• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಸಿಇ ಕಾಲೇಜಿನ ಆವರಣದಲ್ಲಿ ಗಮನಸೆಳೆದ ಡ್ರೋನ್ ಶೋ
ಮಲೆನಾಡು ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮೀ ರೆಸ್ ಫೌಂಡೇಶನ್ ಮತ್ತು ಜಟ್ಕಿಂಗ್ ಕಂಪನಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡ್ರೋನ್ ಹಾರಿಸುವ ಶೋ ಕಾರ್ಯಕ್ರಮವು ನೂರಾರು ಮಕ್ಕಳ ಎದುರು ಯಶಸ್ವಿಯಾಗಿ ಜರುಗಿತು. ಈ ಡ್ರೋನ್ ರೈತ ಸಂಕುಲಕ್ಕೆ ಉಪಯುಕ್ತವಾಗಿದೆ. ಡ್ರೋನ್ ಎಂದರೇ ಕ್ಯಾಮರಾ ಒಂದೇ ಮಾತ್ರವಲ್ಲ. ರೈತ ಬೆಳೆಯುವ ಕೃಷಿ ಬೆಳೆಗಳಿಗೆ ಔಷಧಿ ಸಿಂಪಡಣೆ ಇರಬಹುದು, ಕಳೆ ನಾಶಕ ಸಿಂಪಡಣೆ ಇರಬಹುದು ಎಲ್ಲಾ ರೀತಿಯಲ್ಲೂ ರೈತ ಸಂಕುಲಕ್ಕೆ ಉಪಯುಕ್ತವಾದಂತಹ ಈ ಡ್ರೋನ್ ಸಂಸ್ಥೆ ನಮ್ಮ ಮಲೆನಾಡು ಶಿಕ್ಷಣ ಸಂಸ್ಥೆಯಲ್ಲಿ ದೊಡ್ಡ ಕಂಪನಿಯಾಗಿ ಇರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.
ಆಲೋಚನೆಗಳು ಸರಿಯಿದ್ದಾಗ ಮಾತ್ರ ಸುಸ್ಥಿರ ದೇಶದ ನಿರ್ಮಾಣ ಸಾಧ್ಯ
ಒಬ್ಬ ವ್ಯಕ್ತಿ ನಾಯಕನಾಗಿ ಸರಿಯಾದ ದೃಷ್ಠಿ ಜತೆಗೆ ಜವಾಬ್ದಾರಿಯನ್ನು ಹೊಂದಿದಾಗ ಮಾತ್ರ ಉತ್ತಮ ಆಡಳಿತದ ಜತೆಗೆ ಜನಮನದಲ್ಲಿ ನೆಲೆ ನಿಲ್ಲಲು ಸಾಧ್ಯ ಎಂದು ನಿಕಟಪೂರ್ವ ಸಹಾಯಕ ಗವರ್ನರ್ ಜಿ.ಎಸ್.ಪ್ರದೀಪ್ ಅಭಿಪ್ರಾಯಪಟ್ಟರು. ರೋಟರಿ ಸಂಸ್ಥೆಯ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಜತೆಗೆ ನೂತನ ಸದಸ್ಯರಿಗೆ ಹೆಚ್ಚಿನ ಮಾಹಿತಿ, ವಿಚಾರ ವಿನಿಮಯ ಮಾಡಿಕೊಂಡಾಗ ಸಂಸ್ಥೆಯ ಉದ್ದೇಶ ಹಾಗೂ ಧ್ಯೇಯವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಆರೋಗ್ಯಕ್ಕಾಗಿ ಸಮಯ ಮೀಸಲಿಡಲು ಸಿಇಒ ಪೂರ್ಣಿಮಾ
ಪ್ರತಿಯೊಬ್ಬರು ಆರೋಗ್ಯಕ್ಕಾಗಿ ಪ್ರತಿ ದಿನ ೪೫ ನಿಮಿಷ ನಡಿಗೆ, ೨೦ ನಿಮಿಷ ಯೋಗಾಭ್ಯಾಸ ಅಥವಾ ವ್ಯಾಯಾಮ ಮಾಡಬೇಕು ಜನರು ಜೀವನ ಶೈಲಿ ಹಾಗೂ ಆಹಾರ ಸೇವನೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದ್ದಾರೆ. ಆಧುನಿಕ ಜೀವನ ಶೈಲಿಯಿಂದ ಹೃದಯ ಆರೋಗ್ಯದ ಕಡೆ ಗಮನಹರಿಸಬೇಕಿದೆ, ರಾಜ್ಯ ಸರ್ಕಾರ ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಅವಶ್ಯಕವಿರುವ ಚಿಕಿತ್ಸೆಯನ್ನು, ಮಾತ್ರೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಅರಸೀಕೆರೆಯಲ್ಲಿ ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜು.೨೬ರಂದು ಮಧ್ಯಾಹ್ನ ೧೨ ಗಂಟೆಗೆ ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮ ಉದ್ಟಾಟಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಭಾಗವಹಿಸಲಿದ್ದಾರೆ.
ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ
ಅರಸೀಕೆರೆ ತಾಲೂಕಿನ ಇತಿಹಾಸ ಪ್ರಸಿದ್ಧ ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮುರಿದೇವರ ಪಾದಪೂಜೆಯನ್ನು ಭಕ್ತಾದಿಗಳು ನೆರವೇರಿಸಿದರು. ಈ ಬಾರಿಯೂ ಗ್ರಾಮದ ಆರಾಧ್ಯ ದೈವ ಶ್ರೀ ಗುರು ಚನ್ನಬಸವಣ್ಣನವರು ಹಾಗೂ ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಪಾದಪೂಜೆ ಬಳಿಕ ಬಂದ ಭಕ್ತಾದಿಗಳಿಗೆ ದರ್ಶನ ಆಶೀರ್ವಾದವಿತ್ತು ಮಾತನಾಡಿದ ಶ್ರೀಗಳು ಮನುಷ್ಯನಿಗೆ ದೇವಾಲಯಗಳು ಶಾಂತಿ ನೆಮ್ಮದಿ ನೀಡುವ ತಾಣಗಳಾಗಿವೆ ಎಂದು ಹೇಳಿದರು.
ದೇಶದ ನಿಜವಾದ ಆಸ್ತಿ ಮಕ್ಕಳು
ದೇಶದ ನಿಜವಾದ ಆಸ್ತಿ ಮಕ್ಕಳು. ವಿದ್ಯಾರ್ಥಿಗಳು ಮುಂದಿನ ಮಾನವ ಸಂಪನ್ಮೂಲ, ಶಿಕ್ಷಕರು ಪೋಷಕರು ಕಾಳಜಿ ವಹಿಸಿ ಎಂದು ಡೀಸಿ ಲತಾ ಕುಮಾರಿ ತಿಳಿಸಿದರು. ಲೂ ಇನ್ನೂ ಹೆಚ್ಚಿನ ಗಮನವನ್ನು ಒಬ್ಬ ವಿದ್ಯಾರ್ಥಿಯು ಅನುತ್ತೀರ್ಣನಾಗಬಾರದು ಎಂಬ ನಿಟ್ಟಿನಲ್ಲಿ ಹೆಚ್ಚು ಕಾಳಜಿ ವಹಿಸಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು. ಪೋಷಕರಿಗೂ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಮನೆಯಲ್ಲಿ ಮಕ್ಕಳ ಎದುರುಗಡೆ ಕೆಟ್ಟ ಪದಗಳನ್ನು ಬಳಸಬಾರದು. ಮನೆಯ ವಾತಾವರಣ ಪ್ರಶಾಂತವಾಗಿ, ಸಂತಸಮಯವಾಗಿ ಇರಬೇಕು, ಟಿವಿ, ಮೊಬೈಲ್ ಮೊದಲಾದವನ್ನು ಪೋಷಕರು ತ್ಯಾಗ ಮಾಡಬೇಕಾಗುತ್ತದೆ. ತಂದೆತಾಯಿಗಳ ಈ ತ್ಯಾಗದಿಂದ ಮಕ್ಕಳು ಒಂದು ಉತ್ತಮ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರಿ ಶಾಲೆ ಮಕ್ಕಳು ದೊಡ್ಡ ಕನಸು ಕಾಣಿ
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಒಂದೊಂದು ದೊಡ್ಡದಾದ ಕನಸು ಹೊಂದಬೇಕು, ಆ ಕನಸನ್ನು ನನಸು ಮಾಡಲು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಮೈಗೂಡಿಸಿಕೊಂಡು ಸಮಾಜಕ್ಕೆ ಉತ್ತಮವಾದ ಕೊಡುಗೆ ನೀಡಬೇಕೆಂದು ನಿವೃತ್ತ ಅಪರ ಅಬಕಾರಿ ಆಯುಕ್ತರಾದ ಎಚ್ ಪಿ ಈರಪ್ಪ ತಿಳಿಸಿದರು. ಹೋಬಳಿಯ ಹನ್ಯಾಳಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಮಕ್ಕಳ ಮನೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಪ್ರಸನ್ನ ವೀರಭದ್ರೇಶ್ವರ ಸ್ವಾಮಿ ಚಾರಿಟಬಲ್ ಟ್ರಸ್ಟ್ ಕೇರಳಾಪುರ ವತಿಯಿಂದ ಸುಮಾರು 1 ಲಕ್ಷ ರು. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಬ್ಯಾಗ್‌ಗಳನ್ನು ವಿತರಿಸಿದರು.
ಬೇಲೂರು ಲಯನ್ಸ್ ಸಂಸ್ಥೆಗೆ ತೃತೀಯ ಸ್ಥಾನ
ಬೇಲೂರು ತಾಲೂಕಿನಲ್ಲಿ ಹಮ್ಮಿಕೊಂಡ ವಿವಿಧ ಜನಪರ ಕಾರ್ಯಕ್ರಮಗಳಿಂದಾಗಿ ಲಯನ್ಸ್ ಕ್ಲಬ್ ತೃತೀಯ ಸ್ಥಾನ ಪಡೆದಿದೆ ಎಂದು ಬೇಲೂರು ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಡಾ.ಚಂದ್ರಮೌಳಿ ಹೇಳಿದರು. ಪಟ್ಟಣದ ಲಯನ್ಸ್ ಭವನದಲ್ಲಿ ಹಮ್ಮಿಕೊಂಡ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಉಚಿತ ಆರೋಗ್ಯ ಶಿಬಿರ, ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಇನ್ನೂ ಮುಂತಾದ ರೋಗಿಗಳ ಬಗ್ಗೆ ಉಚಿತ ತಪಾಸಣೆ ಕಾರ್ಯಕ್ರಮ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಆರೋಗ್ಯ ಶಿಬಿರ ನಡೆಸಲಾಗುತ್ತದೆ. ಶಾಲಾ ಕಾಲೇಜಿನಲ್ಲಿ ಮತ್ತು ಸಮುದಾಯದ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದ ಅವರು ಇದರ ಜೊತೆಯಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ ಎಂದರು.
ಕೂಡಲೇ ಹುಡಾಕ್ಕೆ ಅಧ್ಯಕ್ಷರ ನೇಮಿಸದಿದ್ದರೆ ಪ್ರತಿಭಟನೆ
ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ಕಳೆದ ಎರಡು ವರ್ಷಗಳಿಂದಲೂ ಅಧ್ಯಕ್ಷರ ನೇಮಕ ಮಾಡಿಲ್ಲ. ಕೂಡಲೇ ಇತ್ತ ಗಮನಹರಿಸಿ ಸ್ಥಳೀಯರಿಗೆ ಅವಕಾಶ ನೀಡಿ ನೇಮಿಸಬೇಕು. ಇಲ್ಲವಾದರೇ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ನವೀದ್ ಅಹಮದ್ ಎಚ್ಚರಿಸಿದರು. ಇತ್ತೀಚಿನ ದಿನಗಳ ಪತ್ರಿಕೆಗಳಲ್ಲಿ ಅರಸೀಕೆರೆಯ ವ್ಯಕ್ತಿಯೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಕೊಡುತ್ತಾರೆಂದು ವರದಿಯಾಗಿರುತ್ತದೆ. ನಮ್ಮ ಬೇಡಿಕೆ ಹಾಸನದ ನಗರಾಭಿವೃದ್ಧಿ ಪ್ರಾಧಿಕಾರವು ಹಾಸನ ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ. ಅದರಲ್ಲೂ ಕೂಡ ಹಾಸನ ನಗರಾಭಿವೃದ್ಧಿ ಪ್ರಾಧಿಕಾರವು ಹಾಸನ ಸುತ್ತಮುತ್ತ ೩ ರಿಂದ ೪ ಕಿ.ಮೀ. ವ್ಯಾಪ್ತಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದರು.
ಹಾಸನ ಮಹಾನಗರ ಪಾಲಿಕೆ ಆಗದಿದ್ದರೆ ಒಳ್ಳೆಯದಿತ್ತು
ಹಾಸನ ನಗರಸಭೆಯನ್ನೇನೋ ಮಹಾನಗರ ಪಾಲಿಕೆ ಎಂದು ಮೇಲಗ್ದರ್ಜೆಗೇರಿಸಿ ಘೋಷಣೆ ಮಾಡಲಾಗಿದೆ. ಆದರೆ ಅದಕ್ಕೆ ತಕ್ಕಂತೆ ಅನುದಾನ ನೀಡದಿರುವ ಬಗ್ಗೆ ಶಾಸಕ ಸ್ವರೂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿನ ಬಜೆಟ್‌ನಲ್ಲಿ ೨೦೦ ಕೋಟಿ ನಿಗದಿಪಡಿಸಿದಂತೆ ಕೋರಲಾಗಿರುವ ಪ್ರಸ್ತಾವನೆಯನ್ನು ಇತ್ತೀಚೆಗೆ ಮೇಲ್ದರ್ಜೆಗೆ ಏರಿಸಲಾಗಿದ್ದ ಹೆಚ್ಚುವರಿ ಹುದ್ದೆಯಾಗಲಿ, ಅನುದಾನವನ್ನು ಒದಗಿಸಲು ಆಗುವುದಿಲ್ಲ ಎಂದು ಆರ್ಥಿಕ ಇಲಾಖೆಯಿಂದ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ಪ್ರಸ್ತಾವನೆಗೆ ಯಾವ ಅನುದಾನ ಕೊಡಲಾಗುವುದಿಲ್ಲ ಎಂದು ಸರಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಇಲಾಖೆ ತಿಳಿಸಿರುವ ಹಿಂಬರಹವನ್ನು ಶಾಸಕರು ಓದಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved