• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ವೀರಶೈವ ಸಮಾಜದ ಧ್ವನಿಯಾಗಿ ನಿಲ್ಲುವೆ: ಅಡಗೂರು ಬಸವರಾಜ್
ನನಗೆ ಗೆಲುವು ಸಾಧಿಸಲು ಸಹಕರಿಸಿ, ಕೈಜೋಡಿಸಿ, ಶ್ರಮಿಸಿದ ಎಲಾ ಕಾರ್ಯಕರ್ತರಿಗೂ ಹಾಗೂ ಮುಖಂಡರಿಗೂ ಧನ್ಯವಾದದೊಂದಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ವೀರಶೈವ ಸಮಾಜದ ಸಂಘಟನೆಗೆ ಹೆಚ್ಚು ಒತ್ತು ನೀಡಿ ವೀರಶೈವ ಸಮಾಜದಲ್ಲಿ ನೊಂದವರಿಗೆ, ಕಷ್ಟದಲ್ಲಿರುವವರಿಗೆ ಮತ್ತು ಅನ್ಯಾಯವಾದ ಸಂದರ್ಭದಲ್ಲಿ ಅವರ ಪರ ಧ್ವನಿಯಾಗಿ ನಿಂತು ನ್ಯಾಯ ಒದಗಿಸಲು ಬದ್ಧನಾಗಿರುತ್ತೇನೆ.
ಖಾಸಗಿ ನಿವೇಶನಗಳಲ್ಲಿ ಅನೈರ್ಮಲ್ಯ
ಬೇಲೂರು ಪುರಸಭೆ ವ್ಯಾಪ್ತಿಯ 9ನೇ ವಾರ್ಡ್‌ ವೈಕುಂಠ ಬೀದಿ ಸರ್ಕಾರಿ ಗೌರಮ್ಮ ದೇಗುಲ ಪಕ್ಕ ಇರುವ ಖಾಸಗಿ ನಿವೇಶನದಲ್ಲಿ ಗಿಡಗಂಟೆಗಳು ಬೆಳೆದು ತೀವ್ರ ತೊಂದರೆಯಾಗುತ್ತಿದೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿ ಪುರಸಭೆ ಸದಸ್ಯ ಜಗದೀಶ್ ಪರಿಶೀಲನೆ ನಡೆಸಿದ್ದಾರೆ
ಹಾಸನದಲ್ಲಿ ಕೊಂಚ ತಗ್ಗಿದ ಮಳೆ
ಕಳೆದ ಹದಿನೈದು ದಿನಗಳ ಹಿಂದಿದ್ದ ವಾತಾವರಣ ಈಗಿಲ್ಲ. ಮಳೆ ಈಗ ಕೊಂಚ ಬಿಡುವು ನೀಡಿದೆ. ಆದರೆ ಹದಿನೈದು ದಿನಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ಮುಸುಕಿನ ಜೋಳ, ಶುಂಠಿ, ಆಲೂಗಡ್ಡೆ ಬೆಳೆಗಳು ಹಲವು ರೋಗಗಳಿಗೆ ಸಿಲುಕಿ ಬಹುತೇಕ ಹಾನಿಗೀಡಾಗಿವೆ. ಇದರೊಂದಿಗೆ ಪುರ್ನವಸು ಮಳೆ ರೈತರ ತಲೆ ಮೇಲೆ ಚಪ್ಪಡಿ ಎಳೆದಿದೆ.
ಬೇಲೂರು ತಾಲೂಕು ಶಿಕ್ಷಣಾಧಿಕಾರಿಯಾಗಿ ರಾಜೇಗೌಡ
ಬೇಲೂರು ತಾಲೂಕು ಶಿಕ್ಷಣ ಇಲಾಖೆಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರಾಜೇಗೌಡರು ನೇಮಕಗೊಂಡಿದ್ದಾರೆ. ಕೆಲ ಮಲೆನಾಡು ಭಾಗಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು ನಮ್ಮ ಮೇಲಧಿಕಾರಿ ಹಾಗೂ ಶಾಸಕರ ನೆರವನ್ನು ಪಡೆದು ಶಿಕ್ಷಕರನ್ನು ನೇಮಿಸುವ ಕೆಲಸಕ್ಕೆ ಮುಂದಾಗುತ್ತೇನೆ. ಪ್ರತೀ ವಾರ ತಾಲೂಕಿನ ಎಲ್ಲಾ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಹೆಣ್ಣು ಎಂದರೆ ಸಮಾಜದಲ್ಲಿ ಒಂದು ಶಕ್ತಿ
ಹಾಸನ ನಗರದ ಜಿಲ್ಲಾ ಕುರುಹಿನಶೆಟ್ಟಿ ಭವನದಲ್ಲಿ ಜಿಲ್ಲಾ ನೇಕಾರ ಕುರುಹಿನಶೆಟ್ಟಿ ಮಹಿಳಾ ಸಂಘ ಮತ್ತು ಜಿಲ್ಲಾ ನೇಕಾರ ಸಮುದಾಯಗಳ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ೮ನೇ ವರ್ಷದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ನೇಕಾರ ಸಮುದಾಯಗಳ ಮಹಿಳಾ ಒಕ್ಕೂಟದ ಉದ್ಘಾಟನೆಯನ್ನು ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್ ಉದ್ಘಾಟಿಸಿ ಹೆಣ್ಣು ಎಂದರೆ ಸಮಾಜದಲ್ಲಿ ಒಂದು ಶಕ್ತಿ ಎಂದು ನುಡಿದರು.
ವಿಪರೀತ ಮಳೆಗೆ ಮನೆ ಕುಸಿತ
ಅರಸೀಕೆರೆ ನಗರದಲ್ಲಿ ಕೆಲವು ದಿನಗಳಿಂದ ಒಂದೇ ಸಮನೆ ಬೀಳುತ್ತಿರುವ ಮಳೆಯಿಂದ ಮನೆಯ ಗೋಡೆಗಳು ಶಿಥಿಲಗುಂಡು ಸೋಮವಾರ ಬೆಳಗಿನ ಜಾವ ಸುಮಾರು ಐದು ಗಂಟೆಗೆ ಮನೆಯೊಂದರ ಹಿಂಭಾಗದ ಮೇಲ್ಛಾವಣಿ ಹಾಗೂ ಮನೆಯ ಗೋಡೆಗಳು ಕುಸಿದಿದ್ದು, ಈ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆ ಶಬ್ದವನ್ನು ಕೇಳಿ ಮನೆಯ ಹೊರಗೆ ಓಡಿ ಬಂದಿದ್ದ ನಂತರ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿದ್ದಂತಹ ವಸ್ತುಗಳು ಗೋಡೆಗಳ ಅಡಿಯಲ್ಲಿ ಸಿಲುಕಿ ತುಂಬಾ ನಷ್ಟ ಉಂಟಾಗಿದೆ.
ಬೀದಿ ನಾಯಿ ಹಿಡಿಯುವ ಕಾರ್ಯಾಚರಣೆ ಆರಂಭ
ಹಾಸನ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾದ ಕಾರಣ ಇದೀಗ ಬೀದಿ ನಾಯಿಗಳನ್ನು ಹಿಡಿಯುವ ಮತ್ತು ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ ರೇಬಿಸ್‌ ಲಸಿಕೆ ಹಾಕಿ ವಾಪಸ್‌ ಬಿಡುವ ಕಾರ್ಯಾಚರಣೆಯನ್ನು ನಗರಸಭೆಯವರು ಸೋಮವಾರದಿಂದ ಆರಂಭಿಸಿದರು. ಪ್ರತಿದಿನ ಎಲ್ಲಾ ವಾರ್ಡ್‌ಗಳಲ್ಲಿ ಹಿಡಿದಂತ ನಾಯಿಗಳನ್ನು ಕೈಗಾರಿಕಾ ಪ್ರದೇಶದಲ್ಲಿ ಶೆಡ್ ಮಾಡಲಾಗಿದ್ದು, ಇಲ್ಲಿ ಆಪರೇಷನ್ ಥಿಯೇಟರ್‌ಗಳನ್ನು ಮಾಡಲಾಗಿದೆ. ಆಪರೇಷನ್ ನಂತರ ಆ ನಾಯಿಗಳನ್ನು ಮತ್ತೆ ಎಲ್ಲಿ ಹಿಡಿಯಲಾಗಿತ್ತೋ ಅದೇ ಜಾಗಕ್ಕೆ ತಂದು ಬಿಡಲಾಗುವುದು.
ಕಾಫಿ ಬೆಳೆ ಹಾನಿ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವೆ
ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಸಕಲೇಶಪುರಕ್ಕೆ ಭೇಟಿ ನೀಡಿ, ಅತಿಯಾದ ಮಳೆಗೆ ಹಾನಿಗೀಡಾಗಿರುವ ಕಾಫಿ ತೋಟಗಳನ್ನು ಪರಿಶೀಲನೆ ನಡೆಸಿದರು. ಕಳೆದ ಒಂದು ತಿಂಗಳ ನಿರಂತರ ಮಳೆ ಹಾಗೂ ಗಾಳಿಯಿಂದ ಕಾಫಿ, ಮೆಣಸಿನ ಬೆಳೆ ಸಾಕಷ್ಟು ಹಾನಿಗೊಂಡಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಬೆಳೆಗಾರರ ನೆರವಿಗೆ ಧಾವಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಗುರು ಪೂರ್ಣಿಮೆಯಂದು ಕೋಡಿ ಶ್ರೀ ಆಶೀರ್ವಚನ
ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರದಲ್ಲಿ ಗುರು ಹುಣ್ಣಿಮೆ ತನ್ನದೇ ಮಹತ್ವವನ್ನು ಹೊಂದಿದೆ. ಜೀವನದಲ್ಲಿ ಶಿಕ್ಷಣ ನೀಡಿದ ಗುರುಗಳನ್ನು ನೆನಪು ಮಾಡುಕೊಳ್ಳುವುದರ ಮೂಲಕ ಗೌರವ ಸಲ್ಲಿಸಿದರೆ, ಮತ್ತೊಂದು ಕಡೆ ಧಾರ್ಮಿಕ ಕ್ಷೇತ್ರಗಳ ಮಠ ಮಂದಿರಗಳಿಗೆ ಭೇಟಿ ನೀಡಿ ಗುರುವರ್ಯರಿಗೆ ಗೌರವಿಸಿ ಸತ್ಕರಿಸುವುದು ಭಕ್ತ ಸಮೂಹವು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದಿರುವ ಮತ್ತು ಬರುತ್ತಿರುವ ಸಂಸ್ಕಾರವಾಗಿದೆ ಎಂದು ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ತಿಳಿಸಿದರು.
ಅರಸೀಕೆರೆಯಲ್ಲಿ ವಿಶೇಷವಾಗಿ ಗುರುಪೂರ್ಣಿಮೆ ಆಚರಣೆ
ನಗರದ ಶ್ರೀವಿದ್ಯಾನಗರದ ಶ್ರೀಮಾರುತಿ ಸಚ್ಚಿದಾನಂದ ಆಶ್ರಮದಲ್ಲಿನ ಶ್ರೀವಿಷ್ಣು ಪಂಚಾಯತ್ ದೇವಾಲಯದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿಯವರಿಗೆ ಮುಂಜಾನೆ ಫಲಪಂಚಾಮೃತ ಅಭಿಷೇಕ ಹಾಗೂ ಪವಮಾನ, ಶ್ರೀಲಕ್ಷ್ಮೀ ನರಸಿಂಹ ಮೂಲಮಂತ್ರ ಹೋಮ, ದಕ್ಷಿಣಾಮೂರ್ತಿ ಮಂತ್ರ ಹೋಮ, ದತ್ತಾತ್ರೇಯ ಮಂತ್ರ ಹೋಮದ ಪೂರ್ಣಾಹುತಿ ನೆರವೇರಿಸಿದ ನಂತರ ಗುರುಗಳಿಂದ ಸಂಸ್ಥಾನ ಪೂಜೆ ಆದಿತ್ಯ, ಅಂಬಿಕಾ ಪರಮೇಶ್ವರಿ, ಪಂಚಮುಖಿ ಗಣಪತಿ ಶ್ರೀಕಂಠೇಶ್ವರ,ಆಂಜನೇಯರ ಮತ್ತು ಲಕ್ಷ್ಮೀನರಸಿಂಹಸ್ವಾಮಿ ಸನ್ನಿಧಿಯಲ್ಲಿ ಮಹಾಪೂಜೆ, ಗುರುಪಾದುಕಾ ಪೂಜೆ, ಗುರುವಂದನೆ ನಡೆಯಿತು.
  • < previous
  • 1
  • ...
  • 381
  • 382
  • 383
  • 384
  • 385
  • 386
  • 387
  • 388
  • 389
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved