• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗೆ ಕುಸಿದುಬಿದ್ದ ಶಿವಸಾಗರ ದೇವಸ್ಥಾನದ ಗೋಡೆ
ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಶಿವಸಾಗರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ದೇವಸ್ಥಾನದ ಮಣ್ಣಿನ ಗೋಡೆ ಕುಸಿದು ಬಿದ್ದಿದೆ.ಈ ಬಗ್ಗೆ ಕಳೆದ ಒಂದು ತಿಂಗಳ ಹಿಂದಿಯೇ ತಹಸೀಲ್ದಾರ್ ಹಾಗೂ ಸ್ಥಳೀಯ ಶಾಸಕರಿಗೆ ಮನವಿ ಪತ್ರ ಕೊಟ್ಟರೂ ಯಾರು ಕೂಡ ಗಮನಹರಿಸಿಲ್ಲ, ಇತ್ತ ತಿರುಗಿ ಸಹ ನೋಡಿಲ್ಲ. ಹಾಗಾಗಿ ಕೂಡಲೇ ಸಂಬಂಧಪಟ್ಟವರು ಸ್ಥಳ ಪರಿಶೀಲನೆ ನೆರವು ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮಸ್ಥರೆಲ್ಲ ಸೇರಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ತಿಳಿಸಿದರು.
ಇಂದು ದುಡ್ಡಿಗೆ ಜನರಲ್ಲಿ ಸಮಸ್ಯೆ ಇಲ್ಲ ನಗುವಿಗೆ ಸಮಸ್ಯೆ
ಬಸವಣ್ಣನವರು ಕಾಯಕವೇ ಕೈಲಾಸವೆಂದರು, ಕೈಲಾಸ ಕಾಣಬೇಕಾದರೇ ಶಿಸ್ತು, ಸಮಯ ಪ್ರಜ್ಞೆ, ನಿಷ್ಟೆ ಹಾಗೂ ತಾಳ್ಮೆ ಮುಖ್ಯವಾಗಿದೆ, ಇತ್ತೀಚಿನ ದಿನಗಳಲ್ಲಿ ಹಣದ ಹಿಂದೆ ಓಡುವವರ ಸಂಖ್ಯೆ ಹೆಚ್ಚಿದೆ. ಆದರೆ ಸೇವಾ ಮನೋಭಾವ ಕಾಣದಾಗಿದೆ. ಇಂದು ದುಡ್ಡಿಗೆ ಜನರಲ್ಲಿ ಸಮಸ್ಯೆ ಇಲ್ಲ, ಆದರೆ ನಗುವಿನ ಸಮಸ್ಯೆ, ನೆಮ್ಮದಿಯ ಬದುಕಿನ ಸಮಸ್ಯೆ ಹಾಗೂ ಅಸೂಯೆ ಸಮಸ್ಯೆ ಬಹಳವಾಗಿ ಕಾಡುತ್ತಿದೆ. ಇದು ತೊಲಗಬೇಕಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರಭುಶಂಕರ್‌ ಸಲಹೆ ನೀಡಿದರು.
ತಮ್ಮ ಮನೆ ಕೆಲಸದ ಮಹಿಳೆ ಮೇಲೆ ಪ್ರಜ್ವಲ್‌ ರೇಪ್‌ ದೃಢ -ವಿಡಿಯೋಗಳೂ ಸತ್ಯ : ವಿಶೇಷ ತನಿಖಾ ತಂಡ

ತಮ್ಮ ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಅವರ ಪುತ್ರ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ  ವಿಶೇಷ ತನಿಖಾ ತಂಡ (ಎಸ್‌ಐಟಿ) ಉಲ್ಲೇಖಿಸಿದೆ.

ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಡಿಸಿಗೆ ಮನವಿ
ಚನ್ನಕೇಶವ ದೇವಾಲಯ ಯುನೆಸ್ಕೋ ಸಂಸ್ಥೆಗೆ ಸೇರ್ಪಡೆಯಾಗಿದ್ದು ಪ್ರವಾಸಿಗರ ಸೌಕರ್ಯಗಳಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು. ಪಟ್ಟಣದಲ್ಲಿ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯ ಸಂಘಗಳ ಪ್ರಮುಖರುಗಳಿಂದ ಸಲಹೆ ಸಹಕಾರ ಸ್ವೀಕರಿಸಿ ಉತ್ತಮ ಆಡಳಿತ ನಡೆಸಲು ಚಿಂತನೆ ನಡೆಸಿದ್ದೇನೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ನನ್ನನ್ನೆ ಭೇಟಿ ಮಾಡಿ ಸಮಸ್ಯೆ ಪರಿಹರಿಸಿ ಕೊಳ್ಳಲಿ ಎಂದು ಪುರಸಭೆ ನೂತನ ಅಧ್ಯಕ್ಷ ಎ.ಆರ್‌.ಅಶೋಕ್ ತಿಳಿಸಿದ್ದಾರೆ.
ಬ್ರಹ್ಮಕುಮಾರಿ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ
ಕೊಣನೂರಿನ ಬ್ರಹ್ಮಕುಮಾರಿ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ ಮಹೋತ್ಸವ ಆಚರಿಸಲಾಯಿತು.ರಕ್ಷಾಬಂಧನವೂ ಭಾರತೀಯ ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರುವ ಆಧ್ಯಾತ್ಮಿಕ ಮೌಲ್ಯಗಳನ್ನು ಮತ್ತು ವಿಶ್ವಬಂಧುತ್ವವನ್ನು ಸರ್ವರಿಗೂ ನೀಡುವ ಅದ್ಭುತವಾದ ಹಬ್ಬವಾಗಿದೆ. ಕೊಣನೂರಿನ ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸನದ ಬಿ.ಕೆ. ಮೀನಾ ಅವರು ಮಾತನಾಡಿ, ಸಹೋದರತೆಯನ್ನು ಸಾರುವ ಪವಿತ್ರ ಹಬ್ಬ ಈ ರಕ್ಷಾಬಂಧನವಾಗಿದೆ. ನಮ್ಮಲ್ಲಿ ಸಕಾರಾತ್ಮಕ ಪರಿವರ್ತನೆಯನ್ನು ತಂದುಕೊಂಡು ಶ್ರೇಷ್ಠ ನಡವಳಿಕೆಯನ್ನು ಜೀವನದಲ್ಲಿ ಪಾಲಿಸುವ ಪ್ರತಿಜ್ಞೆಯನ್ನು ಕೈಗೊಳ್ಳುವ ದಿನವಾಗಿದೆ
ಕ್ರೀಡೆ ಏಕಾಗ್ರತೆ ಹಾಗೂ ಚಿಂತನಾ ಶಕ್ತಿ ಹೆಚ್ಚಿಸುತ್ತದೆ
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗುತ್ತದೆ. ಕಲಿಕೆಯಲ್ಲಿ ಏಕಾಗ್ರತೆ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ಸಮಚಿತ್ತ ನಿರ್ಧಾರ ಕೈಗೊಳ್ಳಲು ಕ್ರೀಡೆ ಮಹತ್ವದ ಪಾತ್ರ ಕೈಗೊಳ್ಳುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಅಭಿಪ್ರಾಯಪಟ್ಟರು. ಹಳ್ಳಿಮೈಸೂರು ಹೋಬಳಿ ಮಟ್ಟದ ೨೦೨೪-೨೫ನೇ ಸಾಲಿನ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಜೆಎಸ್‌ಎಸ್ ಸಂಸ್ಥೆಯು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸುವ ಜತೆಗೆ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದಿದೆ ಎಂದು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ
ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುವುದರ ಮೂಲಕ ಮಹಾರಾಷ್ಟ್ರದ ರಾಮಗಿರಿಯ ಗಂಗಾಗಿರಿ ಸ್ವಾಮೀಜಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿರುವುದಲ್ಲದೆ ಇಸ್ಲಾಂ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಹಾಗೆ ನಡೆದುಕೊಂಡಿದ್ದಾರೆ ಇವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಗಂಗಾ ಗಿರಿ ಮಹಾರಾಜ್‌ ವಿರುದ್ಧ ಬಾಣಾವರದ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು.
ಶೀಘ್ರದಲ್ಲೇ ಕಾಂಗ್ರೆಸ್‌ನ ಎಲ್ಲಾ ಶಾಸಕರಿಂದ ರಾಷ್ಟ್ರಪತಿ ಭೇಟಿ
ಎಲ್ಲಾ ಶಾಸಕರು ದೆಹಲಿಗೆ ಹೋಗಿಲ್ಲ. ರಾಜ್ಯದ ಇವತ್ತಿನ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡಲು ಹೋಗಿದ್ದಾರೆ. ರಾಷ್ಟ್ರಪತಿ ಅವರನ್ನು ಭೇಟಿ ಮಾಡೋಣ ಎಂದು ಎಲ್ಲಾ ಶಾಸಕರು ಒತ್ತಾಯ ಮಾಡುತ್ತಿದ್ದೇವೆ. ಬಿಜೆಪಿ, ಜೆಡಿಎಸ್ ನವರು ಗದಾಪ್ರಹಾರ ಮಾಡುತ್ತಿದ್ದು, ಅದನ್ನು ರಾಷ್ಟ್ರಪತಿಗಳಿಗೆ ಮನದಟ್ಟು ಮಾಡಿಕೊಡೋಣ ಎಂದು ಹೇಳಿದ್ದೇವೆ. ಆದಷ್ಟು ಬೇಗ ರಾಷ್ಟ್ರಪತಿಗಳನ್ನು ಎಲ್ಲಾ ಶಾಸಕರು ಭೇಟಿ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.
ವೈದ್ಯೆ ಅತ್ಯಾಚಾರ ಹತ್ಯೆ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ
ಕೋಲ್ಕತಾದಲ್ಲಿ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹತ್ಯೆ ಖಂಡಿಸಿ ಚನ್ನರಾಯಪಟ್ಟಣ ತಾಲೂಕು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ವಿವಿಧ ಸಂಘಟನೆಗಳು ಹಾಗೂ ವೈದ್ಯರ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಈ ದೌರ್ಜನ್ಯವನ್ನು ಖಂಡಿಸಿ ವಿವಿಧ ಘಟನೆಗಳು ಮತ್ತು ಮಹಿಳೆಯರು ಹೋರಾಟವನ್ನು ನಡೆಸುತ್ತಿದ್ದಾರೆ. ಆದರೆ ಇಂತಹ ಹೋರಾಟದಿಂದ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳಿಗೆ ಕಡಿವಾಣ ಹಾಕುವ ಕಾನೂನು ಕ್ರಮಗಳು ಹೆಚ್ಚಾಗಬೇಕು ಎಂದು ಡಾ. ವಿ. ಮಹೇಶ್ ಒತ್ತಾಯಿಸಿದರು.
ಜೆಡಿಎಸ್‌ ಬಿಜೆಪಿ ಸದಸ್ಯರೊಂದಿಗೆ ನಾನಾಗಿಯೇ ಹೋಗಿದ್ದು
ಅರಕಲಗೂಡು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರೊಂದಿಗೆ ನಾನೇ ಖುದ್ದು ಸಂಪರ್ಕ ಸಾಧಿಸಿ ಕೈಜೋಡಿಸಿದ್ದೆ ಹೊರತು ಈ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀಧರ್‌ ಗೌಡರ ಪಾತ್ರ ಏನೇನೂ ಇಲ್ಲ ಎಂದು ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸುಬಾನ ಷರೀಫ್ ಸ್ಪಷ್ಟಪಡಿಸಿದರು. ಕೊನೆ ಕ್ಷಣದಲ್ಲಾದ ರಾಜಕೀಯ ಬದಲಾವಣೆಗಳಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಕಾಂಗ್ರೆಸ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದೆ ಎಂದು ತಿಳಿಸಿದರು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved