• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನರಾಯಪಟ್ಟಣದಲ್ಲಿ ಪತ್ರಕರ್ತರ ಸಂಘದಿಂದ ಮಾಧ್ಯಮ ದಿನಾಚರಣೆ
ಚನ್ನರಾಯಪಟ್ಟಣ ತಾಲೂಕಿನ ಚಿಕ್ಕೋನಹಳ್ಳಿ ಸದ್ಗುರು ಶಿರಡಿ ಸಾಯಿ ಮಂದಿರದಲ್ಲಿ ಜು.17ಕ್ಕೆ ಮಾಧ್ಯಮ ದಿನಾಚರಣೆ ನಡೆಯಲಿದೆ ಎಂದು ಅಧ್ಯಕ್ಷರಾದ ಸಿದ್ದರಾಜು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪತ್ರಕರ್ತರ ಕುಟುಂಬದ ಸದಸ್ಯರಿಗೆ ಹಲವು ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತರಾದ ನಟೇಶ್, ಚಂದ್ರು, ದಯಾನಂದ್‌ರನ್ನು ವಿಶೇಷ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಜಡಿಮಳೆಗೆ ಕಾಫಿಗೆ ಕೊಳೆ ರೋಗದ ಭೀತಿ
ಮಳೆಯಿಂದಾಗಿ ಕಾಫಿ ತೋಟದಲ್ಲಿ ಮಳೆಗಾಲಕ್ಕೂ ಮುನ್ನ ಮುಗಿಸಬೇಕಿದ್ದ ಮರಗಸಿ, ಗಿಡಕಸಿ, ಕೊಟ್ಟಿಗೆ ಗೊಬ್ಬರ ನೀಡುವುದು ಸೇರಿದಂತೆ ಹಲವು ಕೆಲಸಗಳು ಸಾಕಷ್ಟು ಬಾಕಿ ಉಳಿದಿವೆ. ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆ ಕಾಫಿ ಬೆಳೆಗಾರರಿಗೆ ಕೊಳೆರೋಗದ ಆತಂಕ ತಂದೊಡ್ಡಿದೆ. ಕಾಫಿ ಬೆಳೆಗಾರರು ಕ್ರಿಮಿನಾಶಕ ಸಿಂಪಡಣೆಗೆ ಮಳೆ ಬಿಡುವು ನೀಡುವುದನ್ನೆ ಕಾಯುತ್ತಿದ್ದಾರೆ. ಆದರೆ ಜಡಿ ಮಳೆ ನಿಲ್ಲುತ್ತಿಲ್ಲ.
ಗ್ರಾಹಕರ ಸೋಗಿನಲ್ಲಿ 6 ಲಕ್ಷದ ಚಿನ್ನ ಕದ್ದ ಕಳ್ಳಿಯರು
ಅರಕಲಗೂಡು ಪಟ್ಟಣದ ಆರ್. ಆರ್. ಗೋಲ್ಡ್ ಪ್ಯಾಲೇಸ್‌ನಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ನಾಲ್ವರು ಮಹಿಳೆಯರು ಬುರ್ಖಾ ಧರಿಸಿ ಮಾರುವೇಷದಲ್ಲಿ ಆಗಮಿಸಿ 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಓಲೆ, ಮಾಂಗಲ್ಯ ಸರ ಕಳುವಾಗಿವೆ.
ಗ್ರಾಮೀಣ ಅಂಚೆ ನೌಕರರ ಸಮಸ್ಯೆ ಬಗೆಹರಿಸಿ
ಗ್ರಾಮೀಣ ಅಂಚೆ ನೌಕರರ ಅಧಿಕ ಕೆಲಸದ ಒತ್ತಡ, ಹೆಚ್ಚು ಸಮಯ ಕೆಲಸ ಮಾಡಿದರೂ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎನ್ನುವ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅರಸೀಕೆರೆ ನಗರದ ಶ್ರೀರಾಮ ಮಂದಿರದಲ್ಲಿ ನಡೆದ ಗ್ರಾಮೀಣ ಅಂಚೆ ನೌಕರರ ಸಮಾವೇಶದಲ್ಲಿ ಚರ್ಚಿಸಲಾಯಿತು.
ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ
ಮಲೆನಾಡು ಪ್ರದೇಶವಾದ ಸಕಲೇಶಪುರ ಹಾಗೂ ಅರೆ ಮಲೆನಾಡು ತಾಲೂಕುಗಳಾದ ಆಲೂರು, ಬೇಲೂರು, ಹಾಸನದಲ್ಲಿಯೂ ವ್ಯಾಪಕ ಮಳೆ ಬೀಳುತ್ತಿರುವುದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಈ ನಾಲ್ಕೂ ತಾಲೂಕುಗಳಲ್ಲಿ ಜು.16ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಅರಕಲಗೂಡು, ಚನ್ನರಾಯಪಟ್ಟಣ, ಹೊಳೆನರಸೀಪುರ ತಾಲೂಕುಗಳಲ್ಲಿಯೂ ಮಳೆ ಬೀಡುತ್ತಿದ್ದು, ಬರದ ತಾಲೂಕು ಎಂದೇ ಹೆಸರುವಾಸಿಯಾದ ಅರಸೀಕೆರೆ ಭಾಗದಲ್ಲಿ ಕೂಡ ಪೂರ್ಣ ಪ್ರಮಾಣದಲ್ಲಿ ಮೋಡ ಮುಸುಕಿದ ವಾತಾವರಣ ಇದೆ. ಆಗಾಗ ಮಳೆಯೂ ಬರುತ್ತಿದೆ.
ಲೋಕ ಅದಾಲತ್‌ನಲ್ಲಿ 885 ಪ್ರಕರಣಗಳು ಇತ್ಯರ್ಥ
ಅರಸೀಕೆರೆ ನಗರದ ನ್ಯಾಯಾಲಯ ಸಮುಚ್ಚಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ 885 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ.ವಡಿಗೇರಿ ತಿಳಿಸಿದರು. ನ್ಯಾಯಾಲಯದಲ್ಲಿ 9418 ದಾವೆಗಳಿದ್ದು, ಇವುಗಳಲ್ಲಿ 1213 ದಾವೆಗಳನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ 885 ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದೊಂದಿಗೆ ಬಗೆಹರಿಸಲಾಗಿದೆ.
ಮಗುವಿಗೆ ಅನಾರೋಗ್ಯದಿಂದ ಬೇಸತ್ತ ಅಪ್ಪ ಆತ್ಮಹತ್ಯೆಗೆ ಯತ್ನ
ತಮ್ಮ ಎರಡು ತಿಂಗಳ ಮಗುವಿಗೆ ಅನಾರೋಗ್ಯ ಹೆಚ್ಚಾದ ಹಿನ್ನೆಲೆ ಮಗುವಿನ ತಂದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಕಟ್ಟಡದ ಮೇಲಿಂದ ಹಾರಲು ಹೋದ ವ್ಯಕ್ತಿಯನ್ನು ಆಸ್ಪತ್ರೆ ಸಿಬ್ಬಂದಿ ಮನವೊಲಿಸಿ ಕಾಪಾಡಿದ್ದಾರೆ.
ಜನಸೇವೆಗಾಗಿ ಪಣತೊಟ್ಟ ಸುಜಾತ ರಮೇಶ್
ವಿದ್ಯುತ್ ದೀಪಗಳ ಅಳವಡಿಕೆ, ಚರಂಡಿ ಹಾಗೂ ಒಳಚರಂಡಿಗಳ ನಿರ್ಮಾಣ ಹಾಗೂ ನಿರ್ವಹಣೆ, ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ಮುಂತಾದ ಸಾಮಾಜಿಕ ಕಾರ್ಯಗಳ ಮೂಲಕ ಅರಸೀಕೆರೆ ನಗರದ 31ನೇ ವಾರ್ಡ್ ಸದಸ್ಯೆ ಸುಜಾತ ರಮೇಶ್ ಮನೆ ಮಾತಾಗಿದ್ದಾರೆ.
ಖಾಸಗಿ ಶಾಲೆಗಳು ಬಣ್ಣದ ಲೋಕದ ಶಾಲೆಗಳು
2023-24ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಗಳಲ್ಲಿ ಹೆಚ್ಚು 100% ಫಲಿತಾಂಶ ದೊರಕಿದೆ ಎಂದು ಬೇಲೂರು ಕ್ಷೇತ್ರ ಶಿಕ್ಷಣಾಧಿಕಾರಿ ಮುಳ್ಳಯ್ಯ ತಿಳಿಸಿದರು. ಹಳೇಬೀಡು ಸಮೀಪ ರಾಜನಸಿರಿಯೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘ, ಶಾಲಾ ಅಭಿವೃದ್ಧಿ ಸಂಘ, ಡ್ರಮ್ ಸೆಟ್ ಮತ್ತು ನಾಮಫಲಕಗಳ ಉದ್ಘಾಟನೆಯಲ್ಲಿ ಭಾಗವಹಿಸಿದರು.
ರೈತರು ಬೆಳೆ ವಿಮೆ ಮಾಡಿಸುವಂತೆ ಕ್ರಮ ಕೈಗೊಳ್ಳಿ
ಕೃಷಿ ಇಲಾಖೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಎ.ಮಂಜು ತಾಲೂಕಿನಲ್ಲಿ 47 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಕೃಷಿಭೂಮಿ ಇದ್ದು, 45 ಸಾವಿರ ಮಂದಿ ರೈತರು ಇದ್ದಾರೆ. ಈ ಪೈಕಿ ಶೇ.50ರಷ್ಟು ಮಂದಿ ರೈತರು ಬೆಳೆ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 552
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved