• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆಯಲ್ಲಿ 24ನೇ ವೀರಶೈವ ಲಿಂಗಾಯತ ಮಹಾ ಅಧಿವೇಶನ
ಮಹಾ ಅಧಿವೇಶನಕ್ಕೆ ಬರುವ ಸದಸ್ಯರಿಗೆ ವಾಹನ ಊಟ, ವಸತಿ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ. ಮಹಾ ಅಧಿವೇಶನಕ್ಕೆ ನಾಡಿನ ಹರಗುರು ಚರಮೂರ್ತಿಗಳು ಹಾಲಿ ಮಾಜಿ ಮತ್ತು ಸಚಿವರು, ಶಾಸಕರು, ಸಂಸದರು, ಸಮಾಜದ ಗಣ್ಯರು ವಾಣಿಜ್ಯೋದ್ಯಮಿಗಳು ಸಾಹಿತಿಗಳು ವಿದ್ವಾಂಸರು ಕಲಾವಿದರನ್ನು ಆಹ್ವಾನಿಸಲಾಗಿದೆ.
ಮೈತ್ರಿ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತೆ ಎಂದ ಸಚಿವ ಕ್ರಿಶನ್ ಪಾಲ್
ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ೨೮ ಸೀಟ್ ಗೆಲುವ ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಕ್ರಿಶನ್ ಪಾಲ್, ಕೇಂದ್ರ ಹೈಕಮಾಂಡ್ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಏನು ಅನ್ನೋದರ ಬಗ್ಗೆ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ವಿಚಾರ ದೇಶದಲ್ಲಿ ಮೋದಿಯವರ ಗ್ಯಾರೆಂಟಿ ಬಗ್ಗೆ ವಿಶ್ವಾಸವಿದೆ. ಬೇರೆ ಗ್ಯಾರೆಂಟಿಗಳ ಬಗ್ಗೆ ವಿಶ್ವಾಸ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ವಿಚಾರ ಇಲ್ಲಿ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಲ್ಲರೂ ಒಂದಾಗಿ ಹೋಗ್ತಾರೆ ಮತ್ತೆ ಮೋದಿಯವರಿಗೆ ಅಧಿಕಾರ ಕೊಡೋ ನಿರ್ಣಯ ಮಾಡಿದ್ದಾರೆ ಎಂದರು.
ಎಂಜಿನಿಯರ್‌ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ (ಕಂದಾಯ ಇಲಾಖೆ) ಶ್ರೀನಿವಾಸ್‌ರವರು ಮನೆ ನಿರ್ಮಿಸಿಕೊಂಡಿರುವ ಅನುಭವದಾರರಿಗೆ ಪರಿಹರದ ಹಣವನ್ನು ಆರ್.ಟಿ.ಜಿ.ಎಸ್ ಮಾಡಿ ತಕ್ಷಣ ಅವರ ಮನೆ ಮಾಲೀಕರ ಖಾತೆಗೆ ಹಣ ಹಾಕಬೇಕೆಂದು ಲಿಖಿತ ರೂಪದಲ್ಲಿ ಆದೇಶ ಮಾಡಿದ್ದರೂ ಸಹ ಆದೇಶವನ್ನು ಗಾಳಿಗೆ ತೂರಿ ಕರ್ತವ್ಯಲೋಪ ಎಸಗಿರುವ ಜಾತಿವಾದಿ ಬೇಲೂರು ಎ.ಇ.ಇ (ಎತ್ತಿನಹೊಳೆ ಎಂಜಿನಿಯರ್ ) ಪ್ರಕಾಶ್ ಮತ್ತು ಎಂಜಿನಿಯರ್ ಈರಯ್ಯರವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕೆಂದರು.
ಯುವ ಜನರು ಏಡ್ಸ್‌ ಬಗ್ಗೆ ಜಾಗೃತರಾಗಿರಬೇಕು
ಏಡ್ಸ್ ರೋಗವು ಎಚ್.ಐ.ವಿ ವೈರಸ್‌ನಿಂದ ಹರಡುವ ರೋಗವಾಗಿದ್ದು, ಇದು ದೇಹದ ರಕ್ಷಣಾ ವ್ಯವಸ್ಥೆಯನ್ನು ಕುಂದಿಸುತ್ತದೆ ಹಾಗೂ ದೇಹದಲ್ಲಿ ರೋಗ ನಿರೋದಕ ಶಕ್ತಿ ಕಡಿಮೆ ಮಾಡುತ್ತದೆ. ಈ ರೋಗವು ಮುಖ್ಯವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ, ಸಂಸ್ಕರಿಸದ ಸೂಜಿ ಮತ್ತು ಸಿರೆಂಜ್‌ಗಳನ್ನು ಬಳಸುವುದರಿಂದ, ಸೋಂಕಿತ ವ್ಯಕ್ತಿಯಿಂದ ರಕ್ತದಾನ ಮತ್ತು ರಕ್ತದ ಪದಾರ್ಥಗಳನ್ನು ಪಡೆಯುವುದರಿಂದ ಹಾಗೂ ತಾಯಿಯಿಂದ ಮಗುವಿಗೆ, ಹೀಗೆ ಪ್ರಮುಖವಾಗಿ ೪ ಕಾರಣಗಳಿಂದ ಹರಡುತ್ತದೆ.
ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆಗೆ ಕೋಡಿಮಠದ ಶ್ರೀಗಳಿಗೆ ಆಹ್ವಾನ
ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ಅಭಿಜಿನ್ ಮುಹೂರ್ತದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಆ ಪುಣ್ಯ ಹಾಗೂ ಐತಿಹಾಸಿಕ ಕ್ಷಣಕ್ಕೆ ಪೂಜ್ಯರಾದ ತಾವುಗಳೂ ಹಾಜರಿರಬೇಕು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿ ಕೋಡಿಮಠ ಶ್ರೀಗಳನ್ನು ಆಹ್ವಾನಿಸಿದೆ. ಜ.೨೧ರೊಳಗೆ ತಾವು ಅಯೋಧ್ಯೆಗೆ ಭೇಟಿ ನೀಡುವಂತೆ ಕೋರಲಾಗಿದ್ದು, ವಾಸ್ತವ್ಯಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.
ಸೈಬರ್‌ ಕ್ರೈಮ್‌ಗೆ ಮಹಿಳೆಯರೇ ಟಾರ್ಗೆಟ್‌
ಈ ಹಿಂದೆ ಫೋಟೋಗಳನ್ನು ನಕಲಿ ಮಾಡುವ ಜಾಲವಿತ್ತು. ಆದರೆ ಇತ್ತೀಚಿಗೆ ವಿಡಿಯೋಗಳನ್ನೇ ನಕಲಿ ಮಾಡುವ ಜಾಲಗಳು ಸೈಬರ್‌ ಬ್ಲಾಕ್‌ ಮೇಲ್‌ ಪ್ರಕರಣಗಳು ನಡೆಯುತ್ತಿರುವ ನಿಟ್ಟಿನಲ್ಲಿ ಮಹಿಳೆಯರು ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸಬೇಕಿದೆ. ಮೊದಲು ಮಹಿಳೆಯರು ಶಿಕ್ಷಣವಂತರಾಗಿ ಸಮಾಜದ ಬಗ್ಗೆ ಪ್ರಜ್ಞೆ ಹೊಂದಿದಾಗ ಮಾತ್ರ ಇಂತಹ ಪ್ರಕರಣಗಳಿಗೆ ಅಂತ್ಯ ಕಾಣಬಹುದು.
ಸೌಜನ್ಯದಿಂದ ವರ್ತಿಸದ ಬ್ಯಾಂಕ್ ಸಿಬ್ಬಂದಿ ವರ್ಗಕ್ಕೆ ಆಗ್ರಹ
ಕನ್ನಡ ಭಾಷೆಯ ಅರಿವು ಇರದ ಹಾಗೂ ಬ್ಯಾಂಕಿಗೆ ಬರುವ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಮತ್ತು ರೈತಾಪಿ ವರ್ಗದವರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳದ ಬ್ಯಾಂಕ್ ಸಿಬ್ಬಂದಿ ವರ್ಗವನ್ನ ಇಲ್ಲಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿ ಕರವೇ, ರೈತ ಸಂಘದ ವತಿಯಿಂದ ಬ್ಯಾಂಕ್‌ ಮುಂದೆ ಧರಣಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕರವೇ ಅಧ್ಯಕ್ಷ ಹೇಮಂತ್ ಕುಮಾರ್, ಜಿಲ್ಲಾ ರೈತ ಸಂಘದ ಸಂಚಾಲಕ ಬೋರನ ಕೊಪ್ಪಲು ಶಿವಲಿಂಗಪ್ಪ ಅವರ ನೇತೃತ್ವದಲ್ಲಿ ಹಾರನಹಳ್ಳಿ ಯೂನಿಯನ್ ಬ್ಯಾಂಕ್‌ ಶಾಖೆ ಮುಂದೆ ಸೇರಿದ ಪ್ರತಿಭಟನಾಕಾರರು ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
೩ನೇ ದಿನಕ್ಕೆ ಕಾಲಿಟ್ಟ ಗ್ರಾಮಿಣ ಅಂಚೆ ನೌಕರರ ಪ್ರತಿಭಟನೆ
ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಮುಖ್ಯ ಅಂಚೆಕಚೇರಿ ಮುಂದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ೩ನೇ ದಿವಸಕ್ಕೆ ಕಾಲಿಟ್ಟಿದೆ. ಇದೆ ಸಂದರ್ಭದಲ್ಲಿ ಎ.ಐ.ಜಿ.ಡಿ.ಎಸ್.ಯು. ಸಂಘಟನೆಯ ಜಗದೀಶ್ ಮಾತನಾಡಿ, ಗ್ರಾಮೀಣ ಅಂಚೆ ನೌಕರರನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಹಾಸನದ ಪ್ರಧಾನ ಅಂಚೆಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.
ಕಾಯಂಗೆ ಆಗ್ರಹಿಸಿ ಮುಂದುವರಿದ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಕಳೆದ ಹಲವಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಮುಖ್ಯ ಬೇಡಿಕೆಯಾದ ಕಾಯಂಗೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ನಡೆಸಲಾಗುತ್ತಿರುವ ಪ್ರತಿಭಟನಾ ಧರಣಿಯು ೩ನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಳೆದ ಒಂದು ವಾರದಿಂದ ತರಗತಿಗಳು ನಡೆದಿರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ ಸೂಚನೆ ನೀಡಿದ್ದು, ಇದು ವಿದ್ಯಾರ್ಥಿಗಳಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದರು.
ಮುಂದುವರಿದ ಗ್ರಾಮೀಣ ಅಂಚೆ ನೌಕರರ ಮುಷ್ಕರ
ಗ್ರಾಮೀಣ ಅಂಚೆ ನೌಕರರ ಸೇವೆಯನ್ನು ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಸಮಿತಿ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಮುಖ್ಯ ಅಂಚೆಕಚೇರಿ ಮುಂದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಹಾಸನದ ಪ್ರಧಾನ ಅಂಚೆ ಕಛೇರಿಯ ಮುಂದೆ ವಿಭಾಗದ ನೂರಾರು. ಗ್ರಾಮೀಣ ಅಂಚೆ ನೌಕರರು ಎ.ಐ.ಜಿ.ಡಿ.ಎಸ್.ಯು.ಹಾಗೂ ಎನ್.ಯು.ಜಿ.ಡಿ.ಎಸ್.ಸದಸ್ಯರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 440
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved