• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರ ಸಾರ್ವತ್ರಿಕ ಮುಷ್ಕರ ಯಶಸ್ವಿಯಾಗಿಸಿ
ಮೇ ೨೦ರ ಕಾರ್ಮಿಕರ ಸಾರ್ವತ್ರಿಕ ಮುಷ್ಕರ ಯಶಸ್ವಿಯಾಗಲು ಎಲ್ಲಾ ಕಾರ್ಮಿಕರು ರಸ್ತೆಗಿಳಿದು ಹೋರಾಟ ಮಾಡುವುದರ ಮೂಲಕ ಬಂಧನಕ್ಕೆ ಒಳಗಾಗುವಂತೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಬಹಿರಂಗವಾಗಿ ಕರೆ ನೀಡಿದರು. ಮುಷ್ಕರ ಮಾಡಲು ೯೦ ದಿನ ಮೊದಲೇ ತಿಳಿಸಬೇಕಾಗಿದೆ. ಬೀದಿಬದಿ ವ್ಯಾಪಾರಸ್ಥರು ಸೇರಿದಂತೆ ಎಲ್ಲಾ ಕಾರ್ಮಿಕರು ಗಮನಹರಿಸಬೇಕಾಗಿದೆ. ಎಷ್ಟೇ ಶಕ್ತಿಯಿಂದ ದುಡಿದರೂ ಸರಿಯಾಗಿ ವೇತನ ಸಿಗುತ್ತಿಲ್ಲ. ಇವತ್ತಿನ ಬೆಲೆ ಏರಿಕೆ ನೋಡಿದರೇ ಕನಿಷ್ಠ ೩೫ ಸಾವಿರ ರು. ಬೇಕಾಗಿದೆ ಎಂದು ಒತ್ತಾಯಿಸಿದರು.
ನಮ್ಮೊಳಗಿನ ಸಾಧಕರು ಪುರಸ್ಕಾರ ಕಾರ್ಯಕ್ರಮ
ಪದ್ಮಶ್ರೀ ಪುರಸ್ಕೃತ ತುಳಸಿ ಗೌಡರವರ ಸ್ಮರಣಾರ್ಥದಲ್ಲಿ ನಮ್ಮೊಳಗಿನ ಸಾಧಕರು ಹೆಸರಿನಲ್ಲಿ ಮೇ ೨೫ರಂದು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯ ಸಾಧಕರಿಗೆ ಗೌರವ ಪುರಸ್ಕಾರ ಸನ್ಮಾನ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಸರ್ಕಾರಿ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಕ್ಷರ ಶ್ರೀ ಫೌಂಡೇಶನ್ ಜಿಲ್ಲಾಧ್ಯಕ್ಷ ವೆಂಕಟೇಶ್ ತಿಳಿಸಿದರು.
ಕನ್ನಂಬಾಡಿಯಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಪೂರ್ವಿಕರನ್ನು ಹೆಚ್ಚಾಗಿ ಕಾಡುತ್ತಿದ್ದ ಪ್ಲೇಗು, ಕಾಲರಾ, ಮಲೇರಿಯಾ, ದಡಾರ ಸೇರಿದಂತೆ ಯಾವುದೇ ಕಾಯಿಲೆಗಳು ಬಾರದಿರಲಿ, ಮಳೆ ಬೆಳೆ ಚೆನ್ನಾಗಿ ಆಗಲಿ, ಎಲ್ಲಾ ಜನಾಂಗಗಳ ಜನತೆಯ ನಡುವೆ ಬಾಂಧವ್ಯ ಇರಲಿ ಎನ್ನುವ ದೃಷ್ಟಿಯಿಂದ ಶ್ರೀ ಕನ್ನಂಬಾಡಿಯಮ್ಮ ದೇವಿಯ ಹಬ್ಬ ಆಚರಿಸುತ್ತಿದ್ದರು. ಕೆಲವು ಕಾರಣಗಳಿಂದ ಈ ಹಬ್ಬ ನಿಂತು ಹೋಗಿತ್ತು. ಶ್ರೀ ಕನ್ನಂಬಾಡಿಯಮ್ಮದೇವಿಯೇ ಪ್ರೇರಣೆ ನೀಡಿ, ಮತ್ತೆ ಹಬ್ಬ ಆಚರಿಸಲು ಜನರು ಮುಂದಾದ ಕಾರಣದಿಂದ ೨೦೨೨ರ ನವೆಂಬರ್ ೧೯ರಂದು ಪುನಃ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಬಸವಣ್ಣನವರು ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶಕರು
ಬಸವಣ್ಣನವರು ಕೇವಲ ಒಂದು ಧರ್ಮ, ಪಂಗಡಕ್ಕೆ ಸೀಮಿತರಾಗಿರಲಿಲ್ಲ. ಇಡೀ ಮಾನವ ಕುಲಕ್ಕೆ ಸೇರಿದವರಾಗಿದ್ದು ಅವರ ವಚನಗಳು ಸರಳವಾಗಿದ್ದು ಅವುಗಳಲ್ಲಿ ಅಡಗಿರುವ ಸತ್ಯಗಳು ಸಾರ್ವಕಾಲಿಕವಾಗಿವೆ. ಅವರು ಜಾತಿ, ಮತ, ಲಿಂಗಭೇದಗಳನ್ನು ಮೀರಿ ನಿಂತು, ಎಲ್ಲರೂ ಸಮಾನರು ಎಂಬ ಕ್ರಾಂತಿಕಾರಿ ಕಲ್ಪನೆಯನ್ನು ಸಾರಿದರು. ಸಮಾಜ ಸುಧಾರಕ, ಕ್ರಾಂತಿಕಾರಿ ಚಿಂತಕ ಮತ್ತು ಶ್ರೇಷ್ಠ ಮಾನವತಾವಾದಿ ಬಸವಣ್ಣನವರು ತಮ್ಮ ತತ್ವ, ಸಿದ್ಧಾಂತಗಳ ಮೂಲಕ ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶಕರಾಗಿದ್ದಾರೆ ಎಂದು ಶಾಸಕ ಎಚ್ ಕೆ ಸುರೇಶ್ ಹೇಳಿದರು.
ಬಸವೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ
ಜಗಜ್ಯೋತಿ ಬಸವೇಶ್ವರರ ಬಸವ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಬಸವ ಜಯಂತಿ ಪ್ರಯುಕ್ತ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಅಮರಲಿಂಗೇಶ್ವರ ಶ್ರೀ ಕಾಡುಬಸವೇಶ್ವರ ಸಂಕೋಲೆ ಬಸವೇಶ್ವರ ಹಾಗೂ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ನೂರಾರು ಭಕ್ತರು ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಕಾಡು ಬಸವೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸರ್ಕಾರಿ ಜಾಗ ಉಳಿಸಿಕೊಳ್ಳಲು ಸೂರುಗೋಡು ಗ್ರಾಮಸ್ಥರ ಹೋರಾಟ
ಲಕ್ಕುಂದ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸೂರುಗೋಡು ಗ್ರಾಮದ ಸರ್ವೆ ನಂ 46/2ರಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಗೋಮಾಳ ಇದ್ದಂತ ಜಾಗದಲ್ಲಿ ಸುಮಾರು 10 ಗುಂಟೆ ಜಾಗವನ್ನು ಶಾಲೆಗೆ ಮೀಸಲಿಟ್ಟು 1996ರಲ್ಲಿ 1ರಿಂದ 4ನೇ ತರಗತಿಯವರೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಯನ್ನು ಮಂಜೂರು ಮಾಡಲಾಗಿತ್ತು. ಅಂದಿನಿಂದ ಇಲ್ಲಿವರೆಗೂ ಗ್ರಾಮೀಣ ಭಾಗದ ನೂರಾರು ಬಡ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಅದರಂತೆ 2002-03ರಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಶಾಲೆಯನ್ನು ಮುಚ್ಚಲಾಗಿತ್ತು.
ಮಹಿಳೆಯರ ಸ್ವಾತಂತ್ರ್ಯ ಸಮಾನತೆಗೆ ಅಂಬೇಡ್ಕರ್ ಕೊಡುಗೆ ಅಪಾರ
ದೇಶದ ಮೂಲೆಮೂಲೆಯಲ್ಲಿರುವ ಮಹಿಳೆಯರಿಗೆ ಶಿಕ್ಷಣ ಹಕ್ಕು, ಆಸ್ತಿಯ ಹಕ್ಕು, ಹೀಗೆ ಹಲವಾರು ಹಕ್ಕುಗಳನ್ನು ಸಂವಿಧಾನದ ಮೂಲಕ ಅಂಬೇಡ್ಕರ್‌ ಅವರು ಕಲ್ಪಿಸಿಕೊಟ್ಟಿದ್ದಾರೆ. ಅವರ ಕನಸು ನನಸಾಗಬೇಕೆಂದರೆ ಈ ಎಲ್ಲ ಹಕ್ಕುಗಳು ಪ್ರತಿ ಮಹಿಳೆಯನ್ನು ತಲುಪಬೇಕು. ಮಹಿಳಾ ಸಬಲೀಕರಣಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕೊಡುಗೆ ಅಪಾರ, ಹೆಣ್ಣು ಇವತ್ತು ಇಷ್ಟರ ಮಟ್ಟಿಗೆ ಶಿಕ್ಷಣವನ್ನು ಪಡೆಯುತ್ತಿದ್ದಾಳೆ, ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ ಎಂದರೆ ಅದಕ್ಕೆ ಮೂಲ ಕಾರಣ ಅಂಬೇಡ್ಕರ್‌‌, ಅವರನ್ನು ಜೀವನಪೂರ್ತಿ ಸ್ಮರಿಸುತ್ತೇನೆ ಎಂದು ಸುಮ ತಿಳಿಸಿದರು.
ಶ್ರೀ ವೀರಭದ್ರೇಶ್ವರ ಸ್ವಾಮಿ ಕೆಂಡೋತ್ಸವ
ಜೀಕನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಭದ್ರಾಕಾಳಮ್ಮನವರ ಕೆಂಡೋತ್ಸವ ಮತ್ತು ಬಸವ ಜಯಂತಿ ಜಾತ್ರಾ ಮಹೋತ್ಸವವು ವಿಶೇಷ ಕ್ಷೀರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಹೂವಿನ ಅಲಂಕಾರದೊಂದಿಗೆ ಅದ್ಧೂರಿಯಾಗಿ ನೆರವೇರಿತು. ಸ್ವಾಮಿಯವರ ಜಾತ್ರಾ ಮಹೋತ್ಸವಕ್ಕೆಂದು ಗ್ರಾಮಕ್ಕೆ ಆಗಮಿಸಿದ ಗ್ರಾಮ ದೇವತೆಯಾದ ಶ್ರೀ ಸಪ್ತಮಾತೃಕ ದೇವಿ, ಶ್ರೀ ಪಂಚಲಿಂಗೇಶ್ವರ ಸ್ವಾಮಿ, ಶ್ರೀ ಧೂತರಾಯ ಸ್ವಾಮಿ, ಶ್ರೀ ಮುತ್ತುರಾಯ ಸ್ವಾಮಿಯವರ ದರ್ಶನ ಪಡೆದ ಭಕ್ತರು ಮತ್ತು ಹೆಣ್ಣುಮಕ್ಕಳು ದೇವರುಗಳಿಗೆ ಮಡಿಲಕ್ಕಿ ಹಾಕಿ ಭಕ್ತಿಯಿಂದ ಮನಸ್ಸಿನ ಈಡೇರಿಕೆಗಳನ್ನು ಬೇಡಿಕೊಂಡರು.
ಮಾದಕ ವಸ್ತುಗಳ ಸಾಗಾಣಿಕೆ ಮಾರಾಟ ಪತ್ತೆಗೆ ಕ್ರಮವಹಿಸಿ
ಮಾದಕ ವಸ್ತುಗಳು ಸಮಾಜದ ಮೇಲೆ ಬಹಳ ದುಷ್ಪರಿಣಾಮ ಬೀರುತ್ತಿವೆ. ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಪತ್ತೆ ಮಾಡುವುದರ ಜೊತೆಗೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸದರಿ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ನಿರ್ದೇಶನ ನೀಡಿದರು. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡಬೇಡಿ, ಯಾವುದೇ ಉದಾಸಿನ ಮಾಡದೆ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಡೀಸಿ ಎಚ್ಚರಿಕೆ ನೀಡಿದರು.
ಯಗಚಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಒತ್ತಾಸೆಯಿಂದಾಗಿ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 35 ಕೋಟಿ ರು. ಅನುದಾನ ಮೀಸಲಿಡಲಾಗಿದೆ. ವಿಶ್ವವಿಖ್ಯಾತ ಸ್ಥಳ ಇದಾಗಿದ್ದು ಇಂದು ತಾಂತ್ರಿಕ ಸಮಿತಿ ಅಧ್ಯಕ್ಷ ಜಯಪ್ರಸಾದ್ ಅವರ ನೇತೃತ್ವದ ತಂಡ ಸ್ಥಳಕ್ಕೆಬಂದು ಪರಿಶೀಲನೆ ನಡೆಸಿದೆ. ಚತುಷ್ಪಥ ರಸ್ತೆಗೆ ಅನುಗುಣವಾಗಿ ಸೇತುವೆ ನಿರ್ಮಿಸಲಾಗುವುದು. ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ನಂತರ ಕೆಲಸ ಆರಂಭಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಗಿಂತ ಉತ್ತಮ ರೀತಿಯಲ್ಲಿ ನಿರ್ಮಿಸಲಾಗುವುದು. ಹೊಳೆಬೀದಿ ಸರ್ಕಾರಕ್ಕೆ ಸೇರಿದ 93 ಅಡಿ ರಸ್ತೆ ಇದ್ದು ಅಲ್ಪಸ್ವಲ್ಪ ಒತ್ತುವರಿ ಇದ್ದರೂ ಬಿಟ್ಟುಕೊಡಲಿದ್ದಾರೆ. ಎಲ್ಲರ ಸಹಕಾರ ಮುಖ್ಯ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 442
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved