• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈಟೆಕ್‌ ಬಸ್‌ ನಿಲ್ದಾಣಕ್ಕೆ ಜಾಗ ಕೊಡುವಂತೆ ಪಿಡಬ್ಲ್ಯುಡಿ ಸಚಿವರಿಗೆ ಮನವಿ
ಹೈಟೆಕ್ ಬಸ್ ನಿಲ್ದಾಣದ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಜನಾಭಿಪ್ರಾಯ ಸಭೆಯಲ್ಲಿ ಈಗ ಇರುವ ಸ್ಥಳದಲ್ಲೇ ವಿಸ್ತರಣೆ ಮಾಡಿ ಅಲ್ಲೇ ನಿರ್ಮಾಣ ಮಾಡಲು ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಲೋಕೋಪಯೋಗಿ ಇಲಾಖೆಗೆ ಸೇರಿರುವ ಸ್ವಲ್ಪ ಜಾಗವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು ಎಂದು ಶಾಸಕ ಎಚ್ ಕೆ ಸುರೇಶ್ ತಿಳಿಸಿದ್ದಾರೆ.
ಸೀತಾ ಮಹಿಳಾ ಸಂಘದ ಸದಸ್ಯರಿಗೆ ವೇದ ಪಾಠ
ಅರಸೀಕೆರೆ ಶ್ರೀರಾಮ ಮಂದಿರದಲ್ಲಿ ನಡೆಸುತ್ತಿರುವ ವೇದ ಪಾಠದಲ್ಲಿ ಸೀತಾ ಮಹಿಳಾ ಸಂಘದ ಪದಾಧಿಕಾರಿಗಳು ಸದಸ್ಯರು ಆಸಕ್ತಿಯಿಂದ ಕಲಿಯುತ್ತಿದ್ದಾರೆ ಎಂದು ಶೃಂಗೇರಿ ಮಠ ಮುದ್ರಾ ವೇಬ್ರಶ್ರೀ ರವಿ ಪುರಾಣಿಕ್‌ ಹೇಳಿದರು. ಮುಂದಿನ ದಿನಗಳಲ್ಲಿ ನಾರಾಯಣ ಸೂಕ್ತ ಮಂತ್ರ ಪುಷ್ಪ ಮತ್ತು ಶಾಂತಿಮಂತ್ರಗಳ ಸ್ತೋತ್ರಗಳನ್ನು ಹೇಳಿಕೊಡಲಾಗುವುದು ಎಂದರು.
ಹಳಿ ದುರಸ್ತಿ ಕಾರ್ಯ ಚುರುಕು
ಸಕಲೇಶಪುರ ಬಳಿಯ ಕಡಗರಹಳ್ಳಿ ಗ್ರಾಮದ ರೈಲ್ವೆಹಳಿ ಸಮೀಪ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಪಾಳಿಯ ಆಧಾರದ ಮೇಲೆ ೨೫೦ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು ದಿನದ ೨೪ ಗಂಟೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದೆ. ರಾಜ್ಯದ ವಿವಿಧೆಡೆಯಿಂದ ೭೫೦ ಕಾರ್ಮಿಕರು ರೈಲ್ವೆ ಹಳಿ ದುರಸ್ಥಿ ನಡೆಸುತ್ತಿದ್ದು ಕನಿಷ್ಠ ಇನ್ನೂ ೧೦ ದಿನಗಳ ಕಾಮಗಾರಿ ನಡೆಯಲಿದೆ. ನಂತರದ ಒಂದು ವಾರ ಕೇವಲ ಸರಕು ರೈಲು ಪ್ರಯಾಣಕ್ಕೆ ಮಾತ್ರ ಅವಕಾಶ ಆ ನಂತರದ ದಿನಗಳಲ್ಲಿ ಪ್ರಯಾಣಿಕರ ರೈಲಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸ್ಥಳೀಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿರಾಡಿಯಲ್ಲಿ ಮತ್ತೆ ಭಾರೀ ಪ್ರಮಾಣದ ಭೂ ಕುಸಿತ
ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ದೊಡ್ಡತಪ್ಲೆ ಬಳಿ ಮತ್ತೆ ಭೂ ಕುಸಿತ ಉಂಟಾಗಿದ್ದು, ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರವನ್ನು ಬಂದ್‌ ಮಾಡಲಾಗಿದೆ. ಭೂ ಕುಸಿತದ ಸಮಯದಲ್ಲಿ ಅದೇ ದಾರಿನಲ್ಲಿ ತೆರಳುತ್ತಿದ್ದ ನಾಲ್ಕು ಕಂಟೇನರ್‌ ಲಾರಿಗಳು ಮಣ್ಣಿನಲ್ಲಿ ಸಿಲುಕಿದ್ದು ಒಂದು ಕಂಟೇನರ್ ಲಾರಿ ಪ್ರಪಾತಕ್ಕೆ ಜಾರುವ ಹಂತದಲ್ಲಿದೆ. ಲಾರಿ ಚಾಲಕರು ಹಾಗೂ ನಿರ್ವಾಹಕರನ್ನು ಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಹೆದ್ದಾರಿ ಮೇಲೆ ಕುಸಿದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ.
ರಾಜ್ಯಸರ್ಕಾರಕ್ಕೆ ರಾಜ್ಯಪಾಲರ ನೋಟಿಸ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ರಾಜ್ಯಪಾಲರು ದ್ವೇಷದ ರಾಜಕಾರಣಕ್ಕಾಗಿ ಬಿಜೆಪಿಯ ಸತ್ಯ ಮರೆಮಾಚಿ ಸರ್ಕಾರಕ್ಕೆ ನೋಟಿಸ್ ನೀಡಿರುವುದನ್ನು ಕೂಡಲೇ ಹಿಂಪಡೆಯದೇ ಹೋದರೇ ಕರ್ನಾಟಕದಲ್ಲಿ ರಕ್ತಕ್ರಾಂತಿಗೆ ಸಿದ್ಧರಾಗಬೇಕಾಗುತ್ತದೆ ಎಂದು ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ ಬುಧವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಶಿರಾಡಿ ಘಾಟ್‌ಗೆ ಸಚಿವ ಕೃಷ್ಣಭೈರೇಗೌಡ ಭೇಟಿ
ಸಕಲೇಶಪುರ ತಾಲೂಕಿನ ಮಳೆಹಾನಿ ಪ್ರದೇಶಗಳನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ವೀಕ್ಷಣೆ ಮಾಡಿದರು. ನಂತರ ಮಾತನಾಡಿ ಕೇರಳದಲ್ಲಿ ಆದ ಘಟನೆಯಂತೆ ನಮ್ಮಲ್ಲೂ ಕೂಡ ಆಗಬಾರದು ಎಂದು ಹಲವಾರು ಮುನ್ನೆಚ್ಚರಿಕೆ ವಹಿಸಿದ್ದೇವೆ ಎಂದು ಹೇಳಿದರು. ಶಿರಾಡಿ ಬಳಿ ತಡೆಗೋಡೆಗಳನ್ನು ಎತ್ತರದಲ್ಲಿ ಕಟ್ಟಬೇಕಿತ್ತು ಆದರೆ ಕಟ್ಟಿಲ್ಲ. ಮತ್ತೆ ಕೆಲವು ಕಡೆ ರಸ್ತೆಗಳನ್ನು ಎತ್ತರ ಮಾಡಲಾಗಿದ್ದು ಇಂತಹ ಕಡೆ ರಸ್ತೆ ಬದಿಯಲ್ಲಿ ಆರ್‌.ಸಿ.ಸಿ ಹಾಕುವ ಬದಲು ಕಲ್ಲಿನಿಂದ ತಡೆಗೋಡೆ ಕಟ್ಟಿದ್ದಾರೆ, ಇದು ತಡೆಯುವುದಿಲ್ಲ. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಂಸ್ಥೆಗೆ ರಾಜ್ಯದ ಕೆಲವು ಹೆದ್ದಾರಿಗಳಲ್ಲಿ ಸರ್ವೆ ಮಾಡಲು ಹೇಳಿದ್ದೇನೆ. ಏಕೆಂದರೆ ರಸ್ತೆ ಡಿಸೈನ್‌ನಲ್ಲಿ ಬದಲಾವಣೆ ಬೇಕಾಗಿದೆ. ಭವಿಷ್ಯದಲ್ಲಿ ಯಾವುದೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
ನೆರೆಪೀಡಿತ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ
ಬೇಲೂರು ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿರುವ ಮನೆ ಮತ್ತು ಬೆಳೆ ನಾಶ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಅನ್ವಯ ಬೇಲೂರು ತಾಲೂಕು ದಂಡಾಧಿಕಾರಿಗಳಾದ ಮಮತಾರವರ ಸಹಕಾರದಿಂದ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಸ್.ಶಶಿಕಲಾರವರು ತಾಲೂಕು ದಂಡಾಧಿಕಾರಿಗಳು ಸಿದ್ಧಪಡಿಸಿರುವ ಮಳೆ ಹಾನಿಗೊಳಗಾಗಿರುವವರ ಪಟ್ಟಿಯನ್ನಾಧರಿಸಿ ಹಲವು ಪ್ರದೇಶಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.
ಕಾಲಿಗೆ ಗುಂಡು ಹಾರಿಸಿ ಕೊಲೆ ಆರೋಪಿ ಸೆರೆ
ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೌಶಿಕ ಗಡಿಯಲ್ಲಿರುವ ನಂದಿನಿ ಬೂತ್‌ನ ಮಾಲೀಕ ಸತೀಶ್‌ ಎಂಬಾತನನ್ನು ಸೋಮವಾರ ಬೆಳಗ್ಗೆ ಲಾಂಗ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪಿಗಳನ್ನು ಹಿಡಿಯಲು ಹೋದ ಪೊಲೀಸರ ಮೇಲೆಯೇ ಆರೋಪಿ ಕಾರು ಹತ್ತಿಸಿ ಲಾಂಗ್‌ ಬೀಸಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಅನಿರ್ದಿಷ್ಟಾವಧಿಗೆ ಮತ್ತೆ ಶಿರಾಡಿ ಬಂದ್‌
ರಾಷ್ಟ್ರೀಯ ಹೆದ್ದಾರಿ ೭೫ರ ದೊಡ್ಡತಪ್ಪಲೆ ಗ್ರಾಮದ ಸಮೀಪ ಮತ್ತೆ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್‌, ಟಿಪ್ಪರ್‌, ಎರಡು ಕಾರುಗಳು ಸೇರಿದಂತೆ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿದ್ದು ವಾಹನದಲ್ಲಿದ್ದವರೆಲ್ಲರನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ. ಮತ್ತೆ ಅನಿರ್ದಿಷ್ಟಾವಧಿಗೆ ಶಿರಾಡಿ ಬಂದ್‌ ಘಾಟ್‌ ಸಂಚಾರ ಬಂದ್‌ ಮಾಡಲಾಗಿದೆ.
ಕರಿಕಟ್ಟಿಹಳ್ಳಿ ಶಾಲೆಗೆ ಉಚಿತ ಟೀವಿ ಕೊಡುಗೆ
ಹಳೇಬೀಡು ಸಮೀಪದ ಕರಿಕಟ್ಟೆಹಳ್ಳಿ ಗ್ರಾಮದಲ್ಲಿ ವಿದ್ಯಾಂಜಲಿ ಕಾರ್ಯಕ್ರಮದಲ್ಲಿ ಗ್ರಾಮದ ಶಾಲೆಗೆ ಉಚಿತವಾಗಿ ೩೨ ಇಂಚಿನ ಟೀವಿಯನ್ನು ನೀಡಲಾಯಿತು. ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಅಡಿಯಲ್ಲಿ ನಿವೃತ್ತಿ ಶಿಕ್ಷಕರು, ಸರ್ಕಾರ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿಗಳು, ಹಾಗೂ ಹಳೆಯ ವಿದ್ಯಾರ್ಥಿ ಸ್ವಯಂಸೇವಕರು ಸೇರಿ ಈ ಚಟುವಟಿಕೆ ನಡೆಸಿದರೆ ಸರ್ಕಾರಿ ಶಾಲೆಗಳು ಉಳಿಯುತ್ತದೆ ಎಂದು ಶಿಕ್ಷಣ ಇಲಾಖೆಯ ಅಭಿಯಾನವಾಗಿದೆ ಎಂದು ಬೇಲೂರು ಕ್ಷೇತ್ರ ಶಿಕ್ಷಣ ಇಲಾಖೆಯ ಬಿ.ಆರ್‌.ಪಿ. ಮೋಹನ್ ರಾಜ್‌ ತಿಳಿಸಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved