• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಬಿ ಎನ್ ಚಂದ್ರಶೇಖರ್
ಬೇಲೂರಿನ ಅರ್ಬನ್ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿ ಎನ್ ಚಂದ್ರಶೇಖರ್‌ರವರು ಒಂದು ಮತದ ಅಂತರದಿಂದ ವಿಜೇತರಾದರು. ೧೩ ಜನ ಸದಸ್ಯರ ಬೆಂಬಲ ಕೋರಿ ಬಿ ಎನ್ ಚಂದ್ರಶೇಖರ್‌ ಹಾಗೂ ಎಸ್ ಕೆ ನಾಗೇಶ್ ಅವರು ನಾಮಪತ್ರ ಸಲ್ಲಿಸಿದ್ದರು. ತೀವ್ರ ಪೈಪೋಟಿಯಿಂದ ಕೂಡಿದ್ದ ಚುನಾವಣೆಯಲ್ಲಿ ೭ ಮತಗಳನ್ನು ಚಂದ್ರಶೇಖರ್ ಪಡೆದರು. ೬ ಮತಗಳನ್ನು ಪಡೆದ ಎಸ್ ಕೆ ನಾಗೇಶ್ ೧ ಮತದ ಅಂತರದಲ್ಲಿ ಪರಾಭವಗೊಂಡರು.
ಸಿಟಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ
ಹಾಸನ ನಗರದ ಹಳೆ ಬಸ್‌ ನಿಲ್ದಾಣದಲ್ಲಿ ಸುಮಾರು ೨೦ಕ್ಕೂ ಹೆಚ್ಚು ಯುವಕರಿದ್ದ ಎರಡು ಗುಂಪುಗಳು ಮೊದಲು ಮಾತಿಗೆ ಮಾತು ಬೆಳೆಸಿದ್ದು, ಯುವಕರ ನಡುವೆ ಗಲಾಟೆ ಪ್ರಾರಂಭವಾಗುತ್ತಿದ್ದಂತೆ ಪ್ರಯಾಣಿಕರು ಆತಂಕದಿಂದ ಓಡಿ ಹೋಗಿದ್ದಾರೆ. ಈ ಜಗಳವನ್ನು ಅನೇಕರು ಸುಮ್ಮನೆ ನೋಡುತ್ತಿದ್ದರೆ, ಸಾರಿಗೆ ಬಸ್ ಚಾಲಕರು ಹಾಗೂ ಸಿಬ್ಬಂದಿ ಮೂಕಪ್ರೇಕ್ಷರಾಗಿ ನಿಂತಿದ್ದರು. ಗಲಾಟೆಯ ವೇಳೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿಯೂ ನಡೆದಿದ್ದರಿಂದ ಕೆಲ ಯುವಕರ ಬಟ್ಟೆಗಳು ಹರಿದುಹೋದವು. ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಈ ಬಸ್ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಇಲ್ಲದೆ ಇರುವುದು ವಿಪರ್ಯಾಸ. ಯುವಕರು ಆಗಾಗ್ಗೆ ಇಲ್ಲಿ ಜಗಳ ಮಾಡುತ್ತಲೆ ಇರುತ್ತಾರೆ.
ಅಂಗನವಾಡಿಗಳಲ್ಲಿ ದಾಖಲೆಯಲ್ಲಿರುವುದಕ್ಕಿಂತ ಕಡಿಮೆ ಮಕ್ಕಳು
ಜಿಲ್ಲೆಯಲ್ಲಿ ಒಟ್ಟು ೨,೬೯೧ ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ ೩ ವರ್ಷದಿಂದ ೬ ವರ್ಷದೊಳಗಿನ ೬೯,೮೧೩ ಮಕ್ಕಳಿರುವುದಾಗಿ ದಾಖಲಾತಿಗಳಲ್ಲಿ ಲೆಕ್ಕ ಇದೆ. ಆದರೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆ ಇದ್ದಿದ್ದು ಕಂಡುಬಂದಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ತಿಳಿಸಿದ್ದಾರೆ. ೨೪೭೫ ಅಂಗನವಾಡಿಗಳು ಶೌಚಾಲಯವನ್ನು ಹೊಂದಿದ್ದು ಬಹುತೇಕ ಅಂಗನವಾಡಿಗಳಲ್ಲಿ ಶೌಚಾಲಯಗಳು ಇದ್ದು ಇಲ್ಲದಂತಿದ್ದು, ಬಳಸಲು ಅಯೋಗ್ಯವಾಗಿವೆ ಎನ್ನುವಷ್ಟರ ಮಟ್ಟಿಗೆ ಇವೆ. ೨೧೬ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯವೇ ಇಲ್ಲದೇ ಮಕ್ಕಳು ಮತ್ತು ಅಂಗನವಾಡಿ ಸಿಬ್ಬಂದಿ ಶೌಚ ಕ್ರಿಯೆಗಳಿಗೆ ಪರದಾಡುವಂತಾಗಿದೆ.
ಕಾರೇಹಳ್ಳಿ ಸೊಸೈಟಿ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ
ಹೋಬಳಿಯ ಕಾರೇಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚೆನ್ನೇನಹಳ್ಳಿ ಗ್ರಾಮದ ಸಿ.ಡಿ.ರೇವಣ್ಣ, ಉಪಾಧ್ಯಕ್ಷರಾಗಿ ಕೆ ಎಸ್ ದೇವರಾಜ್ ಅವಿರೋಧವಾಗಿ ಆಯ್ಕೆಯಾದರು. ಅವಿರೋಧವಾಗಿ ಆಯ್ಕೆಗೊಂಡ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು ಹಾಗೂ ಮುಖಂಡರು ಅಭಿನಂದಿಸಿದರು.
ರೈತನ ಮೇಲೆ ಕಾಡಾನೆ ದಾಳಿ
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸುಮಾರು ೪ ಕಾಡಾನೆಗಳ ಹಿಂಡಿನಲ್ಲಿ ಒಂದು ಆನೆ ದಾಳಿ ಮಾಡಿದ ಪರಿಣಾಮ ರೈತನೋರ್ವ ಗಾಯಗೊಂಡಿರುವ ಘಟನೆ ಬೇಲೂರು ತಾಲೂಕಿನ ಇಬ್ಬೀಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜೆ ಸೂರಾಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯವರು ಸೇರಿ ಆನೆಯನ್ನು ಇಲ್ಲಿಂದ ಓಡಿಸಿದ್ದರೂ ಮತ್ತೆಮತ್ತೆ ಬರುತ್ತಿವೆ. ಅರಣ್ಯ ಇಲಾಖೆಯವರು ಆನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದವರ ಬಂಧನ
ಮಂಡಲಮನೆ ಗ್ರಾಮದಲ್ಲಿ ಕಳ್ಳತನ ಮನೆಗೆ ನುಗ್ಗಿ ಕಳ್ಳತನ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ಕಳ್ಳತನ ಮಾಡಿದ ಪ್ರಕರಣ ಜುಲೈ ೨೯ರಂದು ಪ್ರಕರಣ ದಾಖಲಾಗಿತ್ತು. ಈಗ ಕಳ್ಳತನದ ಆರೋಪಿಯನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಸೀಕೆರೆ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಪ್ರಕರಣ ಭೇದಿಸಲು ವೃತ್ತನಿರೀಕ್ಷಕ ಸುಬ್ರಹ್ಮಣ್ಯ ಹಾಗೂ ಪಿಎಸ್ಐ ಪ್ರವೀಣ್ ಅವರ ನೇತೃತ್ವದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಕೇವಲ ೧೫ ದಿನದಲ್ಲಿ ಬಂಧಿಸಿ ಆರೋಪಿಯಿಂದ ಚಿನ್ನಾಭರಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಹೆಚ್ಚುವರಿ ಸೇವೆಗಳಿಂದ ಹೊರೆ ಎಂದು ತಹಸೀಲ್ದಾರ್‌ಗೆ ಗ್ರಾಮಾಧಿಕಾರಿಗಳ ದೂರು
ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಹೆಚ್ಚು ಸೇವೆಗಳನ್ನು ನಿರ್ವಹಿಸುವ ಕಾರ್ಯ ವಹಿಸಿದ್ದು, ಕೆಲಸ ನಿರ್ವಹಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚುವರಿ ಭತ್ಯೆ ಹಾಗೂ ಆಧುನಿಕ ಯಂತ್ರೋಪಕರಣಗಳನ್ನು ನೀಡಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳು ತಹಸೀಲ್ದಾರ್‌ ನಂದಕುಮಾರ್‌ಗೆ ಮನವಿ ಸಲ್ಲಿಸಿದರು. ಮೊಬೈಲ್ ಹಾಗೂ ಕಂಪ್ಯೂಟರ್‌ ಮೂಲಕ ಕೆಲಸ ನಿರ್ವಹಿಸಬೇಕಾದ ಅವಶ್ಯಕತೆಯಿರುತ್ತದೆ. ಆದ್ದರಿಂದ ಈ ಎಲ್ಲಾ ಕೆಲಸಗಳ ನಿರ್ವಹಣೆಗೆ ಮೊಬೈಲ್, ಸಿಮ್ ಹಾಗೂ ದಿನ ಬಳಕೆಗೆ ಮೊಬೈಲ್, ಡಾಟಾ, ಲ್ಯಾಪ್‌ಟಾಪ್, ಪ್ರಿಂಟಿಂಗ್, ಸ್ಕ್ಯಾನರ್‌ ಸೌಲಭ್ಯ ಒದಗಿಸಲು ಮನವಿ ಮಾಡಿದರು.
ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಮೆರವಣಿಗೆ
೭೮ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಆಡಳಿತದ ಸಹಕಾರದೊಂದಿಗೆ ನಮ್ಮ ಹಾಸನ ಟಿವಿ ಹಾಗೂ ಯೂಥ್ ಹ್ಯಾಂಡ್ಸ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಆಗಸ್ಟ್ ೧೫ರಂದು ಬೆಳಿಗ್ಗೆ ೮ ಗಂಟೆಗೆ ಆಂಧ್ರಪ್ರದೇಶದ ಸಮಾಜ ಸೇವಕರಾದ ಡಿ.ಸಿ. ಲಕ್ಷ್ಮೀನಾರಾಯಣ ಗುಪ್ತಾ ಮತ್ತು ತಂಡದಿಂದ ತಯಾರಿಸಲ್ಪಟ್ಟ ೨೫೦೦ ಅಡಿ ಉದ್ದದ ರಾಷ್ಟ್ರಧ್ವಜ ಮೆರವಣಿಗೆ ಕಾರ್ಯಕ್ರಮ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ.
ಹೇಮಾವತಿ ಜಲಾಶಯದ 6 ಕ್ರಸ್ಟ್‌ ಗೇಟುಗಳು ಸುಭದ್ರ
ಕೊಪ್ಪಳದಲ್ಲಿ ತುಂಗಾಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿಹೋದ ಹಿನ್ನೆಲೆಯಲ್ಲಿ ಹಾಸನ‌ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಲ್ಲಿ ಮಂಗಳವಾರ ಜಲಾಶಯದ ಅಧಿಕಾರಿಗಳು ಜಲಾಶಯದ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. . ಜಲಾಶಯದ 6 ರೇಡಿಯಲ್ ಕ್ರಸ್ಟ್ ಗೇಟ್ ಹಾಗೂ ಚೈನ್ ಲಿಂಕ್‌ಗಳು ಸುಭದ್ರವಾಗಿವೆ. ನಾಲ್ಕು ದಶಕಗಳ ಹಿಂದೆ ತಲಾ 25 ಟನ್ ತೂಕದ 6 ಕ್ರಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿದೆ. ಈ ಗೇಟುಗಳು ತುಕ್ಕು ಹಿಡಿಯದಂತೆ ಪ್ರತೀ ಆರು ತಿಂಗಳಿಗೊಮ್ಮೆ 15 ಲಕ್ಷ ರು. ವೆಚ್ಚದಲ್ಲಿ ಮೂರು ಬ್ಯಾರಲ್ 180 ಕೆಜಿ ಗ್ರೀಸಿಂಗ್ ಮಾಡಲಾಗುತ್ತಿದೆ.
ವಿದ್ಯಾರ್ಥಿಗಳು ಗ್ರಂಥಾಲಯಗಳ ಸದ್ಬಳಕೆ ಮಾಡಿಕೊಳ್ಳಿ
ದಿನನಿತ್ಯದ ಬದುಕಿನಲ್ಲಿ ಜ್ಞಾನದ ವಿಕಾಸಕ್ಕೆ ಸರ್ವರಿಗೂ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ, ಇತಿಹಾಸ, ರಾಜ್ಯಶಾಸ್ತ್ರ, ಬೌಗೋಳಿಕ ವಿಜ್ಞಾನ, ಸಂಶೋಧನೆ, ಕಥೆ ಕಾದಂಬರಿ, ಕವನಗಳ ಬಗ್ಗೆ ಹಲವಾರು ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿದೆ. ಜಾತಿ, ಧರ್ಮ ವಯಸ್ಸು, ಯಾವುದೇ ಪಕ್ಷಪಾತವಿಲ್ಲದೆ ಗ್ರಂಥಾಲಯ ಜ್ಞಾನದೇಗುಲವಿದ್ದಂತೆ. ಇದರಿಂದ ಆತ್ಮ ಸ್ಥೈರ್ಯ ಉತ್ತಮ ಸಮಾಜಕ್ಕೆ ಸಹಕಾರಿಯಾಗಿದೆ ಎಂದು ಹಿರಿಯ ಪತ್ರಕರ್ತ ಪುಟ್ಟಣ್ಣ ಗೋಕಾಕ್ ತಿಳಿಸಿದರು.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 509
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved