• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರ್ವತಮ್ಮ ಬೆಟ್ಟದ ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ
ಶುಕ್ರವಾರದಿಂದ ಪ್ರಾರಂಭವಾದ ಕಾಡಾನೆ ಹಿಡಿಯುವ ಕಾರ್ಯಾಚರಣೆ ಎರಡನೇ ದಿನವು ಯಶಸ್ವಿಯಾಗಿದ್ದು, ಶನಿವಾರವೂ ಒಂದು ಪುಂಡಾನೆ ಹಿಡಿದು ಅರಣ್ಯ ಇಲಾಖೆಯ ಸಿಬ್ಬಂದಿ ಹಿಡಿದು ಸ್ಥಳಾಂತರಿಸಿದ್ದಾರೆ. ಹಾಸನ ವಿಭಾಗ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಶುಕ್ರವಾರ ಹಾಗೂ ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಸಾರ್ವಜನಿಕರ ಮೇಲೆ ಮತ್ತು ರಸ್ತೆಯಲ್ಲಿ ಸಂಚರಿಸುವ ವಾಹನಗಳ ಮೇಲೆ ದಾಳಿ ಮಾಡುತ್ತಾ ಬೆಳೆ ನಾಶ, ಪ್ರಾಣಹಾನಿ ಮತ್ತು ಆಸ್ತಿ ನಷ್ಟ ಉಂಟು ಮಾಡುತ್ತಿದ್ದ ಎರಡು ಕಾಡಾನೆಯನ್ನು ಹಿಡಿದು ಸ್ಥಳಾಂತರಿಸಿದ್ದು ಇದನ್ನು ಇಲ್ಲಿಗೆ ನಿಲ್ಲಿಸದೆ ಈ ಭಾಗದಲ್ಲಿ ಪ್ರಾಣಹಾನಿಗೆ ಕಾರಣವಾಗಿರುವ ಎಲ್ಲಾ ಪುಂಡಾನೆಗಳನ್ನು ಹಿಡಿಯಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಾಳೆಯಿಂದ ಉಚಿತ ಯೋಗ ಧ್ಯಾನ ಪ್ರಾಣಾಯಾಮ ಶಿಬಿರ
ಧ್ಯಾನ ಶಿಬಿರವು ಹಾಸನ ನಗರ ಮತ್ತು ಸುತ್ತಮುತ್ತಲ ಇರುವ ನಾಗರಿಕರಿಗಾಗಿ ಒಂದು ಅದ್ಭುತ ಅವಕಾಶ ಸಿಗಲಿದೆ ಎಂದರು. ಒಬ್ಬ ವ್ಯಕ್ತಿ ನೂರು ವರ್ಷಗಳ ಕಾಲ ನಿರೂಗಿಯಾಗಿ ಯಾವ ರೀತಿ ಬದುಕಬಹುದು, ಆಹಾರದ ಪದ್ಧತಿ ಕುರಿತು, ಆಯುರ್ವೇದ ಗಿಡ ಮೂಲಿಕೆಗಳ ಪರಿಚಯ ಹಾಗೂ ನಮ್ಮ ಮನೆ ಮದ್ದು ಸೇರಿದಂತೆ ಎಲ್ಲಾ ರೀತಿಯ ಬಗ್ಗೆ ತಿಳಿಸಿಕೊಡಲಿದ್ದಾರೆ. ಈ ಶಿಬಿರದಲ್ಲಿ ಭಾಗಿಯಾದರೇ ನೂರು ವರ್ಷ ಕಾಪಾಡಿಕೊಳ್ಳಬಹುದು. ಈ ಯೋಗ ಮಹೋತ್ಸವ ಎಂದರೇ ಒಂದು ರೀತಿ ಆನಂದ ಉತ್ಸವವಾಗಿದೆ ಎಂದು ಹೇಳಿದರು. ಈ ಯೋಗ ಸಂದೇಶವನ್ನು ಇಲ್ಲಿನ ಜನತೆಗೆ ಸಂದೇಶ ನೀಡುವುದು ಮುಖ್ಯ ಉದ್ದೇಶವಾಗಿದೆ.
ಯುವ ಕ್ರಿಕೆಟಿಗರಿಗೆ ಪ್ರತಿಭೆ ಇದ್ದರೂ ಅಗತ್ಯ ಸೌಕರ್ಯವಿಲ್ಲ
ಇತ್ತೀಚೆಗೆ ಅರಸೀಕೆರೆ ತಾಲೂಕಿನ ಯಾವೊಬ್ಬ ಕ್ರಿಕೆಟ್ ಆಟಗಾರ ರಾಜ್ಯ ಮತ್ತು ದೇಶವನ್ನು ಪ್ರತಿನಿಧಿಸುವ ಅವಕಾಶ ದೊರೆಯದೆರುವುದಕ್ಕೆ ಕಾರಣ ಹಲವು ಎಂಬುದೇ ವಿಷಾದ ಸಂಗತಿ. ಪ್ರತಿಭಾವಂತ ಉತ್ಸಾಹಿ ಯುವ ಕ್ರಿಕೆಟಿಗರಿಗೆ ತಾಲೂಕಿನಲ್ಲಿ ಕೊರತೆ ಇಲ್ಲ, ಇದಕ್ಕೆ ಪೋಷಕರ ಸಹಕಾರ ಕೂಡ ದೊರೆಯುತ್ತಿದೆ, ಆದರೆ ಇಂಥ ಯುವ ಕ್ರಿಕೆಟ್ ಆಟಗಾರರು ಜಿಲ್ಲೆ ಮತ್ತು ವಿಭಾಗ ಮಟ್ಟದ ಕ್ರೀಡಾಕೂಟಗಳಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದರೂ ಮುಂದಿನ ಅಂತ ಪ್ರವೇಶಿಸಲು ಸೂಕ್ತ ಮಾರ್ಗದರ್ಶನವಾಗಲಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ವಿಫಲವಾಗಿರುವುದು ಬೇಸರದ ಸಂಗತಿ.
ವಕ್ಫ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವರೆಗೂ ಹೋರಾಟ
ಮುಫ್ತಿ ಇದ್ರೀಸ್ ಅಹಮದ್ ಸಾಬ್, ಕೆಲ ದುಷ್ಟ ಶಕ್ತಿಗಳು ಮುಸಲ್ಮಾನರನ್ನು ನಿರ್ಮೂಲನೆ ಮಾಡಲು ಹೊರಟಿದ್ದು, ಅದು ಸಾಧ್ಯವಿಲ್ಲ. ನಮ್ಮ ಪೂರ್ವಿಕರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಸಲ್ಮಾನರದು ಕೂಡ ಭಾರತ ಆಗಿದೆ. ದೇಶದಲ್ಲಿ ಆಳುತ್ತಿರುವುದು ಮೋದಿ, ಶಾ ಅವರ ಮೋಸದ ಆಡಳಿತ ಆಗಿದ್ದು, ಕೆಲ ದುಷ್ಟಶಕ್ತಿಗಳು ಮುಸಲ್ಮಾನರನ್ನು ನಿರ್ಮೂಲನೆ ಮಾಡಲು ಹೊರಟಿದ್ದಾರೆ. ಆದರೇ ಅದು ಸಾಧ್ಯವಿಲ್ಲ. ಮುಸ್ಲಿಂರಲ್ಲಿ ಕೂಡ ಯಾರು ಅಧರ್ಮದಲ್ಲಿ ಇರುತ್ತಾರೆ ಅವರು ಮುಸ್ಲಿಂ ವಿರೋಧಿಗಳು. ಇಸ್ಲಾಂ ಎಂದರೇ ಶಾಂತಿ ಮತ್ತು ಏಕತೆ ಕಲಿಸುತ್ತದೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಈ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು
ನರೇಗಾ ಕಾಮಗಾರಿಯಲ್ಲಿ ಕೆಲಸ ಕಳಪೆ
ಕಾರೇಕೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ, ಜಿಂಬೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಕಳಪೆ ಕಾಮಗಾರಿ ಮಾಡುತ್ತಿದ್ದು, ಜನರನ್ನು ಬಳಸುವ ಬದಲು ಯಂತ್ರಗಳ ಮೂಲಕ ಕಾಮಗಾರಿ ಮಾಡಿಸುತ್ತಿದ್ದಾರೆ. ಈ ಕಾಮಗಾರಿಯು ಕಳಪೆಯಾಗಿದೆ. ಗುತ್ತಿಗೆದಾರ ಕುಮಾರಸ್ವಾಮಿ ಎಂಬುವರು ಮಾಡಿದ ಕಾಮಗಾರಿಯನ್ನೇ ಮತ್ತೊಮ್ಮೆ ಮಾಡುತ್ತಿದ್ದಾರೆ. ಇವರ ಮಗ ಮಂಜುನಾಥ್ ಮತ್ತು ತಂದೆ ಸೇರಿ ಕಳೆದ ಏಳೆಂಟು ವರ್ಷಗಳಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ಮಾಡಿ, ಹಣ ಹೊಡೆಯುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರಿನಲ್ಲೂ ಕಾಮಗಾರಿ ಮಾಡಿದ್ದಾರೆ ಎಂದು ಹಣ ಪಡೆಯುತ್ತಿದ್ದಾರೆ ಎಂದು ದೂರಿದರು.
ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ, ಬಿಜೆಪಿಯಿಂದ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಮುಂದೆ ಪ್ರತಿಭಟಿಸಿದ್ದಲ್ಲದೇ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಲ್ಲಿಗೇರಿಸುವಂತೆ ಆಗ್ರಹಿಸಿದರು. ಸಾವಿರಾರು ವರ್ಷಗಳಿಂದಲೂ ಕೂಡ ಹಿಂದೂ ಧರ್ಮದ ಮೇಲೆ ಆಕ್ರಮಣ ನಡೆದರೂ ಯಾರೂ ಕೂಡ ಈ ಧರ್ಮವನ್ನು ಇಲ್ಲಿವರೆಗೂ ನಾಶ ಮಾಡಲು ಆಗಿಲ್ಲ. ನೀವು ಇದೇ ರೀತಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವರನ್ನು ಪೋಷಿಸಿಕೊಂಡು ಬಂದರೆ ಬಿಜೆಪಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ನೇರವಾಗಿ ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿಗೆ ಹೇಳುತ್ತಿದ್ದೇವೆ ಎಂದು ತಿಳಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ 6ನೇ ಸ್ಥಾನ
ಎಸ್ಸೆಸ್ಸೆಲ್ಸಿಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ಹಾಸನ ಜಿಲ್ಲೆ 6ನೇ ಸ್ಥಾನ ಪಡೆದಿದೆ. ಇನ್ನು ನಗರದ ವಿಜಯ ಶಾಲೆಯ ವಿದ್ಯಾರ್ಥಿ ಉತ್ಸವ್ ಪಟೇಲ್ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ನಗರದ ಚಿಕ್ಕಹೊನ್ನೇನಹಳ್ಳಿ ಬಳಿ ಇರುವ ವಿಜಯ ಶಾಲೆಯ ವಿದ್ಯಾರ್ಥಿಗಳೇ ಬಹುಪಾಲು ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೊದಲ ಸ್ಥಾನದ ಉತ್ಸವ್‌ ಪಟೇಲ್‌ ಹಾಗೂ ಎರಡನೇ ಸ್ಥಾನದ ಚೇತನ್‌ ಅಷ್ಟೇ ಅಲ್ಲದೆ ಕಿರಣ್‌ ಗೌಡ ಕೂಡ 625ಕ್ಕೆ 624 ಅಂಕ ಪಡೆದಿದ್ದಾನೆ. ಹೇಮಶ್ರೀ 623 ಅಂಕ, ತ್ರಿಭುವನ್‌ ಎಸ್‌. ಗೌಡ 622 ಅಂಕ ಪಡೆದಿದ್ದಾನೆ. ಈ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಪುಂಡಾನೆಗಳನ್ನು ಹದಗೊಳಿಸಲು ಸಾಫ್ಟ್‌ ರಿಲೀಫ್‌ ಸೆಂಟರ್‌
ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ಸಾಫ್ಟ್‌ ರಿಲೀಫ್‌ ಸೆಂಟರ್ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಕಾಡಾನೆ ಮಾನವ ಸಂಘರ್ಷ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ ಇಡಿ ದೇಶದಲ್ಲೆ ಈ ಸಮಸ್ಯೆ ಇದ್ದು ಸಂಕಿರ್ಣ ಸಮಸ್ಯೆ ಪರಿಹಾರಕ್ಕೆ ತನ್ನದೆ ಸಮಯ ಹಿಡಿಯಲಿದೆ. ಸಮಸ್ಯೆ ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಮೇ ತಿಂಗಳ ಅಂತ್ಯದಲ್ಲಿ ಬೆಳೆಗಾರರು, ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿದ ನಂತರ ಕಾಡಾನೆ ಪೀಡಿತ ಕ್ಷೇತ್ರದ ಶಾಸಕರೊಂದಿಗೆ ದೆಹಲಿಗೆ ನಿಯೋಗ ತೆರಳಿ ಕೇಂದ್ರ ಅರಣ್ಯ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಸಮೀಕ್ಷೆಯಲ್ಲಿ ವಡ್ಡರ್ ಬೋವಿ ಎಂದಷ್ಟೇ ನಮೂದಿಸಿ
ರಾಜ್ಯದ ಬೋವಿ ವಡ್ಡರ್ ಜನಾಂಗವನ್ನು ಸಮೀಕ್ಷೆ ವೇಳೆ ಅನುಸರಿಸಬೇಕಾದ ಕ್ರಮದ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ವೇಳೆ ಪಟ್ಟಣದ ಪ್ರವಾಸಿಮಂದಿರಕ್ಕೆ ಭೇಟಿ ನೀಡಿದ ಅವರು, ಮಾಧ್ಯಮಾದೊಂದಿಗೆ ಮಾತನಾಡಿ, ಪರಿಶಿಷ್ಟ ಜಾತಿಯ ಪೈಕಿ 101 ಉಪಜಾತಿಗಳಿದ್ದು, ಆ ಸಮುದಾಯಗಳಿಗೆ ಒಳಮೀಸಲಾತಿ ಅಥವಾ ಉಪ ವರ್ಗೀಕರಣ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಅಯೋಗ ರಚಿಸಿ ರಾಜ್ಯದೆಲ್ಲೆಡೆ ಮುಂದಿನ 5ನೇ ತಾರೀಖಿನಿಂದ ಮನೆ, ಮನೆಗೆ ತೆರಳಿ ಸಮೀಕ್ಷೆಯ ಮೂಲಕ ದತ್ತಾಂಶ ಸಂಗ್ರಹಕ್ಕೆ ಮುಂದಾಗಿದೆ.
ಹಳೆ ವಿದ್ಯಾರ್ಥಿಗಳೊಂದಿಗೆ ಗಿರಿ ದೇವನೂರು ಸಂವಾದ ಸರಣಿ
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಹಾಗೂ ರೋಬೋಟಿಕ್ಸ್‌ಗೆ ಸಂಬಂಧಿಸಿದ ವಿಷಯಗಳನ್ನು ಅರಿಯಲು ಹೆಚ್ಚಿನ ಒತ್ತು ನೀಡಬೇಕು ಎಂದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಮತ್ತು ರೀ ಆಲ್ಫಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿ ದೇವನೂರು ಅವರು ಸಲಹೆ ನೀಡಿದರು. ಕಂಪ್ಯೂಟರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ಕೃತಕ ಬುದ್ಧಿಮತ್ತೆ ಹಾಗೂ ಮೆಕ್ಯಾನಿಕಲ್‌ನಂತಹ ಕೋರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ರೋಬೋಟಿಕ್ಸ್ ಮೇಲೆ ಗಮನ ಕೇಂದ್ರೀಕರಿಸುವುದು ಸೂಕ್ತ ಎಂದು ತಿಳಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 442
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved