• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವ ಗ್ಯಾರಂಟಿಯನ್ನೂ ವಾಪಸ್ ಪಡೆಯುವುದಿಲ್ಲ
ಯಾರು ಏನಾದರೂ ಹೇಳಲಿ ನಮ್ಮ ಕೇಂದ್ರದ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಹೇಳಿದ್ದು, ಗ್ಯಾರಂಟಿ ಬಗ್ಗೆ ಯಾರೂ ಮಾತನಾಡಬಾರದು.
ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಿದಾಗ ರಾಮರಾಜ್ಯ
ಜನಪ್ರತಿನಿಧಿಗಳು ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದರೆ ನಮ್ಮ ದೇಶ ರಾಮ ರಾಜ್ಯವಾಗುತ್ತದೆ ಎಂದು ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಎನ್ಎಸ್. ಲಕ್ಷ್ಮಣ್ ಗುರುವಾರ ತಿಳಿಸಿದರು.
2000 ಅಡಿಗಳ ತ್ರಿವರ್ಣ ಧ್ವಜ ಮೆರವಣಿಗೆಗೆ ಸಚಿವರಿಂದ ಚಾಲನೆ
ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ಇಂದು ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ತ್ರಿವರ್ಣ ಧ್ವಜ ಮೆರವಣಿಗೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಮೀನು ವಿವಾದಕ್ಕೆ ಜೋಳದ ಬೆಳೆ ನಾಶ
ಜಮೀನಿನ ಆಸುಪಾಸಿನ ಜಮೀನಿನವರಿಗೆ ಓಡಾಡಲು ಜಾಗ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಕೆಲವರು ಬೆಳೆದುನಿಂತಿದ್ದ ಜೋಳವನ್ನು ನಾಶಪಡಿಸಿರುವ ಘಟನೆ ಹಾಸನ ತಾಲೂಕಿನ ದುದ್ದ ಹೋಬಳಿಯ ಕೃಷ್ಣಾಪುರ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಪಕ್ಕದ ಜಮೀನಿನ ಛಾಯಾ ಎಂಬುವವರ ಮೇಲೆ ಗೌಡೇಗೌಡರು ಪೊಲೀಸರಿಗೆ ದೂರು ನೀಡಿದ್ದಾರೆ. ದುದ್ದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಎಸ್ಸಿ ಎಸ್ಟಿ ಅನುದಾನ ದುರ್ಬಳಕೆ ಖಂಡಿಸಿ ಬಿಎಸ್ಪಿ ಪ್ರತಿಭಟನೆ
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ-ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಕೋಟ್ಯಂತರ ರು. ಹಣವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ರಾಜ್ಯಪಾಲರಿಗೆ ಮಾಡಿಕೊಂಡ ಮನವಿಯನ್ನು, ಗ್ರೇಡ್ ೨ ಪ್ರಭಾರ ತಹಸೀಲ್ದಾರ್ ಲೋಕೇಶ್ ಅವರಿಗೆ ಮನವಿ ಸಲ್ಲಿಸಿ, ಬಿಎಸ್ಪಿ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ ಪ್ರತಿಭಟನೆ ನಡೆಸಿದರು.
ಭೂಕುಸಿತ ತಡೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ
ಭೂಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳ ಗುಚ್ಛಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಸಮಿತಿಯ ಸದಸ್ಯರೊಂದಿಗೆ ಸಮನ್ವಯಗೊಳಿಸಿಗೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಭೂಕುಸಿತ ಅಧ್ಯಯನ ವರದಿಗಳಲ್ಲಿ ಸೂಚಿಸಿರುವಂತೆ ಮಾರ್ಗಸೂಚಿಗಳನ್ನು ಹಾಗೂ ತಜ್ಞರ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನ ಮಾಡಿಕೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ತಿಳಿಸಿದರು.
ಡೀಸಿ ಸತ್ಯಭಾಮ ವಿರುದ್ಧ ರೇವಣ್ಣ ಅಸಮಾಧಾನ
ಹಾಸನಾಂಬ ದರ್ಶನೋತ್ಸವದ ಪೂರ್ವಭಾವಿ ಸಭೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ನಿರ್ಧಾರಕ್ಕೆ ಜೆಡಿಎಸ್‌ ನಾಯಕ ಎಚ್‌ ಡಿ ರೇವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪುಣ್ಯಕೋಟಿ ಕಥೆ ಹೇಳುವವರು ಅವರು ಅವರ ಯಜಮಾನರನ್ನು ಕೂರಿಸಿಕೊಂಡು ಪೂಜೆ ಮಾಡಲಿ ಎಂದು ವ್ಯಂಗ್ಯವಾಡಿದರು. ನಮ್ಮ ಜಿಲ್ಲೆಯ ಬೆಳವಣಿಗೆಯನ್ನು ಕೊಲ್ಲಲು ಹೋಗಬೇಡಿ. ದ್ವೇಷದ ರಾಜಕಾರಣ ಮಾಡಬೇಡಿ. ನೀವು ಅಭಿವೃದ್ಧಿ ಮಾಡದಿದ್ದರೆ ಮುಂದೆ ನಾನು ಬರಬಹುದು, ಸ್ವರೂಪ್ ಬರಬಹುದು ನಾವು ಮಾಡುತ್ತೇವೆ ಎಂದರು.
ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಬಿ ಎನ್ ಚಂದ್ರಶೇಖರ್
ಬೇಲೂರಿನ ಅರ್ಬನ್ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿ ಎನ್ ಚಂದ್ರಶೇಖರ್‌ರವರು ಒಂದು ಮತದ ಅಂತರದಿಂದ ವಿಜೇತರಾದರು. ೧೩ ಜನ ಸದಸ್ಯರ ಬೆಂಬಲ ಕೋರಿ ಬಿ ಎನ್ ಚಂದ್ರಶೇಖರ್‌ ಹಾಗೂ ಎಸ್ ಕೆ ನಾಗೇಶ್ ಅವರು ನಾಮಪತ್ರ ಸಲ್ಲಿಸಿದ್ದರು. ತೀವ್ರ ಪೈಪೋಟಿಯಿಂದ ಕೂಡಿದ್ದ ಚುನಾವಣೆಯಲ್ಲಿ ೭ ಮತಗಳನ್ನು ಚಂದ್ರಶೇಖರ್ ಪಡೆದರು. ೬ ಮತಗಳನ್ನು ಪಡೆದ ಎಸ್ ಕೆ ನಾಗೇಶ್ ೧ ಮತದ ಅಂತರದಲ್ಲಿ ಪರಾಭವಗೊಂಡರು.
ಸಿಟಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ
ಹಾಸನ ನಗರದ ಹಳೆ ಬಸ್‌ ನಿಲ್ದಾಣದಲ್ಲಿ ಸುಮಾರು ೨೦ಕ್ಕೂ ಹೆಚ್ಚು ಯುವಕರಿದ್ದ ಎರಡು ಗುಂಪುಗಳು ಮೊದಲು ಮಾತಿಗೆ ಮಾತು ಬೆಳೆಸಿದ್ದು, ಯುವಕರ ನಡುವೆ ಗಲಾಟೆ ಪ್ರಾರಂಭವಾಗುತ್ತಿದ್ದಂತೆ ಪ್ರಯಾಣಿಕರು ಆತಂಕದಿಂದ ಓಡಿ ಹೋಗಿದ್ದಾರೆ. ಈ ಜಗಳವನ್ನು ಅನೇಕರು ಸುಮ್ಮನೆ ನೋಡುತ್ತಿದ್ದರೆ, ಸಾರಿಗೆ ಬಸ್ ಚಾಲಕರು ಹಾಗೂ ಸಿಬ್ಬಂದಿ ಮೂಕಪ್ರೇಕ್ಷರಾಗಿ ನಿಂತಿದ್ದರು. ಗಲಾಟೆಯ ವೇಳೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿಯೂ ನಡೆದಿದ್ದರಿಂದ ಕೆಲ ಯುವಕರ ಬಟ್ಟೆಗಳು ಹರಿದುಹೋದವು. ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಈ ಬಸ್ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಇಲ್ಲದೆ ಇರುವುದು ವಿಪರ್ಯಾಸ. ಯುವಕರು ಆಗಾಗ್ಗೆ ಇಲ್ಲಿ ಜಗಳ ಮಾಡುತ್ತಲೆ ಇರುತ್ತಾರೆ.
ಅಂಗನವಾಡಿಗಳಲ್ಲಿ ದಾಖಲೆಯಲ್ಲಿರುವುದಕ್ಕಿಂತ ಕಡಿಮೆ ಮಕ್ಕಳು
ಜಿಲ್ಲೆಯಲ್ಲಿ ಒಟ್ಟು ೨,೬೯೧ ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ ೩ ವರ್ಷದಿಂದ ೬ ವರ್ಷದೊಳಗಿನ ೬೯,೮೧೩ ಮಕ್ಕಳಿರುವುದಾಗಿ ದಾಖಲಾತಿಗಳಲ್ಲಿ ಲೆಕ್ಕ ಇದೆ. ಆದರೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆ ಇದ್ದಿದ್ದು ಕಂಡುಬಂದಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ತಿಳಿಸಿದ್ದಾರೆ. ೨೪೭೫ ಅಂಗನವಾಡಿಗಳು ಶೌಚಾಲಯವನ್ನು ಹೊಂದಿದ್ದು ಬಹುತೇಕ ಅಂಗನವಾಡಿಗಳಲ್ಲಿ ಶೌಚಾಲಯಗಳು ಇದ್ದು ಇಲ್ಲದಂತಿದ್ದು, ಬಳಸಲು ಅಯೋಗ್ಯವಾಗಿವೆ ಎನ್ನುವಷ್ಟರ ಮಟ್ಟಿಗೆ ಇವೆ. ೨೧೬ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯವೇ ಇಲ್ಲದೇ ಮಕ್ಕಳು ಮತ್ತು ಅಂಗನವಾಡಿ ಸಿಬ್ಬಂದಿ ಶೌಚ ಕ್ರಿಯೆಗಳಿಗೆ ಪರದಾಡುವಂತಾಗಿದೆ.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 553
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved