• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈದುಂಬಿ ಹರಿಯುವ ದ್ವಾರಸಮುದ್ರ ಕೆರೆ; ರೈತೆರಿಗೆ ಜೀವನಾಡಿ
ಇತಿಹಾಸ ಪ್ರಸಿದ್ಧ ಹಾಸನದ ದ್ವಾರಸಮುದ್ರ ಕೆರೆ ಮೈತುಂಬಿ ಕೋಡಿ ಹರಿಯುತ್ತಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆಯಾದಂತಹ ಹಳೆಬೀಡು ದೇವಾಲಯದ ಬಲಭಾಗದಲ್ಲಿದೆ. ಸುಮಾರು ೮೦೦ ಎಕರೆ ವಿಸ್ತೀರ್ಣದ ದ್ವಾರಸಮುದ್ರ ಕೆರೆ.
ಹಾಸನ ನಗರಸಭೆ: ಜೆಡಿಎಸ್‌ನ ಚಂದ್ರೇಗೌಡಗೆ ಅಧ್ಯಕ್ಷ ಸ್ಥಾನ
ಪೂರ್ವನಿಗದಿಯಂತೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ 9ನೇ ವಾರ್ಡ್‌ನ ಜೆಡಿಎಸ್‌ ಸದಸ್ಯ ಚಂದ್ರೇಗೌಡ ಅಧ್ಯಕ್ಷರಾಗಿಯೂ, ಬಿಜೆಪಿಯಿಂದ ಗೆದ್ದರೂ ಜೆಡಿಎಸ್‌ ಜತೆ ಗುರ್ತಿಸಿಕೊಂಡ ಲತಾದೇವಿ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ.
ಸಮಾಜದ ಪ್ರಜ್ಞಾವಂತಿಕೆಯಲ್ಲಿ ಕ್ಯಾಮೆರಾ ಪ್ರಮುಖ ಪಾತ್ರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಡಾ.ಎಚ್.ಎಲ್.ಮಲ್ಲೇಶ್ ಗೌಡ
ಸಮಾಜವನ್ನು ಪ್ರಜ್ಞಾವಂತಿಕೆಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕ್ಯಾಮೆರಾಗಳು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆಯಲ್ಲಿ ಮಾತನಾಡಿದರು.
ಜೀವನದಲ್ಲಿ ನಾರಾಯಣಗುರು ಆದರ್ಶ ರೂಢಿಸಿಕೊಳ್ಳಿ: ನೌಕರರ ಸಂಘದ ಈ.ಕೃಷ್ಣೇಗೌಡ
ಬ್ರಹ್ಮಶ್ರೀ ನಾರಾಯಣಗುರು ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವ ಮೂಲಕ ದೇಶವನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇವರಾಜು ಅರಸು ಸಾಮಾಜಿಕ ನ್ಯಾಯದ ಹರಿಕಾರ: ತಹಸೀಲ್ದಾರ್ ನಂದಕುಮಾರ್
ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ರಾಜ್ಯದ ಪ್ರಥಮ ಮುಖ್ಯಮಂತ್ರಿ ಡಿ. ದೇವರಾಜ ಅರಸು. ಅವರ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಎಂದು ತಹಸೀಲ್ದಾರ್ ನಂದಕುಮಾರ್ ತಿಳಿಸಿದರು. ಆಲೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.
ಮಕ್ಕಳು ಕ್ರೀಡೆ ಜತೆಗೆ ಅಭ್ಯಾಸದ ಕಡೆಗೂ ಒತ್ತು ನೀಡಿ: ಶಾಸಕ ಎಚ್.ಕೆ.ಸುರೇಶ್
ವಿದ್ಯಾರ್ಥಿಗಳು ಕ್ರೀಡೆ ಜತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚು ಒತ್ತು ನೀಡಬೇಕು. ಕ್ರೀಡೆಗೆ ಒಳ್ಳೆಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸೇವಿಸಿದರೆ ದೇಹಕ್ಕೆ ಶಕ್ತಿ ದೊರೆಯುವುದು ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡು ಎ ಮತ್ತು ಬಿ ವಲಯಗಳ ಹಿರಿಯ ಪ್ರಾಥಮಿಕ ಕ್ರೀಡಾಕೂಟದ ಉದ್ಘಾಟನೆಯ ಸಮಾರಂಭದಲ್ಲಿ ಮಾತನಾಡಿದರು.
ಹಾಸನ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಅವಧಿ 50:50 ಆಗಬೇಕು: ಬಿಜೆಪಿ ನಗರಾಧ್ಯಕ್ಷ ಮಂಜು ಬೀರನಹಳ್ಳಿ
ಹಾಸನ ನಗರಸಭೆಯಲ್ಲಿ ಮೈತ್ರಿಗೆ ಯಾವ ಸಮಸ್ಯೆ ಆಗದಂತೆ ಪ್ರೀತಂಗೌಡರ ಸಲಹೆಯಂತೆ ೨೦ ತಿಂಗಳ ಒಟ್ಟು ಅಧಿಕಾರಾವಧಿಯಲ್ಲಿ ಜೆಡಿಎಸ್‌ ಹಾಗೂ ಬಿಜೆಪಿಗೆ ತಲಾ ೧೦ ತಿಂಗಳ ಅಧಿಕಾರ ಹಂಚಿಕೆಯಾಗಬೇಕು ಎಂದು ಬಿಜೆಪಿ ನಗರಾಧ್ಯಕ್ಷ ಮಂಜು ಬೀರನಹಳ್ಳಿ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳಿಗೆ ಸನ್ಮಾನ
ಶಲ್ವಪಿಳ್ಳೆ ಅಯ್ಯಂಗಾರ್ ಅವರ ಹೆಸರಿನಲ್ಲಿ, ಎಸ್. ಎಸ್. ಎಲ್. ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವರ ಕುಟುಂಬದ ಸದಸ್ಯರಾದ ಶ್ರೀಮತಿ ಅವರು ನಗದು ಬಹುಮಾನ ನೀಡಿ ಪುರಸ್ಕರಿಸಿದರು. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪ್ರಶಸ್ತಿ ಪಡೆದ ಈ ಶಾಲಾ ಕ್ರೀಡಾಪಟುಗಳನ್ನು ಕೂಡ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇದಿಕೆಯಲ್ಲಿ ರಾಜ್ಯ ಸೈನಿಕ ರತ್ನ ಪ್ರಶಸ್ತಿ ವಿಜೇತಕ ಮಾಜಿ ಸೈನಿಕ ಜಿ.ಎನ್.ನಾಗರಾಜ್, ಮಾಜಿ ಸೈನಿಕರುಗಳಾದ ಎಸ್. ರಂಗಪ್ಪ , ಸಿ.ವಾಸು, ವೇಣುಗೋಪಾಲ ಅವರುಗಳನ್ನು ಸನ್ಮಾನಿಸಲಾಯಿತು.
ವೈದ್ಯೆ ಹತ್ಯೆ ಖಂಡಿಸಿ ಎಸ್‌ಡಿಎಂ ಬೃಹತ್ ಪ್ರತಿಭಟನೆ
ಕರ್ತವ್ಯನಿರತ ವ್ಯದ್ಯರ ಮೇಲಿನ ದೌರ್ಜನ್ಯ ನಿಲ್ಲಿಸುವಂತೆ ಆಗ್ರಹಿಸಿ ಹಾಗೂ ಹತ್ಯೆಗೆ ತುರ್ತು ನ್ಯಾಯ ದೊರೆಯಬೇಕು ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷಿತ ಕ್ರಮಗಳನ್ನು ಖಾತ್ರಿಗೊಳಿಸಬೇಕೆಂದು ಒತ್ತಾಯಿಸಿ ಶ್ರೀ ಧರ್ಮಸ್ಥಳ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ಹುಲಿ ಹೆಜ್ಜೆ ಗುರುತು ಪತ್ತೆ
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಶಿರಗುರ ವ್ಯಾಪ್ತಿಗೆ ಸೇರಿದ ಅರಣ್ಯ ಪ್ರದೇಶದ ಸುತ್ತ ಮುತ್ತಲಿನಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು ಸ್ಥಳೀಯರು, ವಾಹನ ಸವಾರರು, ಕೃಷಿಕರು ಭಯಭೀತರಾಗಿದ್ದಾರೆ. ಕಾನನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸ್ತವ್ಯ ಹೂಡಿರಬಹುದು ಎಂದು ಅರಣ್ಯ ಇಲಾಖೆಯವರು ಶಂಕಿಸಿ ಹುಲಿಯ ಚಲನ ವಲನಗಳ ಬಗ್ಗೆ ಶೋಧನೆ ನಡೆಸುತ್ತಿದ್ದು ಮುಂದಿನ ಅಗತ್ಯ ಕ್ರಮಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾಡಾನೆಗಳ ಉಪಟಳದಿಂದ ಹೈರಣರಾಗಿದ್ದ ಮಲೆನಾಡಿಗರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಸ್ಥಳೀಯರು ಮನೆಯಿಂದ ಹೊರ ಬರಲು ಭಯ ಪಡುವಂತಾಗಿದೆ.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 553
  • next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved