• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಮಾಡುವುದಕ್ಕೆ ವಿರೋಧ
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಮಾಡುವ ಹೊಸ ವಿಧಾನದಿಂದಾಗಿ ರೈತರಿಗೆ ಭಾರಿ ಸಮಸ್ಯೆಯಾಗಲಿದೆ. ಕೆಲ ರೈತರು ಸಾಗುವಳಿ ಭೂಮಿಯನ್ನು ಪೌತಿ ಖಾತೆ ಮಾಡಿಸಿಕೊಂಡಿಲ್ಲ. ಕೆಲವರು ಬಹರ್‌ ಹುಕುಂ ಅಡಿ ಅರ್ಜಿ ಸಲ್ಲಿಸಿದ್ದಾರೆ, ಮಂಜೂರಾಗಿಲ್ಲ. ಇಂತಹ ಹಲವು ಸಮಸ್ಯೆಗಳಿರುವುದರಿಂದ ಆಧಾರ್‌ ಲಿಂಕ್‌ ವಿರೋಧಿಸಿ ರಾಜ್ಯ ರೈತ ಸಂಘದಿಂದ ಬುಧವಾರ ನಗರದಲ್ಲಿ ಚೆಸ್ಕಾಂ ಎದುರು ಪ್ರತಿಭಟನೆ ನಡೆಸಿದರು.
ಗ್ಯಾರಂಟಿ ತಲುಪದಿದ್ದರೆ ಅಧಿಕಾರಿಗಳೇ ಹೊಣೆ
ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಕೆಲಸ ಮಾಡಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಂ.ಪಿ.ಪ್ರಕಾಶ್ ಗೌಡ ಎಚ್ಚರಿಕೆ ನೀಡಿದರು.
ಎತ್ತಿನಹೊಳೆ: ಜಿಲ್ಲಾಡಳಿತ ಭರದ ಸಿದ್ಧತೆ
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲು ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನ ಹಿನ್ನೆಲೆ ಜಿಲ್ಲಾಡಳಿತ ಭರದ ಸಿದ್ಧತೆ ಕೈಗೊಂಡಿದೆ.
ಇಂದು ಸಂಜೆ ಡಿಕೆಶಿಯಿಂದ ಹೋಮ
ಎತ್ತಿನಹೊಳೆ ಯೋಜನೆ ಉದ್ಘಾಟನೆ ಹಿನ್ನೆಲೆ ಗುರುವಾರ ತಾಲೂಕಿಗೆ ಆಗಮಿಸಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೋಮ, ಹವನ ನೆರವೇರಿಸಲಿದ್ದು ಶುಕ್ರವಾರ ಮುಖ್ಯಮಂತ್ರಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ನಗರದ ಸರ್ವತೋಮುಖ ಅಭಿವೃದ್ಧಿಗೆ ನಗರಸಭೆ ಆಡಳಿತ ಬದ್ಧ
ನಗರೋತ್ಥಾನ ನಾಲ್ಕನೇ ಹಂತದ ಯೋಜನೆ ಅಡಿ ಎರಡನೇ ವಾರ್ಡಿನಲ್ಲಿ ನಡೆಯುತ್ತಿರುವ ರಾಜಕಾಲುವೆ ಹಾಗೂ ಸಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಪಕ್ಷಭೇದ, ತಾರತಮ್ಯ ನೀತಿ ಮಾಡದೆ ನಗರಸಭೆಗೆ ಚುನಾಯಿತರಾಗಿರುವ ಎಲ್ಲಾ ಸದಸ್ಯರನ್ನು ಹಾಗೂ ಅಧಿಕಾರಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಸಕರ ಸಲಹೆ ಸೂಚನೆಗಳಿಗೂ ಮಾನ್ಯತೆ ನೀಡುವ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಯೊಂದಿಗೆ ನಗರವನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ನಗರಸಭೆ ಆಡಳಿತದ್ದಾಗಿದೆ ಎಂದು ಅಧ್ಯಕ್ಷ ಎಂ ಸಮೀವುಲ್ಲಾ ಹೇಳಿದರು.
ಬಾಂಗ್ಲಾ ನುಸುಳುಕೋರರಿಗೆ ನಕಲಿ ದಾಖಲೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ
ಅಕ್ರಮ ಬಾಂಗ್ಲಾ ವಲಸಿಗರರನ್ನು ದೇಶದಿಂದ ಹೊರಗೆ ಹಾಕಿ ಮತ್ತು ಅವರಿಗೆ ಭಾರತದೊಳಗೆ ನಕಲಿ ಐಡಿ ಕಾರ್ಡ್‌ಗಳನ್ನು ಮಾಡಿಕೊಳ್ಳಲು ಸಹಕರಿಸಿದವರ ವಿರುದ್ಧ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಕೊಟ್ಟಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಕಲಿ ಆಧಾರ್ ಕಾರ್ಡ್ ನಂತಹ ಮಹತ್ತರ ದಾಖಲೆಗಳನ್ನು ಸೃಷ್ಟಿಸಿ ಕೊಡುತ್ತಿರುವುದು ಮತ್ತು ಇದಕ್ಕೆ ಪ್ರಭಾವಿಗಳು ಮತ್ತು ಸರ್ಕಾರಿ ನೌಕರರೇ ಸಹಕರಿಸುತ್ತಿರುವುದು ದೇಶದ್ರೋಹವೇ ಸರಿ ಎಂದು ಆಕ್ರೋಶ ಹೊರಹಾಕಿದರು.
ಅಕ್ರಮ ವಲಸಿಗರಿಂದ ದೇಶದ ಆಂತರಿಕ ಭದ್ರತೆಗೆ ಅಪಾಯ
ಇತ್ತೀಚಿನ ದಿನಗಳಲ್ಲಿ ಅಸ್ಸಾಂ ರಾಜ್ಯದ ಹೆಸರು ಹೇಳಿಕೊಂಡು ವಲಸೆ ಬರುತ್ತಿರುವ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ. ವಲಸೆ ಕಾರ್ಮಿಕರ ಕೆಲವರು ಹೈದರಾಬಾದ್ ಹೆಸರು ಹೇಳಿದರೆ ಆಧಾರ್ ಕಾರ್ಡಲ್ಲಿ ಬೇರೆ ಊರಿನ ಮಾಹಿತಿ ಇದೆ. ಇನ್ನು ಕೆಲವರು ಅಸ್ಸಾಂ ರಾಜ್ಯದವರೆಂದು ಹೇಳುತ್ತಾರೆ. ಆದರೆ ಅವರ ಬಳಿ ಯಾವುದೇ ಮಾಹಿತಿ ಇಲ್ಲ. ಅಸ್ಸಾಂ ರಾಜ್ಯದ ಹೆಸರು ಹೇಳಿಕೊಂಡು ಬರುತ್ತಿರುವವರು ಬಾಂಗ್ಲಾ ದೇಶದ ಅಕ್ರಮ ವಲಸಿಗರೆಂಬ ಶಂಕೆ ವ್ಯಕ್ತವಾಗಿದೆ. ಅಕ್ರಮ ವಲಸಿಗರ ಕುರಿತು ತನಿಖೆ ನಡೆಸುವಲ್ಲಿ ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಎನ್. ರವಿಕುಮಾರ್ ದೂರಿದರು.
ಒಂದೇ ಊರಿನಲ್ಲಿ ಒಂದೇ ರಾತ್ರಿ 8 ಮನೆಗಳಲ್ಲಿ ಕಳ್ಳತನ
ಗ್ರಾಮದಲ್ಲೆಲ್ಲಾ ಮಿಕ್ಸಿ ಮಾರಾಟ ಮಾಡುವ ನೆಪದಲ್ಲಿ ತಿರುಗಾಡಿ ಬೀಗ ಹಾಕಿರುವ ಮನೆಗಳನ್ನು ಗಮನಿಸಿರುವ ಕಳ್ಳರು, ರಾತ್ರಿ ಎಂಟು ಮನೆಗಳಲ್ಲಿ ಕಳ್ಳತನ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ರಂಗನಾಯಕನ ಕೊಪ್ಪಲು ಗ್ರಾಮದಲ್ಲಿ ಡಕಾಯಿತರು ಹಾಡುಹಗಲೇ ಮನೆ ದರೋಡೆ ಮಾಡಿದ ಘಟನೆ ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆ ದರೋಡೆ ಮಾಡಿ ಮೂವರು ಚೋರರು ಪರಾರಿಯಾಗುತ್ತಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕಳವು ಪ್ರಕರಣ ದಾಖಲಾಗಿದೆ.
ಆರೋಪ ರುಜುವಾತು ಮಾಡಿದ್ರೆ ಅರಸೀಕೆರೆಯನ್ನೇ ಬಿಡುವೆ
ಕಳೆದ ಚುನಾವಣೆಯಲ್ಲಿ ನಾನು ಆರು ಸಾವಿರ ಮತಗಳನ್ನು ಪಡೆದಿರುವುದನ್ನು ಪ್ರಸ್ತಾಪಿಸಿ, ಇತರೆ ಪಕ್ಷದೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ನಗರಸಭಾ ಅಧ್ಯಕ್ಷ ಸಮೀವುಲ್ಲಾ, ಶ್ರೀ ಜೇನುಕಲ್ ಬೆಟ್ಟವೇಕೆ ಅವರ ಮಸೀದಿಗೆ ಹೋಗಿ ಪ್ರಮಾಣ ಮಾಡೋಣ ರುಜುವಾತು ಮಾಡಿದರೆ ಅರಸೀಕೆರೆಯನ್ನೇ ಬಿಡುವೆ, ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಶಾಸಕರನ್ನೇ ಕೇಳಲಿ ಎಂದು ಕರ್ನಾಟಕ ಹೆದ್ದಾರಿ ನಿಗಮದ ಮಾಜಿ ಅಧ್ಯಕ್ಷ ಜಿವಿಟಿ ಬಸವರಾಜ್ ಸವಾಲು ಹಾಕಿದರು. ಗಂಜಿಗೆರೆಯಿಂದ ಅರಸೀಕೆರೆಯವರೆಗೆ ನನ್ನ ಬಗ್ಗೆ ಒಂದೇ ಒಂದು ನಿರ್ದಿಷ್ಟ ಆರೋಪವನ್ನು ಇವರು ರುಜುವಾತು ಪಡಿಸಿದರೆ ನಾನು ಅರಸೀಕೆರೆಯನ್ನೇ ಬಿಡುತ್ತೇನೆ ಎಂದು ಪುನರುಚ್ಛರಿಸಿದರು.
ಪರಿಶಿಷ್ಟರ ಒಳಮಿಸಲಾತಿ ಶೀಘ್ರ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್‌ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಪರಿಶಿಷ್ಟರ ಮಿಸಲಾತಿ ವರ್ಗೀಕರಣ ಶೀಘ್ರವಾಗಿ ಜಾರಿ ಮಾಡಲು ಆಗ್ರಹಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ೯ರಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ. ಎನ್. ಮೂರ್ತಿ ತಿಳಿಸಿದರು. ಕೂಡಲೇ ಮುಖ್ಯಮಂತಿಗಳು ಸಚಿವ ಸಂಪುಟ ಸಭೆ ನಡೆಸಿ ನ್ಯಾಯಮೂರ್ತಿ ಎ.ಜೆ. ಸದಾಶಿವ ರವರ ಆಯೋಗದ ವರದಿಯಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಅನುಷ್ಠಾನ ಮಾಡಲು ಆಗ್ರಹಿಸಿದೆ. ವಿಳಂಬ ಮಾಡಿದಲ್ಲಿ ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಬಹುಜನರು ಚುನಾವಣೆಯನ್ನೇ ಬಹಿಷ್ಕರಿಸಲಾಗುವುದಾಗಿ ಎಚ್ಚರಿಕೆ ನೀಡಿದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved