• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನರಾಯಪಟ್ಟಣದಲ್ಲಿ ಪುರಸಭೆಯಿಂದ ಗಿಡ ನೆಡುವ ಕಾರ್ಯ
ಚನ್ನರಾಯಪಟ್ಟಣದ 9ನೇ ವಾರ್ಡ್‌ನ, ನಾಗಸಮುದ್ರ ರಸ್ತೆ ಬಳಿ ಹತ್ತಾರು ವರ್ಷಗಳಿಂದ ಕಸ ಎಸೆಯುವ ಬ್ಲಾಕ್‌ಸ್ಪಾಟ್ ಆಗಿತ್ತು. ಆ ಭಾಗದಲ್ಲಿ ಇಂದು ಕಸವನ್ನು ತೆರವು ಮಾಡಿ, ಗಿಡಗಳನ್ನು ನೆಟ್ಟಿದ್ದಾರೆ ಎಂದು ಪುರಸಭೆ ಮುಖ್ಯ ಅಧಿಕಾರಿ ಹೇಮಂತ್ ಹೇಳಿದರು. ಚನ್ನರಾಯಪಟ್ಟಣದಲ್ಲಿ ಪುರಸಭೆಯಿಂದ ಹಮ್ಮಿಕೊಂಡ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡೆಂಘೀ ಕಾಯಿಲೆಗೆ ವೈದ್ಯ ವಿದ್ಯಾರ್ಥಿ ಸಾವು
ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ಕುಶಾಲ್ ಡೆಂಘೀ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ಅವರ ತಾಯಿ ರೇಖಾ ಅವರು ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲೇ ಡೆಂಘೀ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಕುಶಾಲ್ ತಂದೆ ಮಂಜುನಾಥ್ ಅವರ ಸ್ಥಿತಿ ಜತೆಗೆ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳು ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
40 ಬೇಡಿಕೆಗಳ ಈಡೇರಿಕೆಗೆ ಅರಸೀಕೆರೆಯಲ್ಲಿ ರೈತ ಸಂಘ ಆಗ್ರಹ
ರೈತರು ವಂಶ ಪಾರಂಪರೆಯವಾಗಿ ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರಿಗೆ ಮಂಜೂರು ಮಾಡಿಕೊಳ್ಳಬೇಕು ಸೇರಿದಂತೆ ಸುಮಾರು 40 ಬೇಡಿಕೆಗಳು ಒಳಗೊಂಡಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜುಲೈ 23ರಂದು ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು.
ಹಾಸನದಲ್ಲಿ ಸ್ವಾತಂತ್ರ‍್ಯ ದಿನಾಚರಣೆಗೆ ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಮೂಡಿಬರಲು ಅಗತ್ಯ ಸಿದ್ಧತೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಸೂಚಿಸಿದರು. ಹಾಸನದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಸ್ವಯಂ ಉದ್ಯೋಗದಿಂದ ಉತ್ತಮ ರೀತಿ ಬದುಕಿ: ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಆರ್.ಟಿ. ದ್ಯಾವೇಗೌಡ
ಉದ್ಯೋಗ ಸೃಷ್ಟಿ ಮಾಡುವಂತಹ ಸ್ವಯಂ ಉದ್ಯೋಗ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕುವಂತರಾಗಬೇಕು ಎಂದು ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ ಸಲಹೆ ನೀಡಿದರು. ಹಾಸನದಲ್ಲಿ ಸ್ಟಾರ್ಟಪ್ಸ್‌ ಕುರಿತ ಎರಡು ದಿನಗಳ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೇಡಿಕೆ ಈಡೇರಿಸದಿದ್ದರೆ ಡಿಸಿ ಕಚೇರಿ ಮುಂದೆ ಪ್ರತಿಭಟನೆ
ರೈತರು ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವತಃ ವೆಚ್ಚವನ್ನು ಭರಿಸಬೇಕೆಂದು ಸರ್ಕಾರ ತೀರ್ಮಾನಿಸಿದೆ. ಈ ತೀರ್ಮಾನವು ರೈತರಿಗೆ ಹೊರೆಯಾಗಿದ್ದು, ೨ ರಿಂದ ೩ ಲಕ್ಷ ರು. ದೊಡ್ಡ ಮೊತ್ತದ ವೆಚ್ಚವನ್ನು ರೈತರು ಭರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದು, ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ. ರಘು ಎಚ್ಚರಿಸಿದರು.
ಮಾಲೆಕಲ್‌ ಲಕ್ಷ್ಮೀ ವೆಂಕಟರಮಣ ಸ್ವಾಮಿ ಮಹಾರಥೋತ್ಸವ ಸಂಪನ್ನ
ಆಷಾಢಮಾಸದ ದ್ವಾದಶಿಯಂದು ನಡೆಯುವ ಏಕೈಕ ಜಾತ್ರಾ ಮಹೋತ್ಸವ ಮಾಲೆಕಲ್‌ ಅಮರಗಿರಿ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಮಹಾ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವೋಪೇತವಾಗಿ ಜರುಗಿತು. ವಿಶೇಷವಾಗಿ ನೂತನ ವಧು-ವರರು ಬೆಟ್ಟದ ಮೇಲೆ ನೆಲೆಸಿರುವ ಪದ್ಮಾವತಿ ಸಮೇತನಾದ ವೆಂಕಟರಮಣನ ದರ್ಶನ ಮಾಡಿ, ನಂತರ ರಥೋತ್ಸವದಲ್ಲಿ ಪಾಲ್ಗೊಂಡರೆ, ಮನದ ಇಷ್ಟಾರ್ಥ ಈಡೇರುತ್ತವೆ ಎಂಬ ನಂಬಿಕೆ ಭಕ್ತರಲ್ಲಿ ಇರುವುದಿರಂದ ಇಲ್ಲಿನ ರಥೋತ್ಸವದಲ್ಲಿ ನೂತನ ವಧುವರರು ಹೆಚ್ಚಾಗಿ ಕಾಣುವುದು ವಿಶೇಷ.
ರೈಲ್ವೆ ಇಲಾಖೆಯಲ್ಲಿ ಅಭಿವೃದ್ಧಿಯ ಹೊಸ ಮುನ್ನುಡಿ
ಹಾಸನದ ಕೆ. ಎಸ್‌.ಆರ್ .ಟಿ.ಸಿ ಹೊಸ ಬಸ್ ನಿಲ್ದಾಣದ ಎದುರಿನ ಮತ್ತೊಂದು ಮಾರ್ಗದ ಮೇಲ್ಸೇತುವೆ ಕಾಮಗಾರಿಯನ್ನು ರಾಜ್ಯ ಸರ್ಕಾರದ ಅನುದಾನಕ್ಕೆ ಕಾಯದೆ ಶೀಘ್ರವೇ ಪೂರ್ಣಗೊಳಿಸಲಾಗುವುದು. ಹಾಸನ - ಬೇಲೂರು - ಚಿಕ್ಕಮಗಳೂರು ನಡುವಿನ ರೈಲ್ವೆ ಮಾರ್ಗಕ್ಕೆ ಈಗಾಗಲೇ ಅನುಮೋದನೆ ದೊರೆತಿದ್ದು, ಅಗತ್ಯ ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹಾಸನ - ಬೇಲೂರು - ಚಿಕ್ಕಮಗಳೂರು ಹೊಸ ರೈಲು ಮಾರ್ಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.
ಹಾಸನದಲ್ಲಿ ಆರ್ಭಟಿಸಿದ ಪುನರ್ವಸು ಮಳೆ
ಈ ಹಿಂದಿನ ಯಾವ ಆಷಾಢದಲ್ಲೂ ಹಾಸನ ನಗರದಲ್ಲಿ ಈ ರೀತಿಯ ಸೋನೆ ಮಳೆ ಸುರಿದಿರಲಿಲ್ಲ. ಕಳೆದ ವರ್ಷವಂತೂ ಇದೀಗ ಬರುತ್ತಿರುವ ಮಳೆಯ ಅರ್ಧ ಭಾಗವೂ ಬರಲಿಲ್ಲ. ಆದರೆ ಈ ಬಾರಿ ಮಳೆಯ ಜತೆಗೆ ಸಂಪೂರ್ಣ ಮೋಡ ಮುಸುಕಿದ ವಾತಾವರಣ. ಆದರೆ ಚಳಿ ಇಲ್ಲ. ಇಂತಹ ವಾತಾವರಣ ಸಕಲೇಶಪುರ, ಚಿಕ್ಕಮಗಳೂರು, ಮಡಿಕೇರಿಗಳಲ್ಲಿ ಕಾಣಸಿಗುತ್ತಿತ್ತು. ಅದನ್ನು ನೋಡಲೆಂದೇ ಇಲ್ಲಿನ ಜನರು ಅಲ್ಲಿಗೆ ಹೋಗುತ್ತಿದ್ದರು. ಆದರೆ, ಮಲೆನಾಡ ಅನುಭವವನ್ನು ಈ ಬಾರಿ ಇಲ್ಲಿಯೇ ಅನುಭವಿಸುವಂತಾಗಿದೆ.
ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆ: ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್‌

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರಗಿನ 7 ಕಿ.ಮೀ. ರಸ್ತೆ ನರಕ ಸದೃಶವಾಗಿ ಬದಲಾಗಿದೆ.  

  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved