• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಕಾಲೇಜುಗಳ ಮಾಲೀಕರೊಂದಿಗೆ ಸರ್ಕಾರ ಶಾಮೀಲು
ಕಾಲೇಜುಗಳು ಆರಂಭವಾಗಿ ಈಗಾಗಲೇ ಒಂದೂವರೆ ತಿಂಗಳು ಕಳೆಯುತ್ತಿದ್ದರೂ ಈವರೆಗೆ ಸಮರ್ಪಕ ಬೋಧಕ ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಲು ಆಗಿಲ್ಲ. ಪ್ರಾಂಶುಪಾಲರೇ ಕಸ ಗುಡಿಸುವಂತಾಗಿದೆ. ಸರ್ಕಾರಕ್ಕೆ ಏನು ಕಾಯಿಲೆ ಹಿಡಿದಿದೆ. ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರು ಇಲ್ಲ ಎಂದು ವಿದ್ಯಾರ್ಥಿಗಳು ಖಾಸಗಿ ಕಾಲೇಜಿಗೆ ಹೋಗುತ್ತಾರೆ. ಅರೆಕಾಲಿಕ ಉಪನ್ಯಾಸಕರನ್ನೋ ಇಲ್ಲವೇ ಕಾಯಂ ಉಪನ್ಯಾಸಕರನ್ನಾದರೂ ಹಾಕಿ. ಬಡವರ ಬಗ್ಗೆ ಮೊದಲು ಚಿಂತನೆ ಮಾಡಿ. ಬಡವರ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಬದಲಾಗಿ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿರುವ ಸರ್ಕಾರ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮುಗಿಯುವುದನ್ನು ಕಾಯುತ್ತಿದೆ ಎಂದು ಶಾಸಕ ರೇವಣ್ಣ ಆರೋಪಿಸಿದರು.
ಮಾಡಾಳು ಶ್ರೀ ಮೂಲ‌ಸ್ವರ್ಣ ಗೌರಮ್ಮನವರ ದರ್ಶನಕ್ಕೆ ಭಕ್ತ ಸಾಗರ
ಕೋಡಿಮಠ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಮಾಡಾಳು ಗ್ರಾಮ ಯರೇಹಳ್ಳಿ ರಸ್ತೆ ಶ್ರೀ ಚನ್ನಬಸವೇಶ್ವರ ಚಲನಚಿತ್ರ ಮಂದಿರ ಹತ್ತಿರನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯದಲ್ಲಿ ನಿರ್ಮಿಸಲಾಗಿರುವ ಶ್ರೀ ಮೂಲ ಸ್ವರ್ಣಗೌರಿ ಅಮ್ಮನವರ ಇತಿಹಾಸದ ಹೇಳಿಕೆ ನಂತರ ಪ್ರತಿದಿನ‌ ಸಾವಿರಾರು ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಚಿನ್ನದ ಮೂಗುತಿ ಸಹಿತ ಅಮ್ಮನವರನ್ನು ದರ್ಶನ ಮಾಡುತ್ತಿದ್ದಾರೆ. ತಪಸ್ವಿ ಶಿವಲಿಂಗಜ್ಜಯ್ಯ ಸುಮಾರು 170 ವರ್ಷಗಳ ಹಿಂದೆ ನೀಡಿದ್ದ ಮೂಗುತಿ ಧರಿಸುತ್ತಿರುವ ಅಮ್ಮನವರ ದರ್ಶನದಿಂದ ಕಷ್ಟ ಕಾರ್ಪಣ್ಯಗಳು ಬಗೆಹರಿಯುತ್ತದೆ ಎಂದು ಭಕ್ತ ಕೋಟಿಯ ನಂಬಿಕೆಯಾಗಿದೆ.
ಚನ್ನಾಂಬಿಕ ಥಿಯೇಟರ್‌ ಎದುರು ಮತ್ತೊಂದು ಅಂಡರ್‌ಪಾಸ್‌
ಪಟ್ಟಣದ ಒಳಗಿರುವ ಬಿಎಚ್ ರಸ್ತೆ ವಾಹನ ದಟ್ಟ ಸಂಚಾರ ಇದ್ದು, ದ್ವಿಮುಖ ರಸ್ತೆಯಾಗಿ ಅಗಲೀಕರಣಗೊಳಿಸುವ ಕಾಮಗಾರಿ ಪ್ರಾರಂಭಿಸಲಾಗುವುದು. ಹೇಮಾವತಿ ವೃತ್ತದ ಆಂಜನೇಯ ರೈಸ್‌ಮಿಲ್ ಸಮೀಪ ಅಂಡರ್‌ಪಾಸ್‌ನಿಂದ ಪಶುವೈದ್ಯಕೀಯ ಆಸ್ಪತ್ರೆ ಮುಂಭಾಗದ ರಸ್ತೆ ವಿಭಜಕಕ್ಕೆ ಸಂಪರ್ಕಿಸಲಾಗುವುದು. ನಂತರ ರೈಲ್ವೇ ನಿಲ್ದಾಣದ ಮುಂಭಾಗದ ಬೈಪಾಸ್ ಅಗಲೀಕರಣಗೊಳಿಸಿ ದ್ವಿಮುಖ ರಸ್ತೆಯನ್ನಾಗಿಸಿ ಹಾಸನ ಕಡೆಗಿನ ರೈಲ್ವೇ ಮೇಲ್ಸೇತುವೆವರೆಗೂ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣದ ಚೆನ್ನಾಂಬಿಕ ವೃತ್ತದ ಸಮೀಪ ಹಿಂದಿನ ರೈಲ್ವೆ ಹಳಿಯ ಅಡಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ಇನ್ನೊಂದು ಅಂಡರ್‌ಪಾಸ್ ನಿರ್ಮಿಸಲು ಹಣ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ಶಾಸಕರ ವಿರೋಧಿ ನೀತಿ ಖಂಡಿಸಿ ಅಡ್ಡೆಗಾರರ ಪ್ರತಿಭಟನೆ
ಚನ್ನಕೇಶವಸ್ವಾಮಿ ದೇವಸ್ಥಾನದ ಮುಂಭಾಗ ಪುರಾತನ ಕಾಲದಿಂದಲೂ ಸೇವೆ ಸಲ್ಲಿಸುತ್ತಿರುವ ಅಡ್ಡೆಗಾರರ ವಿರುದ್ಧ ಟೆಂಡರ್ ಪ್ರಕ್ರಿಯೆ ಕರೆದಿರುವುದನ್ನು ವಿರೋಧಿಸಿ ಅಡ್ಡೆಗಾರರು ಹಾಗೂ ೮ ಮೂಲೆಯ ನಾಡ ಪಟೇಲರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿದರು. ಶ್ರೀ ಚನ್ನಕೇಶವ ಸ್ವಾಮಿ ದೇಗುಲದ ತಲೆತಲಾಂತರದಿಂದ ನಡೆದುಕೊಂಡುಬಂದ ಸಂಪ್ರದಾಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಭಕ್ತರಿಗೆ ಹಾಗೂ ಅಡ್ಡೆಗಾರರಿಗೆ ತೊಂದರೆ‌ ಕೊಡುತ್ತಿರುವ ಶಾಸಕರ ವಿರುದ್ಧ ತಾಲೂಕಿನ ಜನತೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ವಿಕಾಸಪರ್ವ ಚಿತ್ರ ರಾಜ್ಯಾದ್ಯಂತ ಬಿಡುಗಡೆ
ವಿಕಾಸಪರ್ವ ಸಿನಿಮಾ ತುಂಬಾ ಸೂಕ್ಷ್ಮ ವಿಷಯ ಆಧಾರಿತ ಸಿನಿಮಾವಾಗಿದೆ. ಸಿನಿಮಾ ನೋಡಿದವರು ಇದು ನನ್ನ ಜೀವನದ ಕಥೆಯನ್ನ ಸಿನಿಮಾ ಮಾಡಿ ತೆರೆಯ ಮೇಲೆ ಬರುತ್ತಿದೆ ಎಂಬಂತೆ ಭಾವಿಸುತ್ತಾರೆ. ಸಿನಿಮಾದಲ್ಲಿ ಎಲ್ಲಿಯೂ ಅಬ್ಬರ ಇಲ್ಲ, ಮೂರು ಹಾಡುಗಳು, ಎರಡು ಫೈಟ್ ಗಳು ಇವೆ. ಸಕಲೇಶಪುರ ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಸಿನಿಮಾ ಚಿತ್ರೀಕರಿಸಲಾಗಿದೆ. ಜನರು ಸಿನಿಮಾ ನೋಡಿ ಹಾರೈಸುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ಎಂದು ನಾಯಕ ನಟ ರೋಹಿತ್ ನಾಗೇಶ್
ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ನೆಮ್ಮದಿ: ಶಾಸಕ ಎಚ್.ಕೆ.ಸುರೇಶ್
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡೆ ಮತ್ತು ಯೋಗದ ಅವಶ್ಯಕತೆ ಇದೆ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಬೇಲೂರಿನಲ್ಲಿ ಕ್ರೀಡಾಕೂಟದಲ್ಲಿ ಮಾತನಾಡಿದರು.
ಕ್ರೀಡೆಗಳಿಂದ ಉತ್ತಮ ಬಾಂಧವ್ಯ ವೃದ್ಧಿ: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಿ.ಎಂ.ಮಹಾಲಿಂಗಯ್ಯ
ಕ್ರೀಡಾಕೂಟದಲ್ಲಿ ಯಾರೇ ಗೆದ್ದರೂ ನಮ್ಮ ವಿದ್ಯಾರ್ಥಿಗಳು ಎಂಬ ಮನಸ್ಥಿತಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಲ್ಲಿ ಇರಬೇಕು. ಆದ್ದರಿಂದ ಎಲ್ಲರೂ ಸೋಲು ಗೆಲುವನ್ನು ಸಮಾನಭಾವದಿಂದ ಸ್ವೀಕಾರ ಮಾಡುವ ಜತೆಗೆ ಕ್ರೀಡೆಯನ್ನು ಗೆಲ್ಲಿಸಿ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಮುಡಾ ಹಗರಣದಲ್ಲಿ ಹೈಕೋರ್ಟ್‌ ಅಸ್ತು ಎಂದರೆ ಸಿಎಂ ರಾಜೀನಾಮೆ ನೀಡಲಿ: ಮಾಜಿ ಸಂಸದ ಪ್ರತಾಪ್ ಸಿಂಹ

ಮುಡಾ ಹಗರಣ ಸಂಬಂಧ   ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದರು 

ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಅ.೨೦ಕ್ಕೆ ವಿಚಾರ ಸಂಕಿರಣ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್
ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು ಬೃಹತ್ ವಿಚಾರ ಸಂಕಿರಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಅ.೨೦ರಂದು ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅನಕ್ಷರಸ್ಥರಿಗೆ ಅಕ್ಷರ ಕಲಿಸಲು ಎಲ್ಲರೂ ಮುಂದಾಗಿ: ಜಿಲ್ಲಾಧಿಕಾರಿ ಸಿ.ಸತ್ಯಭಾಮ
ಅಕ್ಷರ ಕಲಿಸುವ ಕೆಲಸವನ್ನು ಸರ್ಕಾರದ ಇಲಾಖೆ ಮಾಡುವುದರ ಜತೆಗೆ ಸಂಘಟನೆಗಳು, ಎಲ್ಲಾ ಸಂಘ ಸಂಸ್ಥೆಗಳು ಕೈಜೋಡಿಸಿ ಅಕ್ಷರ ಕಲಿತವರು ಕಲಿಯದವರಿಗೆ ಕಲಿಸೋಣ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕರೆ ನೀಡಿದರು. ಹಾಸನದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved