಟಿ ಆದಾಯ ಸಂಸ್ಥೆಗೆ ಬರುವಂತಾಗಿದೆ ಎಂದರು.
ನಾಳೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ
ಶೆಟ್ಟಿಹಳ್ಳಿಯ ಪರಿಸರ ಪ್ರೇಮಿ ಹಾಗೂ ಸಮಾಜ ಸೇವಕರಾದ ಹನುಮೇಗೌಡ, ಶ್ರೀ ಲಕ್ಷ್ಮೀ ರಂಗನಾಥ್ ಎಜುಕೇಶನ್ ಟ್ರಸ್ಟ್, ರೋಟರಿ ಕ್ಲಬ್ ಆಫ್ ಸೆಂಟ್ರಲ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಮಧುಮೇಹ ತಪಾಸಣೆ, ರಕ್ತದೊತ್ತಡ ತಪಾಸಣೆ, ಸ್ತ್ರೀರೋಗ ತಪಾಸಣೆ, ಉಸಿರಾಟ ತೊಂದರೆ, ದಂತ ತಪಾಸಣೆ, ಕೀಲು ಮತ್ತು ಮೂಳೆ ರೋಗ ತಪಾಸಣೆ, ಕಣ್ಣಿನ ಪರೀಕ್ಷೆ ಸೇರಿದಂತೆ ಇತರೆ ಪರೀಕ್ಷೆಗಳನ್ನು ಮಾಡಲಾಗುವುದು ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ಮತ್ತು ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶಂಭುನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.
ಅರ್ಧಕ್ಕೆ ನಿಂತ ರಾಮನಾಥಪುರದ ಕಾವೇರಿ ನದಿ ಸೇತುವೆ ಕಾಮಗಾರಿ
ಮೈಸೂರು ಅರಸರ ಕಾಲದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆ ಶತಮಾನ ಪೂರೈಸಿದೆ. ಹಳೆಯ ಸೇತುವೆ ಕಿರಿದಾಗಿದ್ದು, ಶಿಥಿಲಾವಸ್ಥೆಗೆ ತಲುಪಿದ ಕಾರಣ ಕಳೆದ 2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಹಾಗೂ ಶಾಸಕ ಎ. ಮಂಜು ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಹೊಸ ಸೇತುವೆ ನಿರ್ಮಾಣಕ್ಕಾಗಿ ಸರ್ಕಾರ 24 ಕೋಟಿ ರು. ವೆಚ್ಚದ ಅನುದಾನ ಬಿಡುಗಡೆ ಮಾಡಿತ್ತು. ದುರಾದೃಷ್ಟವಶಾತ್ ದೇವರು ಕೊಟ್ಟರೂ ಪೂಜಾರಿ ವರ ಕೊಡಲ್ಲ ಎನ್ನುವ ಗಾದೆ ಮಾತಿನಂತೆ ಸರ್ಕಾರ ದೊಡ್ಡ ಮೊತ್ತದ ಅನುದಾನ ನೀಡಿದರೂ ಕಾಮಗಾರಿ ಮುಗಿಯದೆ ನನೆಗುದಿಗೆ ಬಿದ್ದಿದೆ.
ದೇವಸ್ಥಾನದಲ್ಲೇ ಅರ್ಚಕ ನೇಣಿಗೆ ಶರಣು
ದೇವಸ್ಥಾನದಲ್ಲಿ ಪೂಜೆ ಮಾಡುವ ವಿಚಾರಕ್ಕೆ ಗ್ರಾಮಸ್ಥರಿಂದ ಉಂಟಾದ ಕಿರುಕುಳದಿಂದ ಬೇಸತ್ತು ಅರ್ಚಕರೊಬ್ಬರು ದೇವಸ್ಥಾನದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಳೇಬೀಡು ಹೋಬಳಿಯ ಗಂಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ವಿಚಾರವಾಗಿ ಗ್ರಾಮಸ್ಥರಿಂದ ಕಿರುಕುಳ ಉಂಟಾಗುತ್ತಿತ್ತು ಎಂದು ಆರೋಪಿಸಲಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 441
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved