• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ
ಶೆಟ್ಟಿಹಳ್ಳಿಯ ಪರಿಸರ ಪ್ರೇಮಿ ಹಾಗೂ ಸಮಾಜ ಸೇವಕರಾದ ಹನುಮೇಗೌಡ, ಶ್ರೀ ಲಕ್ಷ್ಮೀ ರಂಗನಾಥ್ ಎಜುಕೇಶನ್ ಟ್ರಸ್ಟ್, ರೋಟರಿ ಕ್ಲಬ್ ಆಫ್ ಸೆಂಟ್ರಲ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಮಧುಮೇಹ ತಪಾಸಣೆ, ರಕ್ತದೊತ್ತಡ ತಪಾಸಣೆ, ಸ್ತ್ರೀರೋಗ ತಪಾಸಣೆ, ಉಸಿರಾಟ ತೊಂದರೆ, ದಂತ ತಪಾಸಣೆ, ಕೀಲು ಮತ್ತು ಮೂಳೆ ರೋಗ ತಪಾಸಣೆ, ಕಣ್ಣಿನ ಪರೀಕ್ಷೆ ಸೇರಿದಂತೆ ಇತರೆ ಪರೀಕ್ಷೆಗಳನ್ನು ಮಾಡಲಾಗುವುದು ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ಮತ್ತು ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶಂಭುನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.
ಅರ್ಧಕ್ಕೆ ನಿಂತ ರಾಮನಾಥಪುರದ ಕಾವೇರಿ ನದಿ ಸೇತುವೆ ಕಾಮಗಾರಿ
ಮೈಸೂರು ಅರಸರ ಕಾಲದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆ ಶತಮಾನ ಪೂರೈಸಿದೆ. ಹಳೆಯ ಸೇತುವೆ ಕಿರಿದಾಗಿದ್ದು, ಶಿಥಿಲಾವಸ್ಥೆಗೆ ತಲುಪಿದ ಕಾರಣ ಕಳೆದ 2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಹಾಗೂ ಶಾಸಕ ಎ. ಮಂಜು ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಹೊಸ ಸೇತುವೆ ನಿರ್ಮಾಣಕ್ಕಾಗಿ ಸರ್ಕಾರ 24 ಕೋಟಿ ರು. ವೆಚ್ಚದ ಅನುದಾನ ಬಿಡುಗಡೆ ಮಾಡಿತ್ತು. ದುರಾದೃಷ್ಟವಶಾತ್ ದೇವರು ಕೊಟ್ಟರೂ ಪೂಜಾರಿ ವರ ಕೊಡಲ್ಲ ಎನ್ನುವ ಗಾದೆ ಮಾತಿನಂತೆ ಸರ್ಕಾರ ದೊಡ್ಡ ಮೊತ್ತದ ಅನುದಾನ ನೀಡಿದರೂ ಕಾಮಗಾರಿ ಮುಗಿಯದೆ ನನೆಗುದಿಗೆ ಬಿದ್ದಿದೆ.
ದೇವಸ್ಥಾನದಲ್ಲೇ ಅರ್ಚಕ ನೇಣಿಗೆ ಶರಣು
ದೇವಸ್ಥಾನದಲ್ಲಿ ಪೂಜೆ ಮಾಡುವ ವಿಚಾರಕ್ಕೆ ಗ್ರಾಮಸ್ಥರಿಂದ ಉಂಟಾದ ಕಿರುಕುಳದಿಂದ ಬೇಸತ್ತು ಅರ್ಚಕರೊಬ್ಬರು ದೇವಸ್ಥಾನದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಳೇಬೀಡು ಹೋಬಳಿಯ ಗಂಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ವಿಚಾರವಾಗಿ ಗ್ರಾಮಸ್ಥರಿಂದ ಕಿರುಕುಳ ಉಂಟಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ನಿಮ್ಮ ಮೂಲ ಜಾತಿಯ ಹೆಸರು ಹೇಳಿ ಮೀಸಲಾತಿ ಸೌಲಭ್ಯ ಪಡೆಯಿರಿ
ಒಳ ಮೀಸಲಾತಿ ಜಾರಿಗಾಗಿ ನಿಖರ ದತ್ತಾಂಶವನ್ನು ಸಂಗ್ರಹಿಸಲು ಮನೆಮನೆಗೆ ಜನಗಣತಿ ಅಧಿಕಾರಿಗಳು ಬರುತ್ತಿದ್ದು, ಈ ವೇಳೆ ನಿಮ್ಮ ಮೂಲ ಜಾತಿಯ ಹೆಸರನ್ನು ಹೇಳಿ ಮೀಸಲಾತಿ ಸೌಲಭ್ಯವನ್ನು ಪಡೆಯಿರಿ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜು ತಿಳಿಸಿದರು. ಈ ಜನಗಣತಿಯಲ್ಲಿ ಆನ್‌ಲೈನ್‌ನಲ್ಲಿ ವಿವರ ನೀಡಬಯಸುವವರು ತಮ್ಮ ಆಧಾರ್ ಕಾರ್ಡ್‌ನೊಂದಿಗೆ ನಿಮ್ಮ ಜಾತಿ ಪ್ರಮಾಣಪತ್ರದ ಆರ್‌ಡಿ ನಂಬರನ್ನು ಅಪ್‌ಲೋಡ್ ಮಾಡಬಹುದು ಎಂದು ಹೇಳಿದರು.
ಏಷ್ಯನ್ ಪವರ್ ಲಿಫ್ಟಿಂಗ್‌ನಲ್ಲಿ ಹಾಸನದ ಸಿಂಚನಗೆ ಚಿನ್ನ
ಹಾಸನ ಜಿಲ್ಲಾ ಪವರ್ ಲಿಫ್ಟಿಂಗ್ ಕಾರ್ಯದರ್ಶಿ ಹನುಮಂತೇಗೌಡರ ಮಗಳು ಕೆ.ಎಚ್. ಸಿಂಚನ ಡೆಹ್ರಾಡೂನ್ ಇಲ್ಲಿ ನಡೆದ ಏಷ್ಯನ್ ಸಬ್ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಸ್ವರ್ಣದ ಪದಕಕ್ಕೆ ಕೊರಳೊಡ್ಡಿದ್ದಾರೆ. ಮೊದಲ ಸುತ್ತಿನಲ್ಲಿ ೮೨.೫ ಕೇಜಿ ಬೆಂಚ್ ಫ್ರೆಸ್, ಎರಡನೇ ಸುತ್ತಿನಲ್ಲಿ ೫೦ ಕೇಜಿ ಡೆಡ್ಲಿಫ್ಟ್ ಹಾಗೂ ಅಂತಿಮ ಸುತ್ತಿನಲ್ಲಿ ೧೧೦ ಕೇಜಿ ಭಾರ ಎತ್ತುವ ಮೂಲಕ ಒಟ್ಟು ೨೪೨.೫ ಕೇಜಿ ಭಾರ ಎತ್ತಿ ಮೊದಲ ಸ್ಥಾನ ಪಡೆಯುವ ಮೂಲಕ ಕರ್ನಾಟಕ ಮತ್ತು ಹಾಸನ ಜಲ್ಲೆಗೆ ಕೀರ್ತಿ ತಂದಿದ್ದಾರೆ.
ಆಲೂರು ಮುಖ್ಯರಸ್ತೆ ಮರು ಡಾಂಬರೀಕರಣ ಕಾಮಗಾರಿ ವೀಕ್ಷಣೆ
ಆಲೂರು ಪಟ್ಟಣದ ಮುಖ್ಯ ರಸ್ತೆ ಎರಡೂ ಬದಿಗಳಲ್ಲಿ ಅವೈಜ್ಞಾನಿಕ ಮಾದರಿಯಲ್ಲಿ ಚರಂಡಿ ನಿರ್ಮಾಣ ಮಾಡಿದ್ದ ಪರಿಣಾಮ, ಮಳೆನೀರು ರಸ್ತೆಯಲ್ಲಿ ನಿಂತು ರಸ್ತೆ ಭಾಗಶಃ ಹಾಳಾಗಿತ್ತು. ಶಾಸಕ ಸಿಮೆಂಟ್ ಮಂಜುರವರು ಇತ್ತೀಚೆಗೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಕಳೆದ ಎರಡು ದಿನಗಳಿಂದ ಕಾಮಗಾರಿ ಚಾಲನೆಯಲ್ಲಿದ್ದು, ಬುಧವಾರ ಶಾಸಕರು ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಡಾಂಬರೀಕರಣ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಡೆಸುವಂತೆ ಸೂಚಿಸಿದರು.
ಪಹಲ್ಗಾಂ ದಾಳಿಗೆ ಭಾರತ ತಿರುಗೇಟು
ಕಾಶ್ಮೀರದ ಪಹಲ್ಗಾಂನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತದ ವಾಯುಸೇನೆ ಪಾಕಿಸ್ತಾನದ ಉಗ್ರಗಾಮಿಗಳ ಬಂಕರ್‌ಗಳ ಮೇಲೆ ದಾಳಿ ನಡೆಸಿದ "ಸಿಂದೂರ " ಕಾರ್ಯಾಚರಣೆಯನ್ನು ಸ್ವಾಗತಿಸಿ ಬಿಜೆಪಿ ಕೆಲ ಕಾರ್ಯಕರ್ತರು ನಗರದಲ್ಲಿ ಬುಧವಾರ ಸಂಭ್ರಮಾಚರಣೆ ಮಾಡಿದರು. ಈ ಬಾರಿ ಪಾಕ್‌ ಪೋಷಿತ ಭಯೋತ್ಪಾದಕರು ಹಿಂದೂಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿ ಹತ್ಯೆ ಮಾಡಿರುವುದನ್ನು ಭಾರತೀಯರು ಸಹಿಸಲು ಸಾಧ್ಯವೇ ಇಲ್ಲ ಎಂದರು.
ಕಾವೇರಿ ನದಿಗೆ ಮಹಶಿರ್‌ ಮೀನು ಮರಿಗಳು
ಇಲ್ಲಿಯ ರಾಮೇಶ್ವರಸ್ವಾಮಿ ದೇವಸ್ಥಾನದ ಕಾವೇರಿ ನದಿ ವಹ್ನಿ ಪುಕ್ಷರಣಿಯ ಎರಡು ಬದಿಯ ಒಂದು ಪರ್ಲಾಂಗ್ (200 ಮೀಟರ್ ) ನದಿಯನ್ನು ಮತ್ಸ್ಯ ಸಂರಕ್ಷಿತ ಪ್ರದೇಶ ಎಂದು ಮೈಸೂರು ಮೀನುಗಾರಿಕೆ ಇಲಾಖೆ ಆರ್‌. ಗಣೇಶ್ ತಿಳಿಸಿದರು. ಈ ಕ್ಷೇತ್ರದಲ್ಲಿ ಬರುವ ಭಕ್ತರು ಸಂರಕ್ಷಿತ ಮೀನುಗಳಿಗೆ ಪುರಿ, ಕಡಲೆಕಾಯಿ, ಹಿಂಡಿ ಮುಂತಾದ ಅಹಾರವನ್ನು ಹಾಕಬಹುದು. ಈ ಸ್ಥಳದಲ್ಲಿ ಪ್ಲಾಸ್ಟಿಕ್, ಗೋಣಿಚೀಲ, ಕಸ ಕಡ್ಡಿ ಬಟ್ಟೆ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಹಾಕಬಾರದು. ಈ ನಿಯಮ ಉಲ್ಲಂಘನೆ ಮಾಡಿದರೆ ಶಿಕ್ಷಗೆ ಗುರಿ ಪಡಿಸಲಾಗುವುದು ಎಂದು ಗಣೇಶ್ ತಿಳಿಸಿದರು.
ಬೇಲೂರಿನ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ವಾಸವಿ ಜಯಂತಿ
ಪೇಟೆ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ವಾಸವಿ ಜಯಂತಿಯ ಅಂಗವಾಗಿ ಉತ್ಸವ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ಆಚರಿಸಿದರು. ಶಾಂತಿ ಮತ್ತು ಸಮೃದ್ಧಿಗಾಗಿ ಗಣಪತಿ ಹೋಮ, ದೇವಿಯ ಧಾರ್ಮಿಕ ಉಪನ್ಯಾಸ ಮತ್ತು ಕೀರ್ತನೆ ದೇವಿ ಸ್ತುತಿ ಹಾಗು ಭಜನೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಗುರುವಾರ ಓಕಳಿ ಉತ್ಸವಕ್ಕೆ ಸರ್ವ ಭಕ್ತಾದಿಗಳು ಬಂದು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
ಗಣತಿದಾರರಿಗೆ ಸ್ಪಷ್ಟ ಮಾಹಿತಿ ನೀಡಲು ಕರೆ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಮೇ ೫ರಿಂದ ಪ್ರಾರಂಭವಾಗಿದ್ದು, ಮೇ ೧೭ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ. ಗಣತಿದಾರರು ಮನೆ ಮನೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಿರುವರು. ಈ ಸಂದರ್ಭದಲ್ಲಿ ಮನೆ ಯಜಮಾನರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯನ್ನು ಮುಂಚಿತವಾಗಿ ತೆಗೆದಿಟ್ಟುಕೊಂಡಿದ್ದು, ಗಣತಿದಾರರಿಗೆ ಸ್ಪಷ್ಟ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಕೋರಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 441
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved