• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಸರಪಳಿಗೆ ಶಾಸಕ ಮಂಜು ಚಾಲನೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮಕ್ಕೆ ಶಾಸಕ ಎ ಮಂಜು ಅವರು ಅರಕಲಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಡವಿನಹೊಸಳ್ಳಿಯಲ್ಲಿ ಚಾಲನೆ ನೀಡಿ, ಸಂವಿಧಾನ ಪೀಠಿಕೆ ಬೋಧಿಸಿ ಪ್ರತಿಜ್ಞೆ ಸ್ವೀಕರಿಸಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಕಟ್ಟಿರುವ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾನುವಾರ ಪ್ರಜಾಪ್ರಭುತ್ವ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಜಾಪ್ರಭುತ್ವ ದಿನವನ್ನು ಒಂದು ದಿನ ಆಚರಿಸದೆ ಪ್ರತಿದಿನ ಪಾಲಿಸಬೇಕು ಎಂದ ಅವರು, ಕರೆಗೆ ಓಗೊಟ್ಟು ಶಾಲಾಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಲು ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.
ಸಿಆರ್‌ಪಿಎಫ್ ಯೋಧ ರವಿಶಂಕರ್ ನಿಧನ
ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮದ ರಾಜೇಗೌಡರ ಒಬ್ಬನೇ ಮಗನಾದ ರವಿಶಂಕರ್ ಅವರು, ಅರಸೀಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಯೋಧರೊಬ್ಬರ ರಿಪೋರ್ಟ್ ಪಡೆಯಲು ಆಗಮಿಸಿದ್ದರು ಎನ್ನಲಾಗಿದೆ. ಶುಕ್ರವಾರ ಸಂಜೆ 6.15ರ ಸುಮಾರಿನಲ್ಲಿ ಸುಸ್ತು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯಲು ಹೊಳೆನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ್ದಾರೆ. ಕರ್ತವ್ಯದಲ್ಲಿ ಇದ್ದ ವೈದ್ಯರು ಯೋಧರ ಸಮಸ್ಯೆಯನ್ನು ಸರಿಯಾಗಿ ಕೇಳಿ ತಿಳಿದು ಚಿಕಿತ್ಸೆ ನೀಡದೇ ಮಾತ್ರೆ ಕೊಟ್ಟು ಕಳುಹಿಸಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿನಲ್ಲಿ ಮನೆಯಲ್ಲಿ ರವಿಶಂಕರ್‌ ಕುಸಿದು ಬಿದ್ದಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಕರೆತಂದಾಗ ಪರೀಕ್ಷಿಸಿದ ವೈದ್ಯರು ರವಿಶಂಕರ್‌ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಮೀನು ಸಾಕಣೆ ಹೆಚ್ಚು ಲಾಭಗಳಿಸುವ ಪೂರಕ ವೃತ್ತಿ
ರೈತರು ಹೊರ ಜಿಲ್ಲೆಗಳಿಂದ ಹೆಚ್ಚಿನ ದರದಲ್ಲಿ ಮೀನುಮರಿಗಳನ್ನು ಖರೀದಿಸುವ ಬದಲು ತಮ್ಮ ಸುತ್ತಮುತ್ತಲಿನ ನೀರು ಲಭ್ಯವಿರುವ ಕೆರೆಯ ಅಂಚಿನಲ್ಲಿ ಮೀನುಮರಿಗಳನ್ನು ಬೆಳೆದು ಕೆರೆಗೆ ದಾಸ್ತಾನು ಮಾಡಬಹುದು. ಸರ್ಕಾರವು ಈ ಯೋಜನೆಗೆ ಖರೀದಿ ವೆಚ್ಚ, ಸಗಣಿ ಗೊಬ್ಬರ, ಬಾಡಿಗೆ ವೆಚ್ಚ, ಆಹಾರ ಖರೀದಿಗೆ ಸಂಬಂಧಿಸಿದಂತೆ ಸಹಾಯಧನ ನೀಡಲಾಗುತ್ತದೆ ಎಂದು ಮೀನುಗಾರಿಕೆ ಜಂಟಿ ನಿರ್ದೇಶಕ ಮೈಸೂರು ಗಣೇಶ್‌ ಹೇಳಿದರು.
ದಲಿತರ ಸ್ವಾಭಿಮಾನದ ಬದುಕಿಗೆ ಶಿಕ್ಷಣ ಒಂದೇ ಮಾರ್ಗ
ಗುರುಮೂರ್ತಿ ಅವರ ಒಡಲ ಧ್ವನಿ ಕಾದಂಬರಿಯಲ್ಲಿ ನಮ್ಮ ಸಮಾಜದಲ್ಲಿ ದಲಿತರ ಬದುಕು, ಬವಣೆ ಮತ್ತು ಪ್ರಸ್ತುತ ಸನ್ನಿವೇಶಗಳನ್ನು ಕಟ್ಟಿಕೊಡುವ ಕೆಲಸ ಮಾಡಿದ್ದಾರೆ. ಇದು ದಲಿತ ಸಾಹಿತ್ಯದ ಹೊಸ ಮೈಲುಗಲ್ಲಾಗಲಿದೆ. ಏಕೆಂದರೆ ಗುರುಮೂರ್ತಿ ಅವರು ದಲಿತ ಚಳವಳಿಯ ಪ್ರೇರಣೆಯ ವ್ಯಕ್ತಿಯಾಗಿ ತಮ್ಮ ಅನುಭವವನ್ನು ಅಕ್ಷರ ರೂಪದಲ್ಲಿ ಹೊರತಂದಿದ್ದಾರೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ದಲಿತರು, ಶೋಷಿತರು ಮತ್ತು ತಳ ಸಮುದಾಯದವರು ಹಸಿವು ಮತ್ತು ಅಸ್ಪಶ್ಯತೆ, ಗುಲಾಮಗಿರಿಯಿಂದ ಹೊರಬಂದು ಸ್ವಾಭಿಮಾನದ ಬದುಕನ್ನು ಕಂಡುಕೊಳ್ಳಬೇಕಾದರೆ ಅಕ್ಷರದ ಬೆಳಕು ಅತಿ ಮುಖ್ಯವಾಗಿದೆ ಎಂದರು.
ಅಭಿವೃದ್ಧಿಗೊಳಿಸಿದ ದೊಡ್ಡಕೆರೆ ಲೋಕಾರ್ಪಣೆ
ಆಲಗೌಡನಹಳ್ಳಿ ದೊಡ್ಡಕೆರೆ ಅಂಗಳದಲ್ಲಿ ಹೂಳು ತುಂಬಿ ಸಾಮರ್ಥ್ಯ ಕಳೆದುಕೊಂಡಿದ್ದ ಕೆರೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾಳಜಿಯಿಂದಾಗಿ ಮರುಜೀವ ಪಡೆದುಕೊಂಡಿದ್ದರಿಂದ ಬಾಗಿನ ಸಮರ್ಪಿಸಿದ ಗ್ರಾಮಸ್ಥರು ಕೃಷಿ ಸಹಕಾರಿಯಾಗುವ ಕೆರೆ ಅಭಿವೃದ್ಧಿಗೊಳಿಸಿದ್ದಾರೆ. ಹೊಳೆನರಸೀಪುರ ಪಟ್ಟಣದಿಂದ ಮೈಸೂರಿಗೆ ತೆರಳುವಾಗಿನ ಹೆದ್ದಾರಿ ಪಕ್ಕದ ಆಲಗೌಡನಹಳ್ಳಿ ದೊಡ್ಡಕೆರೆ ಅಭಿವೃದ್ಧಿಗೊಳಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸದಸ್ಯರು ಶನಿವಾರ ಲೋಕಾರ್ಪಣೆ ಮಾಡಿದರು.
ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ
ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹೊಮ್ಮಿಸಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ರಾಜ್ಯ ರೈತ ಸಂಘದ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ತಿಳಿಸಿದರು. ಉದ್ಯಮಿಗಳು ತಮ್ಮ ಗ್ರಾಮಗಳಲ್ಲಿ ಇರುವಂತಹ ಶಾಲೆಗಳಿಗೆ ಪೂರಕವಾದ ವ್ಯವಸ್ಥೆಗಳನ್ನ ಹಾಗೂ ಸಹಾಯವನ್ನು ಮಾಡುವುದರಿಂದ ಸರ್ಕಾರಿ ಶಾಲೆಗಳು ಹಾಗೂ ಗ್ರಾಮೀಣ ಮಠದ ಶಾಲೆಗಳನ್ನು ಉಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಚೆಸ್ ಕ್ರೀಡೆ ಮಕ್ಕಳ ಮಾನಸಿಕ ಸ್ಥೈರ್ಯ ಹೆಚ್ಚಿಸುತ್ತದೆ
ಹಾಸನ ನಗರದ ಸಮೀಪ ಚಿಕ್ಕಕೊಂಡಗುಳ, ರಿಂಗ್ ರಸ್ತೆ ಬಳಿ ಇರುವ ರಾಯಲ್ ಅಪೋಲೊ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಜಿಲ್ಲಾ ಚೆಸ್ ಅಸೋಸಿಯೇಷನ್, ಕದಂಬ ಚೆಸ್ ಅಕಾಡೆಮಿ ಮತ್ತು ರಾಯಲ್ ಅಪೋಲೊ ಶಾಲೆಯ ಸಹಭಾಗಿತ್ವದೊಂದಿಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 15 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಫಿಡೆ ರೇಟೆಡ್ ಎರಡು ದಿನದ ಚೆಸ್ ಪಂದ್ಯಾವಳಿ ನಡೆಯಿತು. ಚೆಸ್ ಕ್ರೀಡೆ ಎಂಬುದನ್ನು ಮಕ್ಕಳಿಂದಲೇ ಅಳವಡಿಸಿಕೊಳ್ಳುವುದರಿಂದ ಮಾನಸಿಕ ಸ್ಥೈರ್ಯ ಹಾಗೂ ಅವರ ಮೆದುಳಿನ ಬುದ್ಧಿ ಚುರುಕುಗೊಳ್ಳುತ್ತದೆ ಎಂದು ರಾಯಲ್ ಅಪೋಲೊ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲ ಎಲ್.ಪಿ. ರವಿಕುಮಾರ್ ತಿಳಿಸಿದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯ ಪೈಪ್‌ ಒಡೆದು ಅಪಾರ ಪ್ರಮಾಣದ ನೀರು ಪೋಲು
ಎತ್ತಿನಹೊಳೆ ಪೈಪ್‌ಲೈನ್‌ ಹಾದುಹೋಗಿರುವ ತಾಲೂಕಿನ ಕುಂಬರಡಿ ಎಸ್ಟೇಟ್‌ನಲ್ಲಿ ಪೈಪ್ ಒಡೆದ ಪರಿಣಾಮ ತಗ್ಗು ಪ್ರದೇಶಕ್ಕೆ ನೀರು ನುಗ್ಗುತ್ತಿದ್ದು, ಇದರಿಂದ ತಗ್ಗು ಪ್ರದೇಶದಲ್ಲಿರುವ ಹಲವು ಮನೆಗಳಿಗೆ ಹಾಗೂ ಜಮೀನುಗಳಿಗೆ ನೀರು ನುಗ್ಗಿರುತ್ತದೆ. ಅಪಾರ ಪ್ರಮಾಣದ ನೀರು ಹರಿದಿರುವುದರಿಂದ ರಸ್ತೆಗಳು ಕೆರೆಯಂತಾಗಿರುತ್ತದೆ. ಪೈಪ್‌ಲೈನ್ ಮೂಲಕ ಹೆಬ್ಬನಹಳ್ಳಿಯವರೆಗೂ ನೀರನ್ನು ನಿರಂತರವಾಗಿ ಪಂಪ್ ಮಾಡುತ್ತಿರುವುದರಿಂದ ಅಲ್ಲಲ್ಲಿ ನೀರು ಲೀಕೆಜ್ ಆಗಲು ಕಾರಣವಾಗಿದೆ. ಕಳೆದ ವಾರವಷ್ಟೇ ಮೊದಲನೇ ಹಂತದ ಕಾಮಗಾರಿಗೆ ಸಿಎಂ ಹಾಗೂ ಡಿಸಿಎಂ ಚಾಲನೆ ನೀಡಿದ್ದರು. ಇದೀಗ ಉದ್ಘಾಟನೆಯಾದ ಮೊದಲನೇ ಹಂತದ ಕಾಮಗಾರಿಯ ಲೀಕೇಜ್ ಆಗುತ್ತಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.
ಈದ್ ಮಿಲಾದ್‌ ಹಿನ್ನೆಲೆ ಡಿವೈಎಸ್‌ಪಿ ನೇತೃತ್ವದಲ್ಲಿ ಶಾಂತಿ ಸಭೆ
ಪ್ರವಾದಿ ಮಹಮ್ಮದ್ ಪೈಗಂಬರ್ (ಸ)ರವರ ಜನ್ಮದಿನಾಚರಣೆ ಅಂಗವಾಗಿ ಬೇಲೂರಿನಲ್ಲಿ ನಡೆಯುವ ಶೋಭಾಯಾತ್ರೆ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಯಶಸ್ವಿಯಾಗಿ ಸಮುದಾಯದ ಮುಖಂಡರು ನಡೆಸಿಕೊಡಬೇಕು ಎಂದು ಡಿವೈಎಸ್ಪಿ ಲೋಕೇಶ್ ಮನವಿ ಮಾಡಿದರು. ಸರ್ಕಲ್ ಇನ್ಸ್ಪೆಕ್ಟರ್‌ ಜಯಪ್ರಕಾಶ್ ಮಾತನಾಡಿ, ಬೇಲೂರಿನ ಸೌಹಾರ್ದತೆ ನೋಡಿ ತುಂಬಾ ಸಂತೋಷವಾಗಿದೆ. ಇದೇ ರೀತಿ ಮುಂದುವರಿಸೋದು ನಮ್ಮ ಕರ್ತವ್ಯ. ಸಾರ್ವಜನಿಕರು ಮತ್ತು ತಮ್ಮೆಲ್ಲರ ಸಲಹೆ, ಸಹಕಾರದಿಂದ ಉತ್ತಮ ಸಮಾಜ ನಿರ್ಮಾಣ ಮಾಡೋಣ. ಯಾವುದೇ ರೀತಿಯ ದುಷ್ಟಶಕ್ತಿಗಳು ಕಂಡು ಬಂದರೆ ನಮಗೆ ಮಾಹಿತಿ ನೀಡಿ ನಿಮ್ಮ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದರು.
ಎರಡು ದಿನ ಚಿತ್ರಕಲಾ ಸ್ಪರ್ಧೆ ಆಯೋಜನೆ
ಹಾಸನ ಜಿಲ್ಲೆಯಲ್ಲಿ ಚಿತ್ರಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಕ್ಕಳಿಂದ ಸ್ಥಳದಲ್ಲೇ ಚಿತ್ರ ಬರೆಯುವ ಹಾಗೂ ಕಲಾಕೃತಿಗಳನ್ನು ಪ್ರದರ್ಶಿಸಿದ ಅತ್ಯುತ್ತಮ ಚಿತ್ರಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಚಿತ್ರಕಲಾವಿದ ಶಿವಕುಮಾರ್ ತಿಳಿಸಿದರು. ನಗರದ ಅರಳೀಕಟ್ಟೆ ವೃತ್ತದ ಬಳಿ ಇರುವ ಸಂಸ್ಕೃತ ಭವನದಲ್ಲಿ ಸೆ. 15 ಮತ್ತು 16ರಂದು ಎರಡು ದಿನಗಳ ಕಾಲ ಚಿತ್ರಕಲಾ ಸ್ಪರ್ಧೆ ಹಾಗೂ ಕಲಾಕೃತಿಗಳ ಪ್ರದರ್ಶನ ಆಯೋಜಿಸಲಾಗಿದೆ ಎಂದು ಚಿತ್ರಕಲಾವಿದ ಶಿವಕುಮಾರ್ ತಿಳಿಸಿದರು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved