• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತೆಯಲ್ಲಿ ಕಳಪೆ ಬೆಣ್ಣೆ ವ್ಯಾಪಾರಿಗಳ ಹಾವಳಿ
ಚನ್ನರಾಯಪಟ್ಟಣದ ಬಿಎಸ್‌ಎನ್‌ಎಲ್ ಕಚೇರಿ ಮುಂಭಾಗದಲ್ಲಿ ಕಳಪೆ ಬೆಣ್ಣೆ ಮಾರಾಟ ಮಾಡುವವರು ಹೆಚ್ಚುತ್ತಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ವಾರವಿಡೀ ಸಂತೆ ನಡೆಯುತ್ತದೆ. ಅದರಂತೆ ಚನ್ನರಾಯಪಟ್ಟಣದ ಶನಿವಾರದ ಸಂತೆ ಎಂದರೆ ಅದು ತಾಲೂಕಿಗೆ ಹೆಸರುವಾಸಿಯಾದ ಸಂತೆಯಾಗಿದೆ. ಈ ಸಂತೆಯಲ್ಲಿ ಬೆಣ್ಣೆಯು ಕೂಡ ಅತ್ಯುತ್ತಮವಾಗಿದೆ ಎಂಬ ಹೆಸರಿದೆ. ಆದರೆ ಕೆಲ ಕಿಡಿಗೇಡಿಗಳು ಈ ಸಂತೆಗೆ ಆಗಮಿಸಿ ಕಳಪೆ ಬೆಣ್ಣೆಯನ್ನು ಮಾರಾಟ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.
ಬಸ್‌ ಹಾಗೂ ಬೊಲೆರೋ ವಾಹನ ನಡುವೆ ಡಿಕ್ಕಿ
ಅರಸೀಕೆರೆ ತಾಲೂಕಿನ ಬಾಣಾವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಶಾನೆಗೆರೆ ಸಮೀಪ ಬಸ್ ಹಾಗೂ ಬುಲೆರೋ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು ಎರಡೂ ವಾಹನಗಳು ಜಖಂ ಆಗಿರುವ ಘಟನೆ ನಡೆದಿದೆ. ಬಾಣಾವರದ ಕಡೆಗೆ ಬರುತ್ತಿದ್ದ ಬುಲೆರೋ ವಾಹನ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂ ಆಗಿದ್ದು, ಬಸ್ಸಿನ ಮುಂಭಾಗದ ಎರಡು ಚಕ್ರಗಳು ಮರಿದು ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಮ್ಮ ವಿರುದ್ಧ ಕಾನೂನು ಹೋರಾಟ ಮಾಡಿದರೆ ನಾವು ರೆಡಿ
ಸಂಪರ್ಕ, ಸಂವಹನದ ಕೊರತೆಯಿಂದ ಜೆಡಿಎಸ್ ನಾಯಕರು, ನಮ್ಮ ನಡುವೆ ಅಂತರ ಇದೆ. ವಿಶ್ವಾಸ ಕಡಿಮೆಯಾಗಿದೆ ಎಂದ ಅವರು, ನಮ್ಮ ನೈತಿಕತೆ ಬಗ್ಗೆ ಮಾತನಾಡುವ ಸಂತೋಷ್, ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಕೆಡವಿದ್ದು ಯಾರು ಎಂಬುದನ್ನು ಹೇಳಲಿ ಎಂದು ಆಗ್ರಹಿಸಿದರು. ಬಿಜೆಪಿಯಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಒಂದೇ ದಿನದಲ್ಲಿ ಜೆಡಿಎಸ್‌ಗೆ ಬಂದವರಲ್ಲಿ ಯಾವ ಸಿದ್ಧಾಂತ ಇದೆ. ನಮ್ಮ ವಿರುದ್ಧ ಅವರು ಕಾನೂನು ಹೋರಾಟ ಮಾಡಿದರೆ ನಾವೂ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ವಿರುದ್ಧ ಅರಸೀಕೆರೆ ನಗರಸಭೆ ನೂತನ ಅಧ್ಯಕ್ಷ ಸಮೀವುಲ್ಲಾ ವಾಗ್ದಾಳಿ ನಡೆಸಿದರು.
ಭವಿಷ್ಯದಲ್ಲಿ ಉದ್ಯೋಗ ಪಡೆಯಲು ಪುಸ್ತಕಗಳನ್ನು ಓದಲೇಬೇಕು
ಮನುಜ ಮತ ವೇದಿಕೆವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ಯೋಗ ಪಡೆಯಬೇಕೆಂದರೆ ಪುಸ್ತಕಗಳನ್ನು ಓದಲೇಬೇಕು. ಪುಸ್ತಕಗಳನ್ನು ಓದದಿದ್ದರೆ ಯಾವ ಉನ್ನತ ಸರ್ಕಾರ ಹುದ್ದೆಯನ್ನು ಪಡೆಯಲಾಗುವುದಿಲ್ಲ. ಯುವಕರು ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ತಮ್ಮ ಹಳ್ಳಿಗಳ ಬಗ್ಗೆ ಚಿಂತಿಸಬೇಕು. ಸಮಾಜದ ಒಳಗೆ ನಡೆಯುವ ಅನೀತಿಗಳ ಬಗ್ಗೆ ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು. ಮೊಬೈಲ್ ಚಟವಾಗುತ್ತಿದ್ದು, ಇದು ರೋಗವಾಗಿ ಭವಿಷ್ಯವನ್ನು ಕಸಿಯುತ್ತದೆ ಎಂದು ಡಿವೈಎಸ್ಪಿ ರವಿಪ್ರಸಾದ್ ಹೇಳಿದರು .
ನಗರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದು
ನಗರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಜತೆಗೆ ನಗರದ ಜನತೆಯ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಗರಸಭೆ ಅಧ್ಯಕ್ಷ ಎಂ ಸಮಿವುಲ್ಲಾ ಹೇಳಿದರು. ಮುಂಜಾನೆ 5 ಗಂಟೆಗೆ ನಗರಸಭೆಗೆ ಆಗಮಿಸಿದ ಅಧ್ಯಕ್ಷ ಸಮಿವುಲ್ಲಾ ಹಾಗೂ ಉಪಾಧ್ಯಕ್ಷ ಮನೋಹರ ಮೇಸ್ತ್ರಿ ನಗರಸಭೆಯ ಪೌರಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದರಲ್ಲದೆ ಅವರ ಕುಂದುಕೊರತೆಯನ್ನು ಸಹ ಆಲಿಸಿದರು. ನಗರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಸೇವಾ ಕಾರ್ಯದಲ್ಲಿ ತೊಡಗಿರುವ ನೀವು ಸಹ ತಮ್ಮ ಆರೋಗ್ಯದ ಬಗ್ಗೆ ಕೂಡ ಕಾಳಜಿ ವಹಿಸಬೇಕು ಹಾಗೂ ನಗರಸಭೆ ವತಿಯಿಂದ ನೀಡುವ ಊಟ ಮತ್ತು ಉಪಹಾರವನ್ನು ಸಹ ಸಕಾಲದಲ್ಲಿ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಿ ಎಂದರು.
ಬಡ ಕುಟುಂಬಗಳ ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಮಾಜಿ ಸಚಿವ ಎಚ್ ಎಂ ರೇವಣ್ಣ

ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢರಾಗಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್ ಎಂ ರೇವಣ್ಣ ತಿಳಿಸಿದರು 

ಮಾನವ ಹಕ್ಕುಗಳ ವೇದಿಕೆ ಹೆಸರಿನಲ್ಲಿ ಮಹಿಳೆಯಿಂದ ಮೋಸ
ಹಾಸನ ನಗರದ ಸಮೀಪ ವಿಜಯನಗರದ ವಾಸಿಯಾದ ಅನುಷಾ ಕೃಪಾ ಮತ್ತು ಇವರ ಸ್ನೇಹಿತರಾದ ಭುವನೇಶ್ವರಿ ಅಶ್ವಿನಿ, ದೇವರಾಜ್, ಗಫಾರ್, ಶಶಿ, ಅಭಿಷೇಕ್ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತನೆಂದು ಹೇಳಿಕೊಳ್ಳುವ ಸಯ್ಯದ್ ಏಜಾಜ್ ಇವರು ರೈತರಿಗೆ ಮೋಸ ಮಾಡಿ, ಕೋಟ್ಯಂತರ ರುಪಾಯಿ ಹಣವನ್ನು ಪಡೆದು ವಂಚಿಸಿದ್ದು, ನಮಗೆ ವಂಚಿಸಿರುವವರ ಮೇಲೆ ನಾವುಗಳು ಹಾಸನ ಪೆನ್ನನ್ ಮೊಹಲ್ಲಾ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ರವರಿಗೆ ದೂರು ನೀಡಲು ಹೋದಾಗ ಇನ್ಸ್‌ಪೆಕ್ಟರ್‌ರವರು ನಮ್ಮ ದೂರನ್ನು ಸ್ವೀಕರಿಸಿಲ್ಲ ಎಂದು ರೈತರು ಎಸ್‌ಪಿ ಮೊಹಮದ್‌ ಸುಜೀತಾರಿಗೆ ಮನವಿ ಸಲ್ಲಿಸಿದ್ದಾರೆ.
ಜೆಡಿಎಸ್ ಮೈತ್ರಿ ಧರ್ಮ ಪಾಲಿಸಿದೆ
ಹಾಸನ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದವರು ಮೈತ್ರಿ ಧರ್ಮವನ್ನು ಪಾಲನೆ ಮಾಡಿಲ್ಲ ಎಂದು ಮಾಜಿ ಶಾಸಕ ಪ್ರೀತಂ ಗೌಡರು ಹೇಳಿಕೆ ನೀಡಿದ್ದು, ನಾವು ಮೈತ್ರಿ ಧರ್ಮವನ್ನು ಪಾಲನೆ ಮಾಡಿದ್ದು, ಬಿಜೆಪಿಯವರಿಗೆ ಮೈತ್ರಿ ಧರ್ಮ ಏನೆಂದು ಗೊತ್ತಿಲ್ಲ ಎಂದು ಬಿಜೆಪಿ ಹೇಳಿಕೆಗೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡರು ತಿರುಗೇಟು ನೀಡಿದರು.
ವಿಮೆಗಾಗಿ ಬೇರೊಬ್ಬನನ್ನು ಕೊಲ್ಲಿಸಿದ ದಂಪತಿ
ವಿಮೆ ಹಣಕ್ಕಾಗಿ ಒಬ್ಬ ವ್ಯಕ್ತಿಯ ಬದಲಾಗಿ ಬೇರೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಅದನ್ನು ಅಪಘಾತ ಎಂದು ಬಿಂಬಿಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗಂಡಸಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಡಬಲ್ ಆಕ್ಸಿಡೆಂಟ್ ಬೆನಿಫಿಟ್ ಮಾಡಿಸಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಕೋಟಿಗಟ್ಟಲೆ ಹಣ ಬರುತ್ತದೆ ಎಂದು ತಿಳಿದು, ಯಾರೋ ಅಪರಿಚಿತ ವ್ಯಕ್ತಿಯನ್ನು ಕರೆತಂದು, ಆರೋಪಿಗಳು ಇತರರ ಸಹಾಯದಿಂದ ಅಪರಿಚಿತ ವ್ಯಕ್ತಿಯ ಮೇಲೆ ಲಾರಿಯನ್ನು ಹತ್ತಿಸಿ ಕೊಲೆ ಮಾಡಿ, ಅದನ್ನೇ ಮುನಿಸ್ವಾಮಿಗೌಡನ ಸಾವು ಎಂದು ಬಿಂಬಿಸಿ, ಇನ್ಸೂರೆನ್ಸ್ ಹಣವನ್ನು ಪಡೆಯಲು ಕೊಲೆ ಮಾಡಲಾಗಿರುವುದು ಬೆಳಕಿಗೆ ಬಂದಿದೆ.
ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ
ಬೇಲೂರು ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋ ಷ್ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು. ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ದಿನಮಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ನಾಗರಿಕರು ಸರ್ಕಾರಿ ಶಾಲೆಗಳೆಂದು ಕೀಳಾಗಿ ಕಾಣಬಾರದು ಎಂದರು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved