• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನಶೈಲಿ ಬದಲಿಸಿಕೊಂಡರೆ ರೋಗಗಳು ದೂರಾಗುತ್ತವೆ
ಜೀವನಶೈಲಿ ಸರಿ ಮಾಡಿಕೊಂಡರೆ ಅನೇಕ ರೋಗಗಳು ದೂರವಾಗುತ್ತವೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. . ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿವೆ. ಯುವಜನರು ಹೆಚ್ಚಾಗಿ ಈ ಸಮಸ್ಯೆಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ನಿತ್ಯವೂ ನಮ್ಮನ್ನು ಕಾಡುತ್ತಿರುತ್ತದೆ. ಇದಕ್ಕೆ ಕಾರಣ ನಮ್ಮ ಜೀವನ ಕ್ರಮವೇ ಆಗಿದೆ ಎಂದು ಅವರು ಹೇಳಿದರು. ಹೃದಯದ ಆರೋಗ್ಯ ಚೆನ್ನಾಗಿರಬೇಕು ಎಂದರೆ ಆರೋಗ್ಯಕರ ಆಹಾರ ಪದ್ಧತಿಯನ್ನು ನಮ್ಮದಾಗಿಸಿಕೊಳ್ಳಬೇಕು. ವರ್ಷಕ್ಕೆ ಒಮ್ಮೆಯಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳುವುದು, ದೇಹದ ತೂಕ ಹಾಗೂ ಬೊಜ್ಜನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಉತ್ತಮ ಎಂದರು.
ಅಂಗನವಾಡಿ ಕಟ್ಟಡಗಳ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚನೆ
ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ನಿಗದಿತ ಅವಧಿಯೊಳಗೆ ಬಾಕಿ ಇರುವ 19 ಕಟ್ಟಡಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಶಾಸಕ ಎ.ಮಂಜು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಟ್ಟಣದಲ್ಲಿ 22 ಮತ್ತು ತಾಲೂಕಿನಾದ್ಯಂತ 270 ಸೇರಿದಂತೆ ಒಟ್ಟು 292 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡ 242ಕ್ಕೆ ಇದೆ. ಸರ್ಕಾರಿ ಶಾಲೆಗಳ ಕೊಠಡಿಯಲ್ಲಿ 15 ಕಾರ್ಯನಿರ್ವಹಿಸುತ್ತಿವೆ. ಪರ್ಯಾಯ ವ್ಯವಸ್ಥೆಯಲ್ಲಿ 13 ಹಾಗೂ ಬಾಡಿಗೆ ಕಟ್ಟಡದಲ್ಲಿ 19 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
ನಾಗರನವಿಲೆಗೆ ಡಿಸಿಎಂ ಶಿವಕುಮಾರ್‌ ಭೇಟಿ
ಪ್ರಖ್ಯಾತ ನಾಗ ದೇವರ ಕ್ಷೇತ್ರ ಎಂದೇ ಖ್ಯಾತವಾಗಿರುವ ದೇವಾಲಯಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವುದು ವಿಶೇಷ. ಈ ಹಿಂದೆ ಮೈತ್ರಿ ಸರ್ಕಾರ ಬೀಳುವ ಹಂತದಲ್ಲಿದ್ದಾಗ ಬಿ. ಎಸ್. ಯಡಿಯೂರಪ್ಪ ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದರು. ದೇವರಲ್ಲಿ ಭಕ್ತಿ ಹೊಂದಿರುವ ಡಿಕೆಶಿ, ತಮ್ಮ ಗುರು ಕಾಡಸಿದ್ದೇಶ್ವರ ಮಠದ ಶ್ರೀಗಳ ಮಾರ್ಗದರ್ಶನದಂತೆ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದು ಗಮನ ಸೆಳೆಯಿತು. ಇಷ್ಟಾರ್ಥ ಸಿದ್ಧಿಗೆ ಹೆಸರುವಾಸಿಯಾಗಿರುವ ನಾಗದೇವರ ಜತೆಗೆ ಹಂದಿನಕೆರೆ ದೇವರಿಗೂ ಅವರು ಪೂಜೆ ಮಾಡಿಸಿದರು. ಪೂಜೆ ಸಂದರ್ಭದಲ್ಲಿ ಮೊಬೈಲ್, ಕ್ಯಾಮರಾಗಳಲ್ಲಿ ಫೋಟೋ, ವಿಡಿಯೋ ತೆಗೆಯದಂತೆ ಬೆಂಬಲಿಗರು ಮತ್ತು ಅಭಿಮಾನಿಗಳಿಗೆ ಅವರು ಮೊದಲೇ ಸೂಚನೆ ನೀಡಿದ್ದು ಕುತೂಹಲ ಹೆಚ್ಚಿಸಿತ್ತು.
ನಾಳೆ ಅರಸೀಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಅರಸೀಕೆರೆಗೆ ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರು ಆಗಮಿಸಲಿದ್ದು, ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗೆ ಶಂಕುಸ್ಥಾಪನೆಯನ್ನು ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ತಿಳಿಸಿದರು. ಸರ್ಕಾರದ ಖಜಾನೆ ಖಾಲಿಯಾಗಿದೆ ಸರಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಿರುವ ವಿರೋಧ ಪಕ್ಷದವರಿಗೆ ಉತ್ತರ ನೀಡುವ ಸಮಾವೇಶ ಇದಾಗಿದೆ ಎಂದರು. ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಕೃತಜ್ಞತೆಯನ್ನು ಸಲ್ಲಿಸುವ ಒಂದು ಕೃತಜ್ಞತಾ ಸಮಾರಂಭ ಅಥವಾ ಅಭಿನಂದನಾ ಸಮಾರಂಭ ಎಂದು ಹೇಳಬಹುದು.
ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆಗೆ ಸೂಚನೆ
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಗಳಿಲ್ಲದಂತೆ ಅಚ್ಚುಕಟ್ಟಾಗಿ ಸಂಭ್ರಮ, ಸಡಗರದಿಂದ ಆಚರಿಸಲು ಅಗತ್ಯ ಸಿದ್ಧತೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದರಲ್ಲದೆ, ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಆ.೧೪ ಮತ್ತು ೧೫ ರಂದು ತಪ್ಪದೆ ದೀಪಾಲಂಕಾರ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಮೂರ್ಕಣ್ಣು ಗುಡ್ಡ ರಕ್ಷಿತಾರಣ್ಯಕ್ಕೆ ತೀವ್ರ ವಿರೋಧ
ನೂರು ವರ್ಷಗಳ ಹಿಂದಿನ ಯೋಜನೆಯನ್ನು ಇಂದು ಜಾರಿಗೊಳಿಸುವ ಅರಣ್ಯ ಇಲಾಖೆಯ ಹುನ್ನಾರ ಫಲಿಸುವುದಿಲ್ಲ. ಇದರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ನೂರು ವರ್ಷಗಳ ನಂತರ ಯೋಜನೆ ಜಾರಿಗೊಳಿಸುವ ಹುನ್ನಾರ ನಡೆಸುತ್ತಿರುವ ಅರಣ್ಯ ಇಲಾಖೆ ಸ್ಥಳೀಯರಿಗೆ ಕಿರುಕುಳ ನೀಡುತ್ತಿದೆ. ಇದು ಅಕ್ಷಮ್ಯ. ಅಂದು ಈ ಭಾಗದಲ್ಲಿದ್ದ ಜನಸಂಖ್ಯೆ ಹಾಗೂ ಬೆಳೆಗಳ ಸ್ಥಿತಿಯೇ ಬೇರೆ. ಇಂದಿನ ಸ್ಥಿತಿಯೆ ಬೇರೆ ಇದೆ. ಆದ್ದರಿಂದ ಮೂರ್ಕಣ್ಣು ಗುಡ್ಡ ವ್ಯಾಪ್ತಿಯನ್ನು ರಕ್ಷಿತಾರಣ್ಯ ಪ್ರದೇಶ ಮಾಡುವ ಅರಣ್ಯ ಇಲಾಖೆ ಕ್ರಮದ ವಿರುದ್ಧ ಒಟ್ಟಾಗಿ ಹೋರಾಟ ಮಾಡುವ ಅಗತ್ಯವಿದೆ ಎಂದರು.
ಧರ್ಮಸ್ಥಳ ಸಂಘದಿಂದ ಜನಪರ ಕಾರ್ಯ
ಪುರ ಗ್ರಾಮದ ಕೆರೆಯಂಗಳದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಊರು-ನಮ್ಮ ಕೆರೆ ಕಾರ್ಯಕ್ರಮದಡಿ ೧೨.೪೦ ಲಕ್ಷ ರು. ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಭಾಗಕ್ಕೆ ಅಗತ್ಯವಿರುವ ಸಮುದಾಯ ಭವನ, ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣ, ಶುದ್ಧ ನೀರಿನ ಘಟಕ ಹಾಗು ದೇಗುಲ ಜೀರ್ಣೋದ್ಧಾರ ಕಾರ್ಯಗಳಿಗೆ ಸಹಾಯಧನ ರೂಪದಲ್ಲಿ ಕೊಡುಗೆ ನೀಡುತ್ತಿದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ವಿದ್ಯಾರ್ಥಿಗಳನ್ನು ಫುಟ್‌ಬೋರ್ಡ್‌ ಮೇಲೆ ನಿಲ್ಲುವಂತೆ ಮಾಡಿದ ಶಕ್ತಿ ಯೋಜನೆ
ವಿದ್ಯಾರ್ಥಿಗಳು ಚನ್ನರಾಯಪಟ್ಟಣ ತಾಲೂಕು ಕೇಂದ್ರಕ್ಕೆ ವಿದ್ಯಾಭ್ಯಾಸಕ್ಕೆ ಹೋಗಲು ಬೆಳಗಿನ ವೇಳೆಯಲ್ಲಿ ಬಸ್ ವ್ಯವಸ್ಥೆ ಇಲ್ಲದೆ ದಿನನಿತ್ಯ ಪರದಾಡುವ ಪರಿಸ್ಥಿತಿ ತಲೆದೋರಿದೆ. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೆಎಸ್ಆರ್‌ಟಿಸಿ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಏನು ಪ್ರಯೋಜನವಾಗಿಲ್ಲ. ಪ್ರತಿದಿನ ಬೆಳಿಗ್ಗೆ 7 ಗಂಟೆಯಿಂದ 8:30ರವರೆಗೆ ಕೇವಲ 2ರಿಂದ 3 ಬಸ್ಸುಗಳು ಮಾತ್ರ ತಿಪಟೂರು ಹಾಗೂ ತುರುವೇಕೆರೆ ಹಾಗೂ ಸ್ಥಳೀಯ ಮಾರ್ಗದಿಂದ ಸಂಚರಿಸುವುದರಿಂದ ಹೋಬಳಿ ಕೇಂದ್ರಕ್ಕೆ ಬರುವ ಮೊದಲೇ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿಯಿಂದಾಗಿ ಎಲ್ಲಾ ಬಸ್ಸುಗಳು ಸಂಪೂರ್ಣ ಭರ್ತಿಯಾಗಿ ಬರುತ್ತವೆ.
ದೈಹಿಕ ಸಾಮರ್ಥ್ಯಕ್ಕೆ ಈಜು ಸಹಕಾರಿ
ಚಿಕ್ಕಕೊಂಡಗುಳ ಕೊಪ್ಪಲು ಬಳಿ ಇರುವ ಮಿಲೇನಿಯಮ್ ವರ್ಲ್ಡ್ ಶಾಲೆಯ ಸಿಬಿಎಸ್‌ಇ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜುಲೈ ೨೩ ರಿಂದ ೨೭ರವರೆಗೂ ನಡೆಯುವ ದಕ್ಷಿಣ ವಲಯ ಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತನ್ನ ಐಪಿಎಸ್ ತರಬೇತಿ ಅವಧಿಯಲ್ಲಿ ಕೂಡ ಈಜು ಸ್ಪರ್ಧೆ ಹಾಗೂ ಪರೀಕ್ಷೆ ಕೂಡ ನಡೆದಿತ್ತು. ತನಗೆ ಅದು ಸವಾಲು ಎನಿಸಿದರೂ ಈಜು ಸ್ಪರ್ಧೆಯಲ್ಲಿ ತಾನು ಕೂಡ ಭಾಗವಹಿಸಿದ್ದೇನೆ. ಜಿಲ್ಲಾ ಮಟ್ಟದಲ್ಲಿ ಆಗಾಗ ಇಂತಹ ಈಜು ಸ್ಪರ್ಧೆಗಳನ್ನು ಆಯೋಜಿಸುವುದು ಒಳ್ಳೆಯ ಬೆಳವಣಿಗೆ. ಸ್ಪರ್ಧೆ ಆಯೋಜಿಸಿರುವ ಅಸೋಸಿಯೇಶನ್‌ಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.
ಶಾಸಕರ ಮುಂದೆ ವೈದ್ಯರ ಅಳಲು
ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಕನಿಷ್ಠ ಡಿ ಗ್ರೂಪ್ ನೌಕರರಿಲ್ಲ. ಕೆಲವು ಆರೋಗ್ಯ ಕೇಂದ್ರದಲ್ಲಿರುವ ನೌಕರರು ಸಲ್ಲದ ಕಾರಣ ನೀಡಿ ತಿಂಗಳುಗಳ ಕಾಲ ರಜೆ ಪಡೆಯುತ್ತಿದ್ದಾರೆ. ಇದರಿಂದಾಗಿ ನಾವೇ ಆಸ್ಪತ್ರೆಯ ಎಲ್ಲ ಕೆಲಸಗಳನ್ನು ಮಾಡಬೇಕಿದೆ. ಯಸಳೂರು, ವನಗೂರು ಹಾಗೂ ಹೆತ್ತೂರಿನಲ್ಲಿ ಹೆರಿಗೆ ಆಸ್ಪತ್ರೆಗಳಿದ್ದರೂ ಸಮರ್ಪಕ ಸ್ಟಾಫ್‌ ನರ್ಸಗಳಿಲ್ಲ. ಇನ್ನುಳಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ ಶುಶ್ರೂಷಕಿಯರು ಇಲ್ಲದಾಗಿದ್ದಾರೆ. ಲ್ಯಾಬ್ ಟೆಕ್ನಿಷಿಯನ್‌ಗಳು ಇಲ್ಲದ ಕಾರಣ ಮಿಷನರಿಗಳಿದ್ದರು ಉಪಯೋಗವಿಲ್ಲದಾಗಿದೆ ಎಂದು ಸಮಸ್ಯೆಗಳನ್ನು ತೆರೆದಿಟ್ಟರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved