• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ಜ್ವರದ ಕುರಿತು ಮುನ್ನೆಚ್ಚರಿಕೆ ವಹಿಸಿ
ಬೇಲೂರು ತಾಲೂಕಿನ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಡೆಂಘೀ ಜ್ವರದ ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಬೇಲೂರು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಉಷಾ ಕೆ.ಎಸ್. ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಹ್ಯಕ್ಕಯಣ್ಣ ಕುಮಾರ್ ಪಟ್ಟಣದ ವಾರ್ಡ್‌ಗಳಲ್ಲಿ ಜಾಗೃತಿ ಮೂಡಿಸಿದರು.
ಸಭೆಗೆ ಗೈರು ಹಿನ್ನೆಲೆ ಜುಲೈ 30ಕ್ಕೆ ಸಭೆ ಮುಂದೂಡಿಕೆ
ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಗೆ ಸರ್ಕಾರಿ ಇಲಾಖೆಗಳ ಬಹುತೇಕ ಅಧಿಕಾರಿಗಳು ಗೈರಾಗಿದ್ದನ್ನು ಗಮನಿಸಿದ ಶಾಸಕ ಕೆ. ಎಂ. ಶಿವಲಿಂಗೇಗೌಡ ಅವರು ಮುಂದಿನ ಸಭೆಯಲ್ಲಿ ಸರ್ಕಾರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ತಾಕೀತು ಮಾಡಿದ್ದಲ್ಲದೇ ಗೈರಾದ ಹಾಗೂ ಅವರ ಬದಲಿಗೆ ಬೇರೆಯವರನ್ನು ಸಭೆಗೆ ಕಳಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಗೊರೂರು ರಾಮಸ್ವಾಮಿ ಅಯ್ಯಂಗಾರ್ ಜಯಂತ್ಯುತ್ಸವ
ಗೊರೂರು ಗ್ರಾಮದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ರವರ ಜನ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಕೃಷ್ಣ ಉದ್ಘಾಟಿಸಿದರು. ನಂತರ ಮಾತನಾಡಿ ಗೊರೂರರ ಜಯಂತಿ ಅಂಗವಾಗಿ ಗಾಂಧಿ ಮತ್ತು ಡಾ.ಗೊರೂರರ ವಿಚಾರ ಗೋಷ್ಠಿ, ರಾಜ್ಯಮಟ್ಟದ ಕವಿಗೋಷ್ಠಿ. ಪುಸ್ತಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅವರು ಜನ್ಮಪಡೆದ ಮಣ್ಣಿನಲ್ಲಿ ಇಡೀ ದಿನ ಆಯೋಜನೆ ಮಾಡಿರುವುದು ಹೆಚ್ಚು ಅರ್ಥ ಪೂರ್ಣವಾಗಿದೆ ಎಂದು ಬಣ್ಣಿಸಿದರು.
ವಿದ್ಯಾರ್ಥಿಗಳಿಗೆ ವಚನ ಕಂಠಪಾಠ ಸ್ಪರ್ಧೆ
ರಾಮನಾಥಪುರ ಶ್ರೀ ವಿದ್ಯಾನಿಕೇತನ ಶಾಲೆ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು. 12ನೇ ಶತಮಾನದ ವಚನಕಾರರ ಸಾವಿರಾರು ವಚನಗಳು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ಉಳಿದಿವೆ. ವಚನಗಳನ್ನು ಮುದ್ರಿಸುವುದಕ್ಕಾಗಿ ಅವುಗಳ ಪ್ರಚಾರಕ್ಕಾಗಿ ತಮ್ಮ ಮನೆಯನ್ನು ಕೂಡ ಮಾರಾಟ ಮಾಡಿ ಶರಣ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಸದಾಶಿವ ಸ್ವಾಮೀಜಿ ತಿಳಿಸಿದರು.
ಬೆಳಗೋಡಿನಲ್ಲಿ ನೂತನ ಬಸ್‌ ನಿಲ್ದಾಣ ಉದ್ಘಾಟನೆ
ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿಯಲ್ಲಿ ಸುಮಾರು ೪.೫ ಲಕ್ಷ ರು. ವೆಚ್ಚದಲ್ಲಿ ನೂತನ ಬಸ್‌ ನಿಲ್ದಾಣವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು. ಇದೇ ವೇಳೆ ಕೂಲಿ ಕಾರ್ಮಿಕ ಮಹಿಳೆಯರು ಹೆಚ್ಚಿರುವ ಬೆಳಗೋಡು ಗ್ರಾಮದ ಮಹಿಳೆಯರ ಅನುಕೂಲಕ್ಕಾಗಿ ಕೂಸಿನ ಮನೆಯನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಗೋಪಿನಾಥ್‌ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ
ಕಾಂಗ್ರೆಸ್ ಮುಖಂಡ ಕೆ.ಜಿ ಗೋಪಿನಾಥ್ ಅವರ ೫೦ನೇ ಹುಟ್ಟುಹಬ್ಬವನ್ನು ಬೃಹತ್ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಕೆ.ಜಿ ಗೋಪಿನಾಥ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸುಮಾರು ೪೦ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.
ಡೆಂಘೀ ಹೆಚ್ಚಿದರೂ ಎಚ್ಚೆತ್ತುಕೊಳ್ಳದ ತಾ.ಆಡಳಿತ
ಹೊಳೆನರಸೀಪುರ ವ್ಯಾಪ್ತಿಯ ಚಿಟ್ಟನಹಳ್ಳಿ ಹೌಸಿಂಗ್ ಬೋರ್ಡ್‌, ಕಾಲುವೆಕೇರಿ ಬೀದಿ ಹಾಗೂ ಮಹಾತ್ಮಗಾಂಧಿ ವೃತ್ತ ಸಮೀಪದ ಬಡಾವಣೆಗಳ ಸುತ್ತ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ಸರಾಗವಾಗಿ ಹರಿಯದ ಕಾರಣ ನಿವಾಸಿಗಳಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಪಂಚರ್‌ ಅಂಗಡಿ ಮಾಲೀಕರಿಗೆ ನಗರಸಭೆ ಅಧಿಕಾರಿಗಳ ಎಚ್ಚರಿಕೆ
ನಗರ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಮತ್ತು ಸಾವು ನೋವುಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ನಗರಸಭೆಯಿಂದ ಸೊಳ್ಳೆ ಉತ್ಪತ್ತಿಯಾಗದಂತೆ ಔಷಧಿ ಸಿಂಪಡಿಸಲಾಗುತ್ತಿದೆ. ಪಂಚರ್‌ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.
ವೀರೇಂದ್ರ ಹೆಗ್ಗಡೆಯರವರು ಕರ್ನಾಟಕದ ರತ್ನ
ಡಾ. ಡಿ. ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಇದರ ಯೋಜನೆ ಸಿಗುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಸಂಸದ ಶ್ರೇಯಸ್‌ ಪಟೇಲ್‌ ಬಣ್ಣಿಸಿದ್ದಾರೆ.
ಕಾವೇರಿ ವಿವಾದ ಒಂದು ಐತಿಹಾಸಿಕ ಹಿನ್ನೋಟ ಪುಸ್ತಕ ಬಿಡುಗಡೆ
ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಹಾಸನ ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು. ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಹಸಿರು ಭೂಮಿ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಸಿ. ಚಂದ್ರಶೇಖರ್ ಅವರು ರಚಿಸಿರುವ "ಕಾವೇರಿ ವಿವಾದ - ಒಂದು ಐತಿಹಾಸಿಕ ಹಿನ್ನೋಟ "ಹೆಸರಿನ ಪುಸ್ತಕ ಬಿಡುಗಡೆ ಮಾಡಿದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved