• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆಂಡಾಲ್ ಗಣಪನ ಅದ್ಧೂರಿ ವಿಸರ್ಜನ ಮಹೋತ್ಸವ
ಪೆಂಡಾಲ್ ಗಣಪತಿಯ 70ನೇ ವರ್ಷದ ವಿಸರ್ಜನಾ ಮಹೋತ್ಸವದ ಮೆರವಣಿಗೆಗೆ ಶನಿವಾರ ಬೆಳಿಗ್ಗೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಕರ್ಪೂರ ಹಚ್ಚಿ, ಪುಷ್ಪವನ್ನು ಅರ್ಪಿಸಿ, ಕಾಯಿ ಹೊಡೆಯುವುದರ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರು ಮೆರವಣಿಗೆ ಉದ್ದಕ್ಕೂ ಕುಣಿದು ಕುಪ್ಪಳಿಸಿದರು, ಇನ್ನು ಪೆಂಡಾಲ್ ಗಣಪತಿ ಉತ್ಸವದ ಅಂಗವಾಗಿ ನಗರದ 19ನೇ ವಾರ್ಡಿನ ಅರಳೇಪೇಟೆ ನಿವಾಸಿಗಳು, ಅಂಗಡಿ ಮಾಲೀಕರಿಂದ ಅನ್ನದಾನ, ಸಹ್ಯಾದ್ರಿ ವೃತದಲ್ಲಿ ಸೇರಿದಂತೆ ಹಲವಾರು ಕಡೆ ಅನ್ನಸಂತರ್ಪಣೆ ನಡೆಸಲಾಗಿದೆ ಎಂದು ಹೇಳಿದರು.
ಇಂದಿನಿಂದ ಕಲ್ಗುಂಡಿ ಗೌರಮ್ಮದೇವಿ ವಿಸರ್ಜನಾ ಮಹೋತ್ಸವ
ಅರಸೀಕೆರೆ: ತಾಲೂಕಿನ ಕಲ್ಗುಂಡಿ ಗ್ರಾಮದ ಗೌರಮ್ಮದೇವಿ ವಿಸರ್ಜನಾ ಮಹೋತ್ಸವವು ಸೆ.28 ಮತ್ತು 29ರಂದು ಸಹಸ್ರಾರು ಭಕ್ತರ ಸಮೂಹದ ನಡುವೆ ಅತ್ಯಂತ ವಿಜೃಂಭಣೆಯಿದ್ದ ನಡೆಯಲಿದ್ದು, ಇದಕ್ಕಾಗಿ ಗ್ರಾಮಸ್ಥರು ಸಮರೋಪಾದಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡತೊಡಗಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳ ಪ್ರತಿಭಟನೆ
ಮೊಬೈಲ್ ಆ್ಯಪ್ ಮೂಲಕ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳು ಗೋಳು ಕೇಳುವವರೇ ಇಲ್ಲವಾಗಿದ್ದಾರೆ. ವೇತನ ಏರಿಕೆ ಮಾಡದೆ ಗ್ರಾಮ ಸಹಾಯಕರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷಿಸಲಾಗಿದೆ. ಕೆಲಸಕ್ಕೆ ಅಗತ್ಯವಾದ ಸೌಕರ್ಯಗಳಿಲ್ಲದೆ ಸುಸಜ್ಜಿತವಾದ ಕಚೇರಿ ಕೂಡ ಇಲ್ಲವಾಗಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಗರ್ಭಿಣಿ ಜಿಂಕೆ ಪ್ರಸವ ಮಾಡಿಸಿದ ವೈದ್ಯಾಧಿಕಾರಿ
ಬೇಲೂರು: ಅರೇಹಳ್ಳಿ ಪಟ್ಟಣದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಪಶು ವೈದ್ಯಾಧಿಕಾರಿಗಳು ಗರ್ಭಿಣಿ ಜಿಂಕೆಗೆ ಪ್ರಸವ ಮಾಡಿಸಿದರೂ ಹೆರಿಗೆಯ ನಂತರ ಗರ್ಭಿಣಿ ಜಿಂಕೆ ಪ್ರಸವದ ನಂತರ ಚೇತರಿಸಿಕೊಂಡರೆ, ಹೊಸ ಜನ್ಮ ಪಡೆಯಬೇಕಾಗಿದ್ದ ಮರಿ ಜಿಂಕೆಯು ಹೊಟ್ಟೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಪೆಂಡಾಲ್‌ ಗಣಪತಿ ವಿಸರ್ಜನೆ
ಸಿಟಿ ಬಸ್ ನಿಲ್ದಾಣದ ಬಳಿ ಇರುವ ಪೆಂಡಾಲ್‌ ಗಣೇಶೋತ್ಸವವು ೨೧ ದಿನಗಳ ಕಾಲ ಎಲ್ಲರ ಸಹಕಾರದಲ್ಲಿ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿದ್ದು, ಕೊನೆಯ ದಿನವಾದ ಸೆ.28ರಂದು (ಇಂದು) ವಿಶೇಷ ಹೂವಿನ ರಥದಲ್ಲಿ ಶ್ರೀಯವರ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡದೊಡನೆ ವಿವಿಧ ರಾಜಬೀದಿಗಳಲ್ಲಿ ಸಾಗಿ ನಗರದ ದೇವಿಗೆರೆಯಲ್ಲಿ ಸಂಜೆ ವಿಸರ್ಜನೆ ಮಾಡುವುದಾಗಿ ಶ್ರೀ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ಎಚ್. ನಾಗರಾಜು ತಿಳಿಸಿದರು.
ಶಿಕ್ಷಣದ ಜತೆಗೆ ಪೌಷ್ಟಿಕತೆಗೂ ಒತ್ತು : ಸಚಿವ ಮಧು ಬಂಗಾರಪ್ಪ
ಅರಕಲಗೂಡು: ಸಮಾಜದ ಉನ್ನತಿಗೆ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಇದನ್ನ ಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಕ್ಕಳಿಗೆ ಶಿಕ್ಷಣದೊಂದಿಗೆ ಪೌಷ್ಟಿಕತೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಾರದ 6 ದಿನಗಳು ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ
ಚನ್ನರಾಯಪಟ್ಟಣ: ಪೌಷ್ಟಿಕ ಆಹಾರ ಸೇವನೆಯಿಂದ ಮಕ್ಕಳ ಆರೋಗ್ಯ ಹಾಗೂ ಬುದ್ಧಿವಂತಿಕೆ ವೃದ್ಧಿಯಾಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಹತ್ತನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ
೧೦ನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಆಚರಿಸುವ ಸಂಭ್ರಮದಲ್ಲಿ ನಾವಿದ್ದೇವೆ. ಕಾಫಿ ನಡೆದು ಬಂದ ದಾರಿ, ಪರಿಸರಕ್ಕೆ ಕಾಫಿಯ ಕೊಡುಗೆಗಳು, ಕಾಫಿಯಲ್ಲಿರುವ ಆರೋಗ್ಯಕರ ಅಂಶಗಳನ್ನು ಹಾಗೂ ಕಾಫಿ ಉದ್ಯಮದಲ್ಲಿನ ಕುಂದುಕೊರತೆಗಳನ್ನು ಸಮಾಜಕ್ಕೆ ತಿಳಿಸಿ, ಕಾಫಿಯ ಆಂತರಿಕ ಬಳಕೆಯನ್ನು ಹೆಚ್ಚಿಸುವ ಸದುದ್ದೇಶ ಹೊಂದಿದೆ. ಇದರ ಜೊತೆಯಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಉತ್ತಮ ಗುಣಮಟ್ಟದ ಪರಿಶುದ್ಧ ಕಾಫಿಯನ್ನು ವಿತರಿಸಲಾಗುವುದು ಎಂದು ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಗೌರವ ಕಾರ್ಯದರ್ಶಿ ಕೆ.ಬಿ. ಲೋಕೇಶ್ ತಿಳಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ಆಲೂರು: ಮೂಲಭೂತ ಸೌಕರ್ಯಗಳು, ಸೇವಾಭದ್ರತೆ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟ ಅವಧಿ ಪ್ರತಿಭಟನೆಯನ್ನು ನಡೆಸಿ ತಹಸೀಲ್ದಾರ್ ಸಿ.ಪಿ ನಂದಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಪ್ರವಾಸೋದ್ಯಮದಿಂದ ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ ಇದೆ
ವಿಶ್ವ ಪ್ರವಾಸೋದ್ಯಮ ಸಂಘಟನೆಯ ಅಧಿಕೃತ ಕಾರ್ಯಕ್ರಮಗಳೊಂದಿಗೆ ಬೇಲೂರಿನ ಹೋಟೆಲ್‌ ಮಯೂರ ವೇಲಾಪುರಿಯಲ್ಲಿ ಆಚರಿಸಲಾಗುತ್ತಿದ್ದು, ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವುದರೊಂದಿಗೆ, ಪ್ರವಾಸಿಗರ ಮತ್ತು ಸ್ಥಳೀಯರ ನಡುವೆ ಸಾಂಸ್ಕೃತಿಕ ವಿನಿಮಯವನ್ನು ಪೋಷಿಸುತ್ತದೆ, ಲಕ್ಷಾಂತರ ಮಂದಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಉದ್ಯೋಗ ಸೃಷ್ಟಿ ಮಾಡುವುದರೊಂದಿಗೆ ಸಮುದಾಯದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೂಡ ಸಹಕರಿಸುತ್ತದೆ ಎಂದು ಮಯೂರ ಯಗಚಿ ಹೋಟೆಲ್ ವ್ಯವಸ್ಥಾಪಕರಾದ ಪಾಪಣ್ಣ ಹೇಳಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved