• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನರಾಯಪಟ್ಟಣದಲ್ಲಿ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬಾಲಕೃಷ್ಣ
ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿಯು ೨೦೨೫ರ ಫೆಬ್ರವರಿಯೊಳಗೆ ಮುಗಿದು, ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಕಾಮಗಾರಿಗೆ ಪುನಃ ಚಾಲನೆ ನೀಡಿ ಅಧಿಕಾರಿಗಳೊಂದಿಗೆ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಿದರು.
ಅರಸೀಕೆರೆಯಲ್ಲಿ ದಸರಾ ಉತ್ಸವ ನಿಮಿತ್ತ ಶಮಿಪೂಜೆ ಮಾಡಿ ಸಂಭ್ರಮ
ಅರಸೀಕೆರೆ ನಗರದ ಶ್ರೀಪ್ರಸನ್ನ ಗಣಪತಿ ಆಸ್ಥಾನ ಮಂಟಪದ ಮುಂಭಾಗದಲ್ಲಿ ವಿಜಯದಶಮಿ ಪ್ರಯುಕ್ತ ಗ್ರಾಮದೇವತೆ ಶ್ರೀಕರಿಯಮ್ಮ, ಶ್ರೀಮಲ್ಲಿಗಮ್ಮ ಹಾಗೂ ಮೆಳೇಯಮ್ಮ ದೇವಿ ಸಮ್ಮುಖದಲ್ಲಿ ಶಮಿಪೂಜೆ ಮಾಡಿ ಸಂಭ್ರಮಿಸಿದರು.
ಚನ್ನರಾಯಪಟ್ಟಣದಲ್ಲಿ ದಸರಾ ಅಂಗವಾಗಿ ನಾಡಿನ ಇತಿಹಾಸ, ಸಂಸ್ಕೃತಿ ಹೇಳುವ ಗೊಂಬೆಗಳ ಪ್ರದರ್ಶನ
ಚನ್ನರಾಯಪಟ್ಟಣದಲ್ಲಿನ ಸುಜಾತ ಕಾಫಿ ವರ್ಕ್ಸ್ ಮಾಲೀಕ ಕುಮಾರಸ್ವಾಮಿ ಮನೆಯಲ್ಲಿ ಹಬ್ಬದ ಹತ್ತೂ ದಿನ ನೂರಾರು ವಿವಿಧ ಬಗೆಯ ಆತ್ಯಾಕರ್ಷಕ ಗೊಂಬೆಗಳನ್ನು ಕೂರಿಸಿ ಪೂಜೆ ಸಲ್ಲಿಸಿದ್ದಾರೆ.
ಟ್ಯೂಬುಲಾರ್ ಬೀದಿದೀಪ ಅಳವಡಿಕೆಗೆ ಶಾಸಕ ಸ್ವರೂಪ್ ಗುದ್ದಲಿ ಪೂಜೆ
ಬಿ. ಕಾಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಹಳ್ಳಿಗಳು ನಗರಸಭೆಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ನಗರಸಭೆ ಅನುದಾನದಲ್ಲಿ ಸುಮಾರು ೫೦ ಲಕ್ಷ ವೆಚ್ಚದಲ್ಲಿ ಟ್ಯೂಬುಲರ್‌ ಬೀದಿದೀಪ ಅಳವಡಿಕೆಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಈ ಹಿಂದೆ ಡೇರಿ ವೃತ್ತದಿಂದ ಬಿ ಕಾಟಿಹಳ್ಳಿ ಮಾರ್ಗವಾಗಿ ಒಂದು ಕಿಲೋಮೀಟರ್‌ಗೆ ಮಾತ್ರ ಬೀದಿ ದೀಪ ಅಳವಡಿಸಲಾಗಿತ್ತು. ಆದರೆ ಇದೀಗ ನಗರಸಭೆ ವ್ಯಾಪ್ತಿಗೆ ಬಂದ ನಂತರ ಮತ್ತೆ ಎರಡು ಕಿಲೋಮೀಟರ್ ವ್ಯಾಪ್ತಿಗೆ ಬೀದಿ ದ್ವೀಪಗಳ ಅಳವಡಿಕೆಗೆ ಎಲ್ಲಾ ನಗರಸಭೆ ಸದಸ್ಯರು ಅಧ್ಯಕ್ಷರ ಸಹಯೋಗದಲ್ಲಿ ಮುಂದಾಗಿದ್ದೇವೆ ಎಂದು ಶಾಸಕ ಸ್ವರೂಪ್‌ ತಿಳಿಸಿದರು.
ನಿಗದಿತ ಸಮಯದಲ್ಲಿ ಹರಾಜು ಮುಗಿಸಿ
ಪಟ್ಟಣ ಪಂಚಾಯಿತಿಯ 122 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಅ.25ರಂದು ನಡೆಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ ಕೆಲವು ಪ್ರಭಾವಿ ಶಕ್ತಿಗಳು ಇದಕ್ಕೆ ತಡೆಯೊಡ್ಡಲು ಪ್ರಯತ್ನ ನಡೆಸಿದ್ದಾರೆ. ಇಂತಹ ಒತ್ತಡಗಳಿಗೆ ಮಣಿಯದೆ ನಿಗದಿಯಂತೆ ಹರಾಜು ನಡೆಯಬೇಕು. ಇದರಿಂದ ಪಪಂ ಆದಾಯ ಗಣನೀಯವಾಗಿ ಹೆಚ್ಚಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ನೆರವಾಗಲಿದೆ ಎಂದು ತಾಲೂಕು ರೈತ ಸಂಘದ ಗೌರವಾಧ್ಯಕ್ಷ ಭುವನೇಶ್ ಒತ್ತಾಯಿಸಿದರು.
ಆಯುಧಪೂಜೆಗೆ ನಿಂಬೆಹಣ್ಣು ಕುಂಬಳ ದುಬಾರಿ
ಆಯುಧಪೂಜೆಯ ಹಬ್ಬದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಮಹಾವೀರ ವೃತ್ತ ಹಾಗೂ ಸುತ್ತಮುತ್ತ ವ್ಯಾಪಾರ ಜೋರಾಗಿಯೇ ನಡೆದರೂ ಪ್ರಮುಖವಾಗಿ ಖರೀದಿ ಮಾಡುವ ಬೂದಕುಂಬಳ, ನಿಂಬೆಹಣ್ಣು, ಹೂವು ಸೇವಂತಿಗೆ, ಬಾಳೆದೆಲೆಗೆ ಭಾರಿ ಬೇಡಿಕೆ ಕಂಡು ಬಂದಿತು. ಸೇವಂತಿಗೆ ಮಾರಿಗೆ ೧೦೦ರಿಂದ ೧೫೦ ರು.ಗಳಿದ್ದರೆ, ನಿಂಬೆಹಣ್ಣು ಎರಡಕ್ಕೆ ೧೦ರಿಂದ ೨೦ ರು., ಮಾವಿನಕಟ್ಟು ಒಂದಕ್ಕೆ ೨೦ ರು.ಗಳಿತ್ತು. ಸೇಬು ಒಂದು ಕೆಜಿಗೆ ೧೦೦ರಿಂದ ೧೫೦ ರು.ಗಳಿತ್ತು. ಈ ಬಾರಿ ಬೂದಕುಂಬಳಕಾಯಿ ಕೆ.ಜಿಗೆ ೩೦, ೨೦ ಇದ್ದರೆ ಇನ್ನು ಕೆಲ ವ್ಯಾಪಾರಸ್ಥರು ೩೦ ರು.ಗಳಿಗೆ ಚಿಕ್ಕದಾದ ಬೂದಕುಂಬಳಕಾಯಿ ಮಾರಾಟ ಮಾಡುತ್ತಿದ್ದರು.
ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸುವ ಮೂಲಕ ಶಕ್ತಿವಂತಳಾಗಿಸಿ
ಹೆಣ್ಣು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಸಮಾಜದಲ್ಲಿ ಹೆಣ್ಣು ಮಗುವಿಗೆ ದೊರೆಯಬೇಕಿರುವ ಗೌರವ ಮತ್ತು ಮೌಲ್ಯವನ್ನು ತಿಳಿಸಬೇಕು ಮನೆಯಲ್ಲಿ ತಾಯಿಂದಿರು ಮಕ್ಕಳಿಗೆ ಸಂಸ್ಕಾರ ನೀಡಬೇಕು. ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜದ ದೃಷ್ಟಿಕೋನ ಬದಲಿಸುವುದು. ಭಾರತೀಯ ಜನರಲ್ಲಿ ಲಿಂಗಸಮಾನತೆಯ ಜಾಗೃತಿ ಉಂಟು ಮಾಡುವುದುಮೊದಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವುದರ ಮೂಲಕ ಶಕ್ತಿ ತುಂಬಬೇಕು. ಮನೆಯಲ್ಲಿ ಹೆಣ್ಣು ಮಗು ಜನಿಸಿದರೇ ದುಃಖ ಪಡದೇ ಸಿಹಿ ಹಂಚಿ ಸಂಭ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು.
ಕೆಂಪು ಮತ್ತು ಕಪ್ಪು ಬಣ್ಣದ ಕೇಕ್ ತಯಾರಿಕೆ ಕೇಕ್ ಪಾಯಿಂಟ್ ಮಳಿಗೆಗೆ ಬೀಗ
ಕ್ಯಾನ್ಸರ್ ಕಾರಕ ಅಂಶವಿರುವ ಕೇಕ್ ತಯಾರಿ ಮತ್ತು ಮಾರಾಟ ಮಾಡದಂತೆ ಸರ್ಕಾರ ನಿಷೇಧ ಹೇರಿರುವ ಬೆನ್ನಲ್ಲೇ ಟಿಎಚ್‌ಒ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ಡಾ.ತಿಮ್ಮರಾಜು ನೇತೃತ್ವದ ತಂಡ ನಗರದ ಆಯಕಟ್ಟಿನ ಬೇಕರಿಗಳಿಗೆ ಬುಧವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಕೆಂಪು ಮತ್ತು ಕಪ್ಪು ಬಣ್ಣದ ಕೇಕ್ ತಯಾರಿಸಿ ಮಾರಾಟಕ್ಕೆ ಇರಿಸಿದ್ದ ಕೇಕ್ ಪಾಯಿಂಟ್ ಮಳಿಗೆಗೆ ಬೀಗ ಜಡಿಯುವ ಮೂಲಕ ಸಿಬ್ಬಂದಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.
ಬೇಲೂರು ಲಯನ್ಸ್ ಕ್ಲಬ್ ಭವನ ೧೩ರಂದು ಲೋಕಾರ್ಪಣೆ
ಬೇಲೂರಿನ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಿಸಿದ ಲಯನ್ಸ್ ಭವನದ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ ಅ.೧೩ ರ ಭಾನುವಾರ ಬೆಳಿಗ್ಗೆ ೧೦-೩೦ಕ್ಕೆ ಲಯನ್ಸ್ ಪಟ್ಟಣದ ಯಗಚಿ ಸೇತುವೆ ಮಂಜುನಾಥ ಕಲ್ಯಾಣ ಮಂಟಪದ ಹಿಂಭಾಗದಲ್ಲಿನ ಲಯನ್ಸ್ ಭವನದ ಬಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸರ್ವರೂ ಸಕಾಲಕ್ಕೆ ಆಗಮಿಸಬೇಕು ಎಂದು ಬೇಲೂರು ಲಯನ್ಸ್ ಭವನ ಟ್ರಸ್ಟ್ ಅಧ್ಯಕ್ಷ ದೊಡ್ಡಮನೆ ಪ್ರಭಾಕರ್‌ ಹೇಳಿದರು.
ರೈತರ ಸಮಸ್ಯೆಯನ್ನು ಕಾಲಮಿತಿಯೊಳಗೆ ಬಗೆಹರಿಸಿ
ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಪಟ್ಟಣದ ಗಣಪತಿಕೊತ್ತಲು ಉದ್ಯಾನದಲ್ಲಿ ಕಂದಾಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ "ಭೂಮಿ ದಸರಾ " ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಎ. ಮಂಜು ಮಾತನಾಡಿದರು. ರೈತರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಸರಿಪಡಿಸಿಕೊಡುವ ಕೆಲಸವನ್ನು ಕಂದಾಯ ಇಲಾಖೆ ನಿಗದಿತ ಕಾಲಮಿತಿಯಲ್ಲಿ ಮಾಡಿಕೊಡುವಂತೆ ಹೇಳಿದರು.ತಮ್ಮ ಜಮೀನಿನ ದಾಖಲೆಗಳನ್ನು ಸರಿಪಡಿಕೊಳ್ಳಲು ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಜನರು ವರ್ಷಗಟ್ಟಲೆ ಕಚೇರಿಗೆ ಅಲೆದಾಟ ನಡೆಸಬೇಕಿದೆ. ಇದನ್ನು ತಪ್ಪಸಿ ಜನರ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವ ಪ್ರವೃತ್ತಿಯನ್ನು ಇಲಾಖೆ ಬೆಳೆಸಿಕೊಳ್ಳಬೇಕು ಎಂದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved