ಮಹನೀಯರ ತತ್ವ ಪಾಲನೆಯಿಂದ ಜಯಂತಿ ಸಾರ್ಥಕ: ತಹಸೀಲ್ದಾರ್ ಮಮತ ಎಂ.ಸಂತ ಸೇವಾಲಾಲ್ ಹಾಗೂ ಶಿವಾಜಿ ಮಹಾರಾಜರ ಆದರ್ಶ ಮತ್ತು ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ನಿಜವಾದ ಅರ್ಥವನ್ನು ಕಲ್ಪಿಸಬೇಕಾಗಿದೆ ಎಂದು ತಹಸೀಲ್ದಾರ್ ಮಮತ ಎಂ. ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೇಲೂರಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಮತ್ತು ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.