• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಿ ಮತ್ತು ವಸತಿಗಾಗಿ ದಸಂಸ ಪ್ರತಿಭಟನೆ
ಭೂಮಿ-ವಸತಿ ಹಕ್ಕು ಮತ್ತು ಇತರೆ ಹಕ್ಕೊತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ದ.ಸಂ.ಸ (ಅಂಬೇಡ್ಕರ್ ವಾದ)ತಾಲೂಕು ಸಮಿತಿ ಕಾರ್ಯಕರ್ತರು ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಮುಂದಿನ ಡಾ.ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನಾ ಧರಣಿ ನಡೆಸಿ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ದಲಿತರಿಗೆ ಭೂಮಿ ಸಿಗಬೇಕೆಂಬ ನಿಟ್ಟನಲ್ಲಿ ಕಂದಾಯ ಸಚಿವರನ್ನು ಭೇಟಿಮಾಡಿ ಮನವಿ ಸಲ್ಲಿಸಿ, ರಾಜ್ಯವ್ಯಾಪ್ತಿ ಏಕಕಾಲದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳದೆ ಅರ್ಹರಿಗೆ ಭೂಮಿ ಕೊಡಲು ಮುಂದಾಗಬೇಕು ಎಂದರು.
ಆರ್‌ಟಿಒ ಕಚೇರಿಯಲ್ಲಿ ದಲ್ಲಾಳಿಯ ಹುಟ್ಟುಹಬ್ಬ ಆಚರಣೆ ವಿರೋಧಿಸಿ ಪ್ರತಿಭಟನೆ
ಕಚೇರಿಯಲ್ಲಿ ದಲ್ಲಾಳಿಯೊಬ್ಬರ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಕಚೇರಿಯನ್ನು ದಲ್ಲಾಳಿಗಳ ಮಯ ಮಾಡಲಾಗಿದೆ. ಇದರಿಂದಾಗಿ ಸಾರ್ವಜನಿಕರು ನೇರವಾಗಿ ಕಚೇರಿ ಕೆಲಸಕ್ಕೆ ಆಗಮಿಸದಂತೆ ಅಧಿಕಾರಿಗಳು ಪರೋಕ್ಷವಾಗಿ ಸೂಚಿಸಿದ್ದಾರೆ. ಈ ಕಾನೂನು ಬಾಹಿರ ಕೃತ್ಯ ಎಸೆಗಿರುವ ಸಾರಿಗೆ ಅಧಿಕಾರಿ, ಬ್ರೇಕ್ ಇನ್ಸಪೆಕ್ಟರ್‌ ಹಾಗೂ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೃತ್ಯ ನಡೆದ ಮರುದಿನವೇ ಸಂಘಟನೆಯಿಂದ ಮನವಿ ಮಾಡಲಾಗಿತ್ತು. ಆದರೆ ೮ ದಿನಗಳು ಕಳೆದರೂ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಅರಣ್ಯ ಇಲಾಖೆಯಿಂದ ಮನೆ ತೆರವು ಖಂಡಿಸಿ ಪ್ರತಿಭಟನೆ
ಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬರ ಮನೆಯನ್ನು ನೆಲಸಮ ಮಾಡಿರುವ ಯಸಳೂರು ವಲಯ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಸಳೂರು ವಲಯ ಅರಣ್ಯಾಧಿಕಾರಿ ಅವರು ಈ ಮನೆವನ್ನು ಸಂಪೂರ್ಣ ನಾಶಪಡಿಸಿದ್ದು ಅಲ್ಲದೆ, ಶೋಭರಾಜು ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬಗರ್‌ಹುಕುಂ ಸಾಗುವಳಿಯ ಅರ್ಜಿಗಳ ಮರು ಪರಿಶೀಲನೆಗೆ ಒತ್ತಾಯ
ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರು ಪರಿಶೀಲಿಸಬೇಕು. ಪರಿಶಿಷ್ಟರ ಪಿ.ಟಿ.ಸಿ.ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ಹಿರಿಯ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಬೆಂಗಳೂರು ನಗರ ಜಿಲ್ಲೆ, ಪೂರ್ವ ತಾಲೂಕಿನ ಕಾಡುಗೋಡಿ ಪ್ಲಾಂಟೇಷನ್‌ನಲ್ಲಿ ಪರಿಶಿಷ್ಟ ಜಾತಿಯವರಿಗೆ ಮಂಜೂರಾಗಿರುವ ಭೂಮಿಯಲ್ಲಿ ಅರಣ್ಯ ಅಧಿಕಾರಿಗಳು ಒಕ್ಕಲೆಬ್ಬಿಸುವುದನ್ನು ಕೂಡಲೇ ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ಮೂಲ ಸೌಕರ್ಯವಿಲ್ಲದೆ ಬೇಸತ್ತು ಭತ್ತದ ಸಸಿ ನೆಟ್ಟು ಪ್ರತಿಭಟನೆ
ವರ್ಷಗಳಿಂದ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದೇ ಸ್ಥಳೀಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ರಸ್ತೆ ನಿರ್ಮಾಣದ ಸಮಯದಲ್ಲಿ ಹಾಕಲಾದ ಕಬ್ಬಿಣದ ರಾಡುಗಳು ಬಿರುಕು ಬಿಟ್ಟು ಹೊರಬಂದಿದ್ದು, ವಾಹನ ಸವಾರರಿಗೆ ತೀವ್ರ ಅನಾನೂಕೂಲತೆ ಉಂಟಾಗಿದೆ. ಪ್ರತಿದಿನವೂ ಬೈಕ್‌ಗಳು ಬಿದ್ದು ಕೈಗಾಲುಗಳಿಗೆ ಗಾಯವಾಗುತ್ತಿದೆ ಎಂಬ ಆಕ್ರೋಶದಿಂದ ಪಟ್ಟಣದ 23ನೇ ವಾರ್ಡ್ ನಿವಾಸಿಗಳು ರಸ್ತೆಯ ಮಧ್ಯೆ ಭತ್ತದ ಸಸಿ ಹಾಗೂ ಕಂಬಿಗಳನ್ನು ನೆಟ್ಟು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ.
ಎಂಜಿನಿಯರಿಂಗ್ ಕಾಲೇಜು ಕಟ್ಟಡ ಲೋಕಾರ್ಪಣೆಗೊಳಿಸಲಿರುವ ಸಿಎಂ
ಇದೇ ತಿಂಗಳ ೨೬ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವ ಮಹೋದಯರು ಆಗಮಿಸಿ ನೂತನ ಕಾಲೇಜು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ ಎಂದು ಸ್ಥಳೀಯ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆದ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ನಗರದ ಜೇನುಕಲ್ ತಾಲೂಕು ಕ್ರೀಡಾಂಗಣದಲ್ಲಿ ಸಿಎಂ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಹಾಗೂ ಪೆಂಡಾಲ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಬೃಹತ್ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತಾ ಕಾರ್ಯ ಈಗಾಗಲೇ ಆರಂಭವಾಗಿವೆ ಎಂದರು.
ಕೆಲಸದಲ್ಲಿ ವಿಳಂಬ ಮಾಡದಂತೆ ಡೀಸಿ ಸೂಚನೆ
ಕೆಲಸ ಮಾಡುವುದನ್ನು ವಿಳಂಬ ಮಾಡಬಾರದು ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದರು. ಐತಿಹಾಸಿಕ ಪ್ರವಾಸಿ ಸ್ಥಳವಾದ ಬೇಲೂರಿನಲ್ಲಿ ದೇವಾಲಯದ ಸುತ್ತ ಮುತ್ತ ಹಾಗೂ ಪುರಸಭೆ ವ್ಯಾಪ್ತಿಯ ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿವಾರ ಕೆಲಸವಾರು ಪ್ರಗತಿಯನ್ನು ಪರಿಶೀಲನೆ ಮಾಡುವಂತೆ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರಲ್ಲದೆ, ಕೆಲಸ ಮಾಡಲು ಉದಾಸೀನ ಮಾಡದಂತೆ ಡಿಸಿ ಸೂಚಿಸಿದರು.
ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಮಾಸಿಕ ಸಭೆ
ಸಂಘದ ಅಧ್ಯಕ್ಷ ಕೇಬಲ್ ವಿಜಯಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಸಂಘದಿಂದ ತಾಲೂಕು ಮಟ್ಟದ ಉಚಿತ ಆರೋಗ್ಯ ಶಿಬಿರವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದೊಂದಿದ ಸಂಘದ ನಿರ್ದೇಶಕರು ಹಾಗೂ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಶಿಬಿರದ ಆಯೋಜನ ಮಾಡಲಾಗುವುದು ಹಾಗೂ ಹೊಸ ತಂತ್ರಜ್ಞಾನಗಳಿಂದ ಬರುತ್ತಿರುವ ಸವಾಲುಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಮ್ಮಲ್ಲಿ ಹಲವರು ಹಳೆಯ ಪದ್ಧತಿಯಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಆದರೆ, ಈಗ ಮಾರುಕಟ್ಟೆಗೆ ಬರುವ ಹೊಸ ತಲೆಮಾರಿನ ಸ್ಮಾರ್ಟ್ ಉಪಕರಣಗಳನ್ನು ರಿಪೇರಿ ಮಾಡುವುದು ನಮಗೆ ಸವಾಲಾಗುತ್ತಿದೆ.
ಒತ್ತಡರಹಿತ ಜೀವನದಿಂದ ಹೃದಯದ ಆರೋಗ್ಯ ರಕ್ಷಣೆ
ಮಾರಣಾಂತಿಕ ಕಾಯಿಲೆಗಳಾದ ಹೃದಯಾಘಾತ ತಡೆಯಲು ಸಾರ್ವಜನಿಕರಲ್ಲಿ ಅರಿವುಮ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ನಡೆಯುತ್ತಿದೆ. ಜನರು ದೈಹಿಕವಾಗಿ ಸದೃಢರಾಗಬೇಕು, ಎಣ್ಣೆ ರಹಿತ ಆಹಾರವನ್ನ ಸೇವಿಸಬೇಕು, ಮದ್ಯಪಾನ ತ್ಯಜಿಸಬೇಕು, ಮಾದಕ ವಸ್ತುಗಳಾದ ಡ್ರಗ್ಸ್ ಸೇವನೆಯನ್ನು ತ್ಯಜಿಸಬೇಕು. ಎಲ್ಲವನ್ನು ನಾವು ಮೈಗೂಡಿಸಿಕೊಂಡರೆ ಹೃದಯದ ಆರೋಗ್ಯವು ಉತ್ತಮವಾಗಿರುತ್ತದೆ. ಮಾಧ್ಯಮ ಮಿತ್ರರಲ್ಲಿ ಒಂದು ಮನವಿ ಪ್ರತಿ ಹಳ್ಳಿಗೂ, ಪ್ರತಿಮನೆಗೂ, ಈ ಸಂದೇಶ ತಲುಪುವಂತೆ ಮಾಡಬೇಕು ಜನರಿಗೂ ಈ ಬಗ್ಗೆ ಅರಿವು ಮೂಡಿಸಲು ಎಲ್ಲರೂ ಸಹಕರಿಸಬೇಕು ಎಂದರು.
ಬಾಂಗ್ಲಾ ನುಸುಳುಕೋರರಿಂದ ಸ್ಥಳೀಯರ ಭದ್ರತೆಗೆ ಧಕ್ಕೆ
ಕೆಂಚಮ್ಮನ ಹೊಸಕೋಟೆ ಹೋಬಳಿಯ ವಾಟೆಪುರ ಕಾಫಿ ಎಸ್ಟೇಟಿನಲ್ಲಿ ಸ್ಥಳೀಯ ಕೆಲಸಗಾರರನ್ನು ಗುರುವಾರ ಭೇಟಿ ಮಾಡಿದ ಬಿಜೆಪಿ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ್‌ ಬಂಗಾರಪ್ಪ, ಹರಿಹರಪುರ ಶಾಸಕ ಬಿ ಪಿ ಹರೀಶ್, ಜೆಡಿಎಸ್‌ ಮುಖಂಡ ಎನ್ ಆರ್ ಸಂತೋಷ್‌ ತಂಡ ಭೇಟಿ ನೀಡಿದ್ದ ಸಂದರ್ಭದಲ್ಲಿ ಸ್ಥಳೀಯ ಕಾರ್ಮಿಕರು ಹಲವು ಸಮಸ್ಯೆಗಳನ್ನು ತಂಡದ ಮುಂದೆ ತೆರೆದಿಟ್ಟರು. ತುತ್ತು ಅನ್ನಕ್ಕಾಗಿ ಗಡಿಯಲ್ಲಿ ನುಸುಳಿ ಬಂದು ಕಾಫಿ ತೋಟ ಸೇರಿಕೊಂಡ ಬಾಂಗ್ಲಾ ನುಸುಳುಕೋರರಿಂದ ಸ್ಥಳೀಯ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಅವರಿಗೆ ಮಣೆ ಹಾಕಿದ ತೋಟಗಳ ಮಾಲೀಕರೇ ಇಂದು ಅದೇ ಕಾರ್ಮಿಕರಿಂದ ಬೆದರಿಕೆ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved