• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲೂರು ಪಟ್ಟಣ ಪಂಚಾಯತ್‌ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಕೈಗೆ
ಆಲೂರು ಪಟ್ಟಣ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ, ಭಾರಿ ಹೈ ಡ್ರಾಮ ನೆಡೆದು ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದ ತಾಹಿರಾಬೇಗಂ, ಇಬ್ಬರು ಪಕ್ಷೇತರ ಸದಸ್ಯರು, ಇಬ್ಬರು ಬಿಜೆಪಿ ಸದಸ್ಯರು, ಓರ್ವ ಜೆಡಿಎಸ್ ಸದಸ್ಯೆ ಸೇರಿದಂತೆ ಸಂಸದರ 1 ಮತ ಸೇರಿ ಒಟ್ಟು 7 ಮತಗಳನ್ನು ಪಡೆದು ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ ಪಿ ರಾಣಿ ಅವರನ್ನು ಪರಾಭವಗೊಳಿಸಿ ಅಧ್ಯಕ್ಷ ಸ್ಥಾನಕ್ಕೇರಿದರು.ಆಲೂರು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಬಹುಮತವಿದ್ದರೂ ಮೈತ್ರಿ ಕೂಟ ಸಮನ್ವಯ ಸಾಧಿಸಲು ವಿಫಲವಾಗದ ಹಿನ್ನೆಲೆಯಲ್ಲಿ, ಮೈತ್ರಿಯ ಒಳ ಜಗಳದಿಂದ ಕೇವಲ ಒಬ್ಬರೇ ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಮಾಡಿದ ಆಪರೇಷನ್ ಕಾಂಗ್ರೆಸ್‌ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ತೀವ್ರ ಮುಖಭಂಗ ಅನುಭವಿಸಬೇಕಾಯಿತು.
ಶ್ರೀ ಶಾರದಾ ಪಬ್ಲಿಕ್ ಸ್ಕೂಲ್‌ಗೆ ಸಮಗ್ರ ಪ್ರಶಸ್ತಿ
ಹಳೇಬೀಡು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಬಿ. ವಲಯದಿಂದ ಶ್ರೀ ಶಾರದಾ ಪಬ್ಲಿಕ್ ಸ್ಕೂಲಿನ ಮಕ್ಕಳು ಚಾಂಪಿಯನ್ನಾಗಿ ಹೊರ ಹೊಮ್ಮಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ. ಖೋ-ಖೋ, ಥ್ರೋಬಾಲ್, ಕಬ್ಬಡಿಯಲ್ಲಿ ಪ್ರಥಮ ಸ್ಥಾನ, ೬೦೦ ಮೀಟರ್ ರನ್ನಿಂಗ್‌ನಲ್ಲಿ ತನ್ಮಯಿ ಪ್ರಥಮ ಸ್ಥಾನ ,೪೦೦ ಮೀಟರ್ ರನ್ನಿಂಗ್‌ನಲ್ಲಿ ರಕ್ಷಿತಾ ಎಚ್.ಎಲ್ ಪ್ರಥಮ ಸ್ಥಾನ, ೨೦೦ ಮೀಟರ್ ರನ್ನಿಂಗ್‌ನಲ್ಲಿ ರಕ್ಷಿತಾ ಪ್ರಥಮ, ತನ್ಮಯಿ ,ದ್ವಿತೀಯ ಸ್ಥಾನ. ರಿಲೇ ಪ್ರಥಮ ಸ್ಥಾನ, ಲಾಂಗ್ ಜಂಪ್ ಲಿಖಿತ ದ್ವಿತೀಯ, ಮೇಘನಾ ತೃತೀಯ ಸ್ಥಾನ, ಶಾಟ್‌ಪುಟ್ ಖುಷಿ ದ್ವಿತೀಯ ಸ್ಥಾನ, ಡಿಸ್ಕಸ್ ಥ್ರೋ ಖುಷಿ ಪ್ರಥಮ ಸ್ಥಾನ ಪಡೆದಿದ್ದು, ಬಾಲಕಿಯರ ಚಾಂಪಿಯನ್‌ಶಿಪ್ ರಕ್ಷಿತಾ ಎಚ್ ಎಲ್ ಅವರಿಗೆ ಸಿಕ್ಕಿತು.
ಗರ್ಭಿಣಿಯರಿಗೆ ಸೀಮಂತ ಮಾಡಿದ ವೈದ್ಯಾಧಿಕಾರಿ ಮಮತಾ
ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಮತಾರವರು ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಸಿ ಹೆರಿಗೆ ಮತ್ತು ಹೆರಿಗೆಯ ನಂತರ ತಾಯಿ ಮಗುವಿನ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆಗಳನ್ನುನೀಡಿದರು. ನಂತರ ಸೀಮಂತ ಕಾರ್ಯಕ್ರಮ ಏರ್ಪಡಿಸಿ ಸುಮಾರು 26 ತುಂಬು ಗರ್ಭಿಣಿಯರಿಗೆ ಮನೆಯಲ್ಲಿ ನೆರವೇರಿಸುವ ರೀತಿಯಲ್ಲಿ ಸಿಹಿ ತಿಂಡಿಗಳನ್ನು ಹಂಚಿ ಅರಿಶಿಣ ಕುಂಕುಮದ ಜೊತೆಗೆ, ಬಳೆ ಹಾಗು ಸೀರೆಯೊಂದಿಗೆ ಮಡಿಲು ತುಂಬಿಸಿ ಎಲ್ಲರಿಗೂ ಶುಭ ಹಾರೈಸಿದರು.
ಕಾಡಾನೆಗಳಿಂದ ಅಪಾರ ಬೆಳೆ ಹಾನಿ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಬಕ್ರವಳ್ಳಿ, ಮೊಗಸಾವರ ‌ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಿಂಡು ಕಳೆದ ಒಂದು ವಾರದಿಂದ ಬೀಡು ಬಿಟ್ಟು ಕೃಷಿಕರ ಮತ್ತು ಕಾಫಿ ಬೆಳೆಗಾರರ ಬೆಳೆಗಳನ್ನು ಹಾನಿ ಮಾಡುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು‌ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬಕ್ರವಳ್ಳಿ ಗ್ರಾಮದ ನಂದೀಶ್ ಹಾಗೂ ವಕೀಲರ ಸಂಘದ ಅಧ್ಯಕ್ಷ ಪೃಥ್ವಿ ಅವರ ತೋಟಗಳಿಗೆ ಭುವನೇಶ್ವರಿ ಹೆಸರಿನ ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ, ಮೆಣಸು ಹಾಗೂ ಗೇಟ್, ಪೈಪ್‌ಲೈನ್‌ಗಳನ್ನು ತುಳಿದು ಸಂಪೂರ್ಣ ಹಾನಿ ಮಾಡಿವೆ.
ಮೊಸರಿನ ಮಡಿಕೆ ಒಡೆದ ಪುಟಾಣಿಗಳು
ಶ್ರೀ ಕೃಷ್ಣ ಗೋಕುಲಾಷ್ಟಮಿಯ ಅಂಗವಾಗಿ ನಗರದ ಬಿ ಎಚ್ ರಸ್ತೆ ಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ವಿದ್ಯಾರ್ಥಿ ಚಿಣ್ಣರು ಕೃಷ್ಣ ವೇಷಧಾರಿಯಾಗಿಯೂ ಬಾಲಕಿಯರು ರಾಧಾ ವೇಷಧಾರಿಯಾಗಿ ಎಲ್ಲರ ಗಮನವನ್ನು ಸೆಳೆದರು. ಶಾಲಾ ಆವರಣದಲ್ಲಿ ಎರಡು ಮೊಸರಿನ ಮಡಿಕೆಗಳನ್ನು ನೇತು ಹಾಕಿ ಚಿಣ್ಣ ಕೃಷ್ಣರು ಅದನ್ನು ಒಡೆಯುವುದು ಮತ್ತು ಸಖಿಯರ ನರ್ತನ ಕಣ್ಮನ ಸೆಳೆದವು. ವಿದ್ಯಾರ್ಥಿನಿಯೊಬ್ಬಳ ತಾಯಿಯೂ ಕೂಡ ಈ ನೃತ್ಯ ರೂಪಕದಲ್ಲಿ ರಾಧಾ ವೇಷಧಾರಿಯಾಗಿ ನರ್ತಿಸಿದರು.
ಮಡಬಲಿನ ಶಿಕ್ಷಕ ಪರಮೇಶ್‌ಗೆ ಆದರ್ಶ ಶಿಕ್ಷಕ ಪ್ರಶಸ್ತಿ
ಪರಮೇಶ್ ವೃತ್ತಿಯಲ್ಲಿ ಶಿಕ್ಷಕರಾಗಿ ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯದ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದು,, ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು, ವಿಮರ್ಶಾ ಲೇಖನಗಳು, ಕಥೆ, ಕವಿತೆಗಳನ್ನು ಬರೆದಿದ್ದಾರೆ. ಈಗಾಗಲೇ ಎಂಟು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ. ಶಿಕ್ಷಣ ಇಲಾಖೆಯ ಹಲವು ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಶೈಕ್ಷಣಿಕ ಹಾಗೂ ಸಾಹಿತ್ಯಾತ್ಮಕ ಕಾರ್ಯವನ್ನು ಪರಿಗಣಿಸಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಳೆಗಾರರು ಮತ್ತು ಕಾಫಿ ಕ್ಯೂರಿಂಗ್‌ ನಡುವೆ ದರ ಸಮರ
ಅಂತಾರಾಷ್ಟ್ರೀಯ ಮಾರುಕಟ್ಟೆ ಆಧರಿಸಿ ಕ್ಯೂರಿಂಗ್ ವರ್ಕ್ಸ್‌ ಮಾಲೀಕರು ಸ್ಥಳೀಯ ಮಾರುಕಟ್ಟೆಯಲ್ಲಿ ಕಾಫಿ ದರ ನಿಗದಿಪಡಿಸುತ್ತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೆಲವೇ ಡಾಲರ್‌ ಕುಸಿತಗೊಂಡರೂ ಸ್ಥಳೀಯ ಮಾರುಕಟ್ಟೆಯಲ್ಲಿ ಕುಸಿತಕ್ಕೆ ತಕ್ಕಂತೆ ದರ ಕಡಿತಗೊಳಿಸುವ ಕ್ಯೂರಿಂಗ್ ವರ್ಕ್ಸ್‌ಗಳ ಮಾಲೀಕರು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಯಾದರೆ ಇದಕ್ಕೆ ತಕ್ಕಂತೆ ದರ ಏರಿಕೆ ಮಾಡದೆ ವಂಚಿಸುತ್ತಿದ್ದಾರೆ ಎಂದು ಕಾಫಿ ಬೆಳೆಗಾರರು ಆರೋಪಿಸಿದ್ದಾರೆ.
ಬದಲಾದ ಕಾನೂನಿಗೆ ನಾವು ಹೊಂದಿಕೊಳ್ಳಬೇಕು
ಪ್ರಸ್ತುತ ದಿನಗಳಲ್ಲಿ ಕಾನೂನು‌ ಬದಲಾಗಿದೆ. ಬದಲಾದ ಕಾನೂನಿಗೆ ನಾವು ಹೊಂದುಕೊಳ್ಳಬೇಕು. ಯುವ ವಕೀಲರು ನಾನು ಎಂಬ ಆಹಂ ಬಿಡಬೇಕು. ಕಕ್ಷಿದಾರನು ವಕೀಲರ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಅಕ್ಷರಶಃ ಕಕ್ಷಿದಾರನು ಮುಗ್ಧ ಮನಸ್ಸಿನವರಾಗಿರುತ್ತಾರೆ. ಹೊಸದಾಗಿ ಬಂದಿರುವ ಯುವ ವಕೀಲರು ಹಿರಿಯ ವಕೀಲರ ಸಹಕಾರ, ಮಾರ್ಗದರ್ಶನ ಮತ್ತು ಅನುಭವವನ್ನು ಪಡೆಯಲು ಮುಂದಾಗಬೇಕು ಎಂದು ಹಾಸನ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಚ್.ಟಿ ನರೇಂದ್ರ ಪ್ರಸಾದ್ ಸಲಹೆ ನೀಡಿದರು.
ತಿರುಮಲ ಅಂತಾರಾಷ್ಟ್ರೀಯ ಶಾಲೆಯಲ್ಲಿ ನೂತನ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ತಿರುಮಲ ಅಂತಾರಾಷ್ಟ್ರೀಯ ಶಾಲೆಯಲ್ಲಿ ನೂತನ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆಯ ಸಮಾರಂಭವು ನಡೆಯಿತು.ಶ್ರೀಧರ್ ಅವರು ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಕೌಶಲ್ಯವನ್ನು ಬೆಳೆಸಲು ಶಾಲೆಯು ಒದಗಿಸುತ್ತಿರುವ ಸೌಲಭ್ಯಗಳನ್ನು ಶ್ಲಾಘಿಸಿದರು. ಶಾಲೆಯ ಅಧ್ಯಕ್ಷರಾದ ಡಾ. ರಮೇಶ್ ಬಾಬು ಅವರು ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ವಿವರಿಸಿದರು ಮತ್ತು ಕಂಪ್ಯೂಟರ್ ಭಾಗಗಳು ಮತ್ತು ಅವುಗಳ ಕಾರ್ಯಕ್ಷಮತೆ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾದ ಅರಿವು ಹೊಂದಲು ಸೂಚಿಸಿದರು.
ತಿನ್ನುವ ಆಹಾರದ ಬಗ್ಗೆ ಎಚ್ಚರವಿರಲಿ
ಆಧುನಿಕ ಆಹಾರ ಅಭ್ಯಾಸಗಳಿಂದ ಜನರ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲ, ಮಾನಸಿಕ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಆರೋಗ್ಯ ಸ್ನೇಹಿ ಖಾದ್ಯವನ್ನು ಹೆಚ್ಚು ನೀಡಬೇಕು. ಮನೆಯಲ್ಲೇ ಬೆಳೆದ ತರಕಾರಿ, ಹಣ್ಣನ್ನು ಹೆಚ್ಚು ಸೇವಿಸಲು ಮಕ್ಕಳು ಹಾಗೂ ಪೋಷಕರು ಮುಂದಾಗಬೇಕು. ಸಿರಿಧಾನ್ಯಗಳಿಂದ ತಯಾರಿಸಿದ ಆಹಾರವನ್ನು ಸಹ ಸೇವಿಸಲು ಪ್ರತಿಯೋರ್ವರು ಮುಂದಾಗಬೇಕು. ಆಹಾರ ಪದ್ಧತಿಯಲ್ಲಿ ಸಸ್ಯಹಾರಿ ಹಾಗೂ ಮಾಂಸಹಾರಿ ಪದ್ಧತಿಯೆಂದು ವಿಭಜನೆಗೊಂಡಿದ್ದು ಮಾಂಸಹಾರಿಗಳು ಸಹ ಮಾಂಸದ ಆಹಾರ ಸೇವನೆ ಮಾಡುವಾಗ ಗುಣಮಟ್ಟದ ಮಾಂಸದಿಂದ ಮಾಡಿರುವ ಆಹಾರವನ್ನು ಸೇವಿಸಬೇಕು.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved