• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯಕ್ಕೆ ತಿರುವು ನೀಡಿದವರು ಅನಕೃ
ಪ್ರಸ್ತುತ ಕನ್ನಡ ಭಾಷೆ ಇಷ್ಟೊಂದು ಉನ್ನತ ಸ್ಥಿತಿಯಲ್ಲಿ ವಿಜೃಂಭಿಸುತ್ತಿದೆ ಎಂದರೆ ಅದರ ದೊಡ್ಡ ಶ್ರೇಯಸ್ಸು ಅನಕೃ ಅವರಿಗೆ ಸಲ್ಲುತ್ತದೆ ಎಂದು ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ತಿಳಿಸಿದರು. ಅನಕೃ ಭಾಷಣವನ್ನು ಎಲ್ಲರೂ ಕುಳಿತು ಕೇಳುತ್ತಿದ್ದರು. ಅವರು ಯುವಕರನ್ನು ಪ್ರೋತ್ಸಾಹಿಸುವ ವಾಕ್‌ಚಾತುರ್ಯ ಹೇಗಿತ್ತು ಎಂದರೆ, ಒಮ್ಮೆ ಅನಕೃ ಅವರನ್ನು ಭಾಷಣ ಮಾಡಲು ಕರೆಯಲು ಬಂದಾಗ, ಅವರನ್ನು ನನ್ನ ಕೊಠಡಿಗೆ ಕರೆದುಕೊಂಡು ಬಂದು ನೀವು ಇವರ ಊರಿಗೆ ಹೋಗಿ ಭಾಷಣ ಮಾಡಬೇಕೆಂದು ಹೇಳಿದರು. ಈ ವೇಳೆ ನೀವ್ಯಾಕೆ ಬಂದಿರಿ ನಾನೇ ಬರುತ್ತಿದ್ದೆ ಎಂದಾಗ ನಿಮ್ಮ ನೋಡಬೇಕು ಎನಿಸಿತು ಬಂದೆ ಎಂದು ಹೇಳಿದರು. ಅಂದರೆ, ಬೆಳೆಯುವ ಚೈತನ್ಯಕ್ಕೆ ಅವಕಾಶ ಒದಗಿಸಬೇಕು ಎಂದು ಹೇಳುತ್ತಿದ್ದರು ಎಂದರು.
ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸಬೇಕಿದೆ
ಮುಂದಿನ ಪೀಳಿಗೆ ಆರೋಗ್ಯವಾಗಿರಲು ಪರಿಸರ ಅತ್ಯವಶ್ಯಕವಾಗಿದ್ದು, ಪರಿಸರವನ್ನು ರಕ್ಷಣೆ ಮಾಡುವುದರ ಜೊತೆಗೆ ಪ್ರತಿಯೊಬ್ಬರು ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಕೆ. ಪಾಲಾಕ್ಷ ಹೇಳಿದರು. ಟೈಮ್ಸ್ ಗಂಗಾಧರ್ ಅವರು ಪ್ರತಿ ವರ್ಷ ೧೦ ಸಾವಿರ ಸಸಿಗಳನ್ನು ತಮ್ಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದಾರೆ, ಮಕ್ಕಳು ಹಾಗೂ ಪೋಷಕರು ಅವರ ಕಾಳಜಿಯನ್ನು ಅರ್ಥ ಮಾಡಿಕೊಂಡು ಸಸಿ ಪಡೆದು ಅವುಗಳನ್ನು ಸಂರಕ್ಷಿಸಿ ಮಕ್ಕಳನ್ನು ಹೇಗೆ ಜೋಪಾನವಾಗಿ ಬೆಳೆಸುತ್ತಾರೋ ಹಾಗೆ ಸಸಿಗಳನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.
ಅರೇಹಳ್ಳಿಯಲ್ಲಿ ಮನೆಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ
ಮುಂದಿನ ದಿನಗಳಲ್ಲಿ ಮನೆ ಮನೆಗೆ ಪೊಲೀಸರು ಬಂದಾಗ ಪೊಲೀಸ್ ಇಲಾಖೆ ವ್ಯಾಪ್ತಿಗೊಳಪಡುವ ಯಾವುದೇ ಸಮಸ್ಯೆಗಳಿದ್ದರೂ ಆತಂಕ ಬಿಟ್ಟು ನಿರ್ಭಯವಾಗಿ ತಿಳಿಸಿ. ಅದರಿಂದ ನಿಮ್ಮ ಸಮಸ್ಯೆಗಳು ಸಾಧ್ಯವಾದಷ್ಟು ಮನೆಯಲ್ಲಿಯೇ ಬಗೆಹರಿಯುತ್ತದೆ. ಅಲ್ಲದೆ ಪೊಲೀಸರ ಹಾಗು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ವೃದ್ಧಿಯೊಂದಿಗೆ ಜನಸ್ನೇಹಿ ಪೊಲೀಸರಾಗಲು ಅವಕಾಶ ದೊರಕುತ್ತದೆ ಮತ್ತು ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಇದು ಸಹಕಾರಿಯಾಗುತ್ತದೆ ಎಂದರು. ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೆ ತಂದಿದ್ದು ಈ ಹಿನ್ನೆಲೆಯಲ್ಲಿ ಅರೇಹಳ್ಳಿ ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಾಸವಿ ವನಿತ ಸಂಘದಿಂದ ವೈವಿಧ್ಯಮಯ ಆಹಾರ ಮೇಳ
ವಾಸವಿ ವನಿತಾ ಮಹಿಳಾ ಸಂಘದ ಅಧ್ಯಕ್ಷೆ ಜ್ಯೋತಿ ಸುರೇಶ್ ಮಾತನಾಡಿ, ನಮ್ಮ ಸಂಘದಿಂದ ವಿವಿಧ ಬಗೆಯ ರುಚಿಕರ ತಿನಿಸುಗಳನ್ನು ಒಂದೇ ಕಡೆ ಪರಿಚಯಿಸುವ ಉದ್ದೇಶದಿಂದ ಈ ಮೇಳ ಹಮ್ಮಿಕೊಳ್ಳಲಾಗಿದ್ದು ಸಾಂಪ್ರದಾಯಿಕ ಅಡುಗೆಗಳನ್ನು ಪರಿಚಯಿಸುತ್ತಿದ್ದೇವೆ. ಮನೆಯಲ್ಲಿ ಮಾಡಿದ ಖಾದ್ಯಗಳನ್ನು ತಯಾರಿಸಿದ ತಾಜಾ ಮತ್ತು ಆರೋಗ್ಯಕರ ಆಹಾರ ಪದಾರ್ಥಗಳನ್ನು ತಯಾರಿಸಿ ಮಾಡಿಕೊಂಡು ಬಂದಿದ್ದು ಈ ಒಂದು ಅಡುಗೆ ಮೇಳೆ ವಿಶೇಷ ಎನಿಸಿದೆ ಎಂದರು. ಎಲ್ಲರೂ ಜಂಕ್‌ಫುಡ್‌ಗಳ ರಾಸಾಯನಿಕ ಮಿಶ್ರಿತ ಆಹಾರ ಸೇವಿಸಿ ತಮ್ಮ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಅದು ಬಿಟ್ಟು ಮನೆಯಲ್ಲಿ ತಯಾರಿಸಿದ ಅಡುಗೆಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಆರೋಗ್ಯ ಇಲಾಖೆ ಸಿಬ್ಬಂದಿಗೆ ಹೆಪಟೈಟಿಸ್ ಬಿ ಲಸಿಕೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ವೈರಲ್ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಗೆ ಹೆಪಟೈಟಿಸ್ ಬಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಗರದ ಬೀರನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು. ಹೆಪಟೈಟಿಸ್ ಬಿ ವಿಶ್ವದಲ್ಲಿ ಅತ್ಯಂತ ಗಂಭೀರವಾದ ಪಿತ್ತಜನಕಾಂಗದ ಸೋಂಕಿನ ಕಾಯಿಲೆ ಅಗಿದ್ದು, ಹೆಪಟೈಟಿಸ್ ಬಿ ವೈರಸ್ ಮೂಲಕ ಹರಡುತ್ತದೆ. ಈ ಕಾಯಿಲೆಯಿಂದ ೩೦ ಲಕ್ಷಕ್ಕೂ ಹೆಚ್ಚು ಜನರು ದೀರ್ಘಕಾಲದ ಸೋಂಕಿನಿಂದ ಬದುಕುತ್ತಿದ್ದಾರೆ. ೧ ಲಕ್ಷಕ್ಕೂ ಹೆಚ್ಚು ಜನ ಹೆಪಟೈಟಿಸ್ ಬಿ ವೈರಸ್‌ನಿಂದ ಸಾಯುತ್ತಿದ್ದಾರೆ ಎಂದರು.
ಅಕಾಲಿಕ ಸಾವುಗಳಿಗೆ ಅನಾರೋಗ್ಯವಷ್ಟೇ ಕಾರಣವಲ್ಲ
ಮನುಷ್ಯನ ದೇಹದಲ್ಲಿ ಆರೋಗ್ಯ ಸಮಸ್ಯೆ ಹಾಗೂ ಹೃದಯಾಘಾತ ಹೆಚ್ಚಾಗಲು ಆಹಾರ ಪದ್ದತಿಯೇ ಕಾರಣವಲ್ಲ. ಯಾಕೆಂದರೆ ನಿತ್ಯ ವ್ಯಾಯಾಮ ಮಾಡುವ, ನಿಯಮಿತವಾದ ಸಾತ್ವಿಕ ಆಹಾರವನ್ನೇ ಸೇವಿಸುವವರಿಗೂ ಹೃದಯಾಘಾತವಾಗಿದೆ. ಹೃದಯಾಘಾತಕ್ಕೆ ಮಾನಸಿಕ ಸ್ಥಿತಿ, ದ್ವೇಷ, ಅಹಂಕಾರ, ಅಸೂಯೆಯೂ ಕಾರಣವಾಗಿದೆ ಎಂದು ತಜ್ಞ ವೈದ್ಯರಾದ ವಿವೇಕ ಜಾಗೃತಿ ಬಳಗದ ಡಾ. ಮಾಧವ ಪೈ ತಿಳಿಸಿದರು. ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತಮ ಪಡಿಸಿಕೊಂಡು ಸದಾ ಸಕಾರಾತ್ಮಕ ಚಿಂತನೆಗಳಿಂದ ಮಾತ್ರ ಬದುಕಿರುವವರೆಗೂ ಆರೋಗ್ಯದಿಂದ ಇರಬಹುದು.
ಬ್ರಾಹ್ಮಣ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ
ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ಬಗ್ಗೆ ವಿರೋಧ ಹೇಳಿಕೆಗಳನ್ನು ನೀಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಬೇಸರ ವ್ಯಕ್ತಪಡಿಸಿದರು. ಸನಾತನ ಧರ್ಮ ಮತ್ತು ಬ್ರಾಹ್ಮಣರ ಕುರಿತು ಡಿಎಂಕೆ ನಾಯಕ ಸ್ಟಾಲಿನ್, ಅವರ ಮಗ ಉದಯ ನಿಧಿ ಬೇಕಾಬಿಟ್ಟಿ ಹೇಳಿಕೆ ನೀಡಿ ನಿಂದಿಸುತ್ತಿದ್ದಾರೆ. ಮೈಸೂರಿನಲ್ಲಿ ಭಗವಾನ್ ಎಂದು ಹೆಸರಿಟ್ಟುಕೊಂಡಿರುವ ಸಮಾಜ ಚಿಂತಕ, ಬ್ರಾಹ್ಮಣರು ಪೂಜೆ ಮಾಡುವ ದೇಗುಲಗಳಿಗೆ ಭೇಟಿ ನೀಡುವುದಿಲ್ಲ ಎಂದು ಅವಹೇಳನಕಾರಿ ಹೇಳಿಕೆ ನೀಡುತ್ತಾನೆ. ಇಂದಿಗೂ ಸಂಸ್ಕೃತ, ವೇದ ಪಾಠಶಾಲೆ ಹಾಗೂ ನಮ್ಮ ಆಚಾರ ವಿಚಾರಗಳಿಂದ ಹಿಂದೂ ಪುರಾತನ ಸಂಸ್ಕೃತಿ ಜೀವಂತವಾಗಿ ಉಳಿದಿದೆ ಎಂದರು.
ವಿದ್ಯಾರ್ಥಿಗಳ ಪ್ರತಿಭೆಗೆ ಮಾನ್ಯತೆ ಸಿಗಲಿ
ವಿದ್ಯಾರ್ಥಿಗಳು ನಮ್ಮ ರಾಷ್ಟ್ರದ ಮುಂದಿನ ಭವಿಷ್ಯವಾಗಿದ್ದು, ಅವರ ಪ್ರತಿಭೆಯನ್ನು ಗುರುತಿಸಿ, ನೈತಿಕ ಮೌಲ್ಯ ಹಾಗೂ ಸೃಜನಾತ್ಮಕತೆಯನ್ನು ಬೆಳೆಸಿದರೆ ನಾಳೆಯ ಸಮರ್ಥ ನಾಗರಿಕರಾಗಿ ರೂಪುಗೊಳ್ಳಲು ಸಹಾಯವಾಗುತ್ತದೆ ಎಂದು ಪ್ರಾಂಶುಪಾಲ ಡಾ. ಎಸ್. ದಿನೇಶ್ ಹೇಳಿದರು. ಶಿಕ್ಷಣ ಕ್ಷೇತ್ರದಲ್ಲಿ ಆರೋಗ್ಯಕರ ಸ್ಪರ್ಧೆ ಮತ್ತು ಸಾಧನೆಗೆ ವೇದಿಕೆಯಾಗುತ್ತವೆ. ಇದಲ್ಲದೆ ಪುರಸ್ಕೃತ ವಿದ್ಯಾರ್ಥಿಗೆ ಉತ್ತಮ ಶಿಕ್ಷಣ ಸಂಸ್ಥೆಗಳ ಪ್ರವೇಶ ಅಥವಾ ವಿದ್ಯಾರ್ಥಿವೇತನ ಪಡೆಯುವ ಸಂದರ್ಭಗಳಲ್ಲಿ ಈ ಪುರಸ್ಕಾರವು ಹೆಚ್ಚುವರಿ ಮೌಲ್ಯ ಒದಗಿಸುತ್ತದೆ. ಇದು ಭವಿಷ್ಯ ನಿರ್ಮಾಣದಲ್ಲಿ ದೊಡ್ಡ ಹೆಜ್ಜೆಯಾಗಬಹುದು ಎಂದು ತಿಳಿಸಿದರು.
ಮೇಕೆದಾಟು ಯೋಜನೆಯಲ್ಲಿ ದೇವೇಗೌಡರು ಮಾತು ಉಳಿಸಿಕೊಂಡಿಲ್ಲ
ದೇವೇಗೌಡರು ಕೇಂದ್ರದಲ್ಲಿ ಮೋದಿ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ಒಂದು ಗಂಟೆಯಲ್ಲಿ ಕೈ ಹಿಡಿದು ಸಹಿ ಹಾಕಿಸುತ್ತೇನೆ ಎಂದಿದ್ದರು. ಆದರೆ ಆ ಕೆಲಸ ಇದುವರೆಗೆ ಯಾಕೆ ಆಗಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು. ಯುವ ಪರ್ವ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ , ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಕಾದರೆ ಕೇಂದ್ರದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮಾತ್ರ ಸಾಧ್ಯ. ಅವರು ಪ್ರಧಾನಿಯಾದರೆ ಅವರ ಕೈಹಿಡಿದು ನಾನೇ ಒಂದು ಗಂಟೆಯೊಳಗೆ ಅನುಮೋದನೆ ಕೊಡಿಸುತ್ತೇನೆ ಎಂದು ರಾಜ್ಯ ಜನತೆಗೆ ಭರವಸೆ ನೀಡಿದ್ದರು. ಆದರೆ ಇಷ್ಟು ವರ್ಷವಾದರೂ ಯಾವುದೇ ಸಹಿ ಹಾಕಿಸಿಲ್ಲ ಎಂದರು.
ಆರ್ಥಿಕ ಸಾಕ್ಷರತೆ ವ್ಯಕ್ತಿಯ ಜೀವನದ ಪ್ರಮುಖ ಅಂಶ
ಆರ್ಥಿಕ ಸಾಕ್ಷರತೆ ಯಾವುದೇ ವ್ಯಕ್ತಿಯ ಜೀವನದ ಪ್ರಮುಖ ಅಂಶವಾಗಿದ್ದು, ಸರ್ಕಾರಿ ವಿಮಾ ಯೋಜನೆಗಳನ್ನು ಬಳಸುವುದು ಮತ್ತು ವಂಚನೆ ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಅಗತ್ಯ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಲತಾ ಸರಸ್ವತಿ ತಿಳಿಸಿದರು. ಸಮಾಜದಲ್ಲಿ ಆರ್ಥಿಕ ಸಾಕ್ಷರತೆ ಯಾವುದೇ ವ್ಯಕ್ತಿಯ ಜೀವನದ ಪ್ರಮುಖ ಅಂಶವಾಗಿದೆ ಎಂದರು. ಬಜೆಟ್ ನಿರ್ವಹಣೆ, ಹೂಡಿಕೆ, ಸಾಲದ ಆಯ್ಕೆಗಳು, ವಿಮಾ ರಕ್ಷಣೆ, ಸರ್ಕಾರಿ ವಿಮಾ ಯೋಜನೆಗಳನ್ನು ಬಳಸುವುದು ಮತ್ತು ವಂಚನೆ ತಡೆಗಟ್ಟುವ ಕ್ರಮಗಳು ಸೇರಿದಂತೆ ವಿವಿಧ ಹಣಕಾಸು ವಿಷಯಗಳ ಕುರಿತು ಮಾಹಿತಿ ನೀಡಿದಲ್ಲದೇ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved