• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಮಂತಿಕೆ ಹೃದಯಕ್ಕೆ ಬರಬೇಕೇ ಹೊರತು ತಲೆಗಲ್ಲ
ಭಗವಂತ ಕೊಟ್ಟಿರುವ ಜ್ಞಾನದ ಬೆಳಕನ್ನು ಸದುಪಯೋಗ ಪಡಿಸಿಕೊಳ್ಳುತ್ತಾ ಅವಕಾಶಗಳನ್ನು ಬಳಸಿಕೊಳ್ಳುತ್ತಾ, ಉನ್ನತ ಸ್ಥಾನಕ್ಕೆ ಏರಿದಾಗ ಯಾವುದೇ ಮೀಸಲಾತಿಯ ಅವಶ್ಯಕತೆ ಬೇಕಿಲ್ಲ, ಈ ನಿಟ್ಟಿನಲ್ಲಿ ಕಲಿಕೆಗೆ ಹೆಚ್ಚಿನ ಮಹತ್ವ ನೀಡಿ, ಇನ್ನೂ ಹೆಚ್ಚಿನ ಪುರಸ್ಕಾರಗಳನ್ನು ಪಡೆಯುತ್ತಾ ಸಮಾಜದಲ್ಲಿ ಕೀರ್ತಿವಂತರಾಗಿ ಎಂದು ಸ್ವಾಮೀಜಿ ಆಶೀರ್ವದಿಸಿದರು. ದೇಶದಲ್ಲಿ ಅನೇಕ ಶ್ರೀಮಂತರನ್ನು ಕಂಡಿದ್ದೇವೆ. ಶ್ರೀಮಂತಿಕೆ ಹೃದಯಕ್ಕೆ ಬರಬೇಕು. ತಲೆಗೆ ಬಂದಾಗ ಅನಾಹುತಗಳಾಗುತ್ತವೆ ಎಂದು ಹಾಸನ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶಂಭುನಾಥ ಸ್ವಾಮೀಜಿಗಳು ಹೇಳಿದರು.
ಮಕ್ಕಳನ್ನು ಉತ್ತಮ ಪ್ರಜೆಗಳಾಗಿಸುವ ಹೊಣೆ ಶಿಕ್ಷಕರದ್ದು
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಪ್ರಜೆಗಳಾಗಿ ಮಾಡುವ ಹೊಣೆ ಶಿಕ್ಷಕರದ್ದಾಗಿದೆ, ಹಿಂದೆ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿತ್ತು. ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಕಾರಣದಿಂದ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿದೆ. ತಾಲೂಕಿನಲ್ಲಿ ತಾವು ಪ್ರಾರಂಭಿಸಿದ ಮಕ್ಕಳ ಮನೆ ಯಶಸ್ವಿಯಾಗಿದ್ದು ರಾಜ್ಯದ ಗಮನ ಸೆಳೆದಿದೆ. ಖಾಸಗಿ ಶಾಲೆಗಳಿಗೆ ದುಬಾರಿ ಹಣ ನೀಡಿ ಮಕ್ಕಳನ್ನು ಕಳಿಸುತ್ತಿದ್ದ ಪೋಷಕರಿಗೆ 1. 5 ಕೋಟಿಯಷ್ಟು ಹಣ ಉಳಿತಾಯವಾಗಿದೆ ಎಂದರು.
ತೋಟಗಳ ಮಧ್ಯೆ ಅಂತರ ಬೇಸಾಯ ಪದ್ಧತಿ ಅನುಸರಿಸಿ
ಅರಕಲಗೂಡು ತಾಲೂಕಿನಲ್ಲಿ ವರ್ಷಪೂರ್ತಿ ನೀರಾವರಿ ಮೂಲಗಳು ಇರುವ ಹಿನ್ನೆಲೆಯಲ್ಲಿ ರೈತರು ತೋಟಗಾರಿಕೆ ಬೆಳೆಗಳ ನಡುವೆ ಅಂತರ ಬೇಸಾಯ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಶಾಸಕ ಎ.ಮಂಜು ತಿಳಿಸಿದರು. ಫಲವತ್ತಾದ ಭೂಮಿ ಇದೆ. ಸರ್ಕಾರದಿಂದಲೂ ಕೂಡ ಸಾಕಷ್ಟು ಸಹಾಯಧನ ರೇಷ್ಮೆ ಕೃಷಿಗೆ ದೊರೆಯುತ್ತಿದೆ. ತಿಂಗಳಿಗೆ ಒಮ್ಮೆ ಈ ಬೆಳೆಯಿಂದ ಆದಾಯ ಬರುತ್ತದೆ. ದೀರ್ಘಾವಧಿ ಬೆಳೆಗಳಿಗೆ ರೈತರು ಮಾರುಹೋಗುವ ಬದಲು ರೇಷ್ಮೆ ಕೃಷಿಯತ್ತ ಮುಂದಾಗಬೇಕಿದೆ ಎಂದರು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ
ಮೈಸೂರು ದಸರಾ ಹಬ್ಬದ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿಂದೂ ಜನಜಾಗೃತಿ ಸಮಿತಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕವು ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿನಿಧಿಸುವ ಅನೇಕ ಗಣ್ಯರನ್ನು ಹೊಂದಿದೆ. ಪದ್ಮಭೂಷಣ ಪುರಸ್ಕೃತ ಡಾ. ಭೈರಪ್ಪ ಅವರು ಭಾರತದ ಅತ್ಯುನ್ನತ ಸಾಹಿತ್ಯ ಸಮ್ಮಾನಗಳನ್ನು ಪಡೆದಿದ್ದಾರೆ. ಅವರ ಕೃತಿಗಳು ರಾಷ್ಟ್ರ ಮಟ್ಟದಲ್ಲಿ ಕೀರ್ತಿಯನ್ನು ತಂದಿವೆ. ಇಂತಹ ಕೀರ್ತಿಶಾಲಿ ವ್ಯಕ್ತಿಯನ್ನು ಕಡೆಗಣಿಸಿ, ವಿವಾದಾತ್ಮಕ ಅಭಿಪ್ರಾಯ ಹೊಂದಿರುವವರನ್ನು ಆಹ್ವಾನಿಸುವುದು ಸಮಂಜಸವಲ್ಲ ಎಂದರು.
ಅತಿಥಿ ಉಪನ್ಯಾಸಕರ ಕೊರತೆ ನೀಗಿಸಲು ಎಐಡಿಎಸ್‌ಒ ಆಗ್ರಹ
ಅತಿಥಿ ಉಪನ್ಯಾಸಕರು, ಹಾಸನ, ಎಐಡಿಎಸ್‌ಒ,Guest Lecturer, Hassan, AIDSOರಾಜ್ಯದ ಪದವಿ ಕಾಲೇಜುಗಳಲ್ಲಿ ತರಗತಿಗಳು ಆರಂಭಗೊಂಡು ತಿಂಗಳು ಕಳೆದರೂ, ಇಂದಿಗೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗದಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಆತಂಕದಲ್ಲಿದೆ. ಕೂಡಲೇ ಗಮನಹರಿಸಿ ಸೂಕ್ತ ಕ್ರಮವನ್ನು ತುರ್ತಾಗಿ ಕೈಗೊಳ್ಳುವಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದಿಂದಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ನೆನಗುದಿಗೆ ಬಿದ್ದಂತಾಗಿದೆ. ಇದರ ಪರಿಣಾಮವಾಗಿ ಪಾಠಮಾಲೆ ಆರಂಭವಾಗದೆ ವಿದ್ಯಾರ್ಥಿಗಳು ಗೊಂದಲದಲ್ಲಿ ಮುಳುಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಪಾಂಚಜನ್ಯ ಗಣಪತಿ ಅದ್ಧೂರಿ ಶೋಭಾಯಾತ್ರೆ
ಪಾಂಚಜನ್ಯ ಗಣಪತಿ ಶೋಭಾಯಾತ್ರೆಯು ಸಾಲಗಾಮೆ ರಸ್ತೆ, ಅರಳೇಪೇಟೆ ರಸ್ತೆ, ಬಸವೇಶ್ವರ ದೇವಸ್ಥಾನ, ಹೊಸಲೈನ್ ರಸ್ತೆ, ಬಿ.ಎಂ. ರಸ್ತೆ, ಸುಭಾಷ್ ಚೌಕ ಇತರೆ ರಾಜ ಬೀದಿಗಳಲ್ಲಿ ಸಾಗಿತು. ಶ್ರೀರಾಮನ ಪ್ರತಿಮೆ, ಕೆಂಪೇಗೌಡ, ಯೋಧನ ಕಟೌಟ್, ಗೋವುಗಳು ಹಾಗೂ ಡಿಜೆಗಳು ಆಕರ್ಷಣೆಯಾಗಿದ್ದವು. ಶೋಭಾಯಾತ್ರೆಯಲ್ಲಿ ಶಾಸಕರಾದ ಎಚ್.ಪಿ. ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಎಚ್.ಕೆ. ಸುರೇಶ್, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಪಾಲ್ಗೊಂಡಿದ್ದರು.
ಮಕ್ಕಳ ಬೆಳವಣಿಗೆಯಲ್ಲಿ ಇನ್‌ಸ್ಪೈರ್ ಶಾಲೆಯ ಪಾತ್ರ ಮಹತ್ವದ್ದು
ಕಲಿಕೆ ನಾಲ್ಕು ಗೋಡೆಗಳೊಳಗೆ ಸೀಮಿತವಾಗದೇ ಸಮುದಾಯಿಕವಾಗಿ ವಿಸ್ತರಣೆಯಾಗಬೇಕಾದರೆ ಪಠ್ಯದಷ್ಟೇ ಪಠ್ಯೇತರ ಚಟವಟಿಕೆಗಳಲ್ಲೂ ಮಗು ಕ್ರಿಯಾಶೀಲವಾಗಿ ತೊಡಗಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಮಗ್ಗೆ-ಕಾರಗೋಡು ಇನ್‌ಸ್ಪೈರ್ ಇಂಟರ್ ನ್ಯಾಷನಲ್ ಶಾಲೆಯ ಪಾತ್ರ ಮಹತ್ವದ್ದಾಗಿದೆ ಎಂದು ಸಾಹಿತಿ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು. ಮಕ್ಕಳು ಶಾಲೆಯಲ್ಲಿ ಕೇವಲ ಎಂಟುಗಂಟೆ ಮಾತ್ರ ಇದ್ದರೆ ಬಹುಪಾಲು ಮನೆಯಲ್ಲಿ ಪೋಷಕರೊಂದಿಗೆ ಇರುತ್ತಾರೆ. ಶಿಕ್ಷಕರು ಮಾರ್ಗದರ್ಶಿಸುವ ಅಂಶಗಳನ್ನು ಪಾಲಕರು ಅನುಪಾಲನೆ ಮಾಡಿದಾಗ ಮಾತ್ರ ಮಕ್ಕಳ ಕಲಿಕೆ ಉತ್ತಮ ರೀತಿಯಲ್ಲಿ ಸಾಗಲು ಸಾಧ್ಯ ಎಂದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು
ವಿದ್ಯಾ ವಿಕಾಸ ಪದವಿಪೂರ್ವ ಕಾಲೇಜಿನಲ್ಲಿ ದೇಶಭಕ್ತರ ಬಳಗ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಲು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ಮಲ್ಲಿಕಾರ್ಜುನಪುರ ಶಾಲೆಯ ಮುಖ್ಯೋಪಾಧ್ಯಾಯರಾದ ಈರೇಶ್ ಅವರು ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸುವಲ್ಲಿ ಅವರ ಪ್ರಯತ್ನ ಶ್ಲಾಘನೀಯವಾಗಿದ್ದು ಉತ್ತಮ ಶಿಕ್ಷಕರಾಗಿ ಸನ್ಮಾನಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿ ಎಂದರು.
ಮಧುರನಹಳ್ಳಿಯಲ್ಲಿ ಪೌತಿ ಖಾತಾ ಆಂದೋಲನ
ರಾಮನಾಥಪುರ ಹೋಬಳಿಯ ಮಧುರನಹಳ್ಳಿ ಗ್ರಾಮದಲ್ಲಿ ನಡೆದ ಪೌತಿಖಾತೆ ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ಸೌಮ್ಯ ಅವರು, ಇದುವರೆಗೆ ಪೌತಿ ಖಾತೆ ಆಗದಿರುವ ರೈತರು ಅಗತ್ಯ ದಾಖಲಾತಿಗಳಾದ ವಂಶವೃಕ್ಷ ಆಧಾರ್ ಕಾರ್ಡ್, ಪಹಣಿ, ಮರಣ ದೃಢೀಕರಣ ಪತ್ರ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಕೇಳುವ ದಾಖಲಾತಿಗಳನ್ನು ಸಲ್ಲಿಸಿ ಪೌತಿ ಖಾತೆ ಮಾಡಿಸಿಕೊಳ್ಳುವಂತೆ ತಿಳಿಸಿದರು.
ದೇಶದ ಪ್ರಗತಿಯಲ್ಲಿ ಶಿಕ್ಷಕ ಪಾತ್ರ ಮಹತ್ವದ್ದು
ಬಹುತೇಕವಾಗಿ ಬಡ ಮಕ್ಕಳೇ ಹೆಚ್ಚಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಾರೆ ಅದು ಅಲ್ಲದೆ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಕಾರಣದಿಂದಾಗಿ ಸರ್ಕಾರ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು ಕೂಡಲೇ ಶಾಲೆಗಳಿಗೆ ದೈಹಿಕ ಶಿಕ್ಷಕರನ್ನು ನಿಯೋಜನೆ ಮಾಡಬೇಕು ಗುಣಮಟ್ಟದ ಶಿಕ್ಷಣವಿಲ್ಲದ ದೇಶ ಭವಿಷ್ಯದಲ್ಲಿ ಕಷ್ಟಕರ ನಾವು ಗುರುಗಳನ್ನು ಪೂಜ್ಯ ಭಾವನೆಯಿಂದ ಕಾಣಬೇಕು. ಅತಿಥಿ ಶಿಕ್ಷಕರಿಗೆ ಸರ್ಕಾರ ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತಷ್ಟು ಶಿಕ್ಷಣ ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ಅಭಿಪ್ರಾಯಪಟ್ಟರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 547
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved