• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಸಂತ ನಾರಾಯಣ ಗುರು
ಕೇರಳದ ಬಸವಣ್ಣ ಎಂದೇ ಪ್ರಖ್ಯಾತಿ ಪಡೆದ ನಾರಾಯಣ ಗುರುಗಳು ತಮ್ಮ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟಿದ್ದರು. ತಮ್ಮ ಕಾಲದಲ್ಲಿ ಕೆಳಜಾತಿಯವರ ಮೇಲೆ ಆಗುತ್ತಿದ್ದ ದೌರ್ಜನ್ಯ, ಹೆಣ್ಣು ಮಕ್ಕಳ ಮೇಲೆ ವಿಧಿಸಿದ್ದ ನಿಬಂಧನೆಗಳನ್ನು ಅಹಿಂಸಾತ್ಮಕವಾಗಿ ವಿರೋಧಿಸಿ, ಮಾನವ ಕುಲ ಒಂದೇ ಎಂಬ ಸಿದ್ಧಾಂತವನ್ನು ಸಮಾಜದಲ್ಲಿ ಸಾರಿದ್ದರು, ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿದರು. ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಜಾತಿ, ಜಾತಿಗಳ ನಡುವೆ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯದ ಸಮಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದರು ಎಂದು ಹೇಳಿದರು.
ಮೊಬೈಲ್ ಗೀಳಿನಿಂದ ಹೊರಬಂದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ
ಅವಶ್ಯಕ್ಕೆ ತಕ್ಕಂತೆ ಮಾತ್ರ ಮೊಬೈಲ್ ಉಪಯೋಗಿಸಬೇಕು. ದಿನದಲ್ಲಿ ಒಂದು ಗಂಟೆಯಾದರೂ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ಮಾನಸಿಕ ಸದೃಢತೆ ಬೆಳಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿ ಮಕ್ಕಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಗೆಲ್ಲುವ ಗುರಿ ಹೊಂದಬೇಕು. ಮುಂದಿನ ದಿನಗಳಲ್ಲಿ ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ನೀಡಲು ಗುರಿ ಹೊಂದಿದ್ದೇನೆ ಎಂದರು.
ಪ್ರತಿಯೊಬ್ಬ ಶಿಕ್ಷಕನೂ ನಿರಂತರ ವಿದ್ಯಾರ್ಥಿ
ಶಿಕ್ಷಕರು ಬೋಧಿಸುವ ಮೌಲ್ಯಾಧಾರಿತ, ನೀತಿಯುಕ್ತ, ಜ್ಞಾನಾರ್ಜನೆ ವಿಷಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಶಿಕ್ಷಕರಿಗೆ ಗೌರವ ಕೃತಜ್ಞತೆಗಳನ್ನು ಸಲ್ಲಿಸಬೇಕು ಎಂದು ವಿಜಯ ಶಾಲೆ ಸಂಸ್ಥಾಪಕ ನಿರ್ದೇಶಕರಾದ ತಾರಾ ಎಸ್ ಸ್ವಾಮಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 10ನೇ ತರಗತಿ ವಿದ್ಯಾರ್ಥಿಗಳು ತಾವೇ ವಿಶಿಷ್ಟವಾಗಿ ತಯಾರಿಸಿದ ಬುಕ್ ಮಾರ್ಕರ್‌ಗಳನ್ನು ಗುರುಗಳಿಗೆ ನೀಡಿದ್ದು ವಿದ್ಯಾರ್ಥಿಗಳಲ್ಲಿರುವ ಕಲಾ ಕೌಶಲತೆಗೆ ಸಾಕ್ಷಿ ಯಾದರೆ, ಪ್ರತಿ ಶಿಕ್ಷಕರನ್ನು ಕ್ರಿಯಾವಿಶೇಷಣಗಳ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಿದರು.
ಅವ್ಯವಸ್ಥೆಗಳ ಆಗರವಾದ ಆಲೂರು ಬಸ್‌ ನಿಲ್ದಾಣ
ಮುಖ್ಯವಾಗಿ ಈ ಬಸ್ ನಿಲ್ದಾಣದಲ್ಲಿ ಕೂರಲು ಸಾಕಷ್ಟು ಆಸನಗಳ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನೆಲದಲ್ಲಿ ಹಾಗೂ ಮೆಟ್ಟಿಲುಗಳ ಮೇಲೆ ಕೂರುವಂತಾಗಿದೆ. ಈ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸಿಸಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ, ಹೈ ಮಾಸ್ಟ್‌ ದೀಪದ ವ್ಯವಸ್ಥೆ ಇಲ್ಲ, ವಿಶ್ರಾಂತಿ ಗೃಹವಿಲ್ಲ, ಮುಖ್ಯವಾಗಿ ಇಲ್ಲಿ ರಾತ್ರಿ ವೇಳೆಯಲ್ಲಿ ಸಂಚಾರ ನಿಯಂತ್ರಕರು ಇರುವುದಿಲ್ಲ. ಇಲ್ಲಗಳ ತವರೂರಾಗಿರುವ ಈ ಬಸ್ ನಿಲ್ದಾಣ ರಾತ್ರಿ ಆದರೆ ಹೇಳುವವರು ಕೇಳುವವರಿಲ್ಲದೆ ಅನೈತಿಕ ಚಟುವಟಿಕೆಗಳ ಕೇಂದ್ರವಾಗುತ್ತಿದ್ದು, ರಾತ್ರಿ ವೇಳೆಯಲ್ಲಿ ಯಾರಾದರೂ ಪ್ರಯಾಣಿಕರು ಬಸ್ ನಿಲ್ದಾಣದ ಒಳಗೆ ಹೋಗಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪೂರ್ಣ ಕುವೆಂಪು ಭವನ ಪೂರ್ಣಗೊಳಿಸಲು ಶಾಸಕ ಮಂಜು ಮನವಿ
ವಿಜಯ ಸಿದ್ಧ ಶಿವದೇವ ಮಂಗಳ ಮಂದಿರದಲ್ಲಿ ನಡೆದ 132ನೇ ಗುರುತೋರಿದ ದಾರಿ -ತಿಂಗಳಮಾಮನ ತೇರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಒಕ್ಕಲಿಗ ಸಮಾಜದ ಕುವೆಂಪು ಭವನ ಕಾಮಗಾರಿ ನೆನಗುದಿಗೆ ಬಿದ್ದಿದೆ. ನನ್ನ ಅವಧಿಯಲ್ಲಿ ಲಕ್ಷಾಂತರ ರು. ಹಣವನ್ನು ಭವನಕ್ಕೆ ಕಲ್ಪಿಸಲಾಗಿದೆ. ಇನ್ನು ಸಾಕಷ್ಟು ಹಣದ ಅವಶ್ಯಕತೆ ಇದೆ. ನಾನು ಸೇರಿದಂತೆ ಇಡೀ ಸಮಾಜ ಭವನದ ಅಭಿವೃದ್ಧಿಗೆ ಕೈಜೋಡಿಸಲಿದೆ. ಮಠದ ಸುಪರ್ತಿಗೆ ನೀಡಲಾಗಿದ್ದು, ಉಳಿಕೆ ಕೆಲಸವನ್ನು ಕೂಡಲೇ ಪೂರ್ಣಗೊಳಿಸಿ ಮುಂದಿನ ಎಲ್ಲಾ ಸಮಾಜದ ಕಾರ್ಯಕ್ರಮಗಳು ನೂತನ ಭವನದಲ್ಲಿ ಆಗಬೇಕಿದೆ. ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರ ಗಮನಕ್ಕೂ ತರಲಾಗಿದೆ ಎಂದು ಹೇಳಿದರು.
ಗಣಪತಿ ಪೆಂಡಾಲ್‌ನಲ್ಲಿ ಮಹಾಗಣಪತಿ ಹೋಮ
ಶ್ರೀ ಸ್ವಾಮಿಯ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ ನಡೆಸಲಾಯಿತು. ಶ್ರೀ ಗಣಪತಿ ಮೂರ್ತಿಗೆ ವಿವಿಧ ಪುಷ್ಪಗಳಿಂದ ವಿಶೇಷವಾಗಿ ಅಲಂಕಾರ ನೆರವೇರಿಸಲಾಯಿತು. ವಿಶೇವವಾಗಿ ರಚಿಸಿದ್ದ ಮಂಡಲದ ಪಕ್ಕದಲ್ಲಿ ನಿರ್ಮಿಸಿದ್ದ ಹೋಮ ಕುಂಡಕ್ಕೆ ಪುಣ್ಯಹವಾಚನೆ, ಕಳಸ ಪೂಜೆ, ಪಂಚಗವ್ಯ, ಅಗ್ನಿ ಪ್ರತಿಷ್ಠೆ ಮಾಡಲಾಯಿತು. ನಂತರ ಶ್ರೀ ಮಹಾಗಣಪತಿ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ನಕ್ಷತ್ರ ಹೋಮ, ಆಯುಷ್ಯ ಹೋಮ ಹಾಗೂ ಪೂರ್ಣಹುತಿ, ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ತೀಥ ಪ್ರಸಾದ ವಿನಿಯೋಗ ಹಾಗೂ ಪ್ರಸಾದ ರೂಪದಲ್ಲಿ ೧೫ ಸಾವಿರಕ್ಕೂ ಹೆಚ್ಚು ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಚಿಂದಿ ಆಯುವ ನೆಪದಲ್ಲಿ ಮನೆಗಳ್ಳತನ
ಹಾಡುಹಗಲೇ ಪಟ್ಟಣದ ಹೊರವಲಯದ ಕಡೇಗರ್ಜೆ ಗ್ರಾಮದ ಮನೆಯೊಂದರ ಗೇಟ್ ಲಾಕ್ ಒಡೆಯುವ ಮೂಲಕ ಕಾಂಪೌಂಡ್ ಒಳ ಪ್ರವೇಶಿಸಿ ಕೊಠಡಿಯೊಳಗಿದ್ದ ಬೆಲೆ ಬಾಳುವ ಪಾತ್ರೆ ಹಾಗೂ ಇತರೆ ಕಬ್ಬಿಣದ ವಸ್ತುಗಳನ್ನು ಚಿಂದಿ ಆಯುವ ಇಬ್ಬರು ಯುವತಿಯರು ದೋಚಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಶನಿವಾರ ಮನೆಯ ಹಿಂಬದಿಯಲ್ಲಿದ್ದ ಗೇಟ್ ಅನ್ನು ತೆಗೆದು ಕಾಂಪೌಂಡಿನ ಒಳ ಪ್ರವೇಶಿಸಿದ ಚಿಂದಿ ಆಯುವ ಇಬ್ಬರು ಮಹಿಳೆಯರು ಸುಮಾರು ಹತ್ತಾರು ಸಾವಿರ ಬೆಲೆಬಾಳುವ ಸಿಲ್ವರ್ ಮತ್ತು ತಾಮ್ರದ ಪಾತ್ರೆಗಳನ್ನು ಹಾಗೂ ಇತರೆ ಕಬ್ಬಿಣದ ವಸ್ತುಗಳನ್ನು ದೋಚಿದ್ದಾರೆ.
ತಣ್ಣೀರುಹಳ್ಳ ಮಠದಲ್ಲಿ ವಚನ ಪುಸ್ತಕ ವಿತರಣೆ
ಹಾಸನದ ತಣ್ಣೀರುಹಳ್ಳಮಠದ ಶ್ರೀ ಸಿದ್ದೇಶ್ವರ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಕಾರ್ಯಕ್ರಮ ನಡೆಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 110 ವರ್ಷದ ಜಯಂತಿ ಪ್ರಯುಕ್ತ ತಣ್ಣಿರುಹಳ್ಳಮಠದ ಶ್ರೀ, ಶ್ರೀ ಶಿವಲಿಂಗ ಮಹಾಸ್ವಾಮೀಜಿಯವರ ದತ್ತಿ ಹಾಗೂ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಚನ ಪುಸ್ತಕಗಳನ್ನು ನೀಡಲಾಯಿತು. ಶಿವಲಿಂಗ ಮಹಾಸ್ವಾಮೀಜಿಯವರ ದತ್ತಿ ಹಾಗೂ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಚನ ಪುಸ್ತಕಗಳನ್ನು ನೀಡಲಾಯಿತು.
ದಸರಾ ಉದ್ಘಾಟಿಸುವುದಾದರೆ ಬಾನು ಕುಂಕುಮ ಇಟ್ಟು ಬರಲಿ
ಬಾನು ಮುಷ್ತಾಕ್ ಅವರು ಒಳ್ಳೆ ಬರಹಗಾರರು ಅದರಲ್ಲಿ ಎರಡು ಮಾತಿಲ್ಲ. ಇವರು ಬರೆದಿರುವ ಕೃತಿಯನ್ನು ಕೊಡಗಿನ ದೀಪ ಭಾಸ್ತಿ ಅವರು ಇಂಗ್ಲಿಷ್ ಅನುವಾದ ಮಾಡಿರುವುದರಿಂದ ಬೂಕರ್ ಪ್ರಶಸ್ತಿ ದೊರೆತಿರುವುದು ಹೆಮ್ಮೆ ಪಡುವ ವಿಷಯ. ಬಾನು ಮುಸ್ತಕ್ ಅವರು ಮುಸ್ಲಿಂ ಮತ್ತು ಹಿಂದೂ ಧರ್ಮದ ಆಚರಣೆ ವಿರುದ್ಧ ಈ ಹಿಂದೆಯೇ ವಿರೋಧಿ ನಿಲುವು ಹೊಂದಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇಂತಹವರಿಂದ ನಾಡಿನ ಆರಾಧ್ಯ ದೇವಿ ಶ್ರೀ ಚಾಮುಂಡೇಶ್ವರಿ ಅವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಸಮಸ್ಯೆ ಆಲಿಸಲು ಹಾಡ್ಲಳ್ಳಿಗೆ ಡಿಸಿ ಲತಾಕುಮಾರಿ ಭೇಟಿ
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಹಾಡ್ಲಹಳ್ಳಿ ಗ್ರಾಮಸ್ಥರು ಕೆಲವು ಕುಟುಂಬಗಳಿಂದ ಅನುಭವಿಸುತ್ತಿರುವ ದೂರುಗಳ ಬಗ್ಗೆ ವಿವರಿಸಿದ್ದರು. ಈ ವೇಳೆ ಗ್ರಾಮಸ್ಥರಿಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದರು. ಇದರಂತೆ ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳ ಎದುರು ಇಡಿ ಗ್ರಾಮಸ್ಥರೆ ಜಮಾಯಿಸಿ ದೂರುಗಳ ಸುರಿಮಳೆಯನ್ನೆ ಸುರಿಸಿದರು. ರಾತ್ರಿ ವೇಳೆ ಹೆಂಚುಗಳ ಮೇಲೆ ಕಲ್ಲು ಬೀಳುತ್ತಿವೆ. ಒಟ್ಟಿನಲ್ಲಿ ನೆಮ್ಮದಿಯ ಜೀವನ ಇಲ್ಲದಾಗಿದೆ. ದಯವಿಟ್ಟು ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾಧಿಕಾರಿಗಳ ಬಳಿ ಅವಲತ್ತುಕೊಂಡರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 547
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved