• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳಿಗೆ ಸನ್ಮಾನ
ಶಲ್ವಪಿಳ್ಳೆ ಅಯ್ಯಂಗಾರ್ ಅವರ ಹೆಸರಿನಲ್ಲಿ, ಎಸ್. ಎಸ್. ಎಲ್. ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವರ ಕುಟುಂಬದ ಸದಸ್ಯರಾದ ಶ್ರೀಮತಿ ಅವರು ನಗದು ಬಹುಮಾನ ನೀಡಿ ಪುರಸ್ಕರಿಸಿದರು. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪ್ರಶಸ್ತಿ ಪಡೆದ ಈ ಶಾಲಾ ಕ್ರೀಡಾಪಟುಗಳನ್ನು ಕೂಡ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇದಿಕೆಯಲ್ಲಿ ರಾಜ್ಯ ಸೈನಿಕ ರತ್ನ ಪ್ರಶಸ್ತಿ ವಿಜೇತಕ ಮಾಜಿ ಸೈನಿಕ ಜಿ.ಎನ್.ನಾಗರಾಜ್, ಮಾಜಿ ಸೈನಿಕರುಗಳಾದ ಎಸ್. ರಂಗಪ್ಪ , ಸಿ.ವಾಸು, ವೇಣುಗೋಪಾಲ ಅವರುಗಳನ್ನು ಸನ್ಮಾನಿಸಲಾಯಿತು.
ವೈದ್ಯೆ ಹತ್ಯೆ ಖಂಡಿಸಿ ಎಸ್‌ಡಿಎಂ ಬೃಹತ್ ಪ್ರತಿಭಟನೆ
ಕರ್ತವ್ಯನಿರತ ವ್ಯದ್ಯರ ಮೇಲಿನ ದೌರ್ಜನ್ಯ ನಿಲ್ಲಿಸುವಂತೆ ಆಗ್ರಹಿಸಿ ಹಾಗೂ ಹತ್ಯೆಗೆ ತುರ್ತು ನ್ಯಾಯ ದೊರೆಯಬೇಕು ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷಿತ ಕ್ರಮಗಳನ್ನು ಖಾತ್ರಿಗೊಳಿಸಬೇಕೆಂದು ಒತ್ತಾಯಿಸಿ ಶ್ರೀ ಧರ್ಮಸ್ಥಳ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ಹುಲಿ ಹೆಜ್ಜೆ ಗುರುತು ಪತ್ತೆ
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಶಿರಗುರ ವ್ಯಾಪ್ತಿಗೆ ಸೇರಿದ ಅರಣ್ಯ ಪ್ರದೇಶದ ಸುತ್ತ ಮುತ್ತಲಿನಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು ಸ್ಥಳೀಯರು, ವಾಹನ ಸವಾರರು, ಕೃಷಿಕರು ಭಯಭೀತರಾಗಿದ್ದಾರೆ. ಕಾನನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸ್ತವ್ಯ ಹೂಡಿರಬಹುದು ಎಂದು ಅರಣ್ಯ ಇಲಾಖೆಯವರು ಶಂಕಿಸಿ ಹುಲಿಯ ಚಲನ ವಲನಗಳ ಬಗ್ಗೆ ಶೋಧನೆ ನಡೆಸುತ್ತಿದ್ದು ಮುಂದಿನ ಅಗತ್ಯ ಕ್ರಮಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾಡಾನೆಗಳ ಉಪಟಳದಿಂದ ಹೈರಣರಾಗಿದ್ದ ಮಲೆನಾಡಿಗರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಸ್ಥಳೀಯರು ಮನೆಯಿಂದ ಹೊರ ಬರಲು ಭಯ ಪಡುವಂತಾಗಿದೆ.
ಜಿಗುಪ್ಸೆಯಿಂದ ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಾಗ್ನಿಕ್‌ (24) ಮೃತ ದುರ್ದೈವಿ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ನೀಲಾದ್ರಿ ರಸ್ತೆಯ ರಾಯಲ್‌ ಇನ್‌ ಹೋಟೆಲ್‌ನಲ್ಲಿ ಯಾಗ್ನಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಹೀಲಿಯಂ ಅನಿಲ ಸೇವಿಸಿ ಸಾಫ್ಟ್‌ವೇರ್ ಉದ್ಯೋಗಿ ಯಾಗ್ನಿಕ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಕಲೇಶಪುರ ತಾಲೂಕಿನ ಕಾಫಿ ಎಸ್ಟೇಟ್ ಮಾಲಿಕರ ಪುತ್ರನಾದ ಯಾಗ್ನಿಕ್‌, ನಗರದ ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ. ಈ ಮೊದಲು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ನೇಹಿತರ ಜತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಆತ, ವರ್ಕ್‌ ಫ್ರಮ್ ಹೋಂ ಕಾರಣಕ್ಕೆ ಊರಿಗೆ ತೆರಳಿದ್ದ.
ಹೊಳೆನರಸೀಪುರ ಪುರಸಭೆ ಅಧ್ಯಕ್ಷರಾಗಿ ಶ್ರೀಧರ್‌ ಆಯ್ಕೆ
ಹೊಳೆನರಸೀಪುರ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷರಾಗಿ ಕೆ. ಶ್ರೀಧರ್, ಉಪಾಧ್ಯಕ್ಷರಾಗಿ ಸಾವಿತ್ರಮ್ಮ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಪುರಸಭೆಯಲ್ಲಿ ೨೨ ಜೆಡಿಎಸ್ ಸದಸ್ಯರಿದ್ದು, ಅದರಲ್ಲಿ ತ್ರಿಲೋಚನಾ ಗೈರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದ ಎಚ್.ಕೆ. ಪ್ರಸನ್ನ ತಡವಾಗಿ ಆಗಮಿಸಿ ಅಧ್ಯಕ್ಷರ ಆಯ್ಕೆ ಘೋಷಣೆ ಆಗುತ್ತಿದ್ದಂತೆ ನೂತನ ಅಧ್ಯಕ್ಷರಿಗೆ ಶುಭವನ್ನೂ ಕೋರದೆ ಹೊರನಡೆದರು. ಮತ್ತೊಬ್ಬ ಆಕಾಂಕ್ಷಿ ಆಗಿದ್ದ ಎ. ಜಗನ್ನಾಥ್ ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.
ಕೃಷಿಯನ್ನು ಅಪ್ಪಿ ಯಶಸ್ಸು ಕಂಡ ಪದವೀಧರ
ಪದವಿ ಶಿಕ್ಷಣ ಗಳಿಸಿ ಸರ್ಕಾರಿ ಕೆಲಸಕ್ಕಾಗಿ ಅಲೆದು ಬೇಸತ್ತು ಕೃಷಿಯತ್ತ ಮುಖ ಮಾಡುವವರ ಸಂಖ್ಯೆ ತೀರ ವಿರಳ. ಆದರೆ ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ಯುವ ರೈತ ಬಿ.ಎ. ಪದವಿ ಪಡೆದು ಸಿಕ್ಕ ಪೊಲೀಸ್ ಕೆಲಸಕ್ಕೆ ಹೋಗದೆ ಜೀವನಾಧಾರಿತವಾಗಿ ಕೃಷಿಯನ್ನೇ ಆಯ್ಕೆ ಮಾಡಿಕೊಂಡು ಯಶಸ್ಸು ಕಂಡುಕೊಳ್ಳುವ ಮೂಲಕ ಹಲವಾರು ಕೃಷಿ ಪ್ರಶಸ್ತಿಗಳನ್ನು ಗಳಿಸಿಕೊಂಡು ಇತರರಿಗೆ ಮಾದರಿಯಾಗಿ ಹೊರಹೊಮ್ಮಿದ್ದಾರೆ.78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಎ.ಟಿ. ರಾಮಸ್ವಾಮಿ ಅವರು ಈ ಬಾರಿಯ ಪ್ರಶಸ್ತಿಯನ್ನು ನವೀನ್ ಕುಮಾರ್ ಅವರಿಗೆ ಪ್ರದಾನ ಮಾಡಿದರು.
ಆಂಗ್ಲ ಭಾಷೆಗೆ ವ್ಯಾಕರಣವೇ ಜೀವಾಳ
ನಾವು ತೊಡುವ ಉಡುಗೆ ಸಂಸ್ಕಾರವನ್ನು ನೀಡುವುದಿಲ್ಲ. ಜ್ಞಾನದಿಂದ ಮಾತ್ರ ಎಲ್ಲವೂ ಸಾಧ್ಯ. ಯಾವ ವಿಷಯವಾದರೂ ನಾಚಿಕೆ ಸ್ವಭಾವವನ್ನು ಬಿಟ್ಟು ಧೈರ್ಯದಿಂದ ಮುನ್ನುಗ್ಗಬೇಕು. ಸೃಜನಾತ್ಮಕ ವಿಷಯಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು. ನಕಾರಾತ್ಮಕ ಧೋರಣೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಸಕಾರಾತ್ಮಕತೆ ನಮ್ಮ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಹಾಸನ ಹೇಮಾವತಿ ಜಲಾನಯನ ಪ್ರದೇಶದ ವಿಶೇಷ ಭೂಸ್ವಾಧೀನಾಧಿಕಾರಿ ಡಾ. ಮಂಜುನಾಥ್ ವಿ ಅಭಿಪ್ರಾಯಪಟ್ಟರು.
ಬಾಂಗ್ಲಾದೇಶದಲ್ಲಿನ ಹಿಂದೂಗಳನ್ನು ಸಂರಕ್ಷಿಸಿ
ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ರಕ್ಷಣೆ ಮತ್ತು ದೇವಾಲಯಗಳ ಸಂರಕ್ಷಣೆ ಮಾಡಲು ಭಾರತ ಸರ್ಕಾರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ವೇದಿಕೆಯಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಹಿಂದೂ ಜನಜಾಗೃತಿ ವೇದಿಕೆಯ ಗೋವಿಂದರಾಜು ಮಾಧ್ಯಮದೊಂದಿಗೆ ಮಾತನಾಡಿ, ಕೆಲವು ದಿನಗಳಿಂದ ಬಾಂಗ್ಲಾ ದೇಶದಲ್ಲಿ ಮೀಸಲಾತಿ ವಿರುದ್ಧದ ಚಳವಳಿಯು ಅತ್ಯಂತ ಹಿಂಸಾತ್ಮಕ ಸ್ವರೂಪವನ್ನು ಪಡೆದುಕೊಂಡಿದೆ ಎಂದರು.
ಸಕಲೇಶಪುರ ವಿಜಯಪುರ ಬಸ್‌ಗೆ ಶಾಸಕ ಮಂಜು ಚಾಲನೆ
ಸಕಲೇಶಪುರದಿಂದ ವಿಜಯಪುರಕ್ಕೆ ಆರಂಭವಾಗಿರುವ ನೂತನ ಬಸ್‌ಗೆ ಶಾಸಕರು ಹಸಿರು ಧ್ವಜ ತೋರಿಸುವ ಮುಖಾಂತರ ಚಾಲನೆ ನೀಡಿ ಮಾತನಾಡಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಹೊಸ ಬಸ್‌ನ್ನು ಸಕಲೇಶಪುರ ಡಿಪೋದಿಂದ ವಿಜಯಪುರಕ್ಕೆ ಬಿಡಲಾಗುತ್ತಿದೆ. ಈ ಬಸ್‌ನಿಂದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಪ್ರತಿ ದಿನ ಪಟ್ಟಣದಿಂದ ಮಧ್ಯಾಹ್ನ ೧೨.೩೦ರ ವೇಳೆಗೆ ಬಿಡುವ ಈ ಬಸ್ ಮರುದಿನ ಮುಂಜಾನೆ ೬ ಗಂಟೆಗೆ ವಿಜಯಪುರ ತಲುಪುತ್ತದೆ ಎಂದರು.
ಮಾದಕ ವಸ್ತುಗಳ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ
ಅಮಲು ಮುಕ್ತ ಸಕಲೇಶಪುರಕ್ಕಾಗಿ ಆಯೋಜಿಸಲಾಗಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ನಾಗರೀಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಯುವಜನಾಂಗಕ್ಕೆ ಮಾದಕ ವಸ್ತುಗಳು ಸಿಗದಂತೆ ಮಾದಕ ವಸ್ತು ಮುಕ್ತ ಸಮಾಜ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಸುಲಭವಾಗಿ ವಿದ್ಯಾರ್ಥಿಗಳಿಗೆ ನಶೆ ಬರುವ ಪದಾರ್ಥಗಳು ಬಹುಬೇಗನೆ ಕೈಗೆ ಸಿಗುವಂತಾಗುತ್ತಿದೆ ಎಂದು ವಿಷಾದಿಸಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 509
  • next >
Top Stories
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved