• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಸಿ ಆಸ್ಪತ್ರೆಗೆ ಶಾಸಕ ಶಿವಲಿಂಗೇಗೌಡ ಭೇಟಿ
ಅರಸೀಕೆರೆ ತಾಲೂಕಿನ ಹಲವು ಭಾಗಗಳಲ್ಲಿ ಡೆಂಘೀ ರೋಗ ಪ್ರಕರಣಗಳು ಉಲ್ಬಣಿಸಿದ್ದು, ಶಾಸಕ ಕೆ. ಎಂ. ಶಿವಲಿಂಗೇಗೌಡ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರಿ ಜೆ. ಸಿ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ನಿರ್ದೇಶನಗಳನ್ನು ಸಾರ್ವಜನಿಕರು ಪಾಲಿಸುವುದು ಬಹುಮುಖ್ಯವಾಗಿದೆ ಎಂದರು.
ರೈಲ್ವೆ ಹಳಿ ಮೇಲೆ ಬಾಲಕನ ಶವ
ಬಸವನಹಳ್ಳಿ ಹೊರವಲಯದ ರೈಲ್ವೆ ಟ್ರ್ಯಾಕ್‌ನಲ್ಲಿ 12 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಮಕ್ಕಳೊಂದಿಗೆ ಆಟವಾಡಲು ಹೋಗಿದ್ದ ಕುಶಾಲ್‌ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ರೈಲು ಹಳಿ ಮೇಲೆ ಎಸೆದು ಹೋಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಗಬ್ಬಲಗೋಡು ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಬೇಲೂರು ತಾಲೂಕಿನ ಗಬ್ಬಲಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿದ್ಯಾರ್ಥಿ ಸಂಘದ ರಚನೆಗಾಗಿ ಚುನಾವಣೆ ನಡೆಸಲಾಯಿತು.ಮತದಾರರ ಪಟ್ಟಿ , ಅಳಿಸಲಾಗದ ಶಾಹಿ ಇತ್ಯಾದಿ ವಿಧಾನಗಳನ್ನು ಯಥಾವತ್ತಾಗಿ ಬಳಸಲಾಗಿತ್ತು. ವಿದ್ಯಾರ್ಥಿಗಳು ಗುರುತಿನ ಪತ್ರ ಹಿಡಿದು ಅತ್ಯಂತ ಸಂಭ್ರಮದಿಂದ ಚುನಾವಣೆಯಲ್ಲಿ ಪಾಲ್ಗೊಂಡರು.
ಬರೀ ಜಾಗೃತಿ ಕರಪತ್ರ ಹಂಚಿದರೆ ಡೆಂಘೀ ನಿಲ್ಲಲ್ಲ
ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಕೋಳಿ ಮಾಂಸದ ಅಂಗಡಿಗಳ ಮಾಲೀಕರು ಎಲ್ಲಿ ಬೇಕೆಂದರಲ್ಲಿ ಮಾಂಸದ ತ್ಯಾಜ್ಯಗಳನ್ನು ಬಿಸಾಡುತ್ತಿದ್ದು, ಇದರಿಂದ ಸಹ ಡೆಂಘೀ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಾಂಸದ ತ್ಯಾಜ್ಯವನ್ನು ಎಲ್ಲಿ ಬೇಕೆಂದರಲ್ಲಿ ಬಿಸಾಡುವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್‌ ಮಂಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಡೆಂಘೀ ಜ್ವರದ ಕುರಿತು ಮುನ್ನೆಚ್ಚರಿಕೆ ವಹಿಸಿ
ಬೇಲೂರು ತಾಲೂಕಿನ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಡೆಂಘೀ ಜ್ವರದ ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಬೇಲೂರು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಉಷಾ ಕೆ.ಎಸ್. ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಹ್ಯಕ್ಕಯಣ್ಣ ಕುಮಾರ್ ಪಟ್ಟಣದ ವಾರ್ಡ್‌ಗಳಲ್ಲಿ ಜಾಗೃತಿ ಮೂಡಿಸಿದರು.
ಸಭೆಗೆ ಗೈರು ಹಿನ್ನೆಲೆ ಜುಲೈ 30ಕ್ಕೆ ಸಭೆ ಮುಂದೂಡಿಕೆ
ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಗೆ ಸರ್ಕಾರಿ ಇಲಾಖೆಗಳ ಬಹುತೇಕ ಅಧಿಕಾರಿಗಳು ಗೈರಾಗಿದ್ದನ್ನು ಗಮನಿಸಿದ ಶಾಸಕ ಕೆ. ಎಂ. ಶಿವಲಿಂಗೇಗೌಡ ಅವರು ಮುಂದಿನ ಸಭೆಯಲ್ಲಿ ಸರ್ಕಾರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ತಾಕೀತು ಮಾಡಿದ್ದಲ್ಲದೇ ಗೈರಾದ ಹಾಗೂ ಅವರ ಬದಲಿಗೆ ಬೇರೆಯವರನ್ನು ಸಭೆಗೆ ಕಳಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಗೊರೂರು ರಾಮಸ್ವಾಮಿ ಅಯ್ಯಂಗಾರ್ ಜಯಂತ್ಯುತ್ಸವ
ಗೊರೂರು ಗ್ರಾಮದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ರವರ ಜನ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಕೃಷ್ಣ ಉದ್ಘಾಟಿಸಿದರು. ನಂತರ ಮಾತನಾಡಿ ಗೊರೂರರ ಜಯಂತಿ ಅಂಗವಾಗಿ ಗಾಂಧಿ ಮತ್ತು ಡಾ.ಗೊರೂರರ ವಿಚಾರ ಗೋಷ್ಠಿ, ರಾಜ್ಯಮಟ್ಟದ ಕವಿಗೋಷ್ಠಿ. ಪುಸ್ತಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅವರು ಜನ್ಮಪಡೆದ ಮಣ್ಣಿನಲ್ಲಿ ಇಡೀ ದಿನ ಆಯೋಜನೆ ಮಾಡಿರುವುದು ಹೆಚ್ಚು ಅರ್ಥ ಪೂರ್ಣವಾಗಿದೆ ಎಂದು ಬಣ್ಣಿಸಿದರು.
ವಿದ್ಯಾರ್ಥಿಗಳಿಗೆ ವಚನ ಕಂಠಪಾಠ ಸ್ಪರ್ಧೆ
ರಾಮನಾಥಪುರ ಶ್ರೀ ವಿದ್ಯಾನಿಕೇತನ ಶಾಲೆ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು. 12ನೇ ಶತಮಾನದ ವಚನಕಾರರ ಸಾವಿರಾರು ವಚನಗಳು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ಉಳಿದಿವೆ. ವಚನಗಳನ್ನು ಮುದ್ರಿಸುವುದಕ್ಕಾಗಿ ಅವುಗಳ ಪ್ರಚಾರಕ್ಕಾಗಿ ತಮ್ಮ ಮನೆಯನ್ನು ಕೂಡ ಮಾರಾಟ ಮಾಡಿ ಶರಣ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಸದಾಶಿವ ಸ್ವಾಮೀಜಿ ತಿಳಿಸಿದರು.
ಬೆಳಗೋಡಿನಲ್ಲಿ ನೂತನ ಬಸ್‌ ನಿಲ್ದಾಣ ಉದ್ಘಾಟನೆ
ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿಯಲ್ಲಿ ಸುಮಾರು ೪.೫ ಲಕ್ಷ ರು. ವೆಚ್ಚದಲ್ಲಿ ನೂತನ ಬಸ್‌ ನಿಲ್ದಾಣವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು. ಇದೇ ವೇಳೆ ಕೂಲಿ ಕಾರ್ಮಿಕ ಮಹಿಳೆಯರು ಹೆಚ್ಚಿರುವ ಬೆಳಗೋಡು ಗ್ರಾಮದ ಮಹಿಳೆಯರ ಅನುಕೂಲಕ್ಕಾಗಿ ಕೂಸಿನ ಮನೆಯನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಗೋಪಿನಾಥ್‌ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ
ಕಾಂಗ್ರೆಸ್ ಮುಖಂಡ ಕೆ.ಜಿ ಗೋಪಿನಾಥ್ ಅವರ ೫೦ನೇ ಹುಟ್ಟುಹಬ್ಬವನ್ನು ಬೃಹತ್ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಕೆ.ಜಿ ಗೋಪಿನಾಥ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸುಮಾರು ೪೦ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 552
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved