• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜಕ್ಕೆ ಮಠಗಳ ಕೊಡುಗೆ ಅಪಾರ: ಶಾಸಕ ಶ್ರೀನಿವಾಸ್
ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಲನಹಳ್ಳಿ ಮಠಕ್ಕೆ ಭೇಟಿ ನೀಡಿ ಮಠಾಧೀಶರಾದ ಡಾ.ಸಿದ್ಧರಾಜು ಸ್ವಾಮೀಜಿಯವರ ಆಶೀರ್ವಾದ ಪಡೆದು ಮಾತನಾಡಿದ ಅವರು, ಪ್ರತಿಯೊಬ್ಬ ಮನುಷ್ಯನೂ ಸನ್ಮಾರ್ಗದಲ್ಲಿ ನಡೆಯಬೇಕಾದರೆ ಗುರುಗಳ ಆಶೀರ್ವಾದ ಇರಲೇಬೇಕು.
ಆಲೂರಿನ ವಿದ್ಯಾರ್ಥಿನಿಯರಿಗೆ ಎಚ್‌ಪಿವಿ ಲಸಿಕೆ
ರಾಧಮ್ಮ ಜನಸ್ಪಂದನ ಸಂಸ್ಥೆ ವತಿಯಿಂದ ಆಲೂರು ತಾಲೂಕಿನ 50 ವಿದ್ಯಾರ್ಥಿನಿಯರಿಗೆ ಪ್ರಥಮ ಹಂತವಾಗಿ ಸ್ತನ ಕ್ಯಾನ್ಸರ್‌ ತಡೆಗಟ್ಟುವ ಎಚ್‌ಪಿವಿ ಲಸಿಕೆ ಹಾಕಲಾಯಿತು. ಇನ್ಸ್ಪೈರ್ ಇಂಟರ್‌ನ್ಯಾಷನಲ್ ಶಾಲೆ ಕಾರುಗೋಡಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಳೆದ ತಿಂಗಳು ಮೆಮೋಗ್ರಫಿ ಸ್ಕ್ಯಾನಿಗೆ ಒಳಗಾಗಿದ್ದ 31 ಮಹಿಳೆಯರಿಗೆ ಸ್ಕ್ಯಾನಿಂಗ್ ರಿಪೋರ್ಟನ್ನು ಸಹ ನೀಡಲಾಯಿತು. ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಸಾವಿತ್ರಿ ಮಾತನಾಡಿ, ಹೇಮಂತ್ ಕುಮಾರ್ ಅವರು ಇಂತಹ ಕಾರ್ಯ ಮಾಡಲು ಅವರ ತಾಯಿ ಆಶೀರ್ವಾದವೇ ಪ್ರಮುಖ ಕಾರಣ. ಅವರ ತಾಯಿ ನೆನಪಿಗಾಗಿ ದುಡಿಯುತ್ತಿರುವುದು ಆರೋಗ್ಯ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕೆಂದರು.
ಹೊಳೆನರಸೀಪುರದಲ್ಲಿ ಶಕ್ತಿ ಯೋಜನೆ ಸಂಭ್ರಮಾಚರಣೆ
ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರು ಉಚಿತ ಪ್ರಯಾಣ ಮಾಡುವ ಮೂಲಕ ತಮ್ಮ ಸ್ವಾವಲಂಬಿ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್‌ ತಿಳಿಸಿದರು. ಕೆಎಸ್‌ಆರ್‌ಟಿಸಿ ತಾಲೂಕು ಘಟಕದ ವ್ಯವಸ್ಥಾಪಕ ಪಾಪನಾಯಕ್ ಮಾತನಾಡಿ, ತಾಲೂಕಿನ ಘಟಕದಲ್ಲಿ ಶಕ್ತಿ ಯೋಜನೆಯಡಿಯಲ್ಲಿ ತಿಂಗಳಿಗೆ ಸರಾಸರಿ ೨.೫ ಲಕ್ಷ ರು. ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಾಥಮಿಕ ಶಾಲೆಯಿಂದಲೇ ಗುಣಾತ್ಮಕ ಶಿಕ್ಷಣ ಶುರುವಾಗಲಿ
ಗುಣಮಟ್ಟದ ಶಿಕ್ಷಣ ಪಡೆಯಲು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತದೆ. ಆದ್ದರಿಂದ ಗುಣಾತ್ಮಕ ಶಿಕ್ಷಣವನ್ನು ಕಿರಿಯ ಪ್ರಾಥಮಿಕ ಶಾಲೆಯಿಂದಲೇ ಆರಂಭಿಸಿ, ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ದರ್ಜೆಯಲ್ಲಿ ವ್ಯಾಸಂಗದಲ್ಲಿ ಮುಂದೆ ಬನ್ನಿ ಎಂದು ಶಾಸಕ ಎ. ಮಂಜು ಸಲಹೆ ನೀಡಿದರು. ಇತ್ತೀಚಿನ ಕಾಲಘಟ್ಟದಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಿಕ್ಷಣ ಯಾವ ಕಾನ್ವೆಂಟ್‌ಗಳಿಗೂ ಕಡಿಮೆ ಇಲ್ಲದಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ನಮ್ಮ ಗುರಿಯಾಗಿದೆ ಎಂದು ಮಂಜು ತಿಳಿಸಿದರು.
ಕಲಿಕೆಯ ಜತೆಗೆ ಸಾಮಾನ್ಯ ಜ್ಞಾನವನ್ನೂ ತಿಳಿದುಕೊಳ್ಳಿ
ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜತೆಗೆ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ದೊರೆಯುವ ಅಮೂಲ್ಯವಾದ ಸಮಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಾಗೇಶ ಕುಮಾರ್ ಡಿ. ಸಲಹೆ ನೀಡಿದರು. ಜ್ಞಾನರ್ಜನೆಗೆ ಪೂರಕವಾದ ಪುಸ್ತಕವನ್ನು ಹೆಚ್ಚು ಹೆಚ್ಚು ಓದಿ ತಿಳಿದುಕೊಳ್ಳುವ ಮನಸ್ಥಿತಿ ರೂಡಿಸಿಕೊಂಡು, ಉತ್ತಮ ಆರೋಗ್ಯ ಹಾಗೂ ಅತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಅಗತ್ಯವಾದ ಯೋಗಾಭ್ಯಾಸ ಮಾಡುತ್ತಾ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಜತೆಗೆ ಪೋಷಕರು ಕನಸನ್ನು ನನಸು ಮಾಡಿರೆಂದು ಸಲಹೆ ನೀಡಿದರು.
ಪದವಿ ವಿದ್ಯಾರ್ಥಿಗಳವರೆಗೆ ಎಲ್ಲರ ಹೃದಯ ತಪಾಸಣೆ ಮಾಡಿ
ಸರಣಿ ಹೃದಯಾಘಾತ ಸಾವಿನ ಹಿಂದೆ ಆಹಾರ ಅಸುರಕ್ಷತೆಯು ಕಾರಣವಿದೆ. ಈಗ ಶಾಲಾ ಹಂತದಿಂದ ಜೊತೆಗೆ ಅಂತಿಮ ವರ್ಷದ ಬಿಎ ವರೆಗಿನ ವಿದ್ಯಾರ್ಥಿಗಳವರೆಗೂ ಕೂಡ ಹೃದಯ ತಪಾಸಣೆಗೆ ಕ್ರಮ ತೆಗೆದುಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ವಿವಿಧ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಹೃದಯಾಘಾತ ತಡೆಗೆ ಶಾಲಾ ಮಕ್ಕಳ ಆರೋಗ್ಯ ತಪಾಸಣೆಗೆ ಮುಂದಾಗಿದ್ದು, ೨೪ ಸಾವಿರ ಮಕ್ಕಳನ್ನ ಸ್ಕ್ರೀನಿಂಗ್ ಮಾಡಲಾಗಿದೆ. ಇದರಲ್ಲಿ ೪೦ ಮಕ್ಕಳಿಗೆ ಸಮಸ್ಯೆ ಇರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನ ಹೆಚ್ಚಿನ ಪರಿಶೀಲನೆ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಮಕ್ಕಳ ಸಂಸತ್ತು ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯ ಬೆಳೆಸುತ್ತದೆ
ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬೆಳೆಸಲು ಮತ್ತು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳ ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ಶಾಲಾ ಸಂಸತ್ತು ಅತ್ಯಗತ್ಯ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್‌ ಅಭಿಪ್ರಾಯಪಟ್ಟರು. ಮಕ್ಕಳ ಸಂಸತ್ ಎಂಬುದು ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು, ಶಾಲಾ ಸಿಬ್ಬಂದಿ ಜೊತೆ ಶಾಲಾ ನಿರ್ವಹಣೆಯಲ್ಲಿ ಮಕ್ಕಳನ್ನೂ ಪಾಲುದಾರರನ್ನಾಗಿ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಜವಾಬ್ದಾರಿ ನಿರ್ವಹಣೆಯ ಜೊತೆಗೆ ಶಾಲಾ ಆಡಳಿತದಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ಭಾವಿ ನಾಗರಿಕರನ್ನು ಬೆಳೆಸಲು ಅನುಕೂಲವಾಗುತ್ತದೆ ಎಂದರು.
ಸಿಗರನಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಸದ್ಯ ರವಿಯವರ ಮನೆ ಸಮೀಪ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಅರಣ್ಯ ಇಲಾಖೆಯವರ ಅನುಭವ ಹಾಗೂ ಕಾರ್ಯದಕ್ಷತೆಯಿಂದ ಒಂದೇ ದಿನದಲ್ಲಿ ಬೋನಿಗೆ ಚಿರತೆ ಬಿದ್ದಿದ್ದು, ಇದರಿಂದ ಗ್ರಾಮಸ್ಥರಲ್ಲಿ ನಿರಾಳತೆ ಮೂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಹೋಟೆಲ್‌, ಬೇಕರಿಗಳ ಮೇಲೆ ಪುರಸಭೆ, ಆಹಾರ ಸುರಕ್ಷತಾಧಿಕಾರಿಗಳ ದಿಢೀರ್ ದಾಳಿ
ಬೇಕರಿಗಳಲ್ಲಿಯೂ ಸಹ ಆಹಾರ ತಯಾರು ಮಾಡುವ ಸ್ಥಳ ಅಶುಚಿತ್ವದಿಂದ ಕೂಡಿದ್ದನ್ನು ಗಮನಿಸಿದ ಅಧಿಕಾರಿಗಳು, ಬ್ರೆಡ್ ಕೆಕ್ ತಯಾರಿಸಲು ಉಪಯೋಗಿಸುವ ಪರಿಕರಗಳು ಸಹ ಸಂಪೂರ್ಣ ಹದಗೆಟ್ಟಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.
ವಸತಿ ರಹಿತರಿಗೆ ಮನೆ ಕಲ್ಪಿಸಲು ಪುರಸಭೆ ಅಧಿಕಾರಿಗಳು ಮುಂದಾಗಲಿ: ಸಂಸದ ಶ್ರೇಯಸ್ ಪಟೇಲ್
ಪ್ರತಿ ವಾರ್ಡ್ ಸದಸ್ಯರ ಮಾಹಿತಿಯನ್ನು ಶೀಘ್ರದಲ್ಲೇ ಖುದ್ದಾಗಿ ನೀಡಬೇಕು. ಪುರಸಭಾ ಅಧಿಕಾರಿಗಳು ಅಥವಾ ಸಿಬ್ಬಂದಿ ತಪ್ಪು ಮಾಹಿತಿ ಸಂಗ್ರಹಿಸಿ, ದಾಖಲಿಸಿರುವ ವಿಷಯ ಕಂಡು ಬಂದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 505
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved