• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಕ್ಷೇತ್ರದ ಯಶಸ್ಸಿಗೆ ಸಮುದಾಯ ಸಹಭಾಗಿತ್ವ ಅಗತ್ಯ
ಹಿರಿಯೂರು ಕ್ಲಸ್ಟರ್‌ನ ಬಿ.ಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಕಾರದಿಂದ ಸ್ಮಾರ್ಟ್ ಟಿವಿ ಮತ್ತು ವೈಟ್‌ಬೋರ್ಡ್‌ಗಳನ್ನು ಹಸ್ತಾಂತರಿಸುವ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರು ಮಕ್ಕಳ ಶಿಕ್ಷಣದಲ್ಲಿ ವಿಶೇಷ ಕಾಳಜಿಯನ್ನು ತೋರಿರುವುದರಿಂದ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ಶಾಲೆಗೆ ಬೆಂಬಲವಾಗಿ ನಿಂತಿರುವುದು ಶ್ಲಾಘನೀಯ ಎಂದು ಹೇಳಿದರು. ನನ್ನ ಶಾಲೆ – ನನ್ನ ಕೊಡುಗೆ” ಕಾರ್ಯಕ್ರಮದಡಿಯಲ್ಲಿ ನೀಡಲಾಗಿರುವ ಈ ಕೊಡುಗೆಗಳು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮಾದರಿಯಾಗಿವೆ ಎಂದರು.
ಅನ್ನಭಾಗ್ಯದ ರಾಗಿ ವಿತರಣೆಗೆ ಮುನ್ನ ಗುಣಮಟ್ಟ ಪರಿಶೀಲಿಸಿ
ಅನ್ನಭಾಗ್ಯ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ತಾಲೂಕಿನ ಫಲಾನುಭವಿಗಳಿಗೆ ಗುಣಮಟ್ಟದ ರಾಗಿಯನ್ನು ನೀಡುತ್ತಿಲ್ಲವೆಂದು ಫಲಾನುಭವಿಗಳು ದೂರು ನೀಡುತ್ತಿದ್ದು ಮುಂದೆ ಆಹಾರ ಶಿರಸ್ತೇದಾರರಿಗೆ ಗುಣಮಟ್ಟದ ರಾಗಿಯನ್ನು ನೀಡುವಂತೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಎಲ್.ಪಿ. ಪ್ರಕಾಶ್‌ ಗೌಡರು ತಿಳಿಸಿದರು. ಫಲಾನುಭವಿಗಳಿಗೆ ನೀಡುವ ರಾಗಿ ಕೊಂಡುಕೊಳ್ಳುವ ಸಮಯದಲ್ಲಿ ಗುಣಮಟ್ಟದ ರಾಗಿಯನ್ನು ಕೊಂಡುಕೊಳ್ಳದೆ ಇತ್ತೀಚೆಗೆ ಮಣ್ಣು ಹಾಗೂ ಧೂಳಿನಿಂದ ಕೂಡಿರುವುದಾಗಿ ಫಲಾನುಭವಿಗಳು ದೂರು ನೀಡಿದ್ದು ಇನ್ನು ಮುಂದೆ ಆ ರೀತಿ ಆಗದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದರು.
ಪರಿಸರ ಹಾಳು ಮಾಡುವುದನ್ನು ಸಹಿಸುವುದಿಲ್ಲ
ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಸ್ವಚ್ಛ ಪರಿಸರ ನಿರ್ಮಾಣದ ಮಹಾನಗರ ಪಾಲಿಕೆ ಕ್ರಮಕ್ಕೆ ಯಾರಾದರೂ ಪ್ರಭಾವಿಗಳು ಅಡ್ಡಗಾಲು ಹಾಕಲು ತಮ್ಮ ಮೊಬೈಲಿಗೆ ಕರೆ ಮಾಡಿದರೆ ಅಂಥವರ ಆಡಿಯೋವನ್ನು ಮಾಧ್ಯಮಗಳಿಗೆ ನೀಡಿ ಎಲ್ಲೆಡೆ ಪ್ರಚಾರ ಮಾಡಲಾಗುವುದು ಎಂದು ಮಹಾನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಕವಿತಾ ಎಚ್ಚರಿಸಿದರು. ಪ್ಲಾಸ್ಟಿಕನ್ನು ಸುಟ್ಟಾಗ ಅದರಿಂದ ಬರುವ ವಾಸನೆಯು ಮನುಷ್ಯನ ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತದೆ. ತ್ಯಾಜ್ಯದಲ್ಲಿ ಹಸಿ ಕಸ ಮತ್ತು ಒಣ ಕಸ ಬೇರೆ ಬೇರೆ ಮಾಡಬೇಕು. ಹಾಸನ ಮಹಾನಗರ ಪಾಲಿಕೆಯನ್ನು ಗ್ರೀನ್ ಸಿಟಿ ಮಾಡಬೇಕೆಂಬುದಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.
ಹಳ್ಳಿಮೈಸೂರು ನಾಡಕಚೇರಿ ವಿಎ ಲೋಕಾಯುಕ್ತ ಬಲೆಗೆ
ಹಳ್ಳಿಮೈಸೂರು ಗ್ರಾಮದ ನಾಡ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ(ವಿಎ) ರಮೇಶ್ ಗುರುವಾರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ರಮೇಶ್ ಅವರು ಮುದ್ದೇಗೌಡ ಎಂಬುವವರ ಪೌತಿ ಖಾತೆ ಮಾಡಿ ಕೊಡುವ ಸಂಬಂಧ ಒಟ್ಟು ೪ ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈಗಾಗಲೇ ೧ ಸಾವಿರ ರು. ಹಣವನ್ನು ಪಡೆದಿದ್ದ ಅವರು, ನಾಡ ಕಚೇರಿಯಲ್ಲೇ ಗುರುವಾರ ಬಾಕಿ ೩ ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಲುಕಿದ್ದಾರೆ.
ಶ್ರವಣಬೆಳಗೊಳದಲ್ಲಿ ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ
ಶ್ರೀಕ್ಷೇತ್ರ ಚಾವುಂಡರಾಯ ಸಭಾಂಗಣದಲ್ಲಿ ಶ್ರೀ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೦೨೪ನೇ ಸಾಲಿನ ದತ್ತಿ ಪ್ರಶಸ್ತಿಯನ್ನು ಜನಮನದ ಜನ್ನಿ ಎಂದೇ ಖ್ಯಾತರಾದ ಮೈಸೂರಿನ ಹೆಸರಾಂತ ಗಾಯಕ ಎಚ್.ಜನಾರ್ಧನ್, ೨೦೨೫ ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ ಶೂದ್ರ ಶ್ರೀನಿವಾಸ್ ಅವರಿಗೆ ಶಾಸಕ ಡಾ.ಸಿ.ಎನ್.ಬಾಲಕೃಷ್ಣ ಪ್ರದಾನ ಮಾಡಿದರು.
ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿಗೆ ಮಹಿಳೆಯರ ವಿರೋಧ
ಚೆಲುವರಾಯಸ್ವಾಮಿ ಲೇಔಟ್‌ನಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದನ್ನು ಸ್ಥಳೀಯ ಮಹಿಳೆಯರು ಮತ್ತು ನಿವಾಸಿಗಳು ತೀವ್ರವಾಗಿ ವಿರೋಧಿಸಿದ್ದಾರೆ. ರಾತ್ರೋರಾತ್ರಿ ಪರವಾನಗಿ ಪಡೆದು ಅಂಗಡಿಯನ್ನು ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ಸ್ಟಾಕ್ ತಂದು ಇಡಲಾಗಿದೆ. ಇಲ್ಲಿಯವರೆಗೆ ನಾವು ಭಯವಿಲ್ಲದೆ ಎಲ್ಲ ಹೊತ್ತಿನಲ್ಲೂ ಓಡಾಡುತ್ತಿದ್ದೇವೆ. ಆದರೆ ಅಂಗಡಿ ಆರಂಭವಾದರೆ ಮಹಿಳೆಯರು ಮತ್ತು ಮಕ್ಕಳು ಸಂಕಷ್ಟ ಅನುಭವಿಸಬೇಕಾಗುತ್ತದೆ. ನಮ್ಮ ಶಾಂತಿಯುತ ಬದುಕನ್ನು ಹಾಳು ಮಾಡಬೇಡಿ ಎಂದು ಅಳಲು ತೋಡಿಕೊಂಡರು.
ಸಾಹಸಸಿಂಹ ವಿಷ್ಣುವರ್ಧನ್ 75ನೇ ಜನ್ಮದಿನಾಚರಣೆ
ಇಡೀ ದೇಶವೇ ಗುರುತಿಸುವ ಯಾರಾದರೂ ನಟರು ಇದ್ದರೇ ಮೊದಲು ಡಾ. ರಾಜಕುಮಾರ್, ಎರಡನೆಯದಾಗಿ ಡಾ. ವಿಷ್ಣುವರ್ಧನ್, ಮೂರನೆಯವರು ಎಂದರೇ ರೆಬಲ್ ಸ್ಟಾರ್‌ ಅಂಬರೀಶ್. ಎಲ್ಲಾ ರೀತಿಯ ಪಾತ್ರಗಳಿಗೆ ಈ ನಟರು ಜೀವ ತುಂಬಿದ್ದಾರೆ. ಇಡೀ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಘನ ಸರ್ಕಾರವು ಇಂತಹ ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಸಂತೋಷದ ವಿಚಾರ ಎಂದರು. ವಿಷ್ಣುವರ್ಧನ್ ಸಿನಿಮಾದ ಒಂದೊಂದು ಹಾಡನ್ನು ಸಂಜೆ ವೇಳೆ ಕೇಳಿದರೇ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದರು.
ಪೌಷ್ಟಿಕ ಆಹಾರ ಸೇವನೆ ಪ್ರತಿಯೊಬ್ಬರ ಹಕ್ಕು
ಉತ್ತಮ ಮತ್ತು ಗುಣಮಟ್ಟದ ಆಹಾರ ಸೇವನೆ ಪ್ರತಿಯೊಬ್ಬರ ಹಕ್ಕಾಗಿದ್ದು, ಆರೋಗ್ಯಪೂರ್ಣ ಜೀವನ ಸಾಗಿಸಲು ಪೌಷ್ಟಿಕ ಆಹಾರದ ಅರಿವು ಅಗತ್ಯವಾಗಿದೆ ಎಂದು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ. ವಡಿಗೇರಿ ಹೇಳಿದರು. ಆರೋಗ್ಯಪೂರ್ಣ ಜೀವನ ಶೈಲಿಗೆ ಪೌಷ್ಟಿಕ ಆಹಾರ ಒಂದು ಪ್ರಮುಖ ಹಕ್ಕು. ಅಪೌಷ್ಟಿಕತೆ ಕೇವಲ ಆಹಾರದ ಕೊರತೆಯಿಂದ ಮಾತ್ರವಲ್ಲ, ಅಪ್ರಾಪ್ತ ವಯಸ್ಸಿನ ವಿವಾಹದಿಂದಲೂ ಬರುತ್ತದೆ. 18 ವರ್ಷ ತುಂಬುವ ಮುನ್ನ ಹೆಣ್ಣುಮಕ್ಕಳನ್ನು ವಿವಾಹ ಮಾಡುವುದು ಕಾನೂನಾತ್ಮಕ ಅಪರಾಧವಾಗಿದ್ದು, ಅದರಿಂದ ದೈಹಿಕ–ಮಾನಸಿಕ ಸಮಸ್ಯೆಗಳು ಎದುರಾಗುತ್ತವೆ ಎಂದು ತಿಳಿಸಿದರು.
ಬದುಕು ಹಸನಾಗಲು ವೃತ್ತಿಯನ್ನು ಗೌರವಿಸಿ
ಮಾಲೇಕಲ್ ತಿರುಪತಿಯಲ್ಲಿ ಶ್ರೀ ಚಂದ್ರಶೇಖರ ಭಾರತಿ ಐಟಿಐ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರಿಕರಿಗೆ ಐಟಿಐ ಕುರಿತು ತಪ್ಪು ಕಲ್ಪನೆ ಇರುವುದಾಗಿ ತಿಳಿಸಿ, ಇಂಜಿನಿಯರಿಂಗ್ ಡಿಪ್ಲೊಮಾ ಇಲ್ಲದಿದ್ದಾಗ ಮಾತ್ರ ಐಟಿಐ ಎನ್ನುವ ಭಾವನೆ ತಪ್ಪು. ಕೈಗಾರಿಕಾ ಘಟಕಗಳು, ಫ್ಯಾಕ್ಟರಿಗಳಲ್ಲಿ ಐಟಿಐ ಅಪ್ರೆಂಟಿಸ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಮಿಷನರಿಗಳಲ್ಲಿ ಕೆಲಸ ಮಾಡುವವರಿಗೆ ಉತ್ತಮ ಭವಿಷ್ಯವಿದೆ. ಮಾಡುವ ಕೆಲಸವನ್ನು ಇಷ್ಟಪಟ್ಟು ಮಾಡಿದಾಗ ಮಾತ್ರ ತೃಪ್ತಿ ಸಿಗುತ್ತದೆ ಹಾಗೂ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿಶ್ವಕರ್ಮರ ದಾರಿದೀಪದಲ್ಲಿ ನಡೆಯೋಣ
ದೇವಾನು ದೇವತೆಗಳಿಗೆ ಆಯುಧ, ರಥಗಳನ್ನು ಮಾಡಿಕೊಟ್ಟವರು ವಿಶ್ವಕರ್ಮ ಸಮಾಜದವರು ಇಂದು ಅವರು ಹಾಕಿಕೊಟ್ಟಿರುವ ದಾರಿದೀಪದಲ್ಲಿ ನಾವೆಲ್ಲರೂ ನಡೆಯೋಣ ಎಂದು ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ತಿಳಿಸಿದ್ದಾರೆ. ವಿಶ್ವಕರ್ಮ ಮಾಡುವವರನ್ನು ನಾವು ಪ್ರಪಂಚದ ಶ್ರೇಷ್ಠ ದೇವರಿಗೆ ಹೋಲಿಸುವಂತಹ ಕೆಲಸ ಮಾಡಬೇಕು. ಕೇವಲ ಒಂದು ಸಮಾಜಕ್ಕೆ ಅಲ್ಲ ಇಡೀ ಪ್ರಪಂಚಕ್ಕೆ ತಿಳಿಹೇಳುವ, ಸಮಾಜದ ಏಳಿಗಾಗಿ ಶ್ರಮಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 545
  • next >
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved