• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಯ ಸುತ್ತಲಿನ ಪರಿಸರ ಸ್ವಚ್ಛವಾಗಿರಲಿ: ಡಾ.ನಿಸಾರ್ ಫಾತಿಮ
ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಿದರೆ ಡೆಂಘೀ ರೋಗದಿಂದ ಮುಕ್ತರಾಗಿ ಬದುಕಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನಿಸಾರ್ ಫಾತಿಮ ತಿಳಿಸಿದರು. ಆಲೂರಲ್ಲಿ ಆಯೋಜಿಸಿದ ಡೆಂಘೀ ವಿರೋಧಿ ಮಾಸಾಚರಣೆಯಲ್ಲಿ ಮಾತನಾಡಿದರು.
ನೆನಗುದಿಗೆ ಬಿದ್ದಿರುವ ಯೋಜನೆಗಳಿಗೆ ಮರುಜೀವ ಕೊಡಬೇಕು: ಮಾಜಿ ಸಚಿವ ಬಿ.ಶಿವರಾಂ
ಪಕ್ಷ ಸಂಘಟನೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಹೆಚ್ಚಿನ ಗಮನ ನೀಡಬೇಕು ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದರು. ಬೇಲೂರಲ್ಲಿ ಆಯೋಜಿಸಿದ ಲೋಕಸಭಾ ಸದಸ್ಯ ಶ್ರೇಯಸ್‌ ಎಂ. ಪಟೇಲ್ ಅವರಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ವೈಜ್ಞಾನಿಕವಾಗಿ ಬೆಂಗಳೂರು ನಿರ್ಮಿಸಿದ ಕೆಂಪೇಗೌಡ: ಶಾಸಕ ಎ.ಮಂಜು
ಬೆಂಗಳೂರು ನಗರವನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಧೀಮಂತ ವ್ಯಕ್ತಿಯಾಗಿದ್ದರು ಎಂದು ಶಾಸಕ ಎ.ಮಂಜು ತಿಳಿಸಿದರು. ಬೇಲೂರು ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೇಲೂರಿನಲ್ಲಿ ಪೂರ್ಣಗೊಳ್ಳದ ಕಾಮಗಾರಿಯಿಂದ ಕೆಸರು ಗದ್ದೆಯಾದ ರಸ್ತೆ
ಬೇಲೂರಿನ ಪ್ರಸಾದಿ ಹಳ್ಳಿ ಗ್ರಾಮದಲ್ಲಿ ಚರಂಡಿ ಕಾಮಗಾರಿಗೆ ಎಂದು ಕಳೆದ ಒಂದೂವರೆ ತಿಂಗಳ ಹಿಂದೆ ಜೆಸಿಬಿ ಯಂತ್ರದಿಂದ ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದು ಮಳೆಯಿಂದಾಗಿ ಕೆಸರು ತುಂಬಿ ಓಡಾಡಲು ಪರದಾಡುವಂತಾಗಿದೆ.
ಸೂರಜ್‌ ರೇವಣ್ಣ ಫಾರಂಗೆ ಸಂತ್ರಸ್ತನ ಕರೆತಂದು ಎಸ್‌ಐಟಿ ಮಹಜರು
ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ದ ಅಸಹಜ ಲೈಂಗಿಕ ಪ್ರಕರಣದಲ್ಲಿ ದೂರು ನೀಡಿದ್ದ ಸಂತ್ರಸ್ತನನ್ನು ಸಿಐಡಿ ತಂಡ ಸ್ಥಳ ಮಹಜರು ನಡೆಸುವ ಸಲುವಾಗಿ ಹೊಳೆನರಸೀಪುರದ ಗನ್ನಿಕಡ ಗ್ರಾಮದಲ್ಲಿರುವ ಡಾ.ಸೂರಜ್ ಅವರ ಫಾರಂ ಹೌಸ್‌ಗೆ ಕರೆತಂದು ಸ್ಥಳ ಮಹಜರು ನಡೆಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಭ್ರಷ್ಟಾಚಾರ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಸಂಬಂಧ ಮತ್ತು ಭ್ರಷ್ಟಾಚಾರಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ, ಭಾಗಿಯಾಗಿರುವ ಆರೋಪ ಹೊತ್ತ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲ ಅವರಿಗೆ ಮನವಿ ಸಲ್ಲಿಸಿದರು.
ಹೊಳೆನರಸೀಪುರದಲ್ಲಿ ಮೂರು ದಿನ ರಾಮಲಿಂಗೇಶ್ವರನ ಪೂಜಾ ಕೈಂಕರ್ಯ
ಹೊಳೆನರಸೀಪುರದ ದೇವಾಂಗ ಬಡಾವಣೆಯ ಶ್ರೀ ರಾಮಲಿಂಗಚೌಡೇಶ್ವರಿ, ಶ್ರೀ ರಾಮಲಿಂಗೇಶ್ವರ ಹಾಗೂ ಗಣಪತಿ ದೇವರ ನೂತನ ವಿಗ್ರಹ, ದೇವಾಲಯ ಸಂಪ್ರೋಕ್ಷಣ, ಶಿಖರ ಕಳಸ ಪ್ರತಿಷ್ಠಾಪನಾ ಕುಂಭಾಭಿಷೇಕ ಸೇರಿ ವಿವಿಧ ಪೂಜಾ ಮಹೋತ್ಸವ ಶನಿವಾರದಿಂದ 3 ದಿನ ಜರುಗಲಿದೆ.
ಕೆಂಪೇಗೌಡರಿಂದ ಎಲ್ಲ ಜನಾಂಗದ ಅಭಿವೃದ್ಧಿ: ನ್ಯಾಯಾಧೀಶ ಹಿದಾಯತ್ ಉಲ್ಲ ಶರೀಫ್
ಕೇಂಪೇಗೌಡರು ಬೆಂಗಳೂರು ನಗರದಲ್ಲಿ ವಾಣಿಜ್ಯದ ಉದ್ದೇಶಕೋಸ್ಕರ ಬೃಹತ್ ಪೇಟೆಗಳನ್ನು ನಿರ್ಮಿಸಿರುತ್ತಾರೆ. ಅವರು ಕೆರೆಕಟ್ಟೆಗಳನ್ನು ಕಟ್ಟಿಸಿರುತ್ತಾರೆ. ಎಲ್ಲ ಜನಾಂಗದ ಅಭಿವೃದ್ಧಿಯನ್ನು ಮಾಡಿ ಮಾದರಿ ವ್ಯಕ್ತಿಯಾಗಿ ಇಂದಿಗೂ ಸಹ ಅವರ ಕಾರ್ಯ ಮೆಚ್ಚುವಂತದ್ದಾಗಿರುತ್ತದೆ ಎಂದು ನ್ಯಾಯಾಧೀಶ ಹಿದಾಯತ್ ಉಲ್ಲ ಶರೀಫ್ ಹೇಳಿದರು. ಹಾಸನದಲ್ಲಿ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದರು.
ನದಿಗಳ ಮಾಲಿನ್ಯದಿಂದ ಮನುಷ್ಯರ ಅಧೋಗತಿ: ಪರಿಸರ ತಜ್ಞೆ ನಿರ್ಮಲಾಗೌಡ
ನದಿಗಳ ಮಾಲಿನ್ಯ ಕೇವಲ ನೀರಿನ ಕಲುಶತೆಯನ್ನುತೋರಿಸುತ್ತಿಲ್ಲ. ಬದಲಾಗಿ ಮನುಷ್ಯರ ಅಧೋಗತಿ ಹಾಗೂ ಮನುಷ್ಯರ ಮನಸ್ಸಿನ ಕಲ್ಮಶವನ್ನು ತೋರಿಸುತ್ತಿದೆ ಎಂದು ಪರಿಸರ ತಜ್ಞೆ ನಿರ್ಮಲಾಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಹಮ್ಮಿಕೊಂಡ ‘ನದಿಗಳನ್ನು ಕೊಲ್ಲಬೇಕೆ?’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಂದಿನ 10 ವರ್ಷ ಗ್ಯಾರಂಟಿ ಮುಂದುವರಿಕೆಗೆ ಯೋಜನೆ: ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ
ಮುಂದಿನ 10 ವರ್ಷಗಳ ಕಾಲ ಯೋಜನೆಯನ್ನು ಸರ್ಕಾರ ಮುಂದುವರೆಸಲು ಯೋಜನೆಯನ್ನು ರೂಪಿಸುತ್ತಿದೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಉದ್ಘಾಟನೆ ಮಾಡಿ ಮಾತನಾಡಿದರು.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved