• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್ ನಿಲ್ದಾಣ ಸ್ಥಳಾಂತರಿಸದಂತೆ ಪ್ರತಿಭಟನೆ
ಬಸ್ ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರಿಸದೇ ಈಗಿರುವ ಸ್ಥಳದಲ್ಲೇ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಯ ಒಕ್ಕೂಟದವರು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮಮತಾ ಎಂ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕಾಡು ನಾಶ ನಿಲ್ಲಿಸದಿದ್ರೆ ನ್ಯಾಯಾಲಯದ ಮೊರೆ
ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಹೇರಳವಾದ ಅರಣ್ಯ ಸಂಪತ್ತಿದ್ದು, ಕೆಲವು ಪ್ರಭಾವಿ ರಾಜಕಾರಣಿಗಳ ಬೆಂಬಲದಿಂದ ಅಕ್ರಮ ಗಣಿಗಾರಿಕೆ, ಕಲ್ಲುಗಣಿಗಾರಿಕೆ, ಅಕ್ರಮ ಕಾಡು ಒತ್ತುವರಿ, ಕಾಡು ನಾಶ ನಿರಂತರವಾಗಿ ನಡೆದಿದ್ದು, ತಕ್ಷಣ ಕಾನೂನು ಕ್ರಮ ಕೈಗೊಳ್ಳದಿದ್ದರೇ ಅರಣ್ಯ ಉಳಿಸಲು ಸಾರ್ವಜನಿಕ ಹಿತಾಸಕ್ತಿಯಿಂದ ನ್ಯಾಯಾಲಯದ ಕದ ತಟ್ಟುವ ಕಾರ್ಯಕ್ಕೆ ಚಾಲನೆ ಕೊಡಲಾಗುವುದು ಎಂದು ವಾಯ್ಸ್ ಆಫ್ ಪಬ್ಲಿಕ್‌ನ ಸಂಸ್ಥಾಪಕ ಮತ್ತು ವಕೀಲರಾದ ಎನ್.ಪಿ. ಅಮೃತೇಶ್ ಎಚ್ಚರಿಸಿದರು.
ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ
ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವ್ಯಸನ ಮುಕ್ತ ಜಾಗೃತಿ ಜಾಥಕ್ಕೆ ಅಪರ ಜಿಲ್ಲಾಧಿಕಾರಿ ಕೆ,ಟಿ. ಶಾಂತಲಾ ಅವರು ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ನಂತರ ಮೆರವಣಿಗೆಗೆ ಹಸಿರು ಬಾವುಟ ಪ್ರದರ್ಶಿಸುವುದರ ಮೂಲಕ ಚಾಲನೆ ನೀಡಿದರು.
ತಂದೆ ಜತೆಯಲ್ಲಿದ್ದ ಮಗು ಕ್ಷಣಾರ್ಧದಲ್ಲಿ ಅಪಹರಣ
ಹೊಳೆನರಸೀಪುರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ತಂದೆಯ ಜತೆ ನಿಂತಿದ್ದ ಸಗೀನಾ (೪) ವರ್ಷದ ಹೆಣ್ಣು ಮಗುವನ್ನು ಕ್ಷಣಾರ್ಧದಲ್ಲಿ ಅಪಹರಿಸಲಾಗಿದ್ದು, ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳನೋರ್ವ ಮಗುವಿನ ಕೈಹಿಡಿದು ಕರೆದ್ಯೊಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ಹೈಟೆಕ್‌ ಬಸ್‌ ನಿಲ್ದಾಣಕ್ಕೆ ಜಾಗ ಕೊಡುವಂತೆ ಪಿಡಬ್ಲ್ಯುಡಿ ಸಚಿವರಿಗೆ ಮನವಿ
ಹೈಟೆಕ್ ಬಸ್ ನಿಲ್ದಾಣದ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಜನಾಭಿಪ್ರಾಯ ಸಭೆಯಲ್ಲಿ ಈಗ ಇರುವ ಸ್ಥಳದಲ್ಲೇ ವಿಸ್ತರಣೆ ಮಾಡಿ ಅಲ್ಲೇ ನಿರ್ಮಾಣ ಮಾಡಲು ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಲೋಕೋಪಯೋಗಿ ಇಲಾಖೆಗೆ ಸೇರಿರುವ ಸ್ವಲ್ಪ ಜಾಗವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು ಎಂದು ಶಾಸಕ ಎಚ್ ಕೆ ಸುರೇಶ್ ತಿಳಿಸಿದ್ದಾರೆ.
ಸೀತಾ ಮಹಿಳಾ ಸಂಘದ ಸದಸ್ಯರಿಗೆ ವೇದ ಪಾಠ
ಅರಸೀಕೆರೆ ಶ್ರೀರಾಮ ಮಂದಿರದಲ್ಲಿ ನಡೆಸುತ್ತಿರುವ ವೇದ ಪಾಠದಲ್ಲಿ ಸೀತಾ ಮಹಿಳಾ ಸಂಘದ ಪದಾಧಿಕಾರಿಗಳು ಸದಸ್ಯರು ಆಸಕ್ತಿಯಿಂದ ಕಲಿಯುತ್ತಿದ್ದಾರೆ ಎಂದು ಶೃಂಗೇರಿ ಮಠ ಮುದ್ರಾ ವೇಬ್ರಶ್ರೀ ರವಿ ಪುರಾಣಿಕ್‌ ಹೇಳಿದರು. ಮುಂದಿನ ದಿನಗಳಲ್ಲಿ ನಾರಾಯಣ ಸೂಕ್ತ ಮಂತ್ರ ಪುಷ್ಪ ಮತ್ತು ಶಾಂತಿಮಂತ್ರಗಳ ಸ್ತೋತ್ರಗಳನ್ನು ಹೇಳಿಕೊಡಲಾಗುವುದು ಎಂದರು.
ಹಳಿ ದುರಸ್ತಿ ಕಾರ್ಯ ಚುರುಕು
ಸಕಲೇಶಪುರ ಬಳಿಯ ಕಡಗರಹಳ್ಳಿ ಗ್ರಾಮದ ರೈಲ್ವೆಹಳಿ ಸಮೀಪ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಪಾಳಿಯ ಆಧಾರದ ಮೇಲೆ ೨೫೦ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು ದಿನದ ೨೪ ಗಂಟೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದೆ. ರಾಜ್ಯದ ವಿವಿಧೆಡೆಯಿಂದ ೭೫೦ ಕಾರ್ಮಿಕರು ರೈಲ್ವೆ ಹಳಿ ದುರಸ್ಥಿ ನಡೆಸುತ್ತಿದ್ದು ಕನಿಷ್ಠ ಇನ್ನೂ ೧೦ ದಿನಗಳ ಕಾಮಗಾರಿ ನಡೆಯಲಿದೆ. ನಂತರದ ಒಂದು ವಾರ ಕೇವಲ ಸರಕು ರೈಲು ಪ್ರಯಾಣಕ್ಕೆ ಮಾತ್ರ ಅವಕಾಶ ಆ ನಂತರದ ದಿನಗಳಲ್ಲಿ ಪ್ರಯಾಣಿಕರ ರೈಲಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸ್ಥಳೀಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿರಾಡಿಯಲ್ಲಿ ಮತ್ತೆ ಭಾರೀ ಪ್ರಮಾಣದ ಭೂ ಕುಸಿತ
ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ದೊಡ್ಡತಪ್ಲೆ ಬಳಿ ಮತ್ತೆ ಭೂ ಕುಸಿತ ಉಂಟಾಗಿದ್ದು, ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರವನ್ನು ಬಂದ್‌ ಮಾಡಲಾಗಿದೆ. ಭೂ ಕುಸಿತದ ಸಮಯದಲ್ಲಿ ಅದೇ ದಾರಿನಲ್ಲಿ ತೆರಳುತ್ತಿದ್ದ ನಾಲ್ಕು ಕಂಟೇನರ್‌ ಲಾರಿಗಳು ಮಣ್ಣಿನಲ್ಲಿ ಸಿಲುಕಿದ್ದು ಒಂದು ಕಂಟೇನರ್ ಲಾರಿ ಪ್ರಪಾತಕ್ಕೆ ಜಾರುವ ಹಂತದಲ್ಲಿದೆ. ಲಾರಿ ಚಾಲಕರು ಹಾಗೂ ನಿರ್ವಾಹಕರನ್ನು ಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಹೆದ್ದಾರಿ ಮೇಲೆ ಕುಸಿದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ.
ರಾಜ್ಯಸರ್ಕಾರಕ್ಕೆ ರಾಜ್ಯಪಾಲರ ನೋಟಿಸ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ರಾಜ್ಯಪಾಲರು ದ್ವೇಷದ ರಾಜಕಾರಣಕ್ಕಾಗಿ ಬಿಜೆಪಿಯ ಸತ್ಯ ಮರೆಮಾಚಿ ಸರ್ಕಾರಕ್ಕೆ ನೋಟಿಸ್ ನೀಡಿರುವುದನ್ನು ಕೂಡಲೇ ಹಿಂಪಡೆಯದೇ ಹೋದರೇ ಕರ್ನಾಟಕದಲ್ಲಿ ರಕ್ತಕ್ರಾಂತಿಗೆ ಸಿದ್ಧರಾಗಬೇಕಾಗುತ್ತದೆ ಎಂದು ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ ಬುಧವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಶಿರಾಡಿ ಘಾಟ್‌ಗೆ ಸಚಿವ ಕೃಷ್ಣಭೈರೇಗೌಡ ಭೇಟಿ
ಸಕಲೇಶಪುರ ತಾಲೂಕಿನ ಮಳೆಹಾನಿ ಪ್ರದೇಶಗಳನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ವೀಕ್ಷಣೆ ಮಾಡಿದರು. ನಂತರ ಮಾತನಾಡಿ ಕೇರಳದಲ್ಲಿ ಆದ ಘಟನೆಯಂತೆ ನಮ್ಮಲ್ಲೂ ಕೂಡ ಆಗಬಾರದು ಎಂದು ಹಲವಾರು ಮುನ್ನೆಚ್ಚರಿಕೆ ವಹಿಸಿದ್ದೇವೆ ಎಂದು ಹೇಳಿದರು. ಶಿರಾಡಿ ಬಳಿ ತಡೆಗೋಡೆಗಳನ್ನು ಎತ್ತರದಲ್ಲಿ ಕಟ್ಟಬೇಕಿತ್ತು ಆದರೆ ಕಟ್ಟಿಲ್ಲ. ಮತ್ತೆ ಕೆಲವು ಕಡೆ ರಸ್ತೆಗಳನ್ನು ಎತ್ತರ ಮಾಡಲಾಗಿದ್ದು ಇಂತಹ ಕಡೆ ರಸ್ತೆ ಬದಿಯಲ್ಲಿ ಆರ್‌.ಸಿ.ಸಿ ಹಾಕುವ ಬದಲು ಕಲ್ಲಿನಿಂದ ತಡೆಗೋಡೆ ಕಟ್ಟಿದ್ದಾರೆ, ಇದು ತಡೆಯುವುದಿಲ್ಲ. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಂಸ್ಥೆಗೆ ರಾಜ್ಯದ ಕೆಲವು ಹೆದ್ದಾರಿಗಳಲ್ಲಿ ಸರ್ವೆ ಮಾಡಲು ಹೇಳಿದ್ದೇನೆ. ಏಕೆಂದರೆ ರಸ್ತೆ ಡಿಸೈನ್‌ನಲ್ಲಿ ಬದಲಾವಣೆ ಬೇಕಾಗಿದೆ. ಭವಿಷ್ಯದಲ್ಲಿ ಯಾವುದೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved