ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳಿಗೆ ಸನ್ಮಾನ ಶಲ್ವಪಿಳ್ಳೆ ಅಯ್ಯಂಗಾರ್ ಅವರ ಹೆಸರಿನಲ್ಲಿ, ಎಸ್. ಎಸ್. ಎಲ್. ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವರ ಕುಟುಂಬದ ಸದಸ್ಯರಾದ ಶ್ರೀಮತಿ ಅವರು ನಗದು ಬಹುಮಾನ ನೀಡಿ ಪುರಸ್ಕರಿಸಿದರು. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪ್ರಶಸ್ತಿ ಪಡೆದ ಈ ಶಾಲಾ ಕ್ರೀಡಾಪಟುಗಳನ್ನು ಕೂಡ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇದಿಕೆಯಲ್ಲಿ ರಾಜ್ಯ ಸೈನಿಕ ರತ್ನ ಪ್ರಶಸ್ತಿ ವಿಜೇತಕ ಮಾಜಿ ಸೈನಿಕ ಜಿ.ಎನ್.ನಾಗರಾಜ್, ಮಾಜಿ ಸೈನಿಕರುಗಳಾದ ಎಸ್. ರಂಗಪ್ಪ , ಸಿ.ವಾಸು, ವೇಣುಗೋಪಾಲ ಅವರುಗಳನ್ನು ಸನ್ಮಾನಿಸಲಾಯಿತು.