• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆ ಮಕ್ಕಳು ದೊಡ್ಡ ಕನಸು ಕಾಣಿ
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಒಂದೊಂದು ದೊಡ್ಡದಾದ ಕನಸು ಹೊಂದಬೇಕು, ಆ ಕನಸನ್ನು ನನಸು ಮಾಡಲು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಮೈಗೂಡಿಸಿಕೊಂಡು ಸಮಾಜಕ್ಕೆ ಉತ್ತಮವಾದ ಕೊಡುಗೆ ನೀಡಬೇಕೆಂದು ನಿವೃತ್ತ ಅಪರ ಅಬಕಾರಿ ಆಯುಕ್ತರಾದ ಎಚ್ ಪಿ ಈರಪ್ಪ ತಿಳಿಸಿದರು. ಹೋಬಳಿಯ ಹನ್ಯಾಳಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಮಕ್ಕಳ ಮನೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಪ್ರಸನ್ನ ವೀರಭದ್ರೇಶ್ವರ ಸ್ವಾಮಿ ಚಾರಿಟಬಲ್ ಟ್ರಸ್ಟ್ ಕೇರಳಾಪುರ ವತಿಯಿಂದ ಸುಮಾರು 1 ಲಕ್ಷ ರು. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಬ್ಯಾಗ್‌ಗಳನ್ನು ವಿತರಿಸಿದರು.
ಬೇಲೂರು ಲಯನ್ಸ್ ಸಂಸ್ಥೆಗೆ ತೃತೀಯ ಸ್ಥಾನ
ಬೇಲೂರು ತಾಲೂಕಿನಲ್ಲಿ ಹಮ್ಮಿಕೊಂಡ ವಿವಿಧ ಜನಪರ ಕಾರ್ಯಕ್ರಮಗಳಿಂದಾಗಿ ಲಯನ್ಸ್ ಕ್ಲಬ್ ತೃತೀಯ ಸ್ಥಾನ ಪಡೆದಿದೆ ಎಂದು ಬೇಲೂರು ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಡಾ.ಚಂದ್ರಮೌಳಿ ಹೇಳಿದರು. ಪಟ್ಟಣದ ಲಯನ್ಸ್ ಭವನದಲ್ಲಿ ಹಮ್ಮಿಕೊಂಡ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಉಚಿತ ಆರೋಗ್ಯ ಶಿಬಿರ, ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಇನ್ನೂ ಮುಂತಾದ ರೋಗಿಗಳ ಬಗ್ಗೆ ಉಚಿತ ತಪಾಸಣೆ ಕಾರ್ಯಕ್ರಮ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಆರೋಗ್ಯ ಶಿಬಿರ ನಡೆಸಲಾಗುತ್ತದೆ. ಶಾಲಾ ಕಾಲೇಜಿನಲ್ಲಿ ಮತ್ತು ಸಮುದಾಯದ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದ ಅವರು ಇದರ ಜೊತೆಯಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ ಎಂದರು.
ಕೂಡಲೇ ಹುಡಾಕ್ಕೆ ಅಧ್ಯಕ್ಷರ ನೇಮಿಸದಿದ್ದರೆ ಪ್ರತಿಭಟನೆ
ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ಕಳೆದ ಎರಡು ವರ್ಷಗಳಿಂದಲೂ ಅಧ್ಯಕ್ಷರ ನೇಮಕ ಮಾಡಿಲ್ಲ. ಕೂಡಲೇ ಇತ್ತ ಗಮನಹರಿಸಿ ಸ್ಥಳೀಯರಿಗೆ ಅವಕಾಶ ನೀಡಿ ನೇಮಿಸಬೇಕು. ಇಲ್ಲವಾದರೇ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ನವೀದ್ ಅಹಮದ್ ಎಚ್ಚರಿಸಿದರು. ಇತ್ತೀಚಿನ ದಿನಗಳ ಪತ್ರಿಕೆಗಳಲ್ಲಿ ಅರಸೀಕೆರೆಯ ವ್ಯಕ್ತಿಯೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಕೊಡುತ್ತಾರೆಂದು ವರದಿಯಾಗಿರುತ್ತದೆ. ನಮ್ಮ ಬೇಡಿಕೆ ಹಾಸನದ ನಗರಾಭಿವೃದ್ಧಿ ಪ್ರಾಧಿಕಾರವು ಹಾಸನ ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ. ಅದರಲ್ಲೂ ಕೂಡ ಹಾಸನ ನಗರಾಭಿವೃದ್ಧಿ ಪ್ರಾಧಿಕಾರವು ಹಾಸನ ಸುತ್ತಮುತ್ತ ೩ ರಿಂದ ೪ ಕಿ.ಮೀ. ವ್ಯಾಪ್ತಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದರು.
ಹಾಸನ ಮಹಾನಗರ ಪಾಲಿಕೆ ಆಗದಿದ್ದರೆ ಒಳ್ಳೆಯದಿತ್ತು
ಹಾಸನ ನಗರಸಭೆಯನ್ನೇನೋ ಮಹಾನಗರ ಪಾಲಿಕೆ ಎಂದು ಮೇಲಗ್ದರ್ಜೆಗೇರಿಸಿ ಘೋಷಣೆ ಮಾಡಲಾಗಿದೆ. ಆದರೆ ಅದಕ್ಕೆ ತಕ್ಕಂತೆ ಅನುದಾನ ನೀಡದಿರುವ ಬಗ್ಗೆ ಶಾಸಕ ಸ್ವರೂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿನ ಬಜೆಟ್‌ನಲ್ಲಿ ೨೦೦ ಕೋಟಿ ನಿಗದಿಪಡಿಸಿದಂತೆ ಕೋರಲಾಗಿರುವ ಪ್ರಸ್ತಾವನೆಯನ್ನು ಇತ್ತೀಚೆಗೆ ಮೇಲ್ದರ್ಜೆಗೆ ಏರಿಸಲಾಗಿದ್ದ ಹೆಚ್ಚುವರಿ ಹುದ್ದೆಯಾಗಲಿ, ಅನುದಾನವನ್ನು ಒದಗಿಸಲು ಆಗುವುದಿಲ್ಲ ಎಂದು ಆರ್ಥಿಕ ಇಲಾಖೆಯಿಂದ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ಪ್ರಸ್ತಾವನೆಗೆ ಯಾವ ಅನುದಾನ ಕೊಡಲಾಗುವುದಿಲ್ಲ ಎಂದು ಸರಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಇಲಾಖೆ ತಿಳಿಸಿರುವ ಹಿಂಬರಹವನ್ನು ಶಾಸಕರು ಓದಿದರು.
ಜೀವನಶೈಲಿ ಬದಲಿಸಿಕೊಂಡರೆ ರೋಗಗಳು ದೂರಾಗುತ್ತವೆ
ಜೀವನಶೈಲಿ ಸರಿ ಮಾಡಿಕೊಂಡರೆ ಅನೇಕ ರೋಗಗಳು ದೂರವಾಗುತ್ತವೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. . ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿವೆ. ಯುವಜನರು ಹೆಚ್ಚಾಗಿ ಈ ಸಮಸ್ಯೆಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ನಿತ್ಯವೂ ನಮ್ಮನ್ನು ಕಾಡುತ್ತಿರುತ್ತದೆ. ಇದಕ್ಕೆ ಕಾರಣ ನಮ್ಮ ಜೀವನ ಕ್ರಮವೇ ಆಗಿದೆ ಎಂದು ಅವರು ಹೇಳಿದರು. ಹೃದಯದ ಆರೋಗ್ಯ ಚೆನ್ನಾಗಿರಬೇಕು ಎಂದರೆ ಆರೋಗ್ಯಕರ ಆಹಾರ ಪದ್ಧತಿಯನ್ನು ನಮ್ಮದಾಗಿಸಿಕೊಳ್ಳಬೇಕು. ವರ್ಷಕ್ಕೆ ಒಮ್ಮೆಯಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳುವುದು, ದೇಹದ ತೂಕ ಹಾಗೂ ಬೊಜ್ಜನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಉತ್ತಮ ಎಂದರು.
ಅಂಗನವಾಡಿ ಕಟ್ಟಡಗಳ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚನೆ
ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ನಿಗದಿತ ಅವಧಿಯೊಳಗೆ ಬಾಕಿ ಇರುವ 19 ಕಟ್ಟಡಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಶಾಸಕ ಎ.ಮಂಜು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಟ್ಟಣದಲ್ಲಿ 22 ಮತ್ತು ತಾಲೂಕಿನಾದ್ಯಂತ 270 ಸೇರಿದಂತೆ ಒಟ್ಟು 292 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡ 242ಕ್ಕೆ ಇದೆ. ಸರ್ಕಾರಿ ಶಾಲೆಗಳ ಕೊಠಡಿಯಲ್ಲಿ 15 ಕಾರ್ಯನಿರ್ವಹಿಸುತ್ತಿವೆ. ಪರ್ಯಾಯ ವ್ಯವಸ್ಥೆಯಲ್ಲಿ 13 ಹಾಗೂ ಬಾಡಿಗೆ ಕಟ್ಟಡದಲ್ಲಿ 19 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
ನಾಗರನವಿಲೆಗೆ ಡಿಸಿಎಂ ಶಿವಕುಮಾರ್‌ ಭೇಟಿ
ಪ್ರಖ್ಯಾತ ನಾಗ ದೇವರ ಕ್ಷೇತ್ರ ಎಂದೇ ಖ್ಯಾತವಾಗಿರುವ ದೇವಾಲಯಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವುದು ವಿಶೇಷ. ಈ ಹಿಂದೆ ಮೈತ್ರಿ ಸರ್ಕಾರ ಬೀಳುವ ಹಂತದಲ್ಲಿದ್ದಾಗ ಬಿ. ಎಸ್. ಯಡಿಯೂರಪ್ಪ ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದರು. ದೇವರಲ್ಲಿ ಭಕ್ತಿ ಹೊಂದಿರುವ ಡಿಕೆಶಿ, ತಮ್ಮ ಗುರು ಕಾಡಸಿದ್ದೇಶ್ವರ ಮಠದ ಶ್ರೀಗಳ ಮಾರ್ಗದರ್ಶನದಂತೆ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದು ಗಮನ ಸೆಳೆಯಿತು. ಇಷ್ಟಾರ್ಥ ಸಿದ್ಧಿಗೆ ಹೆಸರುವಾಸಿಯಾಗಿರುವ ನಾಗದೇವರ ಜತೆಗೆ ಹಂದಿನಕೆರೆ ದೇವರಿಗೂ ಅವರು ಪೂಜೆ ಮಾಡಿಸಿದರು. ಪೂಜೆ ಸಂದರ್ಭದಲ್ಲಿ ಮೊಬೈಲ್, ಕ್ಯಾಮರಾಗಳಲ್ಲಿ ಫೋಟೋ, ವಿಡಿಯೋ ತೆಗೆಯದಂತೆ ಬೆಂಬಲಿಗರು ಮತ್ತು ಅಭಿಮಾನಿಗಳಿಗೆ ಅವರು ಮೊದಲೇ ಸೂಚನೆ ನೀಡಿದ್ದು ಕುತೂಹಲ ಹೆಚ್ಚಿಸಿತ್ತು.
ನಾಳೆ ಅರಸೀಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಅರಸೀಕೆರೆಗೆ ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರು ಆಗಮಿಸಲಿದ್ದು, ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗೆ ಶಂಕುಸ್ಥಾಪನೆಯನ್ನು ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ತಿಳಿಸಿದರು. ಸರ್ಕಾರದ ಖಜಾನೆ ಖಾಲಿಯಾಗಿದೆ ಸರಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಿರುವ ವಿರೋಧ ಪಕ್ಷದವರಿಗೆ ಉತ್ತರ ನೀಡುವ ಸಮಾವೇಶ ಇದಾಗಿದೆ ಎಂದರು. ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಕೃತಜ್ಞತೆಯನ್ನು ಸಲ್ಲಿಸುವ ಒಂದು ಕೃತಜ್ಞತಾ ಸಮಾರಂಭ ಅಥವಾ ಅಭಿನಂದನಾ ಸಮಾರಂಭ ಎಂದು ಹೇಳಬಹುದು.
ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆಗೆ ಸೂಚನೆ
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಗಳಿಲ್ಲದಂತೆ ಅಚ್ಚುಕಟ್ಟಾಗಿ ಸಂಭ್ರಮ, ಸಡಗರದಿಂದ ಆಚರಿಸಲು ಅಗತ್ಯ ಸಿದ್ಧತೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದರಲ್ಲದೆ, ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಆ.೧೪ ಮತ್ತು ೧೫ ರಂದು ತಪ್ಪದೆ ದೀಪಾಲಂಕಾರ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಮೂರ್ಕಣ್ಣು ಗುಡ್ಡ ರಕ್ಷಿತಾರಣ್ಯಕ್ಕೆ ತೀವ್ರ ವಿರೋಧ
ನೂರು ವರ್ಷಗಳ ಹಿಂದಿನ ಯೋಜನೆಯನ್ನು ಇಂದು ಜಾರಿಗೊಳಿಸುವ ಅರಣ್ಯ ಇಲಾಖೆಯ ಹುನ್ನಾರ ಫಲಿಸುವುದಿಲ್ಲ. ಇದರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ನೂರು ವರ್ಷಗಳ ನಂತರ ಯೋಜನೆ ಜಾರಿಗೊಳಿಸುವ ಹುನ್ನಾರ ನಡೆಸುತ್ತಿರುವ ಅರಣ್ಯ ಇಲಾಖೆ ಸ್ಥಳೀಯರಿಗೆ ಕಿರುಕುಳ ನೀಡುತ್ತಿದೆ. ಇದು ಅಕ್ಷಮ್ಯ. ಅಂದು ಈ ಭಾಗದಲ್ಲಿದ್ದ ಜನಸಂಖ್ಯೆ ಹಾಗೂ ಬೆಳೆಗಳ ಸ್ಥಿತಿಯೇ ಬೇರೆ. ಇಂದಿನ ಸ್ಥಿತಿಯೆ ಬೇರೆ ಇದೆ. ಆದ್ದರಿಂದ ಮೂರ್ಕಣ್ಣು ಗುಡ್ಡ ವ್ಯಾಪ್ತಿಯನ್ನು ರಕ್ಷಿತಾರಣ್ಯ ಪ್ರದೇಶ ಮಾಡುವ ಅರಣ್ಯ ಇಲಾಖೆ ಕ್ರಮದ ವಿರುದ್ಧ ಒಟ್ಟಾಗಿ ಹೋರಾಟ ಮಾಡುವ ಅಗತ್ಯವಿದೆ ಎಂದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 503
  • next >
Top Stories
ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ
ಕರ್ನಾಟಕದ 8 ಸಚಿವರ ಬಳಿ ₹100 ಕೋಟಿಗಿಂತ ಹೆಚ್ಚು ಆಸ್ತಿ
ಬುರುಡೆ ಪ್ರಕರಣದ ತನಿಖೆ ಎನ್‌ಐಎ ವಹಿಸಲು ಅಮಿತ್‌ ಶಾಗೆ ಸ್ವಾಮೀಜಿ ನಿಯೋಗ ಮನವಿ
ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ
ಸ್ಥಳೀಯ ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್‌ : ಸಂಪುಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved