• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ಅಭ್ಯಾಸದ ಜತೆ ಆತ್ಮಸ್ಥೈರ್ಯ ಹೊಂದಬೇಕು: ತಹಸೀಲ್ದಾರ್ ಮಮತಾ ಎಂ.
ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನ ಗುರಿಯನ್ನು ತಲುಪಲು ಅಭ್ಯಾಸದ ಜತೆಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಬೇಲೂರು ತಹಸೀಲ್ದಾರ್ ಮಮತಾ ಎಂ. ಹೇಳಿದರು. ಬೇಲೂರಿನಲ್ಲಿ ಆಯೋಜಿಸಿದ್ದ ಮಹಿಳಾ ಪರ ಹೋರಾಟಗಾರ್ತಿ ಡಾ.ವಿಜಯಾದಬ್ಬೆ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರ ನೆರವಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ: ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್
ರೈತರು ಕೃಷಿ ಇಲಾಖೆಯಲ್ಲಿ ದೊರೆಯುವ ಎಲ್ಲ ರೀತಿಯ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಪಡೆದು ಉತ್ತಮ ಬೆಳೆ ಬೆಳೆಯಲು ಮುಂದಾಗಬೇಕು ಎಂದು ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ತಮ್ಮ ಕಚೇರಿಯಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡಿದರು.
ಚೆಸ್ಕಾಂ ನಿರ್ಲಕ್ಷ್ಯ: ಕತ್ತಲಲ್ಲಿ ಮಲೆನಾಡ ಹಳ್ಳಿಗಳು
ಮಳೆಗಾಲದ ಪೂರ್ವಸಿದ್ಧತೆ ನಡೆಸದ ವಿದ್ಯುತ್‌ನ ಚೆಸ್ಕಾಂ ಇಲಾಖೆಯಿಂದಾಗಿ ವಾರಪೂರ್ತಿ ಮಲೆನಾಡಿನ ಗ್ರಾಮಗಳು ಕತ್ತಲಲ್ಲಿ ಕಳೆಯುವಂತಾಗಿದೆ. ಮಳೆಗಾಲ ಪೂರ್ವ ವಿದ್ಯುತ್ ತಂತಿ ಸಮೀಪದ ಮರ ಹಾಗೂ ಮರದ ರೆಂಬೆಗಳನ್ನು ತೆರವುಗೊಳಿಸದೆ ಜಡಿ ಮಳೆಗೆ ಈಗಾಗಲೇ ಕಸಬಾ, ಹಾನುಬಾಳ್ ಹಾಗೂ ಹೆತ್ತೂರು ಹೋಬಳಿಯ ಸುಮಾರು ಇಪ್ಪತ್ತಕ್ಕೂ ಅಧಿಕ ಗ್ರಾಮಗಳು ವಾರಗಳಿಂದಲೂ ವಿದ್ಯುತ್ ಕಡಿತಗೊಂಡಿದೆ.
ಬೇಲೂರಿನಲ್ಲಿ ಗೂಡಂಗಡಿಗಳ ಆರಂಭಕ್ಕೆ ಮತ್ತೆ ಅವಕಾಶ ಬೇಡ: ತಾಲೂಕು ಅಧ್ಯಕ್ಷ ವಿ.ಎಸ್.ಬೋಜೇಗೌಡ
ಬೇಲೂರು ಪಟ್ಟಣದ ಮುಖ್ಯ ರಸ್ತೆಯ ಅಂಚಿನಲ್ಲಿ ತೆರವುಗೊಳಿಸಿರುವ ಗೂಡಂಗಡಿಗಳನ್ನು ಮತ್ತೆ ಪ್ರಾರಂಭಿಸಲು ಅವಕಾಶ ನೀಡಿದರೆ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪುರಸಭೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಾಲೂಕು ಅಧ್ಯಕ್ಷ ವಿ.ಎಸ್.ಬೋಜೇಗೌಡ ಎಚ್ಚರಿಕೆ ನೀಡಿದರು. ಪುರಸಭೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಎಲ್ಲರ ಹೊಣೆ: ಜೆಎಂಎಫ್‌ಸಿ ನ್ಯಾಯಾಧೀಶೆ ರಶ್ಮಿ ಎಚ್.ಬಿ.
ಸಮಾಜದ ಪ್ರತಿಯೊಂದು ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪೋಷಕರು ಇವುಗಳ ಸದುಪಯೋಗ ಪಡೆದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಧೀಶೆ ರಶ್ಮಿ ಎಚ್.ಬಿ. ತಿಳಿಸಿದರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನದ ಬೊಮ್ಮನಾಯಕನಹಳ್ಳಿಯಲ್ಲಿ ದೇವರ ಪ್ರತಿಷ್ಠಾಪನೆ ಉತ್ಸವ
ಹಾಸನದ ಚನ್ನಪಟ್ಟಣದಲ್ಲಿರುವ ಬೊಮ್ಮನಾಯಕನಹಳ್ಳಿ, ದೇವಮ್ಮ ಬಡಾವಣೆಯಲ್ಲಿ ಶ್ರೀ ಉಡಸಲಮ್ಮ, ಶ್ರೀ ನೇರಲ ಮರದಮ್ಮ, ಶ್ರೀ ಕರೀಬೀರೇಶ್ವರ, ಶ್ರೀ ಮಲ್ಲೇಶ್ವರ ನೂತನ ದೇವಾಲಯ, ಶಿಲಾ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಶ ಪ್ರತಿಷ್ಠಾಪನೆ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು.
ಅರಕಲಗೂಡಿನಲ್ಲಿ ಕಟ್ಟೇಪುರ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಿನ್ನಡೆ
ಅರಕಲಗೂಡಿನ ಮಲ್ಲಿಪಟ್ಟಣ ಹಾಗೂ ಕೊಣನೂರು ಹೋಬಳಿ ಭಾಗದ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಗೊರೂರು ಹೇಮಾವತಿ ಜಲಾಶಯ ಹಿನ್ನೀರಿನ ಕಟ್ಟೇಪುರ ಏತ ನೀರಾವರಿ ಯೋಜನೆಗೆ ಕಳೆದ 5 ವರ್ಷಗಳಿಂದಲೂ ಗ್ರಹಣ ಹಿಡಿದಿದ್ದು ನೀರಿಗಾಗಿ ರೈತರು ಪರಿತಪಿಸುವ ಪರಿಸ್ಥಿತಿ ಬಗೆಹರಿದಿಲ್ಲ.
ಪರಿಸರ ರಕ್ಷಿಸದಿದ್ದರೆ ಮನುಕುಲ ಉಳಿಯದು: ವಲಯ ಅರಣ್ಯಾಧಿಕಾರಿ ಶಿಲ್ಪಾ ವಸಂತ್
ಪರಿಸರ ಸಂರಕ್ಷಣೆಯಿಂದ ಮಾತ್ರ ಮಾನವ ಸಂಕುಲ ಉಳಿಯಲು ಸಾಧ್ಯ ಎಂದು ವಲಯ ಅರಣ್ಯಾಧಿಕಾರಿ ಶಿಲ್ಪಾ ವಸಂತ್ ಹೇಳಿದರು. ಸಕಲೇಶಪುರದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೊನ್ನೇನಹಳ್ಳಿ ಕಟ್ಟೆ ಅಭಿವೃದ್ಧಿ ಸದ್ಯದಲ್ಲೇ ಹಸ್ತಾಂತರ: ತಾಲೂಕು ಯೋಜನಾಧಿಕಾರಿ ಅಕ್ಷತಾ ರೈ
ಗಂಡಸಿ ಹೋಬಳಿ ಜಿ.ಹೊನ್ನೇನಹಳ್ಳಿ ಗೌಡನ ಕಟ್ಟೆ ಅಭಿವೃದ್ಧಿ ಕಾರ್ಯವನ್ನು ಧರ್ಮಸ್ಥಳ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಸದ್ಯದಲ್ಲಿಯೇ ಹಸ್ತಾಂತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಅಕ್ಷತಾ ರೈ ಹೇಳಿದರು. ಅರಸೀಕೆರಸ್ಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.
ಹಾಸನದ ಜಯನಗರ ಬಡಾವಣೆಯಲ್ಲಿ ಮಿಯಾವಾಕಿ ಪುಟ್ಟಡವಿ ನಿರ್ಮಾಣಕ್ಕೆ ತಯಾರಿ ಆರಂಭ
ಹಾಸನದ ಜಯನಗರ ಬಡಾವಣೆಯಲ್ಲಿ ಮಿಯಾವಾಕಿ ಪುಟ್ಟಡವಿ ನಿರ್ಮಾಣ ಕಾರ್ಯ ಆರಂಭಗೊಂಡಿತು. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸುಮಾರು 250ಕ್ಕೂ ಅಧಿಕ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಬಡಾವಣೆಯ ಪುಟಾಣಿಗಳಾದ ಮೋನಾಕ್ಷಿ, ರಂಜನ್, ಪಾಂಚಜನ್ಯ, ನೇಸರ ಹಾಗೂ ಶುಭ ಗಿಡ ನೆಡುವುದರ ಮೂಲಕ ಪುಟ್ಟಡವಿ ನಿರ್ಮಾಣ ಕಾರ್ಯ ಆರಂಭವಾಯಿತು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved