• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವೈಜ್ಞಾನಿಕ ಡೀಮ್ಡ್ ಅರಣ್ಯದ ಬಗ್ಗೆ ಪಶ್ಚಿಮಘಟ್ಟ ನಿವಾಸಿಗಳ ಸಭೆ
ಸಕಲೇಶಪುರ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಡೀಮ್ಡ್ ಅರಣ್ಯದ ನೆಪ ಹೇಳಿ ರೈತರಿಗೆ ಕಿರುಕುಳ ನೀಡುತ್ತಿರುವ ಪ್ರಕರಣ ಹೆಚ್ಚುತ್ತಿದ್ದು ಇದನ್ನು ಸಹಿಸಲು ಇನ್ನೂ ಸಾಧ್ಯವಿಲ್ಲ. ಕುಡಿಯುವ ನೀರು ಯೋಜನೆ, ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ, ಸರ್ಕಾರದ ಅಭಿವೃದ್ಧಿ ಕೆಲಸ ಸಹ ಮಾಡಲು ಅರಣ್ಯ ಇಲಾಖೆ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ತಾಲೂಕಿನ ಎಲ್ಲಾ ರೈತರು ಬೆಳೆಗಾರ ಸಂಘಟನೆಗಳು, ರಾಜಕೀಯ ಮುಖಂಡರು ಪರಿಸರವಾದಿಗಳು, ಶಾಸಕರ ನೇತೃತ್ವದಲ್ಲಿ ಪಕ್ಷಾತೀತವಾಗಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಎಚ್ ಎನ್ ವಿಶ್ವನಾಥ್ ತಿಳಿಸಿದರು.
ಶುಂಠಿ ಬೆಳೆಗೆ ಕೊಳೆ ರೋಗ
ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಧಾರಣೆಯು ದಿಢೀರ್ ಕುಸಿತವಾಗಿದ್ದು, ಕೊಳೆ ರೋಗದಿಂದಾಗಿ ಉತ್ತಮ ಗುಣಮಟ್ಟದ ಶುಂಠಿಯು ಸಿಗುತ್ತಿಲ್ಲ. ಈ ನೆಪವನ್ನೇ ಇಟ್ಟುಕೊಂಡು ವ್ಯಾಪಾರಸ್ಥರು ರೈತರ ಬಳಿ ಕಡಿಮೆ ಬೆಲೆಗೆ ಶುಂಠಿಯನ್ನು ಕೊಂಡುಕೊಳ್ಳುತ್ತಿದ್ದು ಇದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ವರ್ಷ ಸುರಿದ ಭಾರಿ ಮಳೆಯಿಂದಾಗಿ ತಾಲೂಕಿನಾದ್ಯಂತ ರೈತರು ಬಿತ್ತನೆ ಮಾಡಿದ್ದ ಶುಂಠಿ ಬೆಳೆಯು ಕೊಳೆ ರೋಗಕ್ಕೆ ತುತ್ತಾಗಿದ್ದು ಅವಧಿಗೆ ಮುನ್ನವೇ ಶುಂಠಿ ಕೊಯ್ಲನ್ನು ರೈತರು ಪ್ರಾರಂಭಿಸಿದ್ದಾರೆ.
ಗಾಂಜಾ ಅಮಲಿನಲ್ಲಿ ತೇಲುತ್ತಿರುವ ವಸತಿ ಶಾಲೆ ವಿದ್ಯಾರ್ಥಿಗಳು
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ರಾಜಾರೋಷವಾಗಿ ವಿದ್ಯಾರ್ಥಿಗಳು ಗಾಂಜಾ , ವೈಟ್ನರ್, ಮದ್ಯ ಸಿಗರೇಟ್ ಸೇದುತ್ತಿರುವ ಅಪ್ರಾಪ್ತ ವಿದ್ಯಾರ್ಥಿಗಳ ವಿಡಿಯೋ ವೈರಲ್ ಆಗಿದ್ದು ಹಾಸ್ಟೆಲ್‌ ಅವ್ಯವಸ್ಥೆಗೆ ಕೈಗನ್ನಡಿಯಾಗಿದೆ. ಬೇಲೂರು ತಾಲೂಕಿನ ಬಿಕ್ಕೋಡಿನ ವಸತಿ ಶಾಲೆ ವಿದ್ಯಾರ್ಥಿಗಳು ಗಾಂಜಾ, ವೈಟ್ನರ್ ಹಾಗೂ ಧೂಮಪಾನದ ಅಮಲಿನಲ್ಲಿ ತೇಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಹಾಗೂ ಸಾರ್ವಜನಿಕರು ಸಮಾಜ ಕಲ್ಯಾಣ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಪೋಷಕರು ಮಕ್ಕಳಿಗೆ ಮೊಬೈಲ್ ಕೊಡಬೇಡಿ
ಮಕ್ಕಳ ಪೋಷಕರು ಮಕ್ಕಳಿಗೆ ಮೊಬೈಲ್ ಕೊಟ್ಟು ಅಭ್ಯಾಸ ಮಾಡಬೇಡಿ. ಮಕ್ಕಳ ಜೊತೆ ನೀವು ಸೇರಿ ನೀತಿ ಕಥೆ, ಹಾಡು, ನೃತ್ಯ, ಜಾನಪದ ಗೀತೆಗಳು, ಮಕ್ಕಳ ಚಲನ, ವಲನ ಹಾಗೂ ಪಾಲನೆಗೆ ಹೆಚ್ಚಿನ ಗಮನಕೊಡಬೇಕು ಎಂದು ಪೋಷಕರಿಗೆ ಕನಸು ಮತ್ತು ಬೇಗೂರು ಸೌಹಾರ್ದ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಜಿ.ಆರ್. ಚಂದ್ರಕಲಾ ಮನವರಿಕ ಮಾಡಿದರು. ಹಾಸನ ನಗರದ ತಣ್ಣೀರುಹಳ್ಳದಲ್ಲಿರುವ ಪ್ರಜ್ವಲ್ ವಿದ್ಯಾ ಕಿಡ್ಸ್ ಶಾಲೆಯಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಪಾಲ್ಗೊಂಡರು.
ಶ್ರೀ ಶಾರದ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ
ಅರಕಲಗೂಡು ತಾಲೂ ಕಿನ ರಾಮನಾಥಪುರ ಹೋಬಳಿ ಮಟ್ಟದ ೨೦೨೪-೨೫ ನೇ ಸಾಲಿನ ಕ್ರೀಡಾಕೂಟವು ಕೆ.ಪಿ.ಎಸ್ ಶಾಲೆಯ ಆವರಣದಲ್ಲಿ ಅರಕಲಗೂಡು ತಾಲೂಕು ಶಿಕ್ಷಣ ಇಲಾಖೆ ಶ್ರೀ ಶಾರದಾ ವಿದ್ಯಾಸಂಸ್ಥೆ ಜಿ ಎಚ್ ಪಿ ಎಸ್ ಕಾಳೇನಹಳ್ಳಿ, ಬಿಳಗೂಲಿ ಜಿ ಎಚ್ .ಪಿ ಎಸ್, ಬೆಟ್ಟಸೋಗೆ ಜಿಎಚ್‌ಪಿಎಸ್ ಕೇರಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ್ದು, ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಬಸವಾಪಟ್ಟಣ ಗ್ರಾಮದ ಶ್ರೀ ಶಾರದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳು ತಮ್ಮದಾಗಿಸಿಕೊಂಡರು.
ಕೃಷ್ಣನಗರದಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ನೂತನ ಕಚೇರಿ ಉದ್ಘಾಟನೆ
1965ರಿಂದಲೂ ಸಮಾಜದ ಅಭಿವೃದ್ಧಿಗೆ ಹಲವಾರು ಯೋಜನೆ ರೂಪಿಸಿ ರಾಷ್ಟ್ರೋತ್ಥಾನ ಪರಿಷತ್ ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಗೋವುಗಳ ಸಂರಕ್ಷಣೆ, ಯೋಗ ಶಾಲೆ, ಆಸ್ಪತ್ರೆ, ರಕ್ತ ಕೇಂದ್ರ, ಸಂಸ್ಕೃತಿ ಸಂಸ್ಕಾರ ನೀಡುವಲ್ಲಿ ಸಮಾಜಮುಖಿಯಾಗಿ ಕೆಲಸವನ್ನು ಮಾಡಲಾಗುತ್ತಿದೆ ಎಂದರು. ಪ್ರಸಾರ ಭಾರತಿ ವತಿಯಿಂದ ಪುಸ್ತಕಗಳನ್ನು ಉಚಿತವಾಗಿ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಶಾಲೆಗಳಲ್ಲಿ ನಿಡಲಾಗುತ್ತಿದೆ ಎಂದು ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಇವರ ವತಿಯಿಂದ ನಗರದ ಕೃಷ್ಣ ನಗರದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ನಂದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ವಿದ್ಯೆಯನ್ನೇ ಆಸ್ತಿ ಮಾಡಿ
ಭಾರತದಲ್ಲಿ ಶೇ.೩೦ರಿಂದ ೪೦ರಷ್ಟು ಕಣ್ಣಿನ ದೃಷ್ಟಿ ದೋಷದಿಂದ ಮಕ್ಕಳು ಬಳಲುತ್ತಿವೆ. ಆದ್ದರಿಂದ ದಯಮಾಡಿ ಪೋಷಕರು ಮಕ್ಕಳಿಗೆ ಮೊಬೈಲ್ ಮತ್ತು ಟಿವಿ ವೀಕ್ಷಣೆಗೆ ಅವಕಾಶವನ್ನು ನೀಡಬೇಡಿ. ಹಾಗೇನಾದರೂ ನೀಡಿದರೆ ಪ್ರತಿನಿತ್ಯ ಅರ್ಧ ಗಂಟೆಯ ಸಮಯವನ್ನು ನೀಡುವುದು ಉತ್ತಮವಾಗಿದೆ. ಜೊತೆಯಲ್ಲಿ ತಮ್ಮ ಮಕ್ಕಳು ಓದುವಿನ ಸಮಯದಲ್ಲಿ ಪೋಷಕರು ಕೂಡ ಯಾವುದೇ ರೀತಿಯ ಟಿವಿ ಮತ್ತು ಮೊಬೈಲ್‌ಗಳಿಗೆ ಆದ್ಯತೆಯನ್ನು ನೀಡಬೇಡಿ ಇದರಿಂದ ಮಕ್ಕಳ ಓದುವಿಕೆಗೆ ಅಡ್ಡಿ ಉಂಟಾಗುತ್ತದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು ವಿದ್ಯೆಯನ್ನೇ ಆಸ್ತಿ ಮಾಡಿ ಎಂದು ಶಿವಪ್ರಸಾದ್ ನೇತ್ರಾಲಯದ ವ್ಯವಸ್ಥಾಪಕ ಗೌಡಗೆರೆಯ ಮಂಜುನಾಥ್ ತಿಳಿಸಿದ್ದಾರೆ.
ಕಟ್ಟೇಪುರ ನಾಲಾ ವ್ಯಾಪ್ತಿಯಲ್ಲಿ ಭತ್ತದ ನಾಟಿ ಆರಂಭ
ಮೈಸೂರು ಅರಸರ ಕಾಲದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೊದಲ ಬಾರಿಗೆ ಕಟ್ಟಿದ ಅಣೆಕಟ್ಟೆ ಎಂಬ ಹೆಗ್ಗಳಿಗೆ ಹೊಂದಿರುವ ಕಟ್ಟೇಪುರದ ಕೃಷ್ಣರಾಜ ಅಣೆಕಟ್ಟೆ ಭತ್ತದ ಬೆಳೆ ಬೆಳೆಯಲು ಈ ಭಾಗದ ರೈತರ ಜೀವನಾಡಿಯಾಗಿದೆ. ನದಿ ಪಾತ್ರದಲ್ಲಿ ಹಾದು ಹೋಗಿರುವ ಎಡ ಮತ್ತು ಬಲದಂಡೆ ನಾಲಾ ವ್ಯಾಪ್ತಿಯಲ್ಲಿ 9 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸುತ್ತಿದೆ. ಅರಕಲಗೂಡು ತಾಲೂಕು ಮಾತ್ರವಲ್ಲದೇ ಎಡದಂಡೆ ನಾಲೆ ಕೆ.ಆರ್‌. ನಗರ ತಾಲೂಕಿನ ಪಶುಪತಿ ಹಾಗೂ ಬಲದಂಡೆ ನಾಲೆ ಚುಂಚನಕಟ್ಟೆಯ ಕೆಸ್ತೂರು ಗೇಟ್‌ವರೆಗೆ ಹಾದುಹೋಗಿದೆ. ಇವೆರಡು ನಾಲೆಗಳಿಗೆ ನೀರು ಹರಿಸಲಾಗಿದ್ದು ರೈತರು ಭತ್ತದ ಸಸಿ ಮಡಿ ಬೆಳೆಸಿ ನಾಟಿ ಕಾರ್ಯ ನಡೆಸಿದ್ದಾರೆ.
ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ವೃದ್ಧಿ
ಮಕ್ಕಳು ಮೊಬೈಲ್, ಟಿವಿ ಬಳಕೆ ಕಡಿಮೆ ಮಾಡಿ ಕ್ರೀಡೆಗಳತ್ತ ಹೆಚ್ಚು ಆಸಕ್ತಿ ವಹಿಸಿದರೆ ದೈಹಿಕವಾಗಿ ಮಾನಸಿಕವಾಗಿ ಆತ್ಮಸ್ಥೈರ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌ ಎನ್ ದೀಪ ಅಭಿಪ್ರಾಯಪಟ್ಟರು. ನುಗ್ಗೇಹಳ್ಳಿ ಹೋಬಳಿ ಕೇಂದ್ರ ವಾಲಿಬಾಲ್ ಆಟಕ್ಕೆ ಹೆಚ್ಚು ಪ್ರಸಿದ್ಧಿಯಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಇಲ್ಲಿನ ವಾಲಿಬಾಲ್ ಕ್ರೀಡಾಪಟುಗಳು ಹೆಚ್ಚು ಹೆಸರು ಮಾಡಿದ್ದಾರೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲೂ ಹೆಚ್ಚು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಹೋಬಳಿ ಕ್ರೀಡಾಪಟುಗಳು ತಾಲೂಕು ಹಾಗೂ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೋಬಳಿ ಕೇಂದ್ರಕ್ಕೆ ಉತ್ತಮ ಹೆಸರು ತರುವಂತೆ ಕಿವಿಮಾತು ಹೇಳಿದರು.
ಆರ್ಟಿಕಲ್‌ 370 ರದ್ದು ಬಳಿಕ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಹೊಳೆನರಸೀಪುರ ತಾಲೂಕಿನ, ಹಳೇಕೋಟೆ ಗ್ರಾಮದ, ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಡೆ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 

  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved