• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಹಸಿರು ಸಿರಿ ಸಸ್ಯೋತ್ಸವ
ಸುಮಾರು ೧೦ ಸಾವಿರ ಗಿಡಗಳನ್ನು ವಿತರಣೆ ಮಾಡಲಾಗುತ್ತಿದ್ದು, ಶಾಲೆಯ ಪ್ರತಿ ವಿದ್ಯಾರ್ಥಿಗೂ ೩-೨ ಸಸಿಗಳನ್ನು ನೀಡಿ ತಮ್ಮ ಮನೆಯ ಆವರಣದಲ್ಲಿ ನೆಡುವಂತೆ ತಿಳಿಸಲಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸಸಿ ನೀಡುವ ಜೊತೆಗೆ ಪೋಷಣೆ ಮಾಡುವಂತೆ ತಿಳಿಸಲಾಗಿದ್ದು. ಪ್ರತಿ ವರ್ಷವೂ ಉತ್ತಮವಾಗಿ ಸಸಿಯನ್ನು ಪೋಷಣೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವ ಹಾಗೂ ಪ್ರೋತ್ಸಾಹಿಸುವ ಕೆಲಸವನ್ನು ಶಾಲೆಯ ಆಡಳಿತ ಮಂಡಳಿಯಿಂದ ಮಾಡಲಾಗುತ್ತಿದೆ. ಈ ಮೂಲಕ ಮಕ್ಕಳಿಗೆ ಪ್ರಕೃತಿಯ ಜೊತೆಗೆ ಒಡನಾಟ ಬೆಳೆಯುವಂತೆ ಮಾಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಅನಾರೋಗ್ಯದಿಂದ ಬೇಸತ್ತು ಮುಖ್ಯಪೇದೆ ಆತ್ಮಹತ್ಯೆ
ಪೊಲೀಸ್ ಠಾಣೆಗೆ ಮುಖ್ಯ ಪೇದೆಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ನಟೇಶ್ (೩೮) ಕರ್ತವ್ಯಕ್ಕೆ ಸೇರ್ಪಡೆಯಾಗುವ ಮುನ್ನವೇ ಅನಾರೋಗ್ಯದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ತಿಂಗಳಿಂದ ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟೇಶ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದ್ದು, ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ನಟೇಶ್, ಬುಧವಾರ ಸಂಜೆ ಆಸ್ಪತ್ರೆಯಿಂದ ಕಾಣೆಯಾಗಿದ್ದರು. ಬಳಿಕ ಗೆಂಡೆಕಟ್ಟೆ ಅರಣ್ಯದ ಬಳಿ ಅವರು ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಕಲಿ ಕೃಷಿ ಉತ್ಪನ್ನ ವಿರುದ್ಧ ಕ್ರಮಕ್ಕೆ ಆಗ್ರಹ
ಹಸಿ ಶುಂಠಿ ಬೆಳೆಗಳಲ್ಲಿ "ಅಂಗಮಾರಿ " ರೋಗ ಮತ್ತು ವೈರಸ್ ಹಾವಳಿಯಿಂದ ಉಂಟಾದ ಸಂಪೂರ್ಣ ನಾಶಕ್ಕೆ ತುರ್ತು ಪರಿಹಾರ ನೀಡುವ ಜತೆಗೆ ಇತ್ತೀಚಿನ ದಿನಗಳಲ್ಲಿ ನಕಲಿ ಬಿತ್ತನೆ ಬೀಜ, ಔಷಧಿ, ರಸಗೊಬ್ಬರ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಸಿ ಶುಂಠಿ ವರ್ತಕರ ಮತ್ತು ಬೆಳೆಗಾರರ ಸಂಘದಿಂದ ಗುರುವಾರ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಗುಣಮಟ್ಟರಹಿತ ಉತ್ಪನ್ನಗಳಿಂದ ರೋಗ ನಿಯಂತ್ರಣ ಸಾಧ್ಯವಾಗದೆ, ಬೆಳೆ ನಾಶವಾಗಿದ್ದು, ರೈತರ ಆರ್ಥಿಕ ನಷ್ಟವು ತೀವ್ರಗೊಂಡಿದೆ. ಇದು ಕೇವಲ ಆರ್ಥಿಕ ಸಮಸ್ಯೆಯಾಗಿ ಉಳಿಯದೆ, ರೈತರನ್ನು ಆತ್ಮಹತ್ಯೆಯಂತಹ ಗಂಭೀರ ಸಾಮಾಜಿಕ ಸಂಕಷ್ಟ ಸೃಷ್ಟಿಸಿದೆ ಎಂದು ತಮ್ಮ ಅಳಲು ತೋಡಿಕೊಂಡರು.
ಇನ್ನರ್‌ವ್ಹೀಲ್‌ ಕಾರ್ಯ ಶ್ಲಾಘನೀಯ ಎಂದ ಸುಧಾ ಪ್ರಸಾದ್
ಇಲ್ಲಿನ ಇನ್ನರ್‌ವ್ಹೀಲ್‌ ಕ್ಲಬ್ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಬಹಳ ಕ್ರಿಯಾಶೀಲರಾಗಿ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದೀರಿ ಎಂದು ಶಿವಮೊಗ್ಗ ದಕ್ಷಿಣ ಇನ್ನರ್‌ವ್ಹೀಲ್‌ ಕ್ಲಬ್ ಪಿಡಿಸಿ ಸುಧಾ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು. ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ರಂಜಿತ ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡೋಣ ಉತ್ತಮ ಕಾರ್ಯಕ್ರಮಗಳನ್ನು ಮಾಡೋಕೆ ಚಿಂತನೆ ಹೊಂದಿದ್ದೇನೆ ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು, ನಿಕಟಪೂರ್ವ ಅಧ್ಯಕ್ಷೆ ರೇಖಾ ತಮ್ಮ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಹೇಳಿದರು.
ರಾಮನಾಥಪುರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ
ರಾಮನಾಥಪುರದ ಬಸವೇಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಪ್ರಥಮ ಪಿಯುಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಸಹಪಾಠಿಯ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಿದ ನಂತರ ಮಾತನಾಡಿದರು. ಹಾಸನ ಜಿಲ್ಲೆಯಲ್ಲಿ ಸುಮಾರು 17 ವರ್ಷಗಳಿಂದ ರಾಮನಾಥಪುರದ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿಗೆ ಸುಮಾರು 350ರಿಂದ 400 ವಿದ್ಯಾರ್ಥಿಗಳು ಬರುತ್ತಿದ್ದು, ಅದರಲ್ಲಿಯೂ ಹಾಸನ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಬಂದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಖಂಡನೆ
ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಒಡ್ಡಿರುವ ಇಬ್ಬರು ಉಪನ್ಯಾಸಕರ ಹೇಯ ಕೃತ್ಯವನ್ನು ಖಂಡಿಸಿ ಹಾಗೂ ಆರೋಪಿ ಉಪನ್ಯಾಸಕರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ನಗರದ ಹೇಮಾವತಿ ಪ್ರತಿಮೆ ಮುಂದೆ ಪ್ರತಿಭಟಿಸಿದರು. ಒಡಿಶಾದಲ್ಲಿ ಕಾಲೇಜಿನ ಉಪನ್ಯಾಸಕರು ನೀಡಿರುವ ಲೈಂಗಿಕ ಕಿರುಕುಳದಿಂದ ಬೇಸತ್ತು, ಒಬ್ಬ ವಿದ್ಯಾರ್ಥಿನಿ ಬೆಂಕಿ ಹಾಕಿಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡದಿದ್ದರೆ, ಇಂತಹ ಪ್ರಕರಣಗಳು ಹೆಚ್ಚಾಗುತ್ತದೆ ಎಂದರು.
ಕಾಂತರಾಜಪುರ ಪಂಚಾಯತ್‌ ಅಧ್ಯಕ್ಷರಾಗಿ ಅಮೃತಶಿಲ್ಪ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಾಂತರಾಜುಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಅಮೃತಶಿಲ್ಪ ಶಿವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆ ಅಮೃತಶಿಲ್ಪ ಮಾತನಾಡಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ದಲಿತ ಮಹಿಳೆಯಾದ ನನ್ನ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರಿಂದ ರಾಜಕೀಯ, ಸಾಮಾಜಿಕ ನ್ಯಾಯ ಒದಗಿಸಿದಂತಾಗಿದೆ ಎಂದರು. ಎಲ್ಲಾ ಸದಸ್ಯರ ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು ಎಂದು ಹೇಳಿದರು.
ಹೊಳೆನರಸೀಪುರದ ಗಣಪತಿ ಪೆಂಡಾಲಿನಲ್ಲಿ ಜನಸ್ಪಂದನ ಸಭೆ
ಹೊಳೆನರಸೀಪುರ ಪಟ್ಟಣದ ಗಣೇಶ ಪೆಂಡಾಲಿನಲ್ಲಿ ಆಗಸ್ಟ್ ೨ರ ಶನಿವಾರ ಆಯೋಜನೆ ಮಾಡುವ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದ್ದು, ಬೆಳಗ್ಗೆ ೧೦ ಗಂಟೆಯಿಂದ ಸಂಜೆ ತನಕ ಅರ್ಜಿ ಸ್ವೀಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ತಪ್ಪದೇ ಪಡೆದು ಕೊಳ್ಳಬೇಕೆಂದು ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಜಿ. ಮುನಿರಾಜು ಸಲಹೆ ನೀಡಿದರು.
ಆನೆ ಕಾರ್ಯಪಡೆ ಕಚೇರಿ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ
ಆನೆ ಕಾರ್ಯಪಡೆ ಕಚೇರಿಯ ಕಾಮಗಾರಿ ಕಳಪೆಯಾಗಿದ್ದು ಕೂಡಲೇ ನಿಲ್ಲಿಸಬೇಕು, ಗುಣಮಟ್ಟದ ಕಾಮಗಾರಿ ಪ್ರಾರಂಭಿಸುವವರೆಗೂ ಇಲ್ಲಿ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ಕಾಫಿ ಬೆಳೆಗಾರರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ಬಿಕ್ಕೋಡು ಗ್ರಾಮದ ಬಳಿ ಬೆಳೆಗಾರರು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನಿರ್ಮಾಣವಾಗುತ್ತಿರುವ ಆನೆ ಕಾರ್ಯಪಡೆ ಕಚೇರಿಯ ಮುಂಭಾಗ ಪ್ರತಿಭಟಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭೂಮಿಪೂಜೆ ಮಾಡಿ 40 ಲಕ್ಷ ರು. ಅಂದಾಜು ವೆಚ್ಚದಲ್ಲಿ ಅನುದಾನ ನೀಡಿದ್ದರು. ಆದರೆ ಈಗ ನಡೆಸುತ್ತಿರುವ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆ ಒತ್ತುವರಿ ಮಾಡಿ ಕಾನೂನು ಬಾಹಿರವಾಗಿ ದಾಖಲೆ ತಿದ್ದುಪಡಿ
ಸರ್ಕಾರಿ ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮತ್ತು ಕಾನೂನುಬಾಹಿರವಾಗಿ ಕಂದಾಯ ಇಲಾಖೆ ದಾಖಲೆ ತಿದ್ದುಪಡಿ ಮಾಡಿ ಖಾತೆ ಮಾಡಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಡಿಸಿ ಕಚೇರಿ ಆವರಣದಲ್ಲಿ ಹೊಳೆನರಸೀಪುರ ತಾಲೂಕಿನ ಶ್ರವಣೂರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಳ್ಳಿ ಮೈಸೂರು ಹೋಬಳಿ ಬಂಟರತಳಾಲು ಗ್ರಾಮದ ನಿವಾಸಿ ಬಿ.ಜೆ. ಮಂಜೇಗೌಡ ಇವರು ಸರ್ಕಾರಿ ಕೆರೆಯನ್ನು ಒತ್ತುವರಿ ಮಾಡಿ ಬೆಳೆಯನ್ನು ಹಾಕಿರುತ್ತಾರೆ. ಸರ್ಕಾರಿ ಕೆರೆಯಲ್ಲಿ ನೀರಿನ ಮಟ್ಟವು ತುಂಬಾ ಕಡಿಮೆ ಇದ್ದು, ಗ್ರಾಮಸ್ಥರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತುಂಬಾ ಸಮಸ್ಯೆಯಾಗಿರುತ್ತದೆ ಎಂದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 504
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved