ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶ ಅನುಸರಿಸಿಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ನಡೆಯೋಣ. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದಂತಹ ಕ್ರಾಂತಿ ವೀರರು. ಅವರ ಧೈರ್ಯ, ಸ್ಥೈರ್ಯ ಮತ್ತು ನೇರ ನುಡಿಯನ್ನು ಮೆಚ್ಚಬೇಕಾಗಿದೆ. ಯುದ್ಧದ ರೀತಿ ಜೊತೆಯಲ್ಲಿ ನಾವು ಹೋಗುತ್ತಿದ್ದೇವೆ. ಮುಂದಿನ ಪೀಳಿಗೆಯವರಾದಂತಹ ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಸಂಸದ ಶ್ರೇಯಸ್. ಎಂ. ಪಟೇಲ್ ಅವರು ಕರೆ ನೀಡಿದರು.