• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರೇಹಳ್ಳಿ ಸೊಸೈಟಿ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ
ಹೋಬಳಿಯ ಕಾರೇಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚೆನ್ನೇನಹಳ್ಳಿ ಗ್ರಾಮದ ಸಿ.ಡಿ.ರೇವಣ್ಣ, ಉಪಾಧ್ಯಕ್ಷರಾಗಿ ಕೆ ಎಸ್ ದೇವರಾಜ್ ಅವಿರೋಧವಾಗಿ ಆಯ್ಕೆಯಾದರು. ಅವಿರೋಧವಾಗಿ ಆಯ್ಕೆಗೊಂಡ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು ಹಾಗೂ ಮುಖಂಡರು ಅಭಿನಂದಿಸಿದರು.
ರೈತನ ಮೇಲೆ ಕಾಡಾನೆ ದಾಳಿ
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸುಮಾರು ೪ ಕಾಡಾನೆಗಳ ಹಿಂಡಿನಲ್ಲಿ ಒಂದು ಆನೆ ದಾಳಿ ಮಾಡಿದ ಪರಿಣಾಮ ರೈತನೋರ್ವ ಗಾಯಗೊಂಡಿರುವ ಘಟನೆ ಬೇಲೂರು ತಾಲೂಕಿನ ಇಬ್ಬೀಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜೆ ಸೂರಾಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯವರು ಸೇರಿ ಆನೆಯನ್ನು ಇಲ್ಲಿಂದ ಓಡಿಸಿದ್ದರೂ ಮತ್ತೆಮತ್ತೆ ಬರುತ್ತಿವೆ. ಅರಣ್ಯ ಇಲಾಖೆಯವರು ಆನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದವರ ಬಂಧನ
ಮಂಡಲಮನೆ ಗ್ರಾಮದಲ್ಲಿ ಕಳ್ಳತನ ಮನೆಗೆ ನುಗ್ಗಿ ಕಳ್ಳತನ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ಕಳ್ಳತನ ಮಾಡಿದ ಪ್ರಕರಣ ಜುಲೈ ೨೯ರಂದು ಪ್ರಕರಣ ದಾಖಲಾಗಿತ್ತು. ಈಗ ಕಳ್ಳತನದ ಆರೋಪಿಯನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಸೀಕೆರೆ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಪ್ರಕರಣ ಭೇದಿಸಲು ವೃತ್ತನಿರೀಕ್ಷಕ ಸುಬ್ರಹ್ಮಣ್ಯ ಹಾಗೂ ಪಿಎಸ್ಐ ಪ್ರವೀಣ್ ಅವರ ನೇತೃತ್ವದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಕೇವಲ ೧೫ ದಿನದಲ್ಲಿ ಬಂಧಿಸಿ ಆರೋಪಿಯಿಂದ ಚಿನ್ನಾಭರಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಹೆಚ್ಚುವರಿ ಸೇವೆಗಳಿಂದ ಹೊರೆ ಎಂದು ತಹಸೀಲ್ದಾರ್‌ಗೆ ಗ್ರಾಮಾಧಿಕಾರಿಗಳ ದೂರು
ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಹೆಚ್ಚು ಸೇವೆಗಳನ್ನು ನಿರ್ವಹಿಸುವ ಕಾರ್ಯ ವಹಿಸಿದ್ದು, ಕೆಲಸ ನಿರ್ವಹಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚುವರಿ ಭತ್ಯೆ ಹಾಗೂ ಆಧುನಿಕ ಯಂತ್ರೋಪಕರಣಗಳನ್ನು ನೀಡಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳು ತಹಸೀಲ್ದಾರ್‌ ನಂದಕುಮಾರ್‌ಗೆ ಮನವಿ ಸಲ್ಲಿಸಿದರು. ಮೊಬೈಲ್ ಹಾಗೂ ಕಂಪ್ಯೂಟರ್‌ ಮೂಲಕ ಕೆಲಸ ನಿರ್ವಹಿಸಬೇಕಾದ ಅವಶ್ಯಕತೆಯಿರುತ್ತದೆ. ಆದ್ದರಿಂದ ಈ ಎಲ್ಲಾ ಕೆಲಸಗಳ ನಿರ್ವಹಣೆಗೆ ಮೊಬೈಲ್, ಸಿಮ್ ಹಾಗೂ ದಿನ ಬಳಕೆಗೆ ಮೊಬೈಲ್, ಡಾಟಾ, ಲ್ಯಾಪ್‌ಟಾಪ್, ಪ್ರಿಂಟಿಂಗ್, ಸ್ಕ್ಯಾನರ್‌ ಸೌಲಭ್ಯ ಒದಗಿಸಲು ಮನವಿ ಮಾಡಿದರು.
ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಮೆರವಣಿಗೆ
೭೮ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಆಡಳಿತದ ಸಹಕಾರದೊಂದಿಗೆ ನಮ್ಮ ಹಾಸನ ಟಿವಿ ಹಾಗೂ ಯೂಥ್ ಹ್ಯಾಂಡ್ಸ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಆಗಸ್ಟ್ ೧೫ರಂದು ಬೆಳಿಗ್ಗೆ ೮ ಗಂಟೆಗೆ ಆಂಧ್ರಪ್ರದೇಶದ ಸಮಾಜ ಸೇವಕರಾದ ಡಿ.ಸಿ. ಲಕ್ಷ್ಮೀನಾರಾಯಣ ಗುಪ್ತಾ ಮತ್ತು ತಂಡದಿಂದ ತಯಾರಿಸಲ್ಪಟ್ಟ ೨೫೦೦ ಅಡಿ ಉದ್ದದ ರಾಷ್ಟ್ರಧ್ವಜ ಮೆರವಣಿಗೆ ಕಾರ್ಯಕ್ರಮ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ.
ಹೇಮಾವತಿ ಜಲಾಶಯದ 6 ಕ್ರಸ್ಟ್‌ ಗೇಟುಗಳು ಸುಭದ್ರ
ಕೊಪ್ಪಳದಲ್ಲಿ ತುಂಗಾಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿಹೋದ ಹಿನ್ನೆಲೆಯಲ್ಲಿ ಹಾಸನ‌ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಲ್ಲಿ ಮಂಗಳವಾರ ಜಲಾಶಯದ ಅಧಿಕಾರಿಗಳು ಜಲಾಶಯದ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. . ಜಲಾಶಯದ 6 ರೇಡಿಯಲ್ ಕ್ರಸ್ಟ್ ಗೇಟ್ ಹಾಗೂ ಚೈನ್ ಲಿಂಕ್‌ಗಳು ಸುಭದ್ರವಾಗಿವೆ. ನಾಲ್ಕು ದಶಕಗಳ ಹಿಂದೆ ತಲಾ 25 ಟನ್ ತೂಕದ 6 ಕ್ರಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿದೆ. ಈ ಗೇಟುಗಳು ತುಕ್ಕು ಹಿಡಿಯದಂತೆ ಪ್ರತೀ ಆರು ತಿಂಗಳಿಗೊಮ್ಮೆ 15 ಲಕ್ಷ ರು. ವೆಚ್ಚದಲ್ಲಿ ಮೂರು ಬ್ಯಾರಲ್ 180 ಕೆಜಿ ಗ್ರೀಸಿಂಗ್ ಮಾಡಲಾಗುತ್ತಿದೆ.
ವಿದ್ಯಾರ್ಥಿಗಳು ಗ್ರಂಥಾಲಯಗಳ ಸದ್ಬಳಕೆ ಮಾಡಿಕೊಳ್ಳಿ
ದಿನನಿತ್ಯದ ಬದುಕಿನಲ್ಲಿ ಜ್ಞಾನದ ವಿಕಾಸಕ್ಕೆ ಸರ್ವರಿಗೂ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ, ಇತಿಹಾಸ, ರಾಜ್ಯಶಾಸ್ತ್ರ, ಬೌಗೋಳಿಕ ವಿಜ್ಞಾನ, ಸಂಶೋಧನೆ, ಕಥೆ ಕಾದಂಬರಿ, ಕವನಗಳ ಬಗ್ಗೆ ಹಲವಾರು ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿದೆ. ಜಾತಿ, ಧರ್ಮ ವಯಸ್ಸು, ಯಾವುದೇ ಪಕ್ಷಪಾತವಿಲ್ಲದೆ ಗ್ರಂಥಾಲಯ ಜ್ಞಾನದೇಗುಲವಿದ್ದಂತೆ. ಇದರಿಂದ ಆತ್ಮ ಸ್ಥೈರ್ಯ ಉತ್ತಮ ಸಮಾಜಕ್ಕೆ ಸಹಕಾರಿಯಾಗಿದೆ ಎಂದು ಹಿರಿಯ ಪತ್ರಕರ್ತ ಪುಟ್ಟಣ್ಣ ಗೋಕಾಕ್ ತಿಳಿಸಿದರು.
ಬಾಂಗ್ಲಾದಲ್ಲಿನ ಹಿಂದೂಗಳ ರಕ್ಷಣೆಗೆ ಮುಂದಾಗಲಿ
ಬಾಂಗ್ಲಾ ದೇಶದಲ್ಲಿನ ಹಿಂದೂಗಳ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಅವರ ರಕ್ಷಣೆ ಮಾಡಬೇಕು ಎಂದು ಹಿಂದು ಹಿತ ರಕ್ಷಣಾ ಸಮಿತಿಯ ಮುಖಂಡ ಅಮಿತ್ ವಿನಂತಿಸಿದರು. ಪಟ್ಟಣದ ಗಾಂಧಿವೃತ್ತದಲ್ಲಿ ತಾಲೂಕು ಹಿಂದು ಹಿತ ರಕ್ಷಣಾ ವೇದಿಕೆ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿ ಬಾಂಗ್ಲಾದಲ್ಲಿ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದ್ದು, ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಇದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ಮತ್ತು ವಿಶ್ವ ಸಂಸ್ಥೇ ಮಧ್ಯೆಪ್ರವೇಶಿಸಬೇಕೆಂದು ಆಗ್ರಹಪಡಿಸಿದರು.
ಅಕ್ಟೋಬರ್ ೨೪ರಿಂದ ಹಾಸನಾಂಬೆ ದರ್ಶನ
ಈ ವರ್ಷ ಹಾಸನಾಂಬೆ ಜಾತ್ರೋತ್ಸವವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ೧೧ ದಿನ ಹಾಸನಾಂಬ ಬಾಗಿಲು ತೆಗೆಯಲಿದೆ, ಆದರೆ ಭಕ್ತಾದಿಗಳಿಗೆ ಮೊದಲ ದಿನ ಮತ್ತು ಕೊನೆಯ ದಿವಸದಂದು ದರ್ಶನಕ್ಕೆ ಅವಕಾಶ ಇರುವುದಿಲ್ಲ. ೯ ದಿನಗಳ ಕಾಲ ಸಾರ್ವಜನಿಕರಿಗೆ ದೇವಿ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗುವುದು. ಹಾಸನಾಂಬ ಜಾತ್ರೋತ್ಸವದ ಅಂಗವಾಗಿ ದೇವಾಲಯದ ಬಾಗಿಲನ್ನು ಅಕ್ಟೋಬರ್ ೨೪ರಿಂದ ತೆಗೆಯಲಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಇನ್ನಷ್ಟು ಉತ್ತಮವಾಗಿ ನಡೆಸಲು ಹಾಗೂ ಭಕ್ತಾದಿಗಳ ದರ್ಶನಕ್ಕೆ ಅಡಚಣೆ ಆಗದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಂಸದರಾದ ಶ್ರೇಯಸ್ ಎಂ. ಪಟೇಲ್ ಸಭೆಯಲ್ಲಿ ತಿಳಿಸಿದರು.
ಉತ್ತಮ ಪುಸ್ತಕಗಳು ಸಮಾಜಕ್ಕೆ ದಾರಿದೀಪವಿದ್ದಂತೆ
ಅರಕಲಗೂಡು ಪಟ್ಟಣದ ಹಾಸನ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕ ಎ.ಆರ್‌. ರಾಕೇಶ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯದಲ್ಲಿ ವಿಜ್ಞಾನ ಕಾರ್ಯಕ್ರಮ ಉದ್ಘಾಟಿಸಿ ಟೈಮ್ಸ್‌ ಸಮೂಹ ಸಂಸ್ಥೆ ಕಾರ್ಯದರ್ಶಿ ಬಿ.ಕೆ. ಗಂಗಾಧರ್‌ ಮಾತನಾಡಿದರು. ಉತ್ತಮ ಪುಸ್ತಕಗಳು ಸಮಾಜಕ್ಕೆ ದಾರಿದೀಪವಿದ್ದಂತೆ. ಓದಿದ ಪುಸ್ತಕಗಳನ್ನು ಬಿಸಾಡದೆ ಸಂಗ್ರಹಿಸಿಟ್ಟುಕೊಂಡರೆ ಮುಂದಿನ ಪೀಳಿಗೆಯ ಮಕ್ಕಳಿಗೂ ತಲುಪಿಸಬಹುದು. ಮುಖ್ಯವಾಗಿ ಎಲ್ಲರಲ್ಲೂ ಪುಸ್ತಕ ಪ್ರೀತಿ ಮೂಡಬೇಕು. ಇದಕ್ಕಾಗಿ ಹುಟ್ಟು ಹಬ್ಬದ ಸಂಭ್ರಮಗಳಲ್ಲೂ ಉಡುಗೊರೆಯಾಗಿ ಪುಸ್ತಕಗಳನ್ನು ಉಚಿತವಾಗಿ ನೀಡಿ ಅವುಗಳನ್ನು ಓದುವ ಅಭ್ಯಾಸ ಬೆಳೆಸಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 553
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved