• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತ ಪರೀಕ್ಷೆಗೆ ಬರುವವರ ಸಂಖ್ಯೆ ಹೆಚ್ಚಳ
ಡೆಂಘೀ ಪ್ರಕರಣಗಳು ಎಲ್ಲೆಡೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತಪರೀಕ್ಷೆ ಮಾಡಿಸುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ರಕ್ತ ಪರೀಕ್ಷೆ ಮಾಡಿಸಿದಾಗ ಬಹುತೇಕ ಎಲ್ಲರಿಗೂ ಬಿಳಿರಕ್ತ ಕಣಗಳು ಕಡಿಮೆ ಆಗಿರುವುದು ತಿಳಿಯುತ್ತಿದೆ.
ಪತಿ ಮನೆ ಮುಂದೆ ಮಮತಾ ಶವ ಇಟ್ಟು ಆಕ್ರೋಶ
ಎಸ್ಪಿ ಕಚೇರಿ ಆವರಣದಲ್ಲಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಕಾನ್ಸ್‌ಟೇಬಲ್‌ ಲೋಕನಾಥ್ ಮನೆ ಮುಂದೆ ಹತ್ಯೆಯಾದ ಮಮತಾಳ ಶವವಿಟ್ಟು ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಲೋಕನಾಥ್‌ಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.
ಪೊಲೀಸ್‌ ಇಲಾಖೆಯಿಂದ ಪ್ರಾಮಾಣಿಕ ಸೇವೆ
ಪೊಲೀಸ್ ಇಲಾಖೆಯು ಸಾರ್ವಜನಿಕ ವಲಯಗಳ ನಡುವೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಗಂಗಾಧರ್ ಇವರು ವಯೋ ನಿವೃತ್ತಿ ನಿಮಿತ್ತ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹೆಬ್ಬಾಳು ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ
ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮ ಪಂಚಾಯತಿಯಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಚೇರಿ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಉಡಾಫೆ ವರ್ತನೆ ತೋರುವ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ಧ ಇಂದು ಪ್ರತಿಭಟನೆ
ರಾಜ್ಯ ಸರ್ಕಾರವು ಹಾಲಿನ ದರ ಏರಿಸಿದೆ. ರೈತರಿಗೆ ವರ್ಷಕ್ಕೆ 4 ಸಾವಿರಗಳನ್ನು ಕೊಡುತ್ತಿದ್ದ ಹಾಲಿನ ಹಣವನ್ನು ಸಹ ಸರ್ಕಾರ ತಡೆದಿದೆ. ಪೆಟ್ರೋಲ್, ಡೀಸೆಲ್ ಹಾಗೂ ರೈತರ ಪಂಪ್‌ಸೆಟ್‌ಗಳಿಗೂ ಉಪಯೋಗಿಸುತ್ತಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು 25 ಸಾವಿರದಿಂದ 2 ಲಕ್ಷಗಳವರೆಗೂ ಏರಿಸಿದೆ. ಭ್ರಷ್ಟಾಚಾರವು ಮಿತಿ ಮೀರಿದ್ದು ಪರಿಶಿಷ್ಟ ಪಂಗಡ ನಿಗಮಕ್ಕೆ ನೀಡಿದ್ದ 187 ಕೋಟಿಗಳನ್ನು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ಗುಳುಂ ಮಾಡಿರುತ್ತಾರೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಬಿಜೆಪಿ ಜಿಲ್ಲಾ ರೈತ ಮೋರ್ಚ ಜಿಲ್ಲಾಧ್ಯಕ್ಷ ಬಿ. ಎಚ್. ನಾರಾಯಣಗೌಡ ತಿಳಿಸಿದ್ದಾರೆ.
ರಸ್ತೆ ಕಾಮಗಾರಿಗೆ ಶಾಸಕ ಸ್ವರೂಪ್ ಗುದ್ದಲಿಪೂಜೆ
ಹಾಸನದ ವಿಶ್ವನಾಥ್ ನಗರದ ದೇವು ಲೇಔಟ್‌ನಲ್ಲಿ ಅಲ್ಪಸಂಖ್ಯಾತರ ಅನುದಾನದಡಿ ಸುಮಾರು 1 ಕೋಟಿ 75 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಪಿ. ಸ್ವರೂಪ್‌ ಪ್ರಕಾಶ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಅಭಿವೃದ್ಧಿ ಕೆಲಸ ಕಾರ್ಯಗಳು ಎಲ್ಲಾ ವಾರ್ಡ್‌ನಲ್ಲೂ ಆಗಬೇಕಾಗಿದೆ. ಶೀಘ್ರದಲ್ಲಿಯೇ 15ನೇ ಹಣಕಾಸು ಯೋಜನೆ ತಯಾರಿಸಿ ಕೆಲಸ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹ
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸಂಬಂಧ ಕಾಯ್ದೆ ರೂಪಿಸಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡದ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರ ರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿದ್ದು, ಅವರು ತಮ್ಮ ತಮ್ಮ ರಾಜ್ಯದ ಯುವಕ ಯುವತಿಯರನ್ನು ಕರೆತಂದು ಕೆಲಸ ಕೊಡುತ್ತಿದ್ದಾರೆ. ಮೊದಲು ಕನ್ನಡಿಗರಿಗೆ ಆದ್ಯತೆ ದೊರೆಯುವಂತಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಡೆಂಘೀ ಉಲ್ಬಣ ಕುರಿತು ಜನರಿಗೆ ಜಾಗೃತಿ
ಲಯನ್ಸ್‌ ಸೇವಾಸಂಸ್ಥೆ ವತಿಯಿಂದ ಬೇಲೂರಿನಲ್ಲಿ ವೈದ್ಯರ ದಿನ ಆಚರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಲಯನ್ಸ್‌ ಸಂಸ್ಥೆ ತಾಲೂಕು ಅಧ್ಯಕ್ಷ ಹಾಗೂ ಕಾವೇರಿ ಕ್ಲಿನಿಕ್‌ ವೈದ್ಯಾಧಿಕಾರಿ ಡಾ.ಚಂದ್ರಮೌಳಿ, ಇತ್ತೀಚಿಗೆ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಾಣುತ್ತಿದ್ದು ಬಂದಂತ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ನೀಡುತ್ತಿದ್ದಾರೆ ಎಂದು ತಿಳಿಸಿದರು.
ಎಸ್ಪಿ ಕಚೇರಿ ಬಳಿಯೇ ಪತ್ನಿಗೆ ಚಾಕು ಇರಿದು ಕೊಂದ ಪೇದೆ
ಕಾನೂನಿನಡಿ ತಪ್ಪಿತಸ್ಥರನ್ನು ಶಿಕ್ಷಿಸಬೇಕಿರುವ ಆರಕ್ಷನೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನದ ಎಸ್‌ಪಿ ಕಚೇರಿ ಆವರಣದಲ್ಲಿ ನಡೆದಿದೆ. ಪೊಲೀಸ್‌ ಕಾನ್ಸ್‌ಟೇಬಲ್‌ ಆಗಿರುವ ಲೋಕನಾಥ್‌ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮ ಪತ್ನಿ ಮಮತಾರಿಗೆ ಚಾಕುನಿಂದ ಇರಿದು ಕೊಲೆ ಮಾಡಿದ್ದಾರೆ. ಇವರಿಬ್ಬರು 17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
ಒತ್ತಡದ ಮುಕ್ತಿಗೆ ಯೋಗಾಸನವೇ ಮದ್ದು: ಆಯುರ್ವೇದ ವೈದ್ಯೆ ಡಾ.ವೈ.ಕೆ.ತ್ರಿವೇಣಿ
ಮಾನವನ ನಿತ್ಯದ ಒತ್ತಡದ ಜೀವನಕ್ಕೆ ಯೋಗಾಸನ ಔಷಧಿ ಇದ್ದಂತೆ. ಈಗಿನ ಆಹಾರ ವಿಚಾರ ಬದುಕು ಕ್ರಮಬದ್ಧತೆ ಕೊರತೆ ಉತ್ತಮ ಜೀವನಕ್ಕೆ ಕೊರತೆ ತರುವಂತಾಗಿದೆ ಎಂದು ಪಟ್ಟಣದ ಚಾಮುಂಡಿಹಳ್ಳಿ ಗೇಟಿನ ಸರ್ಕಾರಿ ಆಯುರ್ವೇದ ವೈದ್ಯರಾದ ಡಾ.ವೈ.ಕೆ.ತ್ರಿವೇಣಿ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved